Homeಮುಖಪುಟಉಕ್ರೇನ್: ರಕ್ಷಣೆಯಲ್ಲೂ ದಕ್ಷಿಣ ಭಾರತದವರಿಗೆ ತಾರತಮ್ಯ, ವಿದ್ಯಾರ್ಥಿಗಳ ಆರೋಪ

ಉಕ್ರೇನ್: ರಕ್ಷಣೆಯಲ್ಲೂ ದಕ್ಷಿಣ ಭಾರತದವರಿಗೆ ತಾರತಮ್ಯ, ವಿದ್ಯಾರ್ಥಿಗಳ ಆರೋಪ

- Advertisement -
- Advertisement -

ಉಕ್ರೇನ್‌ನಲ್ಲಿ ಸಿಲುಕಿರುವವರನ್ನು ರಕ್ಷಿಸುವಲ್ಲಿ ಉತ್ತರ ಭಾರತದ ಜನರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ತಮಿಳುನಾಡು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿಗಳನ್ನು ರಕ್ಷಿಸುವಾಗಲೂ ಉತ್ತರ ಭಾರತ, ದಕ್ಷಿಣ ಭಾರತ ಎಂದು ತಾರತಮ್ಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳ ಮೂಲಕ ಪೋಲೆಂಡ್‌ಗೆ ಆಗಮಿಸಿ ಅಲ್ಲಿಂದ ದೆಹಲಿಗೆ ಆಗಮಿಸಿ, ಮನೆ ತಲುಪಿರುವ ಕೊಯಮತ್ತೂರಿನ ಜೋಸ್ಲಿನ್ ಕೂಡ ಇದೇ ಆರೋಪ ಮಾಡಿದ್ದಾರೆ. ಜೋಸ್ಲಿನ್ ಕೀವ್‌ನಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮಿಳುನಾಡಿನ ಅನೇಕ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ವಿಮಾನಕ್ಕೆ  ಪ್ರವೇಶವಿಲ್ಲದೆ ಸಿಲುಕಿಕೊಂಡಿದ್ದಾರೆ. ಅಧಿಕಾರಿಗಳು ತಮಿಳು ಮಾತನಾಡುವ ವಿದ್ಯಾರ್ಥಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಉಕ್ರೇನ್‌ನಿಂದ ವಾಪಸ್‌ ಆಗಿರುವ ಮೂವರು ವಿದ್ಯಾರ್ಥಿಗಳು ಕೂಡ ಇದೇ ರೀತಿಯ ಆರೋಪ ಮಾಡಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ನಿಂದ ಹಿಂತಿರುಗುತ್ತಿರೋ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸಿ: ವೈದ್ಯಕೀಯ ಸಂಘ

“ನಾವು ಉಕ್ರೇನ್‌ನಿಂದ್ ಪೋಲಾಂಡ್ ಗಡಿಗೆ ಬಂದೆವು. ಆದರೆ, ಅಲ್ಲಿ ಮತ್ತೊಂದು ಸಮಸ್ಯೆ ಉಂಟಾಯಿತು. ನಾವು ವಿಮಾನಕ್ಕಾಗಿ 48 ಗಂಟೆಗೂ ಹೆಚ್ಚು ಕಾಲ ಕಾಯುತ್ತಿದ್ದೇವು. ಅಲ್ಲಿ ಸೌತ್ ಇಂಡಿಯನ್ಸ್ ಮತ್ತು ನಾರ್ತ್ ಇಂಡಿಯನ್ಸ್‌ ಎಂಬ ತಾರತಮ್ಯ ಶುರುವಾಯಿತು. ಅಷ್ಟು ಸಮಯದಿಂದ ನಾವು ಅಲ್ಲಿಯೇ ಕಾಯುತ್ತಿದ್ದರೂ ನಮ್ಮ ಹೆಸರುಗಳನ್ನು ಅವರು ಕರೆಯಲಿಲ್ಲ. ಎಲ್ಲಾ ಉತ್ತರ ಭಾರತದವರನ್ನು ಮಾತ್ರ ಕರೆಯಲಾಗುತ್ತಿತ್ತು. ನಮಗೆ ’ಮೊದಲು ಬಂದವರಿಗೆ ಆದ್ಯತೆ’ ಎಂದು ಹೇಳಿದ್ದರು. ಆದರೆ ಅವರು ಮಾಡಿದ್ದು ಮಾತ್ರ ಬೇರೆ. ಮಾರ್ಚ್ 1 ರಂದು ನಾವು ಅಲ್ಲಿಗೆ ಹೋದರೂ ನಮಗೆ ವಿಮಾನಕ್ಕೆ ಹತ್ತಿಸಿಕೊಳ್ಳಲಿಲ್ಲ. ಮಾರ್ಚ್ 2ಕ್ಕೆ ಬಂದ ನಾರ್ತ್ ಇಂಡಿಯನ್ಸ್‌ ವಿದ್ಯಾರ್ಥಿಗಳಿಗೆ ಪ್ರಾಮುಖ್ಯತೆ ನೀಡಲಾಯಿತು. ಒಂದು ವಿಮಾನದಲ್ಲಿ ಹೋಗಲು 15 ಮಲಯಾಳಿ ವಿದ್ಯಾರ್ಥಿಗಳ ಹೆಸರನ್ನು ಮೊದಲೇ ಬರೆದುಕೊಳ್ಳಲಾಗಿತ್ತು. ಆದರೆ, ಕಾರಣವೇ ಇಲ್ಲದೆ ಅವರ ಹೆಸರುಗಳನ್ನು ತೆಗೆದು ಉತ್ತರ ಭಾರತದ ವಿದ್ಯಾರ್ಥಿಗಳ ಹೆಸರು ಬರೆದುಕೊಳ್ಳಲಾಯಿತು” ಎಂದು ಅಲ್ಲಿನ ವಾಸ್ತವವನ್ನು ಬಿಚ್ಚಿಟ್ಟಿದ್ದಾರೆ.

ಇನ್ನು, ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ನಾಗರಿಕರ ಸ್ಥಳಾಂತರಕ್ಕೆ ರಾಜಕಾರಣಿಗಳು ಮತ್ತು ಅಧಿಕಾರಿಗಳು ಮಾಡಿದ ಕರೆಗಳ ಆಧಾರದ ಮೇಲೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿ, ಸಿಪಿಐ(ಎಂ) ಸಂಸದೀಯ ಪಕ್ಷದ ನಾಯಕ ಎಳಮರಮ್ ಕರೀಂ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

ಉಕ್ರೇನ್‌ನ ಯುದ್ಧ ಪೀಡಿತ ಪ್ರದೇಶಗಳಲ್ಲಿ ಮಾನವೀಯ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಯುದ್ಧದ ಹತ್ತನೇ ದಿನವಾದ ಇಂದು (ಶನಿವಾರ) ರಷ್ಯಾದ ಅಧ್ಯಕ್ಷೀಯ ಭವನವು ತಾತ್ಕಾಲಿಕ ಕದನ ವಿರಾಮವನ್ನು ಘೋಷಿಸಿದೆ ಎಂದು ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 11.30ಕ್ಕೆ ಕದನ ವಿರಾಮ ಜಾರಿಗೆ ಬಂದಿದೆ.


ಇದನ್ನೂ ಓದಿ: ಟಾಯ್ಲೆಟ್‌ ಕ್ಲೀನ್‌ ಮಾಡಿದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದ ರಾಯಭಾರಿ ಕಚೇರಿ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿಯ ತಾರತಮ್ಯ ನೀತಿಯಿಂದ, ಮುಂದಿನ ದಿನಗಳಲ್ಲಿ ನಮ್ಮ ಒಕ್ಕೂಟದ ವ್ಯವಸ್ಥೆಗೆ ದಕ್ಕೆ ಬರುತ್ತದೆ.

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...