Homeಮುಖಪುಟನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್...

ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನೋ-ಫ್ಲೈ ಝೋನ್ ಎಂದರೇನು? NATO ನಿರಾಕರಿಸಿದ್ದೇಕೆ? ಈ ಹಿಂದೆ ಎಲ್ಲೆಲ್ಲಿ ಬಳಸಲಾಗಿದ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಉಕ್ರೇನ್‌ ಹಲವು ಪ್ರದೇಶಗಳಲ್ಲಿ ನೋ-ಫ್ಲೈ ಝೋನ್ (no-fly zone) ಹೇರಬೇಕೆಂಬ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಮನವಿಯನ್ನು NATO ನಿರಾಕರಿಸಿದೆ. ಇದರಿಂದ ಕ್ರೋಧಗೊಂಡಿರುವ ಝೆಲೆನ್ಸ್ಕಿ “ನಿಮ್ಮ ಈ ನಿರ್ಧಾರವು ಉಕ್ರೇನಿಯನ್ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್ ದಾಳಿಗೆ ಹಸಿರು ನಿಶಾನೆ ನೀಡುತ್ತದೆ” ಎಂದು ಕಿಡಿಕಾರಿದ್ದಾರೆ.

“ಈ ದಿನದಿಂದ ಸಾಯುವ ಎಲ್ಲಾ ಜನರು ನಿಮ್ಮ (NATO) ಕಾರಣದಿಂದಾಗಿ ಸಾಯುತ್ತಾರೆ, ನಿಮ್ಮ ದೌರ್ಬಲ್ಯದಿಂದಾಗಿ, ನಿಮ್ಮ ಒಗ್ಗಟ್ಟಿನ ಕೊರತೆಯಿಂದಾಗಿ ಸಾಯುತ್ತಾರೆ” ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿಅವರು ಉಕ್ರೇನಿಯನ್ ಜನತೆಯ ಪ್ರತಿರೋಧದ ಶೌರ್ಯವನ್ನು ಶ್ಲಾಘಿಸಿದ್ದಾರೆ.

ಶುಕ್ರವಾರದ ದೂರದರ್ಶನದ ಭಾಷಣದಲ್ಲಿ ಮಾತನಾಡಿದ ಝೆಲೆನ್ಸ್ಕಿ “ಇಂದು ನ್ಯಾಟೋ ಶೃಂಗಸಭೆ ನಡೆಯುತ್ತಿದೆ. ಅದು ದುರ್ಬಲ ಮತ್ತು ಗೊಂದಲಮಯ ಶೃಂಗಸಭೆಯಾಗಿದೆ. ಯುರೋಪಿನ ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ನಂಬರ್ ಒನ್ ಗುರಿ ಎಂದು ಶೃಂಗಸಭೆಯ ಎಲ್ಲರೂ ಪರಿಗಣಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಏನಿದು ನೋ-ಫ್ಲೈ ಝೋನ್?

ನಿರ್ದಿಷ್ಟ ವಾಯು ಪ್ರದೇಶದಲ್ಲಿ ನೋ-ಫ್ಲೈ ಝೋನ್ ಹೇರಿದಾಗ ಅದು ಹಾರಾಟ ನಿಷೇಧ ವಲಯವಾಗಿದ್ದು, ಅಲ್ಲಿ ಕೆಲವು ವಿಮಾನಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
ಘರ್ಷಣೆಗಳು ಮತ್ತು ಯುದ್ಧಗಳ ಸಂದರ್ಭದಲ್ಲಿ ಸೈನಿಕ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲು ಮತ್ತು ಕಣ್ಗಾವಲು ನಡೆಸಲು ನಿಷೇಧಿತ ವಿಮಾನಗಳನ್ನು ವಾಯುಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಸಾಮಾನ್ಯವಾಗಿ ನೋ-ಫ್ಲೈ ಝೋನ್ ಹೇರಲಾಗುತ್ತದೆ.
ನೋ-ಫ್ಲೈ ಝೋನ್‌ಗಳನ್ನು ಮಿಲಿಟರಿ ಬಲ ಬಳಸಿಯೇ ಜಾರಿಗೊಳಿಸಬೇಕು. ಆ ಸಂದರ್ಭದಲ್ಲಿ ನಿಷೇಧಿತ ವಿಮಾನಗಳು ಪ್ರವೇಶಿಸಿದ್ದಲ್ಲಿ ಹೊಡೆದುರುಳಿಸಬಹುದು. ಇದರರ್ಥ ನಾಟೊ ತನ್ನ ಫೈಟರ್ ಜೆಟ್‌ಗಳನ್ನು ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ ಕಳಿಸಿಕೊಡಬೇಕು ಎಂಬುದೇ ಆಗಿದೆ.

ಉಕ್ರೇನ್ ಬಯಕೆಯೇನು?

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ದೇಶದ “ಮಹತ್ವದ ಭಾಗಗಳ” ಮೇಲೆ ನೋ-ಫ್ಲೈ ಝೋನ್ ಹೇರಬೇಕೆಂದು NATO, ಅಮೆರಿಕ ಮತ್ತು ಹಲವು ಯೂರೋಪ್ ದೇಶಗಳಲ್ಲಿ ಮನವಿ ಮಾಡಿದ್ದರು. ಇದರಿಂದ ರಷ್ಯಾ ದಾಳಿ ಮಾಡಲು ಆಗುವುದಿಲ್ಲ ಮತ್ತು ರಷ್ಯಾ ದಾಳಿಯನ್ನು ಹಿಮ್ಮೆಟ್ಟಿಸಬಹುದು ಎಂದು ಅವರು ನಂಬಿದ್ದರು. ಅದಕ್ಕಾಗಿ ಅಮೆರಿಕ ಮತ್ತು NATO ಬಳಿ ಹಲವಾರು ಬಾರಿ ಮನವಿ ಮಾಡಿದ್ದ ಅವರು ಯುದ್ಧವಿಮಾನಗಳನ್ನು ಒದಗಿಸಬೇಕು, ಆದ್ದರಿಂದ ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದು” ಎಂದು ವಾದಿಸಿದ್ದರು.

ನೋ-ಫ್ಲೈ ಝೋನ್ ಹೇರದಿರಲು ಕಾರಣವೇನು?

NATO, ಅಮೆರಿಕ ಅಥವಾ ಯೂರೋಪ್‌ನ ಯಾವುದೇ ದೇಶ ನೋ-ಫ್ಲೈ ಝೋನ್ ಹೇರಿದರೆ, ಅದನ್ನು ಜಾರಿಗೊಳಿಸಲು ಅವರೇ ಜವಾಬ್ದಾರರಾಗಿರುತ್ತಾರೆ. ಅಂದರೆ ನಿಷೇಧಿತ ರಷ್ಯಾದ ಮಿಲಿಟರಿ ವಿಮಾನಗಳ ವಿರುದ್ಧ ಹೋರಾಡಬೇಕಿರುತ್ತದೆ. “ನ್ಯಾಟೋ ಅದನ್ನು ಹೇರಿದರೆ ಮತ್ತು ನಾವು ರಷ್ಯಾದ ಒಂದು ವಿಮಾನವನ್ನು ಹೊಡೆದುರುಳಿಸಿದರೆ, ನಾವು ರಷ್ಯಾದೊಂದಿಗೆ ಯುದ್ಧದಲ್ಲಿದ್ದೇವೆ ಎಂದರ್ಥ. ಹಾಗಾಗಿ NATO ಅದನ್ನು ಬಯಸುವುದಿಲ್ಲ” ಎಂದು ನ್ಯೂ ಹೆವನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಹೊವಾರ್ಡ್ ಸ್ಟಾಫರ್ ಹೇಳುತ್ತಾರೆ.

NFZ ಗಳನ್ನು ಜಾರಿಗೊಳಿಸಿದ ಹಿಂದಿನ ಸಂಘರ್ಷಗಳಿಗಿಂತ ಭಿನ್ನವಾಗಿ ಈ ಬಾರಿ ರಷ್ಯಾವು ದೃಢವಾದ ಮತ್ತು ಹೆಚ್ಚು ಅತ್ಯಾಧುನಿಕ ಮಿಲಿಟರಿಯನ್ನು ಹೊಂದಿದೆ ಮತ್ತು ಪರಮಾಣು ಶಕ್ತಿಯಾಗಿದೆ, ಹಾಗಾಗಿ ಅದರ ವಿರುದ್ಧ ನಾಟೋ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಾಟೋ ವಾದವೇನು?

“ನಾವು ಉಕ್ರೇನ್‌ನ ಹತಾಶೆಯನ್ನು ಅರ್ಥಮಾಡಿಕೊಂಡಿದ್ದೇವೆ. ನ್ಯಾಟೋ ಫೈಟರ್ ವಿಮಾನಗಳನ್ನು ಉಕ್ರೇನ್‌ನ ವಾಯುಪ್ರದೇಶಕ್ಕೆ ಕಳುಹಿಸುವುದು ಮತ್ತು ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ಮಾತ್ರವೇ ನೋ ಫ್ಲೈ ಝೋನ್ ಅನ್ನು ಕಾರ್ಯಗತಗೊಳಿಸಲು ಸಾಧ್ಯ. ನಾವು ಅದನ್ನು ಮಾಡಿದರೆ, ಯುರೋಪ್‌ ಪೂರ್ಣ ಪ್ರಮಾಣದ ಯುದ್ಧದಲ್ಲಿ ಕೊನೆಗೊಳ್ಳುತ್ತದೆ. ಅಲ್ಲದೆ ಯುದ್ದವೂ ಇನ್ನೂ ಅನೇಕ ದೇಶಗಳನ್ನು ಒಳಗೊಂಡಿರುತ್ತದೆ ಮತ್ತು ಹೆಚ್ಚು ಜೀವಹಾನಿಯನ್ನು ಉಂಟುಮಾಡುತ್ತದೆ. ನಾವು ಈ ಸಂಘರ್ಷದ ಭಾಗವಾಗಿಲ್ಲ, ಮತ್ತು ಅದು ಉಲ್ಬಣಗೊಳ್ಳದಂತೆ ಮತ್ತು ಉಕ್ರೇನ್‌ನ ಆಚೆಗೆ ಹರಡದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ” ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಅಮೆರಿಕ ಏನು ಹೇಳುತ್ತದೆ?

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಶ್ವೇತಭವನವು NFZ ಅನ್ನು ಜಾರಿಗೊಳಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ರಷ್ಯಾದ ವಿರುದ್ಧ ಹೋರಾಡಲು ತಮ್ಮ ಪಡೆಗಳನ್ನು ಕಳುಹಿಸುವುದಿಲ್ಲ ಎಂದು ಪದೇ ಪದೇ ಹೇಳಿದ್ದಾರೆ. “ಇದು ಮೂಲಭೂತವಾಗಿ ಯುಎಸ್ ಮಿಲಿಟರಿ ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮತ್ತು ರಷ್ಯಾದೊಂದಿಗೆ ಸಂಭಾವ್ಯ ನೇರ ಯುದ್ಧವನ್ನು ಉಂಟುಮಾಡುವುದನ್ನು ನಾವು ತಪ್ಪಿಸಲು ಬಯಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಗುರುವಾರ ಹೇಳಿದ್ದರು.

ಇದುವರೆಗೂ NFZ ಗಳನ್ನು ಎಲ್ಲಿ ಹೇರಲಾಗಿದೆ

ಲಿಬಿಯಾ: ದೇಶದಲ್ಲಿ ದಾಳಿಯ ಬೆದರಿಕೆಯಲ್ಲಿರುವ ನಾಗರಿಕರನ್ನು ರಕ್ಷಿಸುವ ಕಾರಣ ನೀಡಿ ಯುಎನ್ ಸೆಕ್ಯುರಿಟಿ ಕೌನ್ಸಿಲ್ 2011 ರಲ್ಲಿ ಲಿಬಿಯಾದ ಮೇಲೆ ನ್ಯಾಟೋ ಮೂಲಕ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಬೋಸ್ನಿಯಾ: NATO ಏಪ್ರಿಲ್ 1993 ರಿಂದ ಡಿಸೆಂಬರ್ 1995 ರವರೆಗೆ ಬೋಸ್ನಿಯಾದ ಮೇಲೆ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಇರಾಕ್: 1991ರ ಕೊಲ್ಲಿ ಯುದ್ಧದ ನಂತರ U.S. ಮತ್ತು ಸಮ್ಮಿಶ್ರ ರಾಷ್ಟ್ರಗಳು ಇರಾಕ್‌ನಲ್ಲಿ ಎರಡು ನೋ-ಫ್ಲೈ ಝೋನ್ ಅನ್ನು ಹೇರಿದ್ದವು.

ಅಮೆರಿಕ ದೇಶವು ಹಲವೆಡೆ ನೋ-ಫ್ಲೈ ಝೋನ್ ಅನ್ನು ಹೇರಿದೆ.


ಇದನ್ನೂ ಓದಿ: ಬಹುಜನ ಭಾರತ; ಸೋತು ಗೆಲ್ಲುವುದೇ ಯುಕ್ರೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...