Homeಮುಖಪುಟಉಕ್ರೇನ್: ರಕ್ಷಣೆಯಲ್ಲೂ ದಕ್ಷಿಣ ಭಾರತದವರಿಗೆ ತಾರತಮ್ಯ, ವಿದ್ಯಾರ್ಥಿಗಳ ಆರೋಪ

ಉಕ್ರೇನ್: ರಕ್ಷಣೆಯಲ್ಲೂ ದಕ್ಷಿಣ ಭಾರತದವರಿಗೆ ತಾರತಮ್ಯ, ವಿದ್ಯಾರ್ಥಿಗಳ ಆರೋಪ

- Advertisement -
- Advertisement -

ಉಕ್ರೇನ್‌ನಲ್ಲಿ ಸಿಲುಕಿರುವವರನ್ನು ರಕ್ಷಿಸುವಲ್ಲಿ ಉತ್ತರ ಭಾರತದ ಜನರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ತಮಿಳುನಾಡು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿಗಳನ್ನು ರಕ್ಷಿಸುವಾಗಲೂ ಉತ್ತರ ಭಾರತ, ದಕ್ಷಿಣ ಭಾರತ ಎಂದು ತಾರತಮ್ಯ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳ ಮೂಲಕ ಪೋಲೆಂಡ್‌ಗೆ ಆಗಮಿಸಿ ಅಲ್ಲಿಂದ ದೆಹಲಿಗೆ ಆಗಮಿಸಿ, ಮನೆ ತಲುಪಿರುವ ಕೊಯಮತ್ತೂರಿನ ಜೋಸ್ಲಿನ್ ಕೂಡ ಇದೇ ಆರೋಪ ಮಾಡಿದ್ದಾರೆ. ಜೋಸ್ಲಿನ್ ಕೀವ್‌ನಲ್ಲಿರುವ ವೈದ್ಯಕೀಯ ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತಮಿಳುನಾಡಿನ ಅನೇಕ ವಿದ್ಯಾರ್ಥಿಗಳು ಉಕ್ರೇನ್‌ನಲ್ಲಿ ವಿಮಾನಕ್ಕೆ  ಪ್ರವೇಶವಿಲ್ಲದೆ ಸಿಲುಕಿಕೊಂಡಿದ್ದಾರೆ. ಅಧಿಕಾರಿಗಳು ತಮಿಳು ಮಾತನಾಡುವ ವಿದ್ಯಾರ್ಥಿಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಉಕ್ರೇನ್‌ನಿಂದ ವಾಪಸ್‌ ಆಗಿರುವ ಮೂವರು ವಿದ್ಯಾರ್ಥಿಗಳು ಕೂಡ ಇದೇ ರೀತಿಯ ಆರೋಪ ಮಾಡಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ನಿಂದ ಹಿಂತಿರುಗುತ್ತಿರೋ ವಿದ್ಯಾರ್ಥಿಗಳನ್ನು ದೇಶದ ವೈದ್ಯಕೀಯ ಕಾಲೇಜುಗಳಿಗೆ ದಾಖಲಿಸಿ: ವೈದ್ಯಕೀಯ ಸಂಘ

“ನಾವು ಉಕ್ರೇನ್‌ನಿಂದ್ ಪೋಲಾಂಡ್ ಗಡಿಗೆ ಬಂದೆವು. ಆದರೆ, ಅಲ್ಲಿ ಮತ್ತೊಂದು ಸಮಸ್ಯೆ ಉಂಟಾಯಿತು. ನಾವು ವಿಮಾನಕ್ಕಾಗಿ 48 ಗಂಟೆಗೂ ಹೆಚ್ಚು ಕಾಲ ಕಾಯುತ್ತಿದ್ದೇವು. ಅಲ್ಲಿ ಸೌತ್ ಇಂಡಿಯನ್ಸ್ ಮತ್ತು ನಾರ್ತ್ ಇಂಡಿಯನ್ಸ್‌ ಎಂಬ ತಾರತಮ್ಯ ಶುರುವಾಯಿತು. ಅಷ್ಟು ಸಮಯದಿಂದ ನಾವು ಅಲ್ಲಿಯೇ ಕಾಯುತ್ತಿದ್ದರೂ ನಮ್ಮ ಹೆಸರುಗಳನ್ನು ಅವರು ಕರೆಯಲಿಲ್ಲ. ಎಲ್ಲಾ ಉತ್ತರ ಭಾರತದವರನ್ನು ಮಾತ್ರ ಕರೆಯಲಾಗುತ್ತಿತ್ತು. ನಮಗೆ ’ಮೊದಲು ಬಂದವರಿಗೆ ಆದ್ಯತೆ’ ಎಂದು ಹೇಳಿದ್ದರು. ಆದರೆ ಅವರು ಮಾಡಿದ್ದು ಮಾತ್ರ ಬೇರೆ. ಮಾರ್ಚ್ 1 ರಂದು ನಾವು ಅಲ್ಲಿಗೆ ಹೋದರೂ ನಮಗೆ ವಿಮಾನಕ್ಕೆ ಹತ್ತಿಸಿಕೊಳ್ಳಲಿಲ್ಲ. ಮಾರ್ಚ್ 2ಕ್ಕೆ ಬಂದ ನಾರ್ತ್ ಇಂಡಿಯನ್ಸ್‌ ವಿದ್ಯಾರ್ಥಿಗಳಿಗೆ ಪ್ರಾಮುಖ್ಯತೆ ನೀಡಲಾಯಿತು. ಒಂದು ವಿಮಾನದಲ್ಲಿ ಹೋಗಲು 15 ಮಲಯಾಳಿ ವಿದ್ಯಾರ್ಥಿಗಳ ಹೆಸರನ್ನು ಮೊದಲೇ ಬರೆದುಕೊಳ್ಳಲಾಗಿತ್ತು. ಆದರೆ, ಕಾರಣವೇ ಇಲ್ಲದೆ ಅವರ ಹೆಸರುಗಳನ್ನು ತೆಗೆದು ಉತ್ತರ ಭಾರತದ ವಿದ್ಯಾರ್ಥಿಗಳ ಹೆಸರು ಬರೆದುಕೊಳ್ಳಲಾಯಿತು” ಎಂದು ಅಲ್ಲಿನ ವಾಸ್ತವವನ್ನು ಬಿಚ್ಚಿಟ್ಟಿದ್ದಾರೆ.

ಇನ್ನು, ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಮತ್ತು ನಾಗರಿಕರ ಸ್ಥಳಾಂತರಕ್ಕೆ ರಾಜಕಾರಣಿಗಳು ಮತ್ತು ಅಧಿಕಾರಿಗಳು ಮಾಡಿದ ಕರೆಗಳ ಆಧಾರದ ಮೇಲೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿ, ಸಿಪಿಐ(ಎಂ) ಸಂಸದೀಯ ಪಕ್ಷದ ನಾಯಕ ಎಳಮರಮ್ ಕರೀಂ ಅವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

ಉಕ್ರೇನ್‌ನ ಯುದ್ಧ ಪೀಡಿತ ಪ್ರದೇಶಗಳಲ್ಲಿ ಮಾನವೀಯ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಯುದ್ಧದ ಹತ್ತನೇ ದಿನವಾದ ಇಂದು (ಶನಿವಾರ) ರಷ್ಯಾದ ಅಧ್ಯಕ್ಷೀಯ ಭವನವು ತಾತ್ಕಾಲಿಕ ಕದನ ವಿರಾಮವನ್ನು ಘೋಷಿಸಿದೆ ಎಂದು ಸರ್ಕಾರಿ ಮಾಧ್ಯಮ ವರದಿ ಮಾಡಿದೆ. ಭಾರತೀಯ ಕಾಲಮಾನದ ಪ್ರಕಾರ ಬೆಳಗ್ಗೆ 11.30ಕ್ಕೆ ಕದನ ವಿರಾಮ ಜಾರಿಗೆ ಬಂದಿದೆ.


ಇದನ್ನೂ ಓದಿ: ಟಾಯ್ಲೆಟ್‌ ಕ್ಲೀನ್‌ ಮಾಡಿದ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದ ರಾಯಭಾರಿ ಕಚೇರಿ: ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ರೀತಿಯ ತಾರತಮ್ಯ ನೀತಿಯಿಂದ, ಮುಂದಿನ ದಿನಗಳಲ್ಲಿ ನಮ್ಮ ಒಕ್ಕೂಟದ ವ್ಯವಸ್ಥೆಗೆ ದಕ್ಕೆ ಬರುತ್ತದೆ.

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...