Homeಅಂತರಾಷ್ಟ್ರೀಯ3 ದೇಶಗಳ ಸಿಖ್ ಯಾತ್ರಾರ್ಥಿಗಳಿಗೆ ಉಚಿತ ಆನ್‌ಲೈನ್ ವೀಸಾ ಘೋಷಿಸಿದ ಪಾಕಿಸ್ತಾನ

3 ದೇಶಗಳ ಸಿಖ್ ಯಾತ್ರಾರ್ಥಿಗಳಿಗೆ ಉಚಿತ ಆನ್‌ಲೈನ್ ವೀಸಾ ಘೋಷಿಸಿದ ಪಾಕಿಸ್ತಾನ

- Advertisement -
- Advertisement -

ಅಮೆರಿಕ, ಯುನೈಟೆಡ್ ಕಿಂಗ್‌ಡಂ ಮತ್ತು ಕೆನಡಾದ ಸಿಖ್ ಯಾತ್ರಾರ್ಥಿಗಳು ತಮ್ಮ ಧಾರ್ಮಿಕ ಸ್ಥಳಗಳಿಗೆ ಗೌರವ ಸಲ್ಲಿಸಲು ದೇಶಕ್ಕೆ ಆಗಮಿಸಿದ 30 ನಿಮಿಷಗಳಲ್ಲಿ ಉಚಿತ ಆನ್‌ಲೈನ್ ವೀಸಾವನ್ನು ಪಡೆಯುವ ನಿಯಮವನ್ನು ಪಾಕಿಸ್ತಾನ ಪರಿಚಯಿಸಿದೆ. ಈ ಬಗ್ಗೆ ಪಾಕಿಸ್ತಾನದ ಆಂತರಿಕ ಸಚಿವ ಮೊಹ್ಸಿನ್ ನಖ್ವಿ ಹೇಳಿಕೆ ನೀಡಿದ್ದಾರೆ. ಮೂರು ದೇಶಗಳ ಸಿಖ್ಖರಿಗೆ

ಗುರುವಾರ ಲಾಹೋರ್‌ನಲ್ಲಿ ಸಿಖ್ ಯಾತ್ರಾರ್ಥಿಗಳ 44 ಸದಸ್ಯರ ವಿದೇಶಿ ನಿಯೋಗವನ್ನು ಭೇಟಿಯಾದಾಗ ನಖ್ವಿ ಈ ಹೇಳಿಕೆ ನೀಡಿದ್ದಾರೆ. ಸಿಖ್ ಯಾತ್ರಿಕರ ನಿಯೋಗದೊಂದಿಗೆ ಮಾತನಾಡಿದ ನಖ್ವಿ, ಸಿಖ್ ಸಂದರ್ಶಕರು ಎದುರಿಸಿದ ಹಿಂದಿನ ಸವಾಲುಗಳನ್ನು ಒಪ್ಪಿಕೊಳ್ಳುತ್ತಾ, ಧಾರ್ಮಿಕ ಉದ್ದೇಶಗಳಿಗಾಗಿ ಮಾಡುವ ಪ್ರಯಾಣವನ್ನು ಸರಳಗೊಳಿಸುವ ತಮ್ಮ ಆಡಳಿತದ ಪ್ರಯತ್ನಗಳನ್ನು ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಸಿಖ್ ಸಮುದಾಯಕ್ಕೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಆದ್ಯತೆಯಾಗಿದೆ. ಅಮೇರಿಕನ್, ಕೆನಡಿಯನ್ ಮತ್ತು ಯುಕೆ ಪಾಸ್‌ಪೋರ್ಟ್ ಹೊಂದಿರುವವರು ಈಗ ಯಾವುದೇ ಶುಲ್ಕವಿಲ್ಲದೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನೀವು ವರ್ಷಕ್ಕೆ 10 ಬಾರಿ ಪಾಕಿಸ್ತಾನಕ್ಕೆ ಬರಬಹುದು ಹಾಗೂ ನಾವು ನಿಮ್ಮನ್ನು ಪ್ರತಿ ಬಾರಿ ಸ್ವಾಗತಿಸುತ್ತೇವೆ” ಎಂದು ನಖ್ವಿ ಹೇಳಿದ್ದಾರೆ. ಮೂರು ದೇಶಗಳ ಸಿಖ್ಖರಿಗೆ

ಮುಸ್ಲಿಮರಿಗೆ ಸೌದಿ ಅರೇಬಿಯಾ ಹೇಗೋ ಹಾಗೆ ಪಾಕಿಸ್ತಾನ ಸಿಖ್ಖರಿಗೆ ಮಹತ್ವದ ಸ್ಥಳವಾಗಿದೆ ಎಂದು ನಖ್ವಿ ಹೇಳಿದ್ದಾರೆ. ಪಾಕಿಸ್ತಾನದಾದ್ಯಂತ ವಿವಿಧ ಸಿಖ್ ಪರಂಪರೆಯ ತಾಣಗಳನ್ನು ತೆರೆಯುವುದಾಗಿ ಘೋಷಿಸಿದ ಅವರು, ಅಲ್ಲಿ ಯಾವುದೇ ಅನುಮತಿಗಳ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ತಮ್ಮ ದೃಷ್ಟಿಕೋನವನ್ನು ವ್ಯಕ್ತಪಡಿಸಿದ ಅವರು, ಪಾಕಿಸ್ತಾನಕ್ಕೆ ಭೇಟಿ ನೀಡುವ ಸಿಖ್ ಯಾತ್ರಿಕರ ವಾರ್ಷಿಕ ಸಂಖ್ಯೆಯನ್ನು 1 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸುವ ಯೋಜನೆಗಳನ್ನು ನಖ್ವಿ ಪ್ರಸ್ತಾಪಿಸಿದ್ದಾರೆ. ವಿಶೇಷವಾಗಿ ಯುವ ಪೀಳಿಗೆಯನ್ನು ತೊಡಗಿಸಿಕೊಳ್ಳಲು ಒತ್ತು ನೀಡುವುದಾಗಿ ಅವರು ಹೇಳಿದ್ದಾರೆ.

ಸಿಖ್ ನಿಯೋಗವು ಪಾಕಿಸ್ತಾನದ ಆತಿಥ್ಯಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದು, ಸುವ್ಯವಸ್ಥಿತ ವೀಸಾ ಪ್ರಕ್ರಿಯೆಯನ್ನು ಶ್ಲಾಘಿಸಿದೆ. “ನೀವು ನಮ್ಮ ಹೃದಯಗಳನ್ನು ಗೆದ್ದಿದ್ದೀರಿ” ಎಂದು ಅವರು ಹೇಳಿದ್ದಾರೆ.

ಈ ನೀತಿ ಬದಲಾವಣೆಯು ಪ್ರವಾಸೋದ್ಯಮ ಮತ್ತು ಹೂಡಿಕೆಯನ್ನು ಉತ್ತೇಜಿಸುವ ಪಾಕಿಸ್ತಾನದ ವಿಶಾಲ ಉಪಕ್ರಮದ ಭಾಗವಾಗಿದೆ. ಕಳೆದ ಆಗಸ್ಟ್ 14 ರಿಂದ 124 ದೇಶಗಳ ನಾಗರಿಕರಿಗೆ ವೀಸಾ ಶುಲ್ಕವನ್ನು ಸಂಪೂರ್ಣವಾಗಿ ಮನ್ನಾ ಮಾಡಲಾಗಿದೆ.

ಅಮೆರಿಕ, ಯುನೈಟೆಡ್ ಕಿಂಗ್‌ಡಮ್ ಮತ್ತು ಕೆನಡಾದ ಸಿಖ್ ಯಾತ್ರಾರ್ಥಿಗಳಿಗೆ ಉಚಿತ ಆನ್‌ಲೈನ್ ವೀಸಾಗಳನ್ನು ನೀಡುವ ಪಾಕಿಸ್ತಾನಿ ಸರ್ಕಾರದ ನಿರ್ಧಾರವನ್ನು ಉತ್ತರ ಅಮೆರಿಕಾದ ಪಂಜಾಬಿ ಅಸೋಸಿಯೇಷನ್ ​​(NAPA) ಸ್ವಾಗತಿಸಿದೆ.

ಇದನ್ನೂ ಓದಿ: ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ಅತ್ಯಾಚಾರ ಸಂತ್ರಸ್ತೆಯ ಉಡುಪಿನಲ್ಲಿ ಪ್ರಜ್ವಲ್ ರೇವಣ್ಣನ ಡಿಎನ್‌ಎ ಪತ್ತೆ: ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...