Homeಅಂತರಾಷ್ಟ್ರೀಯರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

- Advertisement -
- Advertisement -

ಉಭಯ ದೇಶಗಳ ಸಂಘರ್ಷದಲ್ಲಿ ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ಪ್ರಜೆಯನ್ನು ಸೆರೆಹಿಡಿದಿರುವುದಾಗಿ ಉಕ್ರೇನ್ ಮಂಗಳವಾರ (ಅ.7) ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಉಕ್ರೇನ್‌ ಸಶಸ್ತ್ರ ಪಡೆಗಳ 63ನೇ ಯಾಂತ್ರಿಕೃತ ಬ್ರಿಗೇಡ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಗುಜರಾತ್‌ನ ಮೋರ್ಬಿ ನಿವಾಸಿ ಮಜೋತಿ ಸಾಹಿಲ್ ಮೊಹಮ್ಮದ್ ಹುಸೇನ್ ಅವರು ಮಾತನಾಡುವ ವಿಡಿಯೋ ಬಿಡುಗಡೆ ಮಾಡಿದೆ.

ಹುಸೇನ್ ಅವರು ರಷ್ಯಾದ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಹೋಗಿದ್ದರು ಎಂದು ವರದಿಗಳು ಹೇಳಿವೆ.

ಉಕ್ರೇನ್ ಸೇನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ರಷ್ಯನ್ ಭಾಷೆಯಲ್ಲಿ ಮಾತನಾಡಿರುವ ಹುಸೇನ್, “ನಾನು ಅಧ್ಯಯನ ನಿಮಿತ್ತ ರಷ್ಯಾಗೆ ಹೋಗಿದ್ದೆ. ಅಲ್ಲಿ ಮಾದಕ ವಸ್ತು ಸಂಬಂಧಿತ ಆರೋಪದಲ್ಲಿ ನನ್ನನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ನನಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅದರಿಂದ ತಪ್ಪಿಸಿಕೊಳ್ಳಲು ಬಯಸಿದರೆ ರಷ್ಯಾ ಸೇನೆ ಪರ ಹೋರಾಡುವ ಒಪ್ಪಂದಕ್ಕೆ ಸಹಿ ಹಾಕಲು ನನಗೆ ಹೇಳಲಾಯಿತು. ನನಗೆ ಜೈಲ್ಲಿನಲ್ಲಿ ಇರಲು ಇಷ್ಟ ಇರಲಿಲ್ಲ. ಆದ್ದರಿಂದ ವಿಶೇಷ ಮಿಲಿಟರಿ ಕಾರ್ಯಾಚರಣೆಗಾಗಿ ಒಪ್ಪಂದಕ್ಕೆ ಸಹಿ ಹಾಕಿದೆ” ಎಂದು ಹೇಳಿದ್ದಾರೆ.

“16 ದಿನಗಳ ತರಬೇತಿಯ ನಂತರ ಅಕ್ಟೋಬರ್ 1ರಂದು ಮೊದಲ ಬಾರಿಗೆ ನನ್ನನ್ನು ಸೇನೆ ಜೊತೆ ಹೋರಾಡಲು ಕಳುಹಿಸಿದರು. ಮೂರು ದಿನಗಳ ಕಾಲ ನಾನು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದೆ. ನನ್ನ ಕಮಾಂಡರ್ ಜೊತೆಗಿನ ವಾಗ್ವಾದದ ನಂತರ ಉಕ್ರೇನ್ ಸೇನೆಗೆ ಶರಣಾದೆ” ಎಂದು ಹುಸೇನ್ ತಿಳಿಸಿದ್ದಾರೆ.

“ನಾನು ರಷ್ಯಾ ಸೇನೆ ಪರ ಹೋರಾಡಲು ಬಂದಿದ್ದ ವೇಳೆ ಎರಡರಿಂದ ಮೂರು ಕಿಲೋ ಮೀಟರ್ ದೂರದಲ್ಲಿ ಉಕ್ರೇನ್ ಸೇನೆಯ ಜಾಗವನ್ನು ಕಂಡೆ. ತಕ್ಷಣ ನಾನು ರೈಫಲ್ ಕೆಳಗಿಟ್ಟು ನಾನು ಹೋರಾಡಲು ಬಯಸುವುದಿಲ್ಲ ಎಂದು ಹೇಳಿದೆ. ನನಗೆ ಸಹಾಯ ಬೇಕು. ನಾನು ರಷ್ಯಾಕ್ಕೆ ಹಿಂತಿರುಗಲು ಬಯಸುವುದಿಲ್ಲಎಂದೆ” ಎಂದು ಹುಸೇನ್ ವಿಡಿಯೋದಲ್ಲಿ ಹೇಳಿದ್ದಾರೆ.

ಈ ಬಗ್ಗೆ ಭಾರತೀಯ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಷ್ಯಾ ಸೇನೆಗೆ ಇತ್ತೀಚೆಗೆ ನೇಮಕ ಮಾಡಿಕೊಂಡಿರುವ 27 ಭಾರತೀಯ ಪ್ರಜೆಗಳನ್ನು ತಕ್ಷಣ ಬಿಡುಗಡೆ ಮಾಡಿ ತಾಯ್ನಾಡಿಗೆ ಕಳುಹಿಸುವಂತೆ ಒತ್ತಾಯಿಸಿದ್ದಾಗಿ ಸೆಪ್ಟೆಂಬರ್‌ನಲ್ಲಿ ಭಾರತ ಸರ್ಕಾರ ಹೇಳಿಕೊಂಡಿತ್ತು. ಇದಾಗಿ ಕೆಲ ದಿನಗಳಲ್ಲಿ ವಿದ್ಯಾರ್ಥಿಯ ಶರಣಾಗತಿ ಸುದ್ದಿ ಬಂದಿದೆ.

ಯುವಜನರನ್ನು ಉದ್ಯೋಗದ ಆಮಿಷವೊಡ್ಡಿ ರಷ್ಯಾಗೆ ಕಳುಹಿಸಿ, ಅಲ್ಲಿ ಶಸ್ತ್ರಾಸ್ತ ಕೊಟ್ಟು ಯುದ್ದ ಭೂಮಿಗೆ ಕಳುಹಿಸುವ ಜಾಲದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಕನಿಷ್ಠ 15 ಭಾರತೀಯರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಅಲ್ಲಿ ಅವರನ್ನು ರಷ್ಯಾ ಮಿಲಿಟರಿಯೊಂದಿಗೆ ಹೋರಾಡಲು ಒತ್ತಾಯಿಸಲಾಗುತ್ತಿದೆ ಎಂದು ಸೆಪ್ಟೆಂಬರ್‌ನಲ್ಲಿ ದಿ ಹಿಂದೂ ಪತ್ರಿಕೆ ವರದಿ ಮಾಡಿತ್ತು.

ವಿದ್ಯಾರ್ಥಿ ಉಕ್ರೇನ್ ಸೇನೆಗೆ ವಿದ್ಯಾರ್ಥಿ ಶರಣಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ರಣಧೀರ್ ಜೈಸ್ವಾಲ್, “ಆಮಿಷಗಳಿಗೆ ಬಲಿಯಾಗಿ ರಷ್ಯಾದ ಸೇನೆಗೆ ಸೇರುವುದು ಅಪಾಯಕಾರಿ” ಎಂದಿದ್ದಾರೆ.

ರಷ್ಯಾದ ಸಶಸ್ತ್ರ ಪಡೆಗಳಲ್ಲಿ 127 ಭಾರತೀಯ ನಾಗರಿಕರಿದ್ದರು. ಅವರಲ್ಲಿ 98 ಜನರನ್ನು ಮಿಲಿಟರಿಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಉಭಯ ರಾಷ್ಟ್ರಗಳ ಸರ್ಕಾರಗಳ ನಡುವಿನ ಮಾತುಕತೆಯ ಪರಿಣಾಮವಾಗಿ ಅವರು ಭಾರತಕ್ಕೆ ಮರಳಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಜುಲೈನಲ್ಲಿ ರಾಜ್ಯಸಭೆಗೆ ತಿಳಿಸಿತ್ತು.

ನವದೆಹಲಿಯಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಪ್ರಕಾರ, ರಷ್ಯಾದ ರಕ್ಷಣಾ ಸಚಿವಾಲಯವು 2024 ರ ಏಪ್ರಿಲ್‌ನಿಂದ ಭಾರತೀಯರನ್ನು ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಿದೆ. ಆದರೆ, ಸೈನಿಕ ಸೇವೆಗೆ ಸಂಬಂಧಿಸಿದ ಕಾಂಟ್ರಾಕ್ಟ್‌ಗಳು ಹಲವಾರು ಭಾರತೀಯರ ಬಿಡುಗಡೆಯನ್ನು ವಿಳಂಬಗೊಳಿಸಿವೆ.

ಫೆಬ್ರವರಿ 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ತನ್ನ ಆಕ್ರಮಣವನ್ನು ಪ್ರಾರಂಭಿಸಿದ್ದು, ಈಗಲೂ ನಡೆಯುತ್ತಿದೆ. ಇದು ಎರಡನೇ ಮಹಾಯುದ್ಧದ ನಂತರ ಯುರೋಪ್‌ನಲ್ಲಿ ನಡೆಯುತ್ತಿರುವ ಅತ್ಯಂತ ಮಾರಕ ಸಂಘರ್ಷವಾಗಿದೆ.

ಮೇರಿ ಬ್ರಂಕೋವ್, ಫ್ರೆಡ್ ರಾಮ್ಸ್‌ಡೆಲ್, ಶಿಮೊನ್ ಸಕಾಗುಚಿ ಅವರಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...