Homeಮುಖಪುಟಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ಗೃಹಸಚಿವ ಅಮಿತ್ ಶಾ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರನ್ನು ಬಂಧಿಸುವಂತೆ ಕೋರಿ ಲಂಡನ್ ಮೂಲದ ಸಂಸ್ಥೆ ಯುಕೆ ಪೊಲೀಸರಿಗೆ ಅರ್ಜಿ ಸಲ್ಲಿಸಿದೆ.

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರನ್ನು ಬಂಧಿಸುವಂತೆ ಕೋರಿ ಲಂಡನ್ ಮೂಲದ ಸಂಸ್ಥೆ ಯುನೈಟೆಡ್ ಕಿಂಗ್‌ಡಂ (ಯುಕೆ) ಪೊಲೀಸರಿಗೆ ಅರ್ಜಿ ಸಲ್ಲಿಸಿದೆ ಎಂದು ಅಸೋಸಿಯೇಟ್‌ ಪ್ರೆಸ್‌‌ ವರದಿ ಮಾಡಿದೆ. (ದಿ ಕ್ವಿಂಟ್‌ ವರದಿ)

ಕಾಶ್ಮೀರದಲ್ಲಿ ಯುದ್ಧ ಅಪರಾಧಗಳಿಗೆ ಸಂಬಂಧಿಸಿದಂತೆ ಆರೋಪಗಳನ್ನು ಮಾಡಲಾಗಿದ್ದು, ಜನವರಿ 20ರಂದು ದೂರು ನೀಡಲಾಗಿದೆ.

“ಕಾರ್ಯಕರ್ತರು, ಪತ್ರಕರ್ತರು, ನಾಗರಿಕರ ಚಿತ್ರಹಿಂಸೆ, ಅಪಹರಣ ಮತ್ತು ಹತ್ಯೆಗೆ ಭಾರತೀಯ ಸೇನೆಯು ಹೇಗೆ ಕಾರಣವಾಗಿವೆ ಎಂಬುದನ್ನು ಉಲ್ಲೇಖಿಸುವ ಪುರಾವೆಗಳನ್ನು ಕಾನೂನು ಸಂಸ್ಥೆ ಸ್ಟೋಕ್ ವೈಟ್ ಸಲ್ಲಿಸಿದೆ” ಎಂದು ಎಪಿ ವರದಿ ಹೇಳಿದೆ.

ವರದಿಯು 2020-21ರ ಅವಧಿಯಲ್ಲಿ ತೆಗೆದುಕೊಂಡ 2,000ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಆಧರಿಸಿದೆ ಎಂದು  ಕಾನೂನು ಸಂಸ್ಥೆಯು ಹೇಳಿಕೊಂಡಿದೆ. ಯುದ್ಧ ಅಪರಾಧಗಳು ಮತ್ತು ಚಿತ್ರಹಿಂಸೆಯಲ್ಲಿ ನೇರವಾಗಿ ಎಂಟು ಹಿರಿಯ ಭಾರತೀಯ ಮಿಲಿಟರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

“ಭಾರತದ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ವಿರುದ್ಧ ಯುದ್ಧ ಅಪರಾಧಗಳು ಮತ್ತು ಇತರ ಹಿಂಸಾಚಾರಗಳನ್ನು ನಡೆಸುತ್ತಿದ್ದಾರೆ ಎಂದು ನಂಬಲು ಬಲವಾದ ಕಾರಣವಿದೆ” ಎಂದು ಕಾನೂನು ಸಂಸ್ಥೆಯ ವರದಿಯನ್ನು ಉಲ್ಲೇಖಿಸಿ ಎಪಿ ವರದಿ ಮಾಡಿದೆ.

ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಪ್ರತಿಕ್ರಿಯೆ ಇಲ್ಲ

ಈ ಕುರಿತು ಯಾವುದೇ ಮಾಹಿತಿ ಬಂದಿಲ್ಲದಿರುವುದಾಗಿ ತಿಳಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರತಿಕ್ರಿಯಿಸಲು ನಿರಾಕರಿಸಿದೆ. ಗೃಹ ಸಚಿವರು ಕೂಡ ವರದಿ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎಪಿ ವರದಿ ಮಾಡಿದೆ.

ಕಾನೂನು ಸಂಸ್ಥೆಯು “ಸಾರ್ವತ್ರಿಕ ನ್ಯಾಯವ್ಯಾಪ್ತಿ” ತತ್ವದ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದೆ ಎಂದು ವರದಿ ಹೇಳುತ್ತದೆ. ಜಗತ್ತಿನಲ್ಲಿ ಎಲ್ಲಿಯಾದರೂ ಮಾಡಿದ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲು ದೇಶಗಳಿಗೆ ಅಧಿಕಾರವನ್ನು ಸಾರ್ವತ್ರಿಕ ನ್ಯಾಯವ್ಯಾಪ್ತಿ ತತ್ವವು ನೀಡುತ್ತದೆ. ಜಿನೀವಾ ಕನ್ವೆನ್ಶನ್ಸ್ ಆಕ್ಟ್ 1957ರ ಅಡಿಯಲ್ಲಿ ಯುಕೆಯು ಯುದ್ಧ ಅಪರಾಧಗಳ ಸಾರ್ವತ್ರಿಕ ನ್ಯಾಯವ್ಯಾಪ್ತಿಯನ್ನು ಹೊಂದಿದೆ.

“ತಮ್ಮ ಕರ್ತವ್ಯವನ್ನು ಪಾಲಿಸುವಂತೆ ನಾವು ಯುಕೆ ಸರ್ಕಾರವನ್ನು ಕೇಳುತ್ತಿದ್ದೇವೆ. ನಾವು ಅವರಿಗೆ ಒದಗಿಸಿದ ಪುರಾವೆಗಳ ಆಧಾರದ ಮೇಲೆ ತನಿಖೆ ನಡೆಸಿ ಬಂಧಿಸಲು ಕೇಳುತ್ತೇವೆ” ಎಂದು ಟೋಕ್ ವೈಟ್‌ನ ಅಂತರರಾಷ್ಟ್ರೀಯ ಕಾನೂನಿನ ನಿರ್ದೇಶಕ ಹಕನ್ ಕ್ಯಾಮುಜ್ ಹೇಳಿರುವುದಾಗಿ ಎಪಿ ವರದಿ ಉಲ್ಲೇಖಿಸಿದೆ.


ಇದನ್ನೂ ಓದಿರಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...