Homeಅಂತರಾಷ್ಟ್ರೀಯರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ವಿದ್ಯಾರ್ಥಿಯನ್ನು ಸೆರೆ ಹಿಡಿದ ಉಕ್ರೇನ್‌

- Advertisement -
- Advertisement -

ಉಭಯ ದೇಶಗಳ ಸಂಘರ್ಷದಲ್ಲಿ ರಷ್ಯಾ ಸೇನೆ ಪರ ಹೋರಾಡುತ್ತಿದ್ದ ಭಾರತೀಯ ಪ್ರಜೆಯನ್ನು ಸೆರೆಹಿಡಿದಿರುವುದಾಗಿ ಉಕ್ರೇನ್ ಮಂಗಳವಾರ (ಅ.7) ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಉಕ್ರೇನ್‌ ಸಶಸ್ತ್ರ ಪಡೆಗಳ 63ನೇ ಯಾಂತ್ರಿಕೃತ ಬ್ರಿಗೇಡ್ ತನ್ನ ಟೆಲಿಗ್ರಾಮ್ ಚಾನೆಲ್‌ನಲ್ಲಿ ಗುಜರಾತ್‌ನ ಮೋರ್ಬಿ ನಿವಾಸಿ ಮಜೋತಿ ಸಾಹಿಲ್ ಮೊಹಮ್ಮದ್ ಹುಸೇನ್ ಅವರು ಮಾತನಾಡುವ ವಿಡಿಯೋ ಬಿಡುಗಡೆ ಮಾಡಿದೆ.

ಹುಸೇನ್ ಅವರು ರಷ್ಯಾದ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಹೋಗಿದ್ದರು ಎಂದು ವರದಿಗಳು ಹೇಳಿವೆ.

ಉಕ್ರೇನ್ ಸೇನೆ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ರಷ್ಯನ್ ಭಾಷೆಯಲ್ಲಿ ಮಾತನಾಡಿರುವ ಹುಸೇನ್, “ನಾನು ಅಧ್ಯಯನ ನಿಮಿತ್ತ ರಷ್ಯಾಗೆ ಹೋಗಿದ್ದೆ. ಅಲ್ಲಿ ಮಾದಕ ವಸ್ತು ಸಂಬಂಧಿತ ಆರೋಪದಲ್ಲಿ ನನ್ನನ್ನು ಬಂಧಿಸಿ ಜೈಲಿಗಟ್ಟಲಾಗಿತ್ತು. ನನಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅದರಿಂದ ತಪ್ಪಿಸಿಕೊಳ್ಳಲು ಬಯಸಿದರೆ ರಷ್ಯಾ ಸೇನೆ ಪರ ಹೋರಾಡುವ ಒಪ್ಪಂದಕ್ಕೆ ಸಹಿ ಹಾಕಲು ನನಗೆ ಹೇಳಲಾಯಿತು. ನನಗೆ ಜೈಲ್ಲಿನಲ್ಲಿ ಇರಲು ಇಷ್ಟ ಇರಲಿಲ್ಲ. ಆದ್ದರಿಂದ ವಿಶೇಷ ಮಿಲಿಟರಿ ಕಾರ್ಯಾಚರಣೆಗಾಗಿ ಒಪ್ಪಂದಕ್ಕೆ ಸಹಿ ಹಾಕಿದೆ” ಎಂದು ಹೇಳಿದ್ದಾರೆ.

“16 ದಿನಗಳ ತರಬೇತಿಯ ನಂತರ ಅಕ್ಟೋಬರ್ 1ರಂದು ಮೊದಲ ಬಾರಿಗೆ ನನ್ನನ್ನು ಸೇನೆ ಜೊತೆ ಹೋರಾಡಲು ಕಳುಹಿಸಿದರು. ಮೂರು ದಿನಗಳ ಕಾಲ ನಾನು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದೆ. ನನ್ನ ಕಮಾಂಡರ್ ಜೊತೆಗಿನ ವಾಗ್ವಾದದ ನಂತರ ಉಕ್ರೇನ್ ಸೇನೆಗೆ ಶರಣಾದೆ” ಎಂದು ಹುಸೇನ್ ತಿಳಿಸಿದ್ದಾರೆ.

“ನಾನು ರಷ್ಯಾ ಸೇನೆ ಪರ ಹೋರಾಡಲು ಬಂದಿದ್ದ ವೇಳೆ ಎರಡರಿಂದ ಮೂರು ಕಿಲೋ ಮೀಟರ್ ದೂರದಲ್ಲಿ ಉಕ್ರೇನ್ ಸೇನೆಯ ಜಾಗವನ್ನು ಕಂಡೆ. ತಕ್ಷಣ ನಾನು ರೈಫಲ್ ಕೆಳಗಿಟ್ಟು ನಾನು ಹೋರಾಡಲು ಬಯಸುವುದಿಲ್ಲ ಎಂದು ಹೇಳಿದೆ. ನನಗೆ ಸಹಾಯ ಬೇಕು. ನಾನು ರಷ್ಯಾಕ್ಕೆ ಹಿಂತಿರುಗಲು ಬಯಸುವುದಿಲ್ಲಎಂದೆ” ಎಂದು ಹುಸೇನ್ ವಿಡಿಯೋದಲ್ಲಿ ಹೇಳಿದ್ದಾರೆ.

ಈ ಬಗ್ಗೆ ಭಾರತೀಯ ಅಧಿಕಾರಿಗಳು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಷ್ಯಾ ಸೇನೆಗೆ ಇತ್ತೀಚೆಗೆ ನೇಮಕ ಮಾಡಿಕೊಂಡಿರುವ 27 ಭಾರತೀಯ ಪ್ರಜೆಗಳನ್ನು ತಕ್ಷಣ ಬಿಡುಗಡೆ ಮಾಡಿ ತಾಯ್ನಾಡಿಗೆ ಕಳುಹಿಸುವಂತೆ ಒತ್ತಾಯಿಸಿದ್ದಾಗಿ ಸೆಪ್ಟೆಂಬರ್‌ನಲ್ಲಿ ಭಾರತ ಸರ್ಕಾರ ಹೇಳಿಕೊಂಡಿತ್ತು. ಇದಾಗಿ ಕೆಲ ದಿನಗಳಲ್ಲಿ ವಿದ್ಯಾರ್ಥಿಯ ಶರಣಾಗತಿ ಸುದ್ದಿ ಬಂದಿದೆ.

ಯುವಜನರನ್ನು ಉದ್ಯೋಗದ ಆಮಿಷವೊಡ್ಡಿ ರಷ್ಯಾಗೆ ಕಳುಹಿಸಿ, ಅಲ್ಲಿ ಶಸ್ತ್ರಾಸ್ತ ಕೊಟ್ಟು ಯುದ್ದ ಭೂಮಿಗೆ ಕಳುಹಿಸುವ ಜಾಲದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.

ಕನಿಷ್ಠ 15 ಭಾರತೀಯರು ಉಕ್ರೇನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಅಲ್ಲಿ ಅವರನ್ನು ರಷ್ಯಾ ಮಿಲಿಟರಿಯೊಂದಿಗೆ ಹೋರಾಡಲು ಒತ್ತಾಯಿಸಲಾಗುತ್ತಿದೆ ಎಂದು ಸೆಪ್ಟೆಂಬರ್‌ನಲ್ಲಿ ದಿ ಹಿಂದೂ ಪತ್ರಿಕೆ ವರದಿ ಮಾಡಿತ್ತು.

ವಿದ್ಯಾರ್ಥಿ ಉಕ್ರೇನ್ ಸೇನೆಗೆ ವಿದ್ಯಾರ್ಥಿ ಶರಣಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ರಣಧೀರ್ ಜೈಸ್ವಾಲ್, “ಆಮಿಷಗಳಿಗೆ ಬಲಿಯಾಗಿ ರಷ್ಯಾದ ಸೇನೆಗೆ ಸೇರುವುದು ಅಪಾಯಕಾರಿ” ಎಂದಿದ್ದಾರೆ.

ರಷ್ಯಾದ ಸಶಸ್ತ್ರ ಪಡೆಗಳಲ್ಲಿ 127 ಭಾರತೀಯ ನಾಗರಿಕರಿದ್ದರು. ಅವರಲ್ಲಿ 98 ಜನರನ್ನು ಮಿಲಿಟರಿಯಿಂದ ಬಿಡುಗಡೆ ಮಾಡಲಾಗಿದೆ ಮತ್ತು ಉಭಯ ರಾಷ್ಟ್ರಗಳ ಸರ್ಕಾರಗಳ ನಡುವಿನ ಮಾತುಕತೆಯ ಪರಿಣಾಮವಾಗಿ ಅವರು ಭಾರತಕ್ಕೆ ಮರಳಿದ್ದಾರೆ ಎಂದು ಕೇಂದ್ರ ವಿದೇಶಾಂಗ ಸಚಿವಾಲಯ ಜುಲೈನಲ್ಲಿ ರಾಜ್ಯಸಭೆಗೆ ತಿಳಿಸಿತ್ತು.

ನವದೆಹಲಿಯಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಪ್ರಕಾರ, ರಷ್ಯಾದ ರಕ್ಷಣಾ ಸಚಿವಾಲಯವು 2024 ರ ಏಪ್ರಿಲ್‌ನಿಂದ ಭಾರತೀಯರನ್ನು ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಿದೆ. ಆದರೆ, ಸೈನಿಕ ಸೇವೆಗೆ ಸಂಬಂಧಿಸಿದ ಕಾಂಟ್ರಾಕ್ಟ್‌ಗಳು ಹಲವಾರು ಭಾರತೀಯರ ಬಿಡುಗಡೆಯನ್ನು ವಿಳಂಬಗೊಳಿಸಿವೆ.

ಫೆಬ್ರವರಿ 2022ರಲ್ಲಿ ರಷ್ಯಾ ಉಕ್ರೇನ್ ಮೇಲೆ ತನ್ನ ಆಕ್ರಮಣವನ್ನು ಪ್ರಾರಂಭಿಸಿದ್ದು, ಈಗಲೂ ನಡೆಯುತ್ತಿದೆ. ಇದು ಎರಡನೇ ಮಹಾಯುದ್ಧದ ನಂತರ ಯುರೋಪ್‌ನಲ್ಲಿ ನಡೆಯುತ್ತಿರುವ ಅತ್ಯಂತ ಮಾರಕ ಸಂಘರ್ಷವಾಗಿದೆ.

ಮೇರಿ ಬ್ರಂಕೋವ್, ಫ್ರೆಡ್ ರಾಮ್ಸ್‌ಡೆಲ್, ಶಿಮೊನ್ ಸಕಾಗುಚಿ ಅವರಿಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...