Homeಅಂತರಾಷ್ಟ್ರೀಯರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

- Advertisement -
- Advertisement -

ಉಭಯ ದೇಶಗಳ ಸಂಘರ್ಷದಲ್ಲಿ ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ಪ್ರಜೆಯನ್ನು ಸೆರೆಹಿಡಿದಿರುವುದಾಗಿ ಉಕ್ರೇನ್ ಮಂಗಳವಾರ (ಅ.7) ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಉಕ್ರೇನ್‌ ಸಶಸ್ತ್ರ ಪಡೆಗಳ 63ನೇ ಯಾಂತ್ರಿಕೃತ ಬ್ರಿಗೇಡ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಗುಜರಾತ್‌ನ ಮೋರ್ಬಿ ನಿವಾಸಿ ಮಜೋತಿ ಸಾಹಿಲ್ ಮೊಹಮ್ಮದ್ ಹುಸೇನ್ ಅವರು ಮಾತನಾಡುವ ವಿಡಿಯೋ ಬಿಡುಗಡೆ ಮಾಡಿದೆ.

ಹುಸೇನ್ ಅವರು ರಷ್ಯಾದ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಹೋಗಿದ್ದರು ಎಂದು ವರದಿಗಳು ಹೇಳಿವೆ.

ಉಕ್ರೇನ್ ಸೇನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ರಷ್ಯನ್ ಭಾಷೆಯಲ್ಲಿ ಮಾತನಾಡಿರುವ ಹುಸೇನ್, “ನಾನು ಅಧ್ಯಯನ ನಿಮಿತ್ತ ರಷ್ಯಾಗೆ ಹೋಗಿದ್ದೆ. ಅಲ್ಲಿ ಮಾದಕ ವಸ್ತು ಸಂಬಂಧಿತ ಆರೋಪದಲ್ಲಿ ನನ್ನನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ನನಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅದರಿಂದ ತಪ್ಪಿಸಿಕೊಳ್ಳಲು ಬಯಸಿದರೆ ರಷ್ಯಾ ಸೇನೆ ಪರ ಹೋರಾಡುವ ಒಪ್ಪಂದಕ್ಕೆ ಸಹಿ ಹಾಕಲು ನನಗೆ ಹೇಳಲಾಯಿತು. ನನಗೆ ಜೈಲ್ಲಿನಲ್ಲಿ ಇರಲು ಇಷ್ಟ ಇರಲಿಲ್ಲ. ಆದ್ದರಿಂದ ವಿಶೇಷ ಮಿಲಿಟರಿ ಕಾರ್ಯಾಚರಣೆಗಾಗಿ ಒಪ್ಪಂದಕ್ಕೆ ಸಹಿ ಹಾಕಿದೆ” ಎಂದು ಹೇಳಿದ್ದಾರೆ.

“16 ದಿನಗಳ ತರಬೇತಿಯ ನಂತರ ಅಕ್ಟೋಬರ್ 1ರಂದು ಮೊದಲ ಬಾರಿಗೆ ನನ್ನನ್ನು ಸೇನೆ ಜೊತೆ ಹೋರಾಡಲು ಕಳುಹಿಸಿದರು. ಮೂರು ದಿನಗಳ ಕಾಲ ನಾನು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದೆ. ನನ್ನ ಕಮಾಂಡರ್ ಜೊತೆಗಿನ ವಾಗ್ವಾದದ ನಂತರ ಉಕ್ರೇನ್ ಸೇನೆಗೆ ಶರಣಾದೆ” ಎಂದು ಹುಸೇನ್ ತಿಳಿಸಿದ್ದಾರೆ.

“ನಾನು ರಷ್ಯಾ ಸೇನೆ ಪರ ಹೋರಾಡಲು ಬಂದಿದ್ದ ವೇಳೆ ಎರಡರಿಂದ ಮೂರು ಕಿಲೋ ಮೀಟರ್ ದೂರದಲ್ಲಿ ಉಕ್ರೇನ್ ಸೇನೆಯ ಜಾಗವನ್ನು ಕಂಡೆ. ತಕ್ಷಣ ನಾನು ರೈಫಲ್ ಕೆಳಗಿಟ್ಟು ನಾನು ಹೋರಾಡಲು ಬಯಸುವುದಿಲ್ಲ ಎಂದು ಹೇಳಿದೆ. ನನಗೆ ಸಹಾಯ ಬೇಕು. ನಾನು ರಷ್ಯಾಕ್ಕೆ ಹಿಂತಿರುಗಲು ಬಯಸುವುದಿಲ್ಲಎಂದೆ” ಎಂದು ಹುಸೇನ್ ವಿಡಿಯೋದಲ್ಲಿ ಹೇಳಿದ್ದಾರೆ.

ಈ ಬಗ್ಗೆ ಭಾರತೀಯ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಷ್ಯಾ ಸೇನೆಗೆ ಇತ್ತೀಚೆಗೆ ನೇಮಕ ಮಾಡಿಕೊಂಡಿರುವ 27 ಭಾರತೀಯ ಪ್ರಜೆಗಳನ್ನು ತಕ್ಷಣ ಬಿಡುಗಡೆ ಮಾಡಿ ತಾಯ್ನಾಡಿಗೆ ಕಳುಹಿಸುವಂತೆ ಒತ್ತಾಯಿಸಿದ್ದಾಗಿ ಸೆಪ್ಟೆಂಬರ್‌ನಲ್ಲಿ ಭಾರತ ಸರ್ಕಾರ ಹೇಳಿಕೊಂಡಿತ್ತು. ಇದಾಗಿ ಕೆಲ ದಿನಗಳಲ್ಲಿ ವಿದ್ಯಾರ್ಥಿಯ ಶರಣಾಗತಿ ಸುದ್ದಿ ಬಂದಿದೆ.

ಯುವಜನರನ್ನು ಉದ್ಯೋಗದ ಆಮಿಷವೊಡ್ಡಿ ರಷ್ಯಾಗೆ ಕಳುಹಿಸಿ, ಅಲ್ಲಿ ಶಸ್ತ್ರಾಸ್ತ ಕೊಟ್ಟು ಯುದ್ದ ಭೂಮಿಗೆ ಕಳುಹಿಸುವ ಜಾಲದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಕನಿಷ್ಠ 15 ಭಾರತೀಯರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಅಲ್ಲಿ ಅವರನ್ನು ರಷ್ಯಾ ಮಿಲಿಟರಿಯೊಂದಿಗೆ ಹೋರಾಡಲು ಒತ್ತಾಯಿಸಲಾಗುತ್ತಿದೆ ಎಂದು ಸೆಪ್ಟೆಂಬರ್‌ನಲ್ಲಿ ದಿ ಹಿಂದೂ ಪತ್ರಿಕೆ ವರದಿ ಮಾಡಿತ್ತು.

ವಿದ್ಯಾರ್ಥಿ ಉಕ್ರೇನ್ ಸೇನೆಗೆ ವಿದ್ಯಾರ್ಥಿ ಶರಣಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ರಣಧೀರ್ ಜೈಸ್ವಾಲ್, “ಆಮಿಷಗಳಿಗೆ ಬಲಿಯಾಗಿ ರಷ್ಯಾದ ಸೇನೆಗೆ ಸೇರುವುದು ಅಪಾಯಕಾರಿ” ಎಂದಿದ್ದಾರೆ.

ರಷ್ಯಾದ ಸಶಸ್ತ್ರ ಪಡೆಗಳಲ್ಲಿ 127 ಭಾರತೀಯ ನಾಗರಿಕರಿದ್ದರು. ಅವರಲ್ಲಿ 98 ಜನರನ್ನು ಮಿಲಿಟರಿಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಉಭಯ ರಾಷ್ಟ್ರಗಳ ಸರ್ಕಾರಗಳ ನಡುವಿನ ಮಾತುಕತೆಯ ಪರಿಣಾಮವಾಗಿ ಅವರು ಭಾರತಕ್ಕೆ ಮರಳಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಜುಲೈನಲ್ಲಿ ರಾಜ್ಯಸಭೆಗೆ ತಿಳಿಸಿತ್ತು.

ನವದೆಹಲಿಯಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಪ್ರಕಾರ, ರಷ್ಯಾದ ರಕ್ಷಣಾ ಸಚಿವಾಲಯವು 2024 ರ ಏಪ್ರಿಲ್‌ನಿಂದ ಭಾರತೀಯರನ್ನು ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಿದೆ. ಆದರೆ, ಸೈನಿಕ ಸೇವೆಗೆ ಸಂಬಂಧಿಸಿದ ಕಾಂಟ್ರಾಕ್ಟ್‌ಗಳು ಹಲವಾರು ಭಾರತೀಯರ ಬಿಡುಗಡೆಯನ್ನು ವಿಳಂಬಗೊಳಿಸಿವೆ.

ಫೆಬ್ರವರಿ 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ತನ್ನ ಆಕ್ರಮಣವನ್ನು ಪ್ರಾರಂಭಿಸಿದ್ದು, ಈಗಲೂ ನಡೆಯುತ್ತಿದೆ. ಇದು ಎರಡನೇ ಮಹಾಯುದ್ಧದ ನಂತರ ಯುರೋಪ್‌ನಲ್ಲಿ ನಡೆಯುತ್ತಿರುವ ಅತ್ಯಂತ ಮಾರಕ ಸಂಘರ್ಷವಾಗಿದೆ.

ಮೇರಿ ಬ್ರಂಕೋವ್, ಫ್ರೆಡ್ ರಾಮ್ಸ್‌ಡೆಲ್, ಶಿಮೊನ್ ಸಕಾಗುಚಿ ಅವರಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...