Homeಮುಖಪುಟಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ಗೃಹಸಚಿವ ಅಮಿತ್ ಶಾ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರನ್ನು ಬಂಧಿಸುವಂತೆ ಕೋರಿ ಲಂಡನ್ ಮೂಲದ ಸಂಸ್ಥೆ ಯುಕೆ ಪೊಲೀಸರಿಗೆ ಅರ್ಜಿ ಸಲ್ಲಿಸಿದೆ.

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರನ್ನು ಬಂಧಿಸುವಂತೆ ಕೋರಿ ಲಂಡನ್ ಮೂಲದ ಸಂಸ್ಥೆ ಯುನೈಟೆಡ್ ಕಿಂಗ್‌ಡಂ (ಯುಕೆ) ಪೊಲೀಸರಿಗೆ ಅರ್ಜಿ ಸಲ್ಲಿಸಿದೆ ಎಂದು ಅಸೋಸಿಯೇಟ್‌ ಪ್ರೆಸ್‌‌ ವರದಿ ಮಾಡಿದೆ. (ದಿ ಕ್ವಿಂಟ್‌ ವರದಿ)

ಕಾಶ್ಮೀರದಲ್ಲಿ ಯುದ್ಧ ಅಪರಾಧಗಳಿಗೆ ಸಂಬಂಧಿಸಿದಂತೆ ಆರೋಪಗಳನ್ನು ಮಾಡಲಾಗಿದ್ದು, ಜನವರಿ 20ರಂದು ದೂರು ನೀಡಲಾಗಿದೆ.

“ಕಾರ್ಯಕರ್ತರು, ಪತ್ರಕರ್ತರು, ನಾಗರಿಕರ ಚಿತ್ರಹಿಂಸೆ, ಅಪಹರಣ ಮತ್ತು ಹತ್ಯೆಗೆ ಭಾರತೀಯ ಸೇನೆಯು ಹೇಗೆ ಕಾರಣವಾಗಿವೆ ಎಂಬುದನ್ನು ಉಲ್ಲೇಖಿಸುವ ಪುರಾವೆಗಳನ್ನು ಕಾನೂನು ಸಂಸ್ಥೆ ಸ್ಟೋಕ್ ವೈಟ್ ಸಲ್ಲಿಸಿದೆ” ಎಂದು ಎಪಿ ವರದಿ ಹೇಳಿದೆ.

ವರದಿಯು 2020-21ರ ಅವಧಿಯಲ್ಲಿ ತೆಗೆದುಕೊಂಡ 2,000ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಆಧರಿಸಿದೆ ಎಂದು  ಕಾನೂನು ಸಂಸ್ಥೆಯು ಹೇಳಿಕೊಂಡಿದೆ. ಯುದ್ಧ ಅಪರಾಧಗಳು ಮತ್ತು ಚಿತ್ರಹಿಂಸೆಯಲ್ಲಿ ನೇರವಾಗಿ ಎಂಟು ಹಿರಿಯ ಭಾರತೀಯ ಮಿಲಿಟರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

“ಭಾರತದ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ವಿರುದ್ಧ ಯುದ್ಧ ಅಪರಾಧಗಳು ಮತ್ತು ಇತರ ಹಿಂಸಾಚಾರಗಳನ್ನು ನಡೆಸುತ್ತಿದ್ದಾರೆ ಎಂದು ನಂಬಲು ಬಲವಾದ ಕಾರಣವಿದೆ” ಎಂದು ಕಾನೂನು ಸಂಸ್ಥೆಯ ವರದಿಯನ್ನು ಉಲ್ಲೇಖಿಸಿ ಎಪಿ ವರದಿ ಮಾಡಿದೆ.

ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಪ್ರತಿಕ್ರಿಯೆ ಇಲ್ಲ

ಈ ಕುರಿತು ಯಾವುದೇ ಮಾಹಿತಿ ಬಂದಿಲ್ಲದಿರುವುದಾಗಿ ತಿಳಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರತಿಕ್ರಿಯಿಸಲು ನಿರಾಕರಿಸಿದೆ. ಗೃಹ ಸಚಿವರು ಕೂಡ ವರದಿ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎಪಿ ವರದಿ ಮಾಡಿದೆ.

ಕಾನೂನು ಸಂಸ್ಥೆಯು “ಸಾರ್ವತ್ರಿಕ ನ್ಯಾಯವ್ಯಾಪ್ತಿ” ತತ್ವದ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದೆ ಎಂದು ವರದಿ ಹೇಳುತ್ತದೆ. ಜಗತ್ತಿನಲ್ಲಿ ಎಲ್ಲಿಯಾದರೂ ಮಾಡಿದ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲು ದೇಶಗಳಿಗೆ ಅಧಿಕಾರವನ್ನು ಸಾರ್ವತ್ರಿಕ ನ್ಯಾಯವ್ಯಾಪ್ತಿ ತತ್ವವು ನೀಡುತ್ತದೆ. ಜಿನೀವಾ ಕನ್ವೆನ್ಶನ್ಸ್ ಆಕ್ಟ್ 1957ರ ಅಡಿಯಲ್ಲಿ ಯುಕೆಯು ಯುದ್ಧ ಅಪರಾಧಗಳ ಸಾರ್ವತ್ರಿಕ ನ್ಯಾಯವ್ಯಾಪ್ತಿಯನ್ನು ಹೊಂದಿದೆ.

“ತಮ್ಮ ಕರ್ತವ್ಯವನ್ನು ಪಾಲಿಸುವಂತೆ ನಾವು ಯುಕೆ ಸರ್ಕಾರವನ್ನು ಕೇಳುತ್ತಿದ್ದೇವೆ. ನಾವು ಅವರಿಗೆ ಒದಗಿಸಿದ ಪುರಾವೆಗಳ ಆಧಾರದ ಮೇಲೆ ತನಿಖೆ ನಡೆಸಿ ಬಂಧಿಸಲು ಕೇಳುತ್ತೇವೆ” ಎಂದು ಟೋಕ್ ವೈಟ್‌ನ ಅಂತರರಾಷ್ಟ್ರೀಯ ಕಾನೂನಿನ ನಿರ್ದೇಶಕ ಹಕನ್ ಕ್ಯಾಮುಜ್ ಹೇಳಿರುವುದಾಗಿ ಎಪಿ ವರದಿ ಉಲ್ಲೇಖಿಸಿದೆ.


ಇದನ್ನೂ ಓದಿರಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...