Homeಅಂತರಾಷ್ಟ್ರೀಯಮಾಸ್ಕೋಗೆ ಗುರಿಯಿಟ್ಟು 34 ಡ್ರೋನ್‌ ಹಾರಿಸಿದ ಉಕ್ರೇನ್; 2022ರ ಯುದ್ಧದ ಬಳಿಕ ಅತಿದೊಡ್ಡ ದಾಳಿ

ಮಾಸ್ಕೋಗೆ ಗುರಿಯಿಟ್ಟು 34 ಡ್ರೋನ್‌ ಹಾರಿಸಿದ ಉಕ್ರೇನ್; 2022ರ ಯುದ್ಧದ ಬಳಿಕ ಅತಿದೊಡ್ಡ ದಾಳಿ

- Advertisement -
- Advertisement -

ಉಕ್ರೇನ್ ಭಾನುವಾರ ಕನಿಷ್ಠ 34 ಡ್ರೋನ್‌ಗಳೊಂದಿಗೆ ಮಾಸ್ಕೋ ಮೇಲೆ ದಾಳಿ ಮಾಡಿತು, ಇದು 2022 ರಲ್ಲಿ ಯುದ್ಧದ ಪ್ರಾರಂಭದ ನಂತರ ರಷ್ಯಾದ ರಾಜಧಾನಿಯ ಮೇಲೆ ನಡೆದ ಅತಿದೊಡ್ಡ ‘ಡ್ರೋನ್ ಸ್ಟ್ರೈಕ್’ ಆಗಿದೆ. ಈ ದಾಳಿಯು, ಮಾಸ್ಕೋ ನಗರದ ಮೂರು ಪ್ರಮುಖ ವಿಮಾನ ನಿಲ್ದಾಣಗಳಿಂದ ವಿಮಾನಗಳನ್ನು ಬೇರೆಡೆಗೆ ತಿರುಗಿಸಲು ಕಾರಣವಾಯಿತು. ಕನಿಷ್ಠ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಷ್ಯಾದ ವಾಯು ರಕ್ಷಣಾ ಇಲಾಖೆಯು ಭಾನುವಾರ ಮೂರು ಗಂಟೆಗಳಲ್ಲಿ ಪಶ್ಚಿಮ ರಷ್ಯಾದ ಇತರ ಪ್ರದೇಶಗಳ ಮೇಲೆ ಮತ್ತೊಂದು 36 ಡ್ರೋನ್‌ಗಳನ್ನು ನಾಶಪಡಿಸಿದೆ ಎಂದು ತಿಳಿಸಿದೆ.

“ರಷ್ಯಾದ ಒಕ್ಕೂಟದ ಪ್ರದೇಶದ ಮೇಲೆ ವಿಮಾನ ಮಾದರಿಯ ಡ್ರೋನ್‌ಗಳನ್ನು ಬಳಸಿಕೊಂಡು ಭಯೋತ್ಪಾದಕ ದಾಳಿ ನಡೆಸಲು ಕೈವ್ ಆಡಳಿತದ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ” ಎಂದು ಸಚಿವಾಲಯ ಹೇಳಿದೆ.

ಡೊಮೊಡೆಡೊವೊ, ಶೆರೆಮೆಟಿಯೆವೊ ಮತ್ತು ಝುಕೊವ್ಸ್ಕಿ ವಿಮಾನ ನಿಲ್ದಾಣಗಳು ಕನಿಷ್ಠ 36 ವಿಮಾನಗಳ ಮಾರ್ಗ ಬದಲಾಯಿಸಲಾಯಿತು. ಆದರೆ, ನಂತರದ ಕಾರ್ಯಾಚರಣೆಯನ್ನು ಪುನರಾರಂಭಿಸಿವೆ ಎಂದು ರಷ್ಯಾದ ಫೆಡರಲ್ ಏರ್ ಟ್ರಾನ್ಸ್‌ಪೋರ್ಟ್ ಏಜೆನ್ಸಿ ಹೇಳಿದೆ. ಮಾಸ್ಕೋ ಪ್ರದೇಶದಲ್ಲಿ ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಾಸ್ಕೋ ಮತ್ತು ಅದರ ಸುತ್ತಮುತ್ತಲಿನ ಪ್ರದೇಶವು ಕನಿಷ್ಠ 21 ಮಿಲಿಯನ್ ಜನಸಂಖ್ಯೆಯನ್ನು ಹೊಂದಿದೆ. ಇಸ್ತಾನ್‌ಬುಲ್ ಜೊತೆಗೆ ಯುರೋಪ್‌ನ ಅತಿದೊಡ್ಡ ಮೆಟ್ರೋಪಾಲಿಟನ್ ಪ್ರದೇಶಗಳಲ್ಲಿ ಒಂದಾಗಿದೆ.

ಅದರ ಭಾಗವಾಗಿ, ರಷ್ಯಾ ರಾತ್ರೋರಾತ್ರಿ ದಾಖಲೆಯ 145 ಡ್ರೋನ್‌ಗಳನ್ನು ಉಡಾವಣೆ ಮಾಡಿದೆ ಎಂದು ಉಕ್ರೇನ್ ಹೇಳಿದೆ. ಅದರಲ್ಲಿ 62 ವಿಮಾನಗಳನ್ನು ತನ್ನ ವಾಯು ರಕ್ಷಣಾ ಪಡೆಗಳು ಉರುಳಿಸಿದವು ಎಂದು ಕೈವ್ ಹೇಳಿದರು. ರಷ್ಯಾದ ಬ್ರಿಯಾನ್ಸ್ಕ್ ಪ್ರದೇಶದಲ್ಲಿ ಶಸ್ತ್ರಾಗಾರದ ಮೇಲೆ ದಾಳಿ ಮಾಡಿದೆ ಎಂದು ಉಕ್ರೇನ್ ಹೇಳಿದೆ, ಈ ಪ್ರದೇಶದಲ್ಲಿ 14 ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ವರದಿ ಮಾಡಿದೆ.

ರಷ್ಯಾದ ಟೆಲಿಗ್ರಾಮ್ ಚಾನೆಲ್‌ಗಳಲ್ಲಿ ಪೋಸ್ಟ್ ಮಾಡಲಾದ ಪರಿಶೀಲಿಸದ ವೀಡಿಯೊವು ಸ್ಕೈಲೈನ್‌ನಾದ್ಯಂತ ಡ್ರೋನ್‌ಗಳು ಝೇಂಕರಿಸುತ್ತಿರುವುದನ್ನು ತೋರಿಸಿದೆ.

ಇದನ್ನೂ ಓದಿ; ಶೇಖ್‌ ಹಸೀನಾ ಪಕ್ಷದ ಕಾರ್ಯಕರ್ತರನ್ನು ಬಂಧಿಸಿದ ಬಾಂಗ್ಲಾದೇಶ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...