Homeಮುಖಪುಟನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್...

ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನೋ-ಫ್ಲೈ ಝೋನ್ ಎಂದರೇನು? NATO ನಿರಾಕರಿಸಿದ್ದೇಕೆ? ಈ ಹಿಂದೆ ಎಲ್ಲೆಲ್ಲಿ ಬಳಸಲಾಗಿದ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಉಕ್ರೇನ್‌ ಹಲವು ಪ್ರದೇಶಗಳಲ್ಲಿ ನೋ-ಫ್ಲೈ ಝೋನ್ (no-fly zone) ಹೇರಬೇಕೆಂಬ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಮನವಿಯನ್ನು NATO ನಿರಾಕರಿಸಿದೆ. ಇದರಿಂದ ಕ್ರೋಧಗೊಂಡಿರುವ ಝೆಲೆನ್ಸ್ಕಿ “ನಿಮ್ಮ ಈ ನಿರ್ಧಾರವು ಉಕ್ರೇನಿಯನ್ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್ ದಾಳಿಗೆ ಹಸಿರು ನಿಶಾನೆ ನೀಡುತ್ತದೆ” ಎಂದು ಕಿಡಿಕಾರಿದ್ದಾರೆ.

“ಈ ದಿನದಿಂದ ಸಾಯುವ ಎಲ್ಲಾ ಜನರು ನಿಮ್ಮ (NATO) ಕಾರಣದಿಂದಾಗಿ ಸಾಯುತ್ತಾರೆ, ನಿಮ್ಮ ದೌರ್ಬಲ್ಯದಿಂದಾಗಿ, ನಿಮ್ಮ ಒಗ್ಗಟ್ಟಿನ ಕೊರತೆಯಿಂದಾಗಿ ಸಾಯುತ್ತಾರೆ” ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿಅವರು ಉಕ್ರೇನಿಯನ್ ಜನತೆಯ ಪ್ರತಿರೋಧದ ಶೌರ್ಯವನ್ನು ಶ್ಲಾಘಿಸಿದ್ದಾರೆ.

ಶುಕ್ರವಾರದ ದೂರದರ್ಶನದ ಭಾಷಣದಲ್ಲಿ ಮಾತನಾಡಿದ ಝೆಲೆನ್ಸ್ಕಿ “ಇಂದು ನ್ಯಾಟೋ ಶೃಂಗಸಭೆ ನಡೆಯುತ್ತಿದೆ. ಅದು ದುರ್ಬಲ ಮತ್ತು ಗೊಂದಲಮಯ ಶೃಂಗಸಭೆಯಾಗಿದೆ. ಯುರೋಪಿನ ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ನಂಬರ್ ಒನ್ ಗುರಿ ಎಂದು ಶೃಂಗಸಭೆಯ ಎಲ್ಲರೂ ಪರಿಗಣಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಏನಿದು ನೋ-ಫ್ಲೈ ಝೋನ್?

ನಿರ್ದಿಷ್ಟ ವಾಯು ಪ್ರದೇಶದಲ್ಲಿ ನೋ-ಫ್ಲೈ ಝೋನ್ ಹೇರಿದಾಗ ಅದು ಹಾರಾಟ ನಿಷೇಧ ವಲಯವಾಗಿದ್ದು, ಅಲ್ಲಿ ಕೆಲವು ವಿಮಾನಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
ಘರ್ಷಣೆಗಳು ಮತ್ತು ಯುದ್ಧಗಳ ಸಂದರ್ಭದಲ್ಲಿ ಸೈನಿಕ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲು ಮತ್ತು ಕಣ್ಗಾವಲು ನಡೆಸಲು ನಿಷೇಧಿತ ವಿಮಾನಗಳನ್ನು ವಾಯುಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಸಾಮಾನ್ಯವಾಗಿ ನೋ-ಫ್ಲೈ ಝೋನ್ ಹೇರಲಾಗುತ್ತದೆ.
ನೋ-ಫ್ಲೈ ಝೋನ್‌ಗಳನ್ನು ಮಿಲಿಟರಿ ಬಲ ಬಳಸಿಯೇ ಜಾರಿಗೊಳಿಸಬೇಕು. ಆ ಸಂದರ್ಭದಲ್ಲಿ ನಿಷೇಧಿತ ವಿಮಾನಗಳು ಪ್ರವೇಶಿಸಿದ್ದಲ್ಲಿ ಹೊಡೆದುರುಳಿಸಬಹುದು. ಇದರರ್ಥ ನಾಟೊ ತನ್ನ ಫೈಟರ್ ಜೆಟ್‌ಗಳನ್ನು ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ ಕಳಿಸಿಕೊಡಬೇಕು ಎಂಬುದೇ ಆಗಿದೆ.

ಉಕ್ರೇನ್ ಬಯಕೆಯೇನು?

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ದೇಶದ “ಮಹತ್ವದ ಭಾಗಗಳ” ಮೇಲೆ ನೋ-ಫ್ಲೈ ಝೋನ್ ಹೇರಬೇಕೆಂದು NATO, ಅಮೆರಿಕ ಮತ್ತು ಹಲವು ಯೂರೋಪ್ ದೇಶಗಳಲ್ಲಿ ಮನವಿ ಮಾಡಿದ್ದರು. ಇದರಿಂದ ರಷ್ಯಾ ದಾಳಿ ಮಾಡಲು ಆಗುವುದಿಲ್ಲ ಮತ್ತು ರಷ್ಯಾ ದಾಳಿಯನ್ನು ಹಿಮ್ಮೆಟ್ಟಿಸಬಹುದು ಎಂದು ಅವರು ನಂಬಿದ್ದರು. ಅದಕ್ಕಾಗಿ ಅಮೆರಿಕ ಮತ್ತು NATO ಬಳಿ ಹಲವಾರು ಬಾರಿ ಮನವಿ ಮಾಡಿದ್ದ ಅವರು ಯುದ್ಧವಿಮಾನಗಳನ್ನು ಒದಗಿಸಬೇಕು, ಆದ್ದರಿಂದ ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದು” ಎಂದು ವಾದಿಸಿದ್ದರು.

ನೋ-ಫ್ಲೈ ಝೋನ್ ಹೇರದಿರಲು ಕಾರಣವೇನು?

NATO, ಅಮೆರಿಕ ಅಥವಾ ಯೂರೋಪ್‌ನ ಯಾವುದೇ ದೇಶ ನೋ-ಫ್ಲೈ ಝೋನ್ ಹೇರಿದರೆ, ಅದನ್ನು ಜಾರಿಗೊಳಿಸಲು ಅವರೇ ಜವಾಬ್ದಾರರಾಗಿರುತ್ತಾರೆ. ಅಂದರೆ ನಿಷೇಧಿತ ರಷ್ಯಾದ ಮಿಲಿಟರಿ ವಿಮಾನಗಳ ವಿರುದ್ಧ ಹೋರಾಡಬೇಕಿರುತ್ತದೆ. “ನ್ಯಾಟೋ ಅದನ್ನು ಹೇರಿದರೆ ಮತ್ತು ನಾವು ರಷ್ಯಾದ ಒಂದು ವಿಮಾನವನ್ನು ಹೊಡೆದುರುಳಿಸಿದರೆ, ನಾವು ರಷ್ಯಾದೊಂದಿಗೆ ಯುದ್ಧದಲ್ಲಿದ್ದೇವೆ ಎಂದರ್ಥ. ಹಾಗಾಗಿ NATO ಅದನ್ನು ಬಯಸುವುದಿಲ್ಲ” ಎಂದು ನ್ಯೂ ಹೆವನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಹೊವಾರ್ಡ್ ಸ್ಟಾಫರ್ ಹೇಳುತ್ತಾರೆ.

NFZ ಗಳನ್ನು ಜಾರಿಗೊಳಿಸಿದ ಹಿಂದಿನ ಸಂಘರ್ಷಗಳಿಗಿಂತ ಭಿನ್ನವಾಗಿ ಈ ಬಾರಿ ರಷ್ಯಾವು ದೃಢವಾದ ಮತ್ತು ಹೆಚ್ಚು ಅತ್ಯಾಧುನಿಕ ಮಿಲಿಟರಿಯನ್ನು ಹೊಂದಿದೆ ಮತ್ತು ಪರಮಾಣು ಶಕ್ತಿಯಾಗಿದೆ, ಹಾಗಾಗಿ ಅದರ ವಿರುದ್ಧ ನಾಟೋ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಾಟೋ ವಾದವೇನು?

“ನಾವು ಉಕ್ರೇನ್‌ನ ಹತಾಶೆಯನ್ನು ಅರ್ಥಮಾಡಿಕೊಂಡಿದ್ದೇವೆ. ನ್ಯಾಟೋ ಫೈಟರ್ ವಿಮಾನಗಳನ್ನು ಉಕ್ರೇನ್‌ನ ವಾಯುಪ್ರದೇಶಕ್ಕೆ ಕಳುಹಿಸುವುದು ಮತ್ತು ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ಮಾತ್ರವೇ ನೋ ಫ್ಲೈ ಝೋನ್ ಅನ್ನು ಕಾರ್ಯಗತಗೊಳಿಸಲು ಸಾಧ್ಯ. ನಾವು ಅದನ್ನು ಮಾಡಿದರೆ, ಯುರೋಪ್‌ ಪೂರ್ಣ ಪ್ರಮಾಣದ ಯುದ್ಧದಲ್ಲಿ ಕೊನೆಗೊಳ್ಳುತ್ತದೆ. ಅಲ್ಲದೆ ಯುದ್ದವೂ ಇನ್ನೂ ಅನೇಕ ದೇಶಗಳನ್ನು ಒಳಗೊಂಡಿರುತ್ತದೆ ಮತ್ತು ಹೆಚ್ಚು ಜೀವಹಾನಿಯನ್ನು ಉಂಟುಮಾಡುತ್ತದೆ. ನಾವು ಈ ಸಂಘರ್ಷದ ಭಾಗವಾಗಿಲ್ಲ, ಮತ್ತು ಅದು ಉಲ್ಬಣಗೊಳ್ಳದಂತೆ ಮತ್ತು ಉಕ್ರೇನ್‌ನ ಆಚೆಗೆ ಹರಡದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ” ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಅಮೆರಿಕ ಏನು ಹೇಳುತ್ತದೆ?

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಶ್ವೇತಭವನವು NFZ ಅನ್ನು ಜಾರಿಗೊಳಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ರಷ್ಯಾದ ವಿರುದ್ಧ ಹೋರಾಡಲು ತಮ್ಮ ಪಡೆಗಳನ್ನು ಕಳುಹಿಸುವುದಿಲ್ಲ ಎಂದು ಪದೇ ಪದೇ ಹೇಳಿದ್ದಾರೆ. “ಇದು ಮೂಲಭೂತವಾಗಿ ಯುಎಸ್ ಮಿಲಿಟರಿ ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮತ್ತು ರಷ್ಯಾದೊಂದಿಗೆ ಸಂಭಾವ್ಯ ನೇರ ಯುದ್ಧವನ್ನು ಉಂಟುಮಾಡುವುದನ್ನು ನಾವು ತಪ್ಪಿಸಲು ಬಯಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಗುರುವಾರ ಹೇಳಿದ್ದರು.

ಇದುವರೆಗೂ NFZ ಗಳನ್ನು ಎಲ್ಲಿ ಹೇರಲಾಗಿದೆ

ಲಿಬಿಯಾ: ದೇಶದಲ್ಲಿ ದಾಳಿಯ ಬೆದರಿಕೆಯಲ್ಲಿರುವ ನಾಗರಿಕರನ್ನು ರಕ್ಷಿಸುವ ಕಾರಣ ನೀಡಿ ಯುಎನ್ ಸೆಕ್ಯುರಿಟಿ ಕೌನ್ಸಿಲ್ 2011 ರಲ್ಲಿ ಲಿಬಿಯಾದ ಮೇಲೆ ನ್ಯಾಟೋ ಮೂಲಕ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಬೋಸ್ನಿಯಾ: NATO ಏಪ್ರಿಲ್ 1993 ರಿಂದ ಡಿಸೆಂಬರ್ 1995 ರವರೆಗೆ ಬೋಸ್ನಿಯಾದ ಮೇಲೆ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಇರಾಕ್: 1991ರ ಕೊಲ್ಲಿ ಯುದ್ಧದ ನಂತರ U.S. ಮತ್ತು ಸಮ್ಮಿಶ್ರ ರಾಷ್ಟ್ರಗಳು ಇರಾಕ್‌ನಲ್ಲಿ ಎರಡು ನೋ-ಫ್ಲೈ ಝೋನ್ ಅನ್ನು ಹೇರಿದ್ದವು.

ಅಮೆರಿಕ ದೇಶವು ಹಲವೆಡೆ ನೋ-ಫ್ಲೈ ಝೋನ್ ಅನ್ನು ಹೇರಿದೆ.


ಇದನ್ನೂ ಓದಿ: ಬಹುಜನ ಭಾರತ; ಸೋತು ಗೆಲ್ಲುವುದೇ ಯುಕ್ರೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...