Homeಅಂತರಾಷ್ಟ್ರೀಯಪ್ಯಾಲೆಸ್ತೀನ್ 'ಪ್ರತ್ಯೇಕ ರಾಷ್ಟ್ರ'ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

ಪ್ಯಾಲೆಸ್ತೀನ್ ‘ಪ್ರತ್ಯೇಕ ರಾಷ್ಟ್ರ’ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

- Advertisement -
- Advertisement -

ಯುನೈಟೆಡ್ ಕಿಂಗ್‌ಡಮ್ (ಯುಕೆ), ಕೆನಡಾ ಮತ್ತು ಆಸ್ಟ್ರೇಲಿಯಾ ದೇಶಗಳು ಭಾನುವಾರ (ಸೆ.21) ಅಧಿಕೃತವಾಗಿ ಪ್ಯಾಲೆಸ್ತೀನ್ ಅನ್ನು ಒಂದು ರಾಷ್ಟ್ರವೆಂದು ಗುರುತಿಸಿವೆ.

ಇದು ಈ ದೇಶಗಳ ವಿದೇಶಾಂಗ ನೀತಿಯಲ್ಲಿ ಗಮನಾರ್ಹ ಬದಲಾವಣೆ ತರಲಿದ್ದು, ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ (ಯುಎಸ್‌) ಹೊಂದಾಣಿಕೆಯಿಂದ ಒಂದು ಹೆಜ್ಜೆ ದೂರವಾಗಿಸಿದೆ. ಈ ವಾರ ಇನ್ನೂ ಹಲವು ಯುರೋಪಿಯನ್ ರಾಷ್ಟ್ರಗಳು ಮತ್ತು ಯುಎಸ್ ಮಿತ್ರರಾಷ್ಟ್ರಗಳು ಈ ಮೂರು ರಾಷ್ಟ್ರಗಳ ನಡೆಯನ್ನು ಅನುಸರಿಸಲು ಸಿದ್ಧವಾಗಿವೆ ಎಂದು ವರದಿಗಳು ಹೇಳಿವೆ.

“ಪ್ಯಾಲೆಸ್ತೀನಿಯರು ಮತ್ತು ಇಸ್ರೇಲಿಗರಲ್ಲಿ ಶಾಂತಿಯ ಭರವಸೆಯನ್ನು ಪುನರುಜ್ಜೀವನಗೊಳಿಸಲು ಮತ್ತು  ದ್ವಿರಾಷ್ಟ್ರ ಪರಿಹಾರಕ್ಕಾಗಿ ಯುನೈಟೆಡ್ ಕಿಂಗ್‌ಡಮ್ ಪ್ಯಾಲೆಸ್ತೀನ್ ಅನ್ನು ಔಪಚಾರಿಕವಾಗಿ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸುತ್ತದೆ” ಎಂದು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗ್ರೂಪ್ ಆಫ್ 7 (ಜಿ7) ಎಂಬ ಏಳು ಪ್ರಮುಖ ರಾಷ್ಟ್ರಗಳ ಗುಂಪಿನಲ್ಲಿ ಕೆನಡಾ ಮೊದಲ ಬಾರಿಗೆ ಪ್ಯಾಲೆಸ್ತೀನ್‌ನನ್ನು ಸ್ವತಂತ್ರ ರಾಷ್ಟ್ರವಾಗಿ ಅಧಿಕೃತವಾಗಿ ಗುರುತಿಸಿದೆ. ಈ ಐತಿಹಾಸಿಕ ನಿರ್ಧಾರದ ಮೂಲಕ, ಕೆನಡಾದ ಪ್ರಧಾನ ಮಂತ್ರಿ ಮಾರ್ಕ್ ಕಾರ್ನೆ ಅವರು, ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ಎರಡೂ ರಾಷ್ಟ್ರಗಳಿಗೆ ಶಾಂತಿಯುತವಾದ ಮತ್ತು ಸೌಹಾರ್ದಯುತ ಭವಿಷ್ಯವನ್ನು ಒದಗಿಸುವ ಭರವಸೆಯನ್ನು ನೀಡಿದ್ದಾರೆ. ಈ ಕ್ರಮವು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವದ ಹೆಜ್ಜೆಯಾಗಿದೆ, ಏಕೆಂದರೆ ಜಿ7 ರಾಷ್ಟ್ರಗಳು ವಿಶ್ವದ ಪ್ರಮುಖ ಆರ್ಥಿಕ ಮತ್ತು ರಾಜಕೀಯ ಶಕ್ತಿಗಳಾಗಿವೆ.

ಸ್ವತಂತ್ರ ಮತ್ತು ಸಾರ್ವಭೌಮ ಪ್ಯಾಲೆಸ್ತೀನ್‌ ರಾಷ್ಟ್ರವನ್ನು ಔಪಚಾರಿಕವಾಗಿ ಗುರುತಿಸಿದ ಸ್ವಲ್ಪ ಸಮಯದ ನಂತರ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಇಸ್ರೇಲ್‌ನ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಯನ್ನು ವಿರೋಧಿಸುವ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಅವರ ಪ್ರಕಾರ, ಪ್ಯಾಲೆಸ್ತೀನ್ ರಾಷ್ಟ್ರದ ಗುರುತಿಸುವಿಕೆ ಇಸ್ರೇಲ್‌ನ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡುತ್ತದೆ ಮತ್ತು ಭಯೋತ್ಪಾದನೆಗೆ ಬೆಂಬಲ ನೀಡುವಂತಿದೆ. ಈ ಕಾರಣಕ್ಕಾಗಿ, ಇಸ್ರೇಲ್ ವಿರುದ್ಧದ ತಪ್ಪು ಆರೋಪಗಳು ಮತ್ತು ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಗೆ ಸಂಬಂಧಿಸಿದ ಕರೆಗಳ ವಿರುದ್ಧ ಅವರು ಐಕ್ಯರಾಷ್ಟ್ರ ಸಂಸ್ಥೆ (ಯುಎನ್) ಮತ್ತು ಇತರ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೋರಾಡುವುದಾಗಿ ಘೋಷಿಸಿದ್ದಾರೆ. ಮುಂಬರುವ ದಿನಗಳಲ್ಲಿ ಈ ವಿಷಯದ ಬಗ್ಗೆ ಇಸ್ರೇಲ್ ತನ್ನ ನಿಲುವನ್ನು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವರಿಕೆ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ವಿದೇಶಿ ನಾಯಕರು ಹಮಾಸ್‌ಗೆ ‘ಬಹುಮಾನ’ ನೀಡುತ್ತಿದ್ದಾರೆ ಎಂದು ನೆತನ್ಯಾಹು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೋರ್ಡಾನ್ ನದಿಯ ಪಶ್ಚಿಮಕ್ಕೆ ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆ ಸಾಧ್ಯವಿಲ್ಲ ಎಂದಿದ್ದಾರೆ.

ಇಸ್ರೇಲಿ ವಿದೇಶಾಂಗ ಸಚಿವಾಲಯವು ಎಕ್ಸ್‌ ಖಾತೆಯಲ್ಲಿ ಈ ಕುರಿತು ಹೇಳಿಕೆ ನೀಡಿದ್ದು, ಯುನೈಟೆಡ್ ಕಿಂಗ್‌ಡಮ್ ಮತ್ತು ಇತರ ದೇಶಗಳ ಘೋಷಣೆಗಳನ್ನು ‘ಖಂಡಿತವಾಗಿಯೂ ತಿರಸ್ಕರಿಸುತ್ತೇವೆ’ ಎಂದಿದೆ.

“ಈ ಘೋಷಣೆಯು ಶಾಂತಿಯನ್ನು ಉತ್ತೇಜಿಸುವುದಿಲ್ಲ, ಬದಲಾಗಿ ಇದಕ್ಕೆ ವಿರುದ್ಧವಾಗಿ, ಆ ಪ್ರದೇಶವನ್ನು ಮತ್ತಷ್ಟು ಅಸ್ಥಿರಗೊಳಿಸುತ್ತದೆ ಮತ್ತು ಭವಿಷ್ಯದಲ್ಲಿ ಶಾಂತಿಯುತ ಪರಿಹಾರವನ್ನು ಸಾಧಿಸುವ ಸಾಧ್ಯತೆಗಳನ್ನು ಹಾಳು ಮಾಡುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಮೂರು ರಾಷ್ಟ್ರಗಳ ಘೋಷಣೆಯನ್ನು ಹಮಾಸ್ ಸ್ವಾಗತಿಸಿದೆ. “ಇದು ವಿಮೋಚನೆ ಮತ್ತು ಮರಳುವಿಕೆಯ ಹಾದಿಯಲ್ಲಿ ನಮ್ಮ ಜನರ ಹೋರಾಟ, ದೃಢತೆ ಮತ್ತು ತ್ಯಾಗಗಳಿಗೆ ಸಿಕ್ಕ ಫಲಿತಾಂಶ” ಎಂದಿದೆ.

ಸಾಂಕೇತಿಕವಾಗಿರುವ ಮೂರು ರಾಷ್ಟ್ರಗಳ ಘೋಷನೆಯು ಪ್ಯಾಲೆಸ್ತೀನಿಯನ್ನರಿಗೆ ಹೆಚ್ಚಿನ ರಾಜತಾಂತ್ರಿಕ ಸ್ಥಾನಮಾನ ಮತ್ತು ಒಪ್ಪಂದ ಮಾಡಿಕೊಳ್ಳುವ ಸಾಮರ್ಥ್ಯವನ್ನು ನೀಡುತ್ತದೆ.

ಆದರೆ, ಇದು ಗಾಝಾ ಪಟ್ಟಿಯ ವಾಸ್ತವಗಳನ್ನು ಮೂಲಭೂತವಾಗಿ ಬದಲಾಯಿಸುವುದಿಲ್ಲ, ಅಲ್ಲಿ ಸುಮಾರು ಎರಡು ವರ್ಷಗಳ ಯುದ್ಧದಿಂದ ಮಾನವೀಯ ಬಿಕ್ಕಟ್ಟು ಹದಗೆಡುತ್ತಲೇ ಇದೆ. ಅತ್ತ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರು ಯಹೂದಿ ವಸಾಹತುಗಾರರು ಮತ್ತು ಮಿಲಿಟರಿಯಿಂದ ಹೆಚ್ಚುತ್ತಿರುವ ಒತ್ತಡಕ್ಕೆ ಒಳಗಾಗಿದ್ದಾರೆ.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 2023 ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 65,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಸಾವಿರಾರು ಮಕ್ಕಳು ಸೇರಿದ್ದಾರೆ. ಗಾಝಾದ ಹೆಚ್ಚಿನ ಪ್ರದೇಶಗಳು ನಾಶವಾಗಿದೆ. ಜನರು ತಮ್ಮದೆಲ್ಲವನ್ನೂ ತೊರೆದು ಜೀವ, ಜೀವನಕ್ಕಾಗಿ ದಿನಕ್ಕೊಂದು ಕಡೆಗೆ ಪಲಾಯನ ಮಾಡುತ್ತಿದ್ದಾರೆ.

ಗಾಝಾ ನಗರದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ಇಸ್ರೇಲ್ ತನ್ನ ದಾಳಿಯನ್ನು ಮುಂದುವರೆಸಿದ್ದು, ಲಕ್ಷಾಂತರ ಜನರು ಬರಗಾಲದಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿಯಿಡೀ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ನಗರದ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...