Homeಅಂತರಾಷ್ಟ್ರೀಯಪ್ಯಾಲೆಸ್ತೀನ್ 'ಪ್ರತ್ಯೇಕ ರಾಷ್ಟ್ರ'ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

ಪ್ಯಾಲೆಸ್ತೀನ್ ‘ಪ್ರತ್ಯೇಕ ರಾಷ್ಟ್ರ’ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

- Advertisement -
- Advertisement -

ಯುನೈಟೆಡ್ ಕಿಂಗ್‌ಡಮ್ (ಯುಕೆ), ಕೆನಡಾ ಮತ್ತು ಆಸ್ಟ್ರೇಲಿಯಾ ದೇಶಗಳು ಭಾನುವಾರ (ಸೆ.21) ಅಧಿಕೃತವಾಗಿ ಪ್ಯಾಲೆಸ್ತೀನ್ ಅನ್ನು ಒಂದು ರಾಷ್ಟ್ರವೆಂದು ಗುರುತಿಸಿವೆ.

ಇದು ಈ ದೇಶಗಳ ವಿದೇಶಾಂಗ ನೀತಿಯಲ್ಲಿ ಗಮನಾರ್ಹ ಬದಲಾವಣೆ ತರಲಿದ್ದು, ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ (ಯುಎಸ್‌) ಹೊಂದಾಣಿಕೆಯಿಂದ ಒಂದು ಹೆಜ್ಜೆ ದೂರವಾಗಿಸಿದೆ. ಈ ವಾರ ಇನ್ನೂ ಹಲವು ಯುರೋಪಿಯನ್ ರಾಷ್ಟ್ರಗಳು ಮತ್ತು ಯುಎಸ್ ಮಿತ್ರರಾಷ್ಟ್ರಗಳು ಈ ಮೂರು ರಾಷ್ಟ್ರಗಳ ನಡೆಯನ್ನು ಅನುಸರಿಸಲು ಸಿದ್ಧವಾಗಿವೆ ಎಂದು ವರದಿಗಳು ಹೇಳಿವೆ.

“ಪ್ಯಾಲೆಸ್ತೀನಿಯರು ಮತ್ತು ಇಸ್ರೇಲಿಗರಲ್ಲಿ ಶಾಂತಿಯ ಭರವಸೆಯನ್ನು ಪುನರುಜ್ಜೀವನಗೊಳಿಸಲು ಮತ್ತು  ದ್ವಿರಾಷ್ಟ್ರ ಪರಿಹಾರಕ್ಕಾಗಿ ಯುನೈಟೆಡ್ ಕಿಂಗ್‌ಡಮ್ ಪ್ಯಾಲೆಸ್ತೀನ್ ಅನ್ನು ಔಪಚಾರಿಕವಾಗಿ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸುತ್ತದೆ” ಎಂದು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗ್ರೂಪ್ ಆಫ್ 7 (ಜಿ7) ಎಂಬ ಏಳು ಪ್ರಮುಖ ರಾಷ್ಟ್ರಗಳ ಗುಂಪಿನಲ್ಲಿ ಕೆನಡಾ ಮೊದಲ ಬಾರಿಗೆ ಪ್ಯಾಲೆಸ್ತೀನ್‌ನನ್ನು ಸ್ವತಂತ್ರ ರಾಷ್ಟ್ರವಾಗಿ ಅಧಿಕೃತವಾಗಿ ಗುರುತಿಸಿದೆ. ಈ ಐತಿಹಾಸಿಕ ನಿರ್ಧಾರದ ಮೂಲಕ, ಕೆನಡಾದ ಪ್ರಧಾನ ಮಂತ್ರಿ ಮಾರ್ಕ್ ಕಾರ್ನೆ ಅವರು, ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ಎರಡೂ ರಾಷ್ಟ್ರಗಳಿಗೆ ಶಾಂತಿಯುತವಾದ ಮತ್ತು ಸೌಹಾರ್ದಯುತ ಭವಿಷ್ಯವನ್ನು ಒದಗಿಸುವ ಭರವಸೆಯನ್ನು ನೀಡಿದ್ದಾರೆ. ಈ ಕ್ರಮವು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವದ ಹೆಜ್ಜೆಯಾಗಿದೆ, ಏಕೆಂದರೆ ಜಿ7 ರಾಷ್ಟ್ರಗಳು ವಿಶ್ವದ ಪ್ರಮುಖ ಆರ್ಥಿಕ ಮತ್ತು ರಾಜಕೀಯ ಶಕ್ತಿಗಳಾಗಿವೆ.

ಸ್ವತಂತ್ರ ಮತ್ತು ಸಾರ್ವಭೌಮ ಪ್ಯಾಲೆಸ್ತೀನ್‌ ರಾಷ್ಟ್ರವನ್ನು ಔಪಚಾರಿಕವಾಗಿ ಗುರುತಿಸಿದ ಸ್ವಲ್ಪ ಸಮಯದ ನಂತರ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಇಸ್ರೇಲ್‌ನ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಯನ್ನು ವಿರೋಧಿಸುವ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಅವರ ಪ್ರಕಾರ, ಪ್ಯಾಲೆಸ್ತೀನ್ ರಾಷ್ಟ್ರದ ಗುರುತಿಸುವಿಕೆ ಇಸ್ರೇಲ್‌ನ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡುತ್ತದೆ ಮತ್ತು ಭಯೋತ್ಪಾದನೆಗೆ ಬೆಂಬಲ ನೀಡುವಂತಿದೆ. ಈ ಕಾರಣಕ್ಕಾಗಿ, ಇಸ್ರೇಲ್ ವಿರುದ್ಧದ ತಪ್ಪು ಆರೋಪಗಳು ಮತ್ತು ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಗೆ ಸಂಬಂಧಿಸಿದ ಕರೆಗಳ ವಿರುದ್ಧ ಅವರು ಐಕ್ಯರಾಷ್ಟ್ರ ಸಂಸ್ಥೆ (ಯುಎನ್) ಮತ್ತು ಇತರ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೋರಾಡುವುದಾಗಿ ಘೋಷಿಸಿದ್ದಾರೆ. ಮುಂಬರುವ ದಿನಗಳಲ್ಲಿ ಈ ವಿಷಯದ ಬಗ್ಗೆ ಇಸ್ರೇಲ್ ತನ್ನ ನಿಲುವನ್ನು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವರಿಕೆ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ವಿದೇಶಿ ನಾಯಕರು ಹಮಾಸ್‌ಗೆ ‘ಬಹುಮಾನ’ ನೀಡುತ್ತಿದ್ದಾರೆ ಎಂದು ನೆತನ್ಯಾಹು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೋರ್ಡಾನ್ ನದಿಯ ಪಶ್ಚಿಮಕ್ಕೆ ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆ ಸಾಧ್ಯವಿಲ್ಲ ಎಂದಿದ್ದಾರೆ.

ಇಸ್ರೇಲಿ ವಿದೇಶಾಂಗ ಸಚಿವಾಲಯವು ಎಕ್ಸ್‌ ಖಾತೆಯಲ್ಲಿ ಈ ಕುರಿತು ಹೇಳಿಕೆ ನೀಡಿದ್ದು, ಯುನೈಟೆಡ್ ಕಿಂಗ್‌ಡಮ್ ಮತ್ತು ಇತರ ದೇಶಗಳ ಘೋಷಣೆಗಳನ್ನು ‘ಖಂಡಿತವಾಗಿಯೂ ತಿರಸ್ಕರಿಸುತ್ತೇವೆ’ ಎಂದಿದೆ.

“ಈ ಘೋಷಣೆಯು ಶಾಂತಿಯನ್ನು ಉತ್ತೇಜಿಸುವುದಿಲ್ಲ, ಬದಲಾಗಿ ಇದಕ್ಕೆ ವಿರುದ್ಧವಾಗಿ, ಆ ಪ್ರದೇಶವನ್ನು ಮತ್ತಷ್ಟು ಅಸ್ಥಿರಗೊಳಿಸುತ್ತದೆ ಮತ್ತು ಭವಿಷ್ಯದಲ್ಲಿ ಶಾಂತಿಯುತ ಪರಿಹಾರವನ್ನು ಸಾಧಿಸುವ ಸಾಧ್ಯತೆಗಳನ್ನು ಹಾಳು ಮಾಡುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಮೂರು ರಾಷ್ಟ್ರಗಳ ಘೋಷಣೆಯನ್ನು ಹಮಾಸ್ ಸ್ವಾಗತಿಸಿದೆ. “ಇದು ವಿಮೋಚನೆ ಮತ್ತು ಮರಳುವಿಕೆಯ ಹಾದಿಯಲ್ಲಿ ನಮ್ಮ ಜನರ ಹೋರಾಟ, ದೃಢತೆ ಮತ್ತು ತ್ಯಾಗಗಳಿಗೆ ಸಿಕ್ಕ ಫಲಿತಾಂಶ” ಎಂದಿದೆ.

ಸಾಂಕೇತಿಕವಾಗಿರುವ ಮೂರು ರಾಷ್ಟ್ರಗಳ ಘೋಷನೆಯು ಪ್ಯಾಲೆಸ್ತೀನಿಯನ್ನರಿಗೆ ಹೆಚ್ಚಿನ ರಾಜತಾಂತ್ರಿಕ ಸ್ಥಾನಮಾನ ಮತ್ತು ಒಪ್ಪಂದ ಮಾಡಿಕೊಳ್ಳುವ ಸಾಮರ್ಥ್ಯವನ್ನು ನೀಡುತ್ತದೆ.

ಆದರೆ, ಇದು ಗಾಝಾ ಪಟ್ಟಿಯ ವಾಸ್ತವಗಳನ್ನು ಮೂಲಭೂತವಾಗಿ ಬದಲಾಯಿಸುವುದಿಲ್ಲ, ಅಲ್ಲಿ ಸುಮಾರು ಎರಡು ವರ್ಷಗಳ ಯುದ್ಧದಿಂದ ಮಾನವೀಯ ಬಿಕ್ಕಟ್ಟು ಹದಗೆಡುತ್ತಲೇ ಇದೆ. ಅತ್ತ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರು ಯಹೂದಿ ವಸಾಹತುಗಾರರು ಮತ್ತು ಮಿಲಿಟರಿಯಿಂದ ಹೆಚ್ಚುತ್ತಿರುವ ಒತ್ತಡಕ್ಕೆ ಒಳಗಾಗಿದ್ದಾರೆ.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 2023 ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 65,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಸಾವಿರಾರು ಮಕ್ಕಳು ಸೇರಿದ್ದಾರೆ. ಗಾಝಾದ ಹೆಚ್ಚಿನ ಪ್ರದೇಶಗಳು ನಾಶವಾಗಿದೆ. ಜನರು ತಮ್ಮದೆಲ್ಲವನ್ನೂ ತೊರೆದು ಜೀವ, ಜೀವನಕ್ಕಾಗಿ ದಿನಕ್ಕೊಂದು ಕಡೆಗೆ ಪಲಾಯನ ಮಾಡುತ್ತಿದ್ದಾರೆ.

ಗಾಝಾ ನಗರದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ಇಸ್ರೇಲ್ ತನ್ನ ದಾಳಿಯನ್ನು ಮುಂದುವರೆಸಿದ್ದು, ಲಕ್ಷಾಂತರ ಜನರು ಬರಗಾಲದಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿಯಿಡೀ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ನಗರದ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...