Homeಅಂತರಾಷ್ಟ್ರೀಯಪ್ಯಾಲೆಸ್ತೀನ್ 'ಪ್ರತ್ಯೇಕ ರಾಷ್ಟ್ರ'ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

ಪ್ಯಾಲೆಸ್ತೀನ್ ‘ಪ್ರತ್ಯೇಕ ರಾಷ್ಟ್ರ’ವೆಂದು ಗುರುತಿಸಿದ ಯುಕೆ, ಕೆನಡಾ, ಆಸ್ಟ್ರೇಲಿಯಾ

- Advertisement -
- Advertisement -

ಯುನೈಟೆಡ್ ಕಿಂಗ್‌ಡಮ್ (ಯುಕೆ), ಕೆನಡಾ ಮತ್ತು ಆಸ್ಟ್ರೇಲಿಯಾ ದೇಶಗಳು ಭಾನುವಾರ (ಸೆ.21) ಅಧಿಕೃತವಾಗಿ ಪ್ಯಾಲೆಸ್ತೀನ್ ಅನ್ನು ಒಂದು ರಾಷ್ಟ್ರವೆಂದು ಗುರುತಿಸಿವೆ.

ಇದು ಈ ದೇಶಗಳ ವಿದೇಶಾಂಗ ನೀತಿಯಲ್ಲಿ ಗಮನಾರ್ಹ ಬದಲಾವಣೆ ತರಲಿದ್ದು, ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ (ಯುಎಸ್‌) ಹೊಂದಾಣಿಕೆಯಿಂದ ಒಂದು ಹೆಜ್ಜೆ ದೂರವಾಗಿಸಿದೆ. ಈ ವಾರ ಇನ್ನೂ ಹಲವು ಯುರೋಪಿಯನ್ ರಾಷ್ಟ್ರಗಳು ಮತ್ತು ಯುಎಸ್ ಮಿತ್ರರಾಷ್ಟ್ರಗಳು ಈ ಮೂರು ರಾಷ್ಟ್ರಗಳ ನಡೆಯನ್ನು ಅನುಸರಿಸಲು ಸಿದ್ಧವಾಗಿವೆ ಎಂದು ವರದಿಗಳು ಹೇಳಿವೆ.

“ಪ್ಯಾಲೆಸ್ತೀನಿಯರು ಮತ್ತು ಇಸ್ರೇಲಿಗರಲ್ಲಿ ಶಾಂತಿಯ ಭರವಸೆಯನ್ನು ಪುನರುಜ್ಜೀವನಗೊಳಿಸಲು ಮತ್ತು  ದ್ವಿರಾಷ್ಟ್ರ ಪರಿಹಾರಕ್ಕಾಗಿ ಯುನೈಟೆಡ್ ಕಿಂಗ್‌ಡಮ್ ಪ್ಯಾಲೆಸ್ತೀನ್ ಅನ್ನು ಔಪಚಾರಿಕವಾಗಿ ಪ್ರತ್ಯೇಕ ರಾಷ್ಟ್ರ ಎಂದು ಗುರುತಿಸುತ್ತದೆ” ಎಂದು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗ್ರೂಪ್ ಆಫ್ 7 (ಜಿ7) ಎಂಬ ಏಳು ಪ್ರಮುಖ ರಾಷ್ಟ್ರಗಳ ಗುಂಪಿನಲ್ಲಿ ಕೆನಡಾ ಮೊದಲ ಬಾರಿಗೆ ಪ್ಯಾಲೆಸ್ತೀನ್‌ನನ್ನು ಸ್ವತಂತ್ರ ರಾಷ್ಟ್ರವಾಗಿ ಅಧಿಕೃತವಾಗಿ ಗುರುತಿಸಿದೆ. ಈ ಐತಿಹಾಸಿಕ ನಿರ್ಧಾರದ ಮೂಲಕ, ಕೆನಡಾದ ಪ್ರಧಾನ ಮಂತ್ರಿ ಮಾರ್ಕ್ ಕಾರ್ನೆ ಅವರು, ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ಎರಡೂ ರಾಷ್ಟ್ರಗಳಿಗೆ ಶಾಂತಿಯುತವಾದ ಮತ್ತು ಸೌಹಾರ್ದಯುತ ಭವಿಷ್ಯವನ್ನು ಒದಗಿಸುವ ಭರವಸೆಯನ್ನು ನೀಡಿದ್ದಾರೆ. ಈ ಕ್ರಮವು ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವದ ಹೆಜ್ಜೆಯಾಗಿದೆ, ಏಕೆಂದರೆ ಜಿ7 ರಾಷ್ಟ್ರಗಳು ವಿಶ್ವದ ಪ್ರಮುಖ ಆರ್ಥಿಕ ಮತ್ತು ರಾಜಕೀಯ ಶಕ್ತಿಗಳಾಗಿವೆ.

ಸ್ವತಂತ್ರ ಮತ್ತು ಸಾರ್ವಭೌಮ ಪ್ಯಾಲೆಸ್ತೀನ್‌ ರಾಷ್ಟ್ರವನ್ನು ಔಪಚಾರಿಕವಾಗಿ ಗುರುತಿಸಿದ ಸ್ವಲ್ಪ ಸಮಯದ ನಂತರ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಇಸ್ರೇಲ್‌ನ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಯನ್ನು ವಿರೋಧಿಸುವ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಅವರ ಪ್ರಕಾರ, ಪ್ಯಾಲೆಸ್ತೀನ್ ರಾಷ್ಟ್ರದ ಗುರುತಿಸುವಿಕೆ ಇಸ್ರೇಲ್‌ನ ಅಸ್ತಿತ್ವಕ್ಕೆ ಅಪಾಯವನ್ನುಂಟುಮಾಡುತ್ತದೆ ಮತ್ತು ಭಯೋತ್ಪಾದನೆಗೆ ಬೆಂಬಲ ನೀಡುವಂತಿದೆ. ಈ ಕಾರಣಕ್ಕಾಗಿ, ಇಸ್ರೇಲ್ ವಿರುದ್ಧದ ತಪ್ಪು ಆರೋಪಗಳು ಮತ್ತು ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆಗೆ ಸಂಬಂಧಿಸಿದ ಕರೆಗಳ ವಿರುದ್ಧ ಅವರು ಐಕ್ಯರಾಷ್ಟ್ರ ಸಂಸ್ಥೆ (ಯುಎನ್) ಮತ್ತು ಇತರ ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಹೋರಾಡುವುದಾಗಿ ಘೋಷಿಸಿದ್ದಾರೆ. ಮುಂಬರುವ ದಿನಗಳಲ್ಲಿ ಈ ವಿಷಯದ ಬಗ್ಗೆ ಇಸ್ರೇಲ್ ತನ್ನ ನಿಲುವನ್ನು ಅಂತಾರಾಷ್ಟ್ರೀಯ ಸಮುದಾಯಕ್ಕೆ ಮನವರಿಕೆ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ವಿದೇಶಿ ನಾಯಕರು ಹಮಾಸ್‌ಗೆ ‘ಬಹುಮಾನ’ ನೀಡುತ್ತಿದ್ದಾರೆ ಎಂದು ನೆತನ್ಯಾಹು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೋರ್ಡಾನ್ ನದಿಯ ಪಶ್ಚಿಮಕ್ಕೆ ಪ್ಯಾಲೆಸ್ತೀನ್ ರಾಷ್ಟ್ರದ ಸ್ಥಾಪನೆ ಸಾಧ್ಯವಿಲ್ಲ ಎಂದಿದ್ದಾರೆ.

ಇಸ್ರೇಲಿ ವಿದೇಶಾಂಗ ಸಚಿವಾಲಯವು ಎಕ್ಸ್‌ ಖಾತೆಯಲ್ಲಿ ಈ ಕುರಿತು ಹೇಳಿಕೆ ನೀಡಿದ್ದು, ಯುನೈಟೆಡ್ ಕಿಂಗ್‌ಡಮ್ ಮತ್ತು ಇತರ ದೇಶಗಳ ಘೋಷಣೆಗಳನ್ನು ‘ಖಂಡಿತವಾಗಿಯೂ ತಿರಸ್ಕರಿಸುತ್ತೇವೆ’ ಎಂದಿದೆ.

“ಈ ಘೋಷಣೆಯು ಶಾಂತಿಯನ್ನು ಉತ್ತೇಜಿಸುವುದಿಲ್ಲ, ಬದಲಾಗಿ ಇದಕ್ಕೆ ವಿರುದ್ಧವಾಗಿ, ಆ ಪ್ರದೇಶವನ್ನು ಮತ್ತಷ್ಟು ಅಸ್ಥಿರಗೊಳಿಸುತ್ತದೆ ಮತ್ತು ಭವಿಷ್ಯದಲ್ಲಿ ಶಾಂತಿಯುತ ಪರಿಹಾರವನ್ನು ಸಾಧಿಸುವ ಸಾಧ್ಯತೆಗಳನ್ನು ಹಾಳು ಮಾಡುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಮೂರು ರಾಷ್ಟ್ರಗಳ ಘೋಷಣೆಯನ್ನು ಹಮಾಸ್ ಸ್ವಾಗತಿಸಿದೆ. “ಇದು ವಿಮೋಚನೆ ಮತ್ತು ಮರಳುವಿಕೆಯ ಹಾದಿಯಲ್ಲಿ ನಮ್ಮ ಜನರ ಹೋರಾಟ, ದೃಢತೆ ಮತ್ತು ತ್ಯಾಗಗಳಿಗೆ ಸಿಕ್ಕ ಫಲಿತಾಂಶ” ಎಂದಿದೆ.

ಸಾಂಕೇತಿಕವಾಗಿರುವ ಮೂರು ರಾಷ್ಟ್ರಗಳ ಘೋಷನೆಯು ಪ್ಯಾಲೆಸ್ತೀನಿಯನ್ನರಿಗೆ ಹೆಚ್ಚಿನ ರಾಜತಾಂತ್ರಿಕ ಸ್ಥಾನಮಾನ ಮತ್ತು ಒಪ್ಪಂದ ಮಾಡಿಕೊಳ್ಳುವ ಸಾಮರ್ಥ್ಯವನ್ನು ನೀಡುತ್ತದೆ.

ಆದರೆ, ಇದು ಗಾಝಾ ಪಟ್ಟಿಯ ವಾಸ್ತವಗಳನ್ನು ಮೂಲಭೂತವಾಗಿ ಬದಲಾಯಿಸುವುದಿಲ್ಲ, ಅಲ್ಲಿ ಸುಮಾರು ಎರಡು ವರ್ಷಗಳ ಯುದ್ಧದಿಂದ ಮಾನವೀಯ ಬಿಕ್ಕಟ್ಟು ಹದಗೆಡುತ್ತಲೇ ಇದೆ. ಅತ್ತ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಪ್ಯಾಲೆಸ್ತೀನಿಯರು ಯಹೂದಿ ವಸಾಹತುಗಾರರು ಮತ್ತು ಮಿಲಿಟರಿಯಿಂದ ಹೆಚ್ಚುತ್ತಿರುವ ಒತ್ತಡಕ್ಕೆ ಒಳಗಾಗಿದ್ದಾರೆ.

ಪ್ಯಾಲೆಸ್ತೀನ್ ಆರೋಗ್ಯ ಸಚಿವಾಲಯದ ಪ್ರಕಾರ, ಅಕ್ಟೋಬರ್ 2023 ರಿಂದ ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದಿಂದ ಇದುವರೆಗೆ 65,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಸಾವಿರಾರು ಮಕ್ಕಳು ಸೇರಿದ್ದಾರೆ. ಗಾಝಾದ ಹೆಚ್ಚಿನ ಪ್ರದೇಶಗಳು ನಾಶವಾಗಿದೆ. ಜನರು ತಮ್ಮದೆಲ್ಲವನ್ನೂ ತೊರೆದು ಜೀವ, ಜೀವನಕ್ಕಾಗಿ ದಿನಕ್ಕೊಂದು ಕಡೆಗೆ ಪಲಾಯನ ಮಾಡುತ್ತಿದ್ದಾರೆ.

ಗಾಝಾ ನಗರದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ಇಸ್ರೇಲ್ ತನ್ನ ದಾಳಿಯನ್ನು ಮುಂದುವರೆಸಿದ್ದು, ಲಕ್ಷಾಂತರ ಜನರು ಬರಗಾಲದಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಭಾನುವಾರ ರಾತ್ರಿಯಿಡೀ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 34 ಜನರು ಸಾವನ್ನಪ್ಪಿದ್ದಾರೆ ಎಂದು ಗಾಝಾ ನಗರದ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಗಾಝಾದಲ್ಲಿ ಆಕ್ರಮಣ ತೀವ್ರಗೊಳಿಸಿದ ಇಸ್ರೇಲ್ : ಹಮಾಸ್‌ನಿಂದ 48 ಒತ್ತೆಯಾಳುಗಳ ‘ವಿದಾಯ ಚಿತ್ರ’ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...