Homeಅಂತರಾಷ್ಟ್ರೀಯಪ್ಯಾಲೆಸ್ತೀನ್ 'ಪ್ರತ್ಯೇಕ ರಾಷ್ಟ್ರ'ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

ಪ್ಯಾಲೆಸ್ತೀನ್ ‘ಪ್ರತ್ಯೇಕ ರಾಷ್ಟ್ರ’ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

- Advertisement -
- Advertisement -

ಯುನೈಟೆಡ್ ಕಿಂಗ್‌ಡಮ್ (ಯುಕೆ), ಕೆನಡಾ ಮತ್ತು ಆಸ್ಟ್ರೇಲಿಯಾ ದೇಶಗಳು ಭಾನುವಾರ (ಸೆ.21) ಅಧಿಕೃತವಾಗಿ ಪ್ಯಾಲೆಸ್ತೀನ್ ಅನ್ನು ಒಂದು ರಾಷ್ಟ್ರವೆಂದು ಗುರುತಿಸಿವೆ.

ಇದು ಈ ದೇಶಗಳ ವಿದೇಶಾಂಗ ನೀತಿಯಲ್ಲಿ ಗಮನಾರ್ಹ ಬದಲಾವಣೆ ತರಲಿದ್ದು, ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ (ಯುಎಸ್‌) ಹೊಂದಾಣಿಕೆಯಿಂದ ಒಂದು ಹೆಜ್ಜೆ ದೂರವಾಗಿಸಿದೆ. ಈ ವಾರ ಇನ್ನೂ ಹಲವು ಯುರೋಪಿಯನ್ ರಾಷ್ಟ್ರಗಳು ಮತ್ತು ಯುಎಸ್ ಮಿತ್ರರಾಷ್ಟ್ರಗಳು ಈ ಮೂರು ರಾಷ್ಟ್ರಗಳ ನಡೆಯನ್ನು ಅನುಸರಿಸಲು ಸಿದ್ಧವಾಗಿವೆ ಎಂದು ವರದಿಗಳು ಹೇಳಿವೆ.

“ಪ್ಯಾಲೆಸ್ತೀನಿಯರು ಮತ್ತು ಇಸ್ರೇಲಿಗರಲ್ಲಿ ಶಾಂತಿಯ ಭರವಸೆಯನ್ನು ಪುನರುಜ್ಜೀವನಗೊಳಿಸಲು ಮತ್ತು  ದ್ವಿರಾಷ್ಟ್ರ ಪರಿಹಾರಕ್ಕಾಗಿ ಯುನೈಟೆಡ್ ಕಿಂಗ್‌ಡಮ್ ಪ್ಯಾಲೆಸ್ತೀನ್ ಅನ್ನು ಔಪಚಾರಿಕವಾಗಿ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸುತ್ತದೆ” ಎಂದು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗ್ರೂಪ್ ಆಫ್ 7 (ಜಿ7) ಎಂಬ ಏಳು ಪ್ರಮುಖ ರಾಷ್ಟ್ರಗಳ ಗುಂಪಿನಲ್ಲಿ ಕೆನಡಾ ಮೊದಲ ಬಾರಿಗೆ ಪ್ಯಾಲೆಸ್ತೀನ್‌ನನ್ನು ಸ್ವತಂತ್ರ ರಾಷ್ಟ್ರವಾಗಿ ಅಧಿಕೃತವಾಗಿ ಗುರುತಿಸಿದೆ. ಈ ಐತಿಹಾಸಿಕ ನಿರ್ಧಾರದ ಮೂಲಕ, ಕೆನಡಾದ ಪ್ರಧಾನ ಮಂತ್ರಿ ಮಾರ್ಕ್ ಕಾರ್ನೆ ಅವರು, ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ಎರಡೂ ರಾಷ್ಟ್ರಗಳಿಗೆ ಶಾಂತಿಯುತವಾದ ಮತ್ತು ಸೌಹಾರ್ದಯುತ ಭವಿಷ್ಯವನ್ನು ಒದಗಿಸುವ ಭರವಸೆಯನ್ನು ನೀಡಿದ್ದಾರೆ. ಈ ಕ್ರಮವು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವದ ಹೆಜ್ಜೆಯಾಗಿದೆ, ಏಕೆಂದರೆ ಜಿ7 ರಾಷ್ಟ್ರಗಳು ವಿಶ್ವದ ಪ್ರಮುಖ ಆರ್ಥಿಕ ಮತ್ತು ರಾಜಕೀಯ ಶಕ್ತಿಗಳಾಗಿವೆ.

ಸ್ವತಂತ್ರ ಮತ್ತು ಸಾರ್ವಭೌಮ ಪ್ಯಾಲೆಸ್ತೀನ್‌ ರಾಷ್ಟ್ರವನ್ನು ಔಪಚಾರಿಕವಾಗಿ ಗುರುತಿಸಿದ ಸ್ವಲ್ಪ ಸಮಯದ ನಂತರ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಇಸ್ರೇಲ್‌ನ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಯನ್ನು ವಿರೋಧಿಸುವ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಅವರ ಪ್ರಕಾರ, ಪ್ಯಾಲೆಸ್ತೀನ್ ರಾಷ್ಟ್ರದ ಗುರುತಿಸುವಿಕೆ ಇಸ್ರೇಲ್‌ನ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡುತ್ತದೆ ಮತ್ತು ಭಯೋತ್ಪಾದನೆಗೆ ಬೆಂಬಲ ನೀಡುವಂತಿದೆ. ಈ ಕಾರಣಕ್ಕಾಗಿ, ಇಸ್ರೇಲ್ ವಿರುದ್ಧದ ತಪ್ಪು ಆರೋಪಗಳು ಮತ್ತು ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಗೆ ಸಂಬಂಧಿಸಿದ ಕರೆಗಳ ವಿರುದ್ಧ ಅವರು ಐಕ್ಯರಾಷ್ಟ್ರ ಸಂಸ್ಥೆ (ಯುಎನ್) ಮತ್ತು ಇತರ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೋರಾಡುವುದಾಗಿ ಘೋಷಿಸಿದ್ದಾರೆ. ಮುಂಬರುವ ದಿನಗಳಲ್ಲಿ ಈ ವಿಷಯದ ಬಗ್ಗೆ ಇಸ್ರೇಲ್ ತನ್ನ ನಿಲುವನ್ನು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವರಿಕೆ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ವಿದೇಶಿ ನಾಯಕರು ಹಮಾಸ್‌ಗೆ ‘ಬಹುಮಾನ’ ನೀಡುತ್ತಿದ್ದಾರೆ ಎಂದು ನೆತನ್ಯಾಹು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೋರ್ಡಾನ್ ನದಿಯ ಪಶ್ಚಿಮಕ್ಕೆ ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆ ಸಾಧ್ಯವಿಲ್ಲ ಎಂದಿದ್ದಾರೆ.

ಇಸ್ರೇಲಿ ವಿದೇಶಾಂಗ ಸಚಿವಾಲಯವು ಎಕ್ಸ್‌ ಖಾತೆಯಲ್ಲಿ ಈ ಕುರಿತು ಹೇಳಿಕೆ ನೀಡಿದ್ದು, ಯುನೈಟೆಡ್ ಕಿಂಗ್‌ಡಮ್ ಮತ್ತು ಇತರ ದೇಶಗಳ ಘೋಷಣೆಗಳನ್ನು ‘ಖಂಡಿತವಾಗಿಯೂ ತಿರಸ್ಕರಿಸುತ್ತೇವೆ’ ಎಂದಿದೆ.

“ಈ ಘೋಷಣೆಯು ಶಾಂತಿಯನ್ನು ಉತ್ತೇಜಿಸುವುದಿಲ್ಲ, ಬದಲಾಗಿ ಇದಕ್ಕೆ ವಿರುದ್ಧವಾಗಿ, ಆ ಪ್ರದೇಶವನ್ನು ಮತ್ತಷ್ಟು ಅಸ್ಥಿರಗೊಳಿಸುತ್ತದೆ ಮತ್ತು ಭವಿಷ್ಯದಲ್ಲಿ ಶಾಂತಿಯುತ ಪರಿಹಾರವನ್ನು ಸಾಧಿಸುವ ಸಾಧ್ಯತೆಗಳನ್ನು ಹಾಳು ಮಾಡುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಮೂರು ರಾಷ್ಟ್ರಗಳ ಘೋಷಣೆಯನ್ನು ಹಮಾಸ್ ಸ್ವಾಗತಿಸಿದೆ. “ಇದು ವಿಮೋಚನೆ ಮತ್ತು ಮರಳುವಿಕೆಯ ಹಾದಿಯಲ್ಲಿ ನಮ್ಮ ಜನರ ಹೋರಾಟ, ದೃಢತೆ ಮತ್ತು ತ್ಯಾಗಗಳಿಗೆ ಸಿಕ್ಕ ಫಲಿತಾಂಶ” ಎಂದಿದೆ.

ಸಾಂಕೇತಿಕವಾಗಿರುವ ಮೂರು ರಾಷ್ಟ್ರಗಳ ಘೋಷನೆಯು ಪ್ಯಾಲೆಸ್ತೀನಿಯನ್ನರಿಗೆ ಹೆಚ್ಚಿನ ರಾಜತಾಂತ್ರಿಕ ಸ್ಥಾನಮಾನ ಮತ್ತು ಒಪ್ಪಂದ ಮಾಡಿಕೊಳ್ಳುವ ಸಾಮರ್ಥ್ಯವನ್ನು ನೀಡುತ್ತದೆ.

ಆದರೆ, ಇದು ಗಾಝಾ ಪಟ್ಟಿಯ ವಾಸ್ತವಗಳನ್ನು ಮೂಲಭೂತವಾಗಿ ಬದಲಾಯಿಸುವುದಿಲ್ಲ, ಅಲ್ಲಿ ಸುಮಾರು ಎರಡು ವರ್ಷಗಳ ಯುದ್ಧದಿಂದ ಮಾನವೀಯ ಬಿಕ್ಕಟ್ಟು ಹದಗೆಡುತ್ತಲೇ ಇದೆ. ಅತ್ತ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರು ಯಹೂದಿ ವಸಾಹತುಗಾರರು ಮತ್ತು ಮಿಲಿಟರಿಯಿಂದ ಹೆಚ್ಚುತ್ತಿರುವ ಒತ್ತಡಕ್ಕೆ ಒಳಗಾಗಿದ್ದಾರೆ.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 2023 ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 65,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಸಾವಿರಾರು ಮಕ್ಕಳು ಸೇರಿದ್ದಾರೆ. ಗಾಝಾದ ಹೆಚ್ಚಿನ ಪ್ರದೇಶಗಳು ನಾಶವಾಗಿದೆ. ಜನರು ತಮ್ಮದೆಲ್ಲವನ್ನೂ ತೊರೆದು ಜೀವ, ಜೀವನಕ್ಕಾಗಿ ದಿನಕ್ಕೊಂದು ಕಡೆಗೆ ಪಲಾಯನ ಮಾಡುತ್ತಿದ್ದಾರೆ.

ಗಾಝಾ ನಗರದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ಇಸ್ರೇಲ್ ತನ್ನ ದಾಳಿಯನ್ನು ಮುಂದುವರೆಸಿದ್ದು, ಲಕ್ಷಾಂತರ ಜನರು ಬರಗಾಲದಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿಯಿಡೀ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ನಗರದ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...