Homeಮುಖಪುಟಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ಕಾಶ್ಮೀರದಲ್ಲಿ ಯುದ್ಧಾಪರಾಧ ಆರೋಪ: ಅಮಿತ್ ಶಾ, ಸೇನಾ ಮುಖ್ಯಸ್ಥರ ಬಂಧನಕ್ಕೆ ಯುಕೆ ಮೂಲದ ಸಂಸ್ಥೆ ದೂರು

ಗೃಹಸಚಿವ ಅಮಿತ್ ಶಾ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರನ್ನು ಬಂಧಿಸುವಂತೆ ಕೋರಿ ಲಂಡನ್ ಮೂಲದ ಸಂಸ್ಥೆ ಯುಕೆ ಪೊಲೀಸರಿಗೆ ಅರ್ಜಿ ಸಲ್ಲಿಸಿದೆ.

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರನ್ನು ಬಂಧಿಸುವಂತೆ ಕೋರಿ ಲಂಡನ್ ಮೂಲದ ಸಂಸ್ಥೆ ಯುನೈಟೆಡ್ ಕಿಂಗ್‌ಡಂ (ಯುಕೆ) ಪೊಲೀಸರಿಗೆ ಅರ್ಜಿ ಸಲ್ಲಿಸಿದೆ ಎಂದು ಅಸೋಸಿಯೇಟ್‌ ಪ್ರೆಸ್‌‌ ವರದಿ ಮಾಡಿದೆ. (ದಿ ಕ್ವಿಂಟ್‌ ವರದಿ)

ಕಾಶ್ಮೀರದಲ್ಲಿ ಯುದ್ಧ ಅಪರಾಧಗಳಿಗೆ ಸಂಬಂಧಿಸಿದಂತೆ ಆರೋಪಗಳನ್ನು ಮಾಡಲಾಗಿದ್ದು, ಜನವರಿ 20ರಂದು ದೂರು ನೀಡಲಾಗಿದೆ.

“ಕಾರ್ಯಕರ್ತರು, ಪತ್ರಕರ್ತರು, ನಾಗರಿಕರ ಚಿತ್ರಹಿಂಸೆ, ಅಪಹರಣ ಮತ್ತು ಹತ್ಯೆಗೆ ಭಾರತೀಯ ಸೇನೆಯು ಹೇಗೆ ಕಾರಣವಾಗಿವೆ ಎಂಬುದನ್ನು ಉಲ್ಲೇಖಿಸುವ ಪುರಾವೆಗಳನ್ನು ಕಾನೂನು ಸಂಸ್ಥೆ ಸ್ಟೋಕ್ ವೈಟ್ ಸಲ್ಲಿಸಿದೆ” ಎಂದು ಎಪಿ ವರದಿ ಹೇಳಿದೆ.

ವರದಿಯು 2020-21ರ ಅವಧಿಯಲ್ಲಿ ತೆಗೆದುಕೊಂಡ 2,000ಕ್ಕೂ ಹೆಚ್ಚು ಸಾಕ್ಷ್ಯಗಳನ್ನು ಆಧರಿಸಿದೆ ಎಂದು  ಕಾನೂನು ಸಂಸ್ಥೆಯು ಹೇಳಿಕೊಂಡಿದೆ. ಯುದ್ಧ ಅಪರಾಧಗಳು ಮತ್ತು ಚಿತ್ರಹಿಂಸೆಯಲ್ಲಿ ನೇರವಾಗಿ ಎಂಟು ಹಿರಿಯ ಭಾರತೀಯ ಮಿಲಿಟರಿ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.

“ಭಾರತದ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ವಿರುದ್ಧ ಯುದ್ಧ ಅಪರಾಧಗಳು ಮತ್ತು ಇತರ ಹಿಂಸಾಚಾರಗಳನ್ನು ನಡೆಸುತ್ತಿದ್ದಾರೆ ಎಂದು ನಂಬಲು ಬಲವಾದ ಕಾರಣವಿದೆ” ಎಂದು ಕಾನೂನು ಸಂಸ್ಥೆಯ ವರದಿಯನ್ನು ಉಲ್ಲೇಖಿಸಿ ಎಪಿ ವರದಿ ಮಾಡಿದೆ.

ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಪ್ರತಿಕ್ರಿಯೆ ಇಲ್ಲ

ಈ ಕುರಿತು ಯಾವುದೇ ಮಾಹಿತಿ ಬಂದಿಲ್ಲದಿರುವುದಾಗಿ ತಿಳಿಸಿ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರತಿಕ್ರಿಯಿಸಲು ನಿರಾಕರಿಸಿದೆ. ಗೃಹ ಸಚಿವರು ಕೂಡ ವರದಿ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಎಪಿ ವರದಿ ಮಾಡಿದೆ.

ಕಾನೂನು ಸಂಸ್ಥೆಯು “ಸಾರ್ವತ್ರಿಕ ನ್ಯಾಯವ್ಯಾಪ್ತಿ” ತತ್ವದ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿದೆ ಎಂದು ವರದಿ ಹೇಳುತ್ತದೆ. ಜಗತ್ತಿನಲ್ಲಿ ಎಲ್ಲಿಯಾದರೂ ಮಾಡಿದ ಮಾನವೀಯತೆಯ ವಿರುದ್ಧದ ಅಪರಾಧಗಳ ಆರೋಪದ ಮೇಲೆ ಕಾನೂನು ಕ್ರಮ ಜರುಗಿಸಲು ದೇಶಗಳಿಗೆ ಅಧಿಕಾರವನ್ನು ಸಾರ್ವತ್ರಿಕ ನ್ಯಾಯವ್ಯಾಪ್ತಿ ತತ್ವವು ನೀಡುತ್ತದೆ. ಜಿನೀವಾ ಕನ್ವೆನ್ಶನ್ಸ್ ಆಕ್ಟ್ 1957ರ ಅಡಿಯಲ್ಲಿ ಯುಕೆಯು ಯುದ್ಧ ಅಪರಾಧಗಳ ಸಾರ್ವತ್ರಿಕ ನ್ಯಾಯವ್ಯಾಪ್ತಿಯನ್ನು ಹೊಂದಿದೆ.

“ತಮ್ಮ ಕರ್ತವ್ಯವನ್ನು ಪಾಲಿಸುವಂತೆ ನಾವು ಯುಕೆ ಸರ್ಕಾರವನ್ನು ಕೇಳುತ್ತಿದ್ದೇವೆ. ನಾವು ಅವರಿಗೆ ಒದಗಿಸಿದ ಪುರಾವೆಗಳ ಆಧಾರದ ಮೇಲೆ ತನಿಖೆ ನಡೆಸಿ ಬಂಧಿಸಲು ಕೇಳುತ್ತೇವೆ” ಎಂದು ಟೋಕ್ ವೈಟ್‌ನ ಅಂತರರಾಷ್ಟ್ರೀಯ ಕಾನೂನಿನ ನಿರ್ದೇಶಕ ಹಕನ್ ಕ್ಯಾಮುಜ್ ಹೇಳಿರುವುದಾಗಿ ಎಪಿ ವರದಿ ಉಲ್ಲೇಖಿಸಿದೆ.


ಇದನ್ನೂ ಓದಿರಿ: ಹಿಜಾಬ್‌ v/s ಕೇಸರಿ ಶಾಲು: ಮತೀಯ ದ್ವೇಷದ ಹಿಂದೆ ಎಬಿವಿಪಿ ಕೈವಾಡ- ಎಸ್‌ಎಫ್‌ಐ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು: ಸುರ್ಜೇವಾಲ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...