Homeಮುಖಪುಟಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

ಉಜ್ವಲ್ ನಿಕಮ್, ಮೀನಾಕ್ಷಿ ಜೈನ್ ಸೇರಿ ನಾಲ್ವರು ರಾಜ್ಯಸಭೆಗೆ ನಾಮನಿರ್ದೇಶನ

- Advertisement -
- Advertisement -

ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್, ಇತಿಹಾಸಗಾರ್ತಿ ಡಾ. ಮೀನಾಕ್ಷಿ ಜೈನ್ ಮತ್ತು ರಾಜಕೀಯ ದಾಳಿಯಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

ಇದರೊಂದಿಗೆ, ರಾಜ್ಯಸಭೆಯ ನಾಮನಿರ್ದೇಶಿತ ವರ್ಗದ ಎಲ್ಲಾ 12 ಸ್ಥಾನಗಳು ಭರ್ತಿಯಾಗಿದ್ದು, ಜಮ್ಮು ಮತ್ತು ಕಾಶ್ಮೀರದ ನಾಲ್ಕು ಸ್ಥಾನಗಳು ಮತ್ತು ಹರಿಯಾಣದ ಒಂದು ಸ್ಥಾನ ಖಾಲಿಯಿದೆ. 240 ಸದಸ್ಯರ ಸದನದಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ 135 ಸಂಸದರ ಬೆಂಬಲವನ್ನು ಹೊಂದಿದೆ, ಇದರಲ್ಲಿ ಸಾಮಾನ್ಯವಾಗಿ ಸರ್ಕಾರವನ್ನು ಬೆಂಬಲಿಸುವ ಎಲ್ಲಾ 12 ನಾಮನಿರ್ದೇಶಿತ ಸಂಸದರು ಮತ್ತು ಒಬ್ಬ ಸ್ವತಂತ್ರ ಸದಸ್ಯ ಸೇರಿದ್ದಾರೆ.

ರಾಜ್ಯಸಭೆಗೆ ಹೊಸದಾಗಿ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡುವ ಬಗ್ಗೆ ಗೃಹ ಸಚಿವಾಲಯ (ಎಂಎಚ್‌ಎ) ಶನಿವಾರ ರಾತ್ರಿ ಅಧಿಸೂಚನೆ ಹೊರಡಿಸಿದೆ.

ವಿದೇಶಾಂಗ ವ್ಯವಹಾರಗಳಲ್ಲಿ ಪರಿಣತಿ ಹೊಂದಿದ್ದಕ್ಕಾಗಿ ಶ್ರಿಂಗ್ಲಾ ಅವರನ್ನು ರಾಜ್ಯಸಭೆಗೆ ಕರೆತರಲಾಗಿದೆ. ವಿದೇಶಾಂಗ ಕಾರ್ಯದರ್ಶಿಯಾಗುವ ಮೊದಲು ಅಮೆರಿಕದ ಮಾಜಿ ರಾಯಭಾರಿಯಾಗಿದ್ದ ಶ್ರಿಂಗ್ಲಾ, 2023ರಲ್ಲಿ ಭಾರತದ ಜಿ 20 ಅಧ್ಯಕ್ಷತೆಯ ಮುಖ್ಯ ಸಂಯೋಜಕರಾಗಿದ್ದರು ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದ ಇತ್ತೀಚಿನ ಜಾಗತಿಕ ಸಂಪರ್ಕದ ಭಾಗವಾಗಿದ್ದರು.

ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಗೂ ಮುನ್ನ, ಶ್ರಿಂಗ್ಲಾ ಅವರು ರಾಜಕೀಯಕ್ಕೆ ಧುಮುಕುತ್ತಾರೆ ಮತ್ತು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಿಂದ ಬಿಜೆಪಿ ಅಭ್ಯರ್ಥಿಯಾಗುತ್ತಾರೆ ಎಂಬ ಊಹಾಪೋಹಗಳಿದ್ದವು. 2023ರ ಕೊನೆಯಲ್ಲಿ ಮತ್ತು 2024ರ ಆರಂಭದಲ್ಲಿ, ಅವರು ತಮ್ಮ ‘ಡಾರ್ಜಿಲಿಂಗ್ ವೆಲ್ಫೇರ್ ಸೊಸೈಟಿ’ ಮೂಲಕ ಆ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

2008ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾಗಿ ಹೆಸರುವಾಸಿಯಾಗಿದ್ದ ಹಿರಿಯ ವಕೀಲ ಉಜ್ವಲ್ ನಿಕಮ್, 2016ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಲೋಕಸಭಾ ಚುನಾವಣೆಯಲ್ಲಿ ಮುಂಬೈ ಉತ್ತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್ ವಿರುದ್ಧ ಸೋಲನುಭವಿಸಿದ್ದರು.

ಗುಲ್ಶನ್ ಕುಮಾರ್ ಮತ್ತು ಪ್ರಮೋದ್ ಮಹಾಜನ್ ಅವರ ಕೊಲೆ ಪ್ರಕರಣಗಳಲ್ಲಿ, 1993ರ ಮುಂಬೈ ಸರಣಿ ಸ್ಫೋಟಗಳು ಮತ್ತು 2003 ರ ಗೇಟ್‌ವೇ ಆಫ್ ಇಂಡಿಯಾ ಬಾಂಬ್ ಸ್ಫೋಟ ಪ್ರಕರಣಗಳಲ್ಲಿ ಅವರು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದರು.

ಇತಿಹಾಸಗಾರ್ತಿ ಡಾ. ಮೀನಾಕ್ಷಿ ಜೈನ್ ದೆಹಲಿಯ ಗಾರ್ಗಿ ಕಾಲೇಜಿನ ಮಾಜಿ ಅಸೋಸಿಯೇಟ್ ಪ್ರೊಫೆಸರ್. ಇವರು 2020ರಲ್ಲಿ ಪದ್ಮಶ್ರೀ ಪ್ರಶಸ್ತಿ ಭಾಜನರಾಗಿದ್ದಾರೆ. ಡಾ. ಜೈನ್ ಒಬ್ಬರು ಪ್ರಸಿದ್ಧ ರಾಜಕೀಯ ತಜ್ಞೆಯೂ ಹೌದು. ಟೈಮ್ಸ್ ಆಫ್ ಇಂಡಿಯಾದ ಮಾಜಿ ಸಂಪಾದಕ ಗಿರಿಲಾಲ್ ಜೈನ್ ಅವರ ಪುತ್ರಿಯಾಗಿರುವ ಜೈನ್ ಅವರನ್ನು, 2014ರಲ್ಲಿ ನರೇಂದ್ರ ಮೋದಿ ಸರ್ಕಾರವು ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಗೆ ನಾಮನಿರ್ದೇಶನ ಮಾಡಿತ್ತು.

ಶಿಕ್ಷಕರಾಗಿರುವ ಸದಾನಂದನ್ ಮಾಸ್ಟರ್, ಕೇರಳದಲ್ಲಿ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 1994ರಲ್ಲಿ ಸಿಪಿಐ(ಎಂ) ಕಾರ್ಯಕರ್ತರ ದಾಳಿಯಲ್ಲಿ ಇವರು ತಮ್ಮ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸಂಘ ಪರಿವಾರದ ಹಿರಿಯ ನಾಯಕರು ನಡೆಸುತ್ತಿರುವ ಬಲಪಂಥೀಯ ಚಿಂತಕರ ಚಾವಡಿಯಾದ ‘ಭಾರತೀಯ ವಿಚಾರ ಕೇಂದ್ರ’ದೊಂದಿಗೆ ಸದಾನಂದನ್ ಮಾಸ್ಟರ್ ನಿಕಟ ಸಂಬಂಧ ಹೊಂದಿದ್ದಾರೆ.

ಸಂಸತ್ತಿನ ಮಳೆಗಾಲದ ಅಧಿವೇಶನ ಪ್ರಾರಂಭವಾಗುವ ಒಂದು ವಾರ ಮೊದಲು ಆರು ವರ್ಷಗಳ ಅವಧಿಗೆ ಹೊಸ ಸದಸ್ಯರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಈ ಸಂಸದರು ನಾಮನಿರ್ದೇಶನಗೊಂಡ ಆರು ತಿಂಗಳೊಳಗೆ ಒಂದು ಪಕ್ಷವನ್ನು ಸೇರಬಹುದು.

ಪ್ರಸ್ತುತ ಎಂಟು ನಾಮನಿರ್ದೇಶಿತ ಸಂಸದರಲ್ಲಿ, ಗುಲಾಮ್ ಅಲಿ (ಸೆಪ್ಟೆಂಬರ್ 2028 ರವರೆಗೆ ಅಧಿಕಾರಾವಧಿ) ಮತ್ತು ಸತ್ನಮ್ ಸಿಂಗ್ ಸಂಧು (ಜನವರಿ 2030) ಬಿಜೆಪಿಗೆ ಸೇರಿದ್ದಾರೆ. ಮುಂದಿನ ವರ್ಷ ಮಾರ್ಚ್‌ನಲ್ಲಿ ನ್ಯಾಯಮೂರ್ತಿ (ನಿವೃತ್ತ) ರಂಜನ್ ಗೊಗೊಯ್ ಅವರ ಅಧಿಕಾರಾವಧಿ ಮುಗಿದಾಗ ಒಂದು ನಾಮನಿರ್ದೇಶಿತ ಸ್ಥಾನ ಖಾಲಿಯಾಗಲಿದೆ.

ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ, ವಿಜಯೇಂದ್ರ ಪ್ರಸಾದ್, ಪಿಟಿ ಉಷಾ (ಜುಲೈ 2028 ರವರೆಗೆ), ಮತ್ತು ಸುಧಾ ಮೂರ್ತಿ (ಮಾರ್ಚ್ 2030 ರವರೆಗೆ ಅವಧಿ) ಇತರ ನಾಮನಿರ್ದೇಶಿತ ಸದಸ್ಯರು.

ಕೇರಳ | ಗುರು ಪೂರ್ಣಿಮಾ ಹೆಸರಿನಲ್ಲಿ ಶಿಕ್ಷಕರ ಪಾದ ತೊಳೆದ ವಿದ್ಯಾರ್ಥಿಗಳು: ಶಾಲೆಗಳ ವಿರುದ್ಧ ಶಿಕ್ಷಣ ಸಚಿವ ಗರಂ, ವರದಿ ನೀಡಲು ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...