Homeಮುಖಪುಟನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್...

ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನೋ-ಫ್ಲೈ ಝೋನ್ ಎಂದರೇನು? NATO ನಿರಾಕರಿಸಿದ್ದೇಕೆ? ಈ ಹಿಂದೆ ಎಲ್ಲೆಲ್ಲಿ ಬಳಸಲಾಗಿದ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಉಕ್ರೇನ್‌ ಹಲವು ಪ್ರದೇಶಗಳಲ್ಲಿ ನೋ-ಫ್ಲೈ ಝೋನ್ (no-fly zone) ಹೇರಬೇಕೆಂಬ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಮನವಿಯನ್ನು NATO ನಿರಾಕರಿಸಿದೆ. ಇದರಿಂದ ಕ್ರೋಧಗೊಂಡಿರುವ ಝೆಲೆನ್ಸ್ಕಿ “ನಿಮ್ಮ ಈ ನಿರ್ಧಾರವು ಉಕ್ರೇನಿಯನ್ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್ ದಾಳಿಗೆ ಹಸಿರು ನಿಶಾನೆ ನೀಡುತ್ತದೆ” ಎಂದು ಕಿಡಿಕಾರಿದ್ದಾರೆ.

“ಈ ದಿನದಿಂದ ಸಾಯುವ ಎಲ್ಲಾ ಜನರು ನಿಮ್ಮ (NATO) ಕಾರಣದಿಂದಾಗಿ ಸಾಯುತ್ತಾರೆ, ನಿಮ್ಮ ದೌರ್ಬಲ್ಯದಿಂದಾಗಿ, ನಿಮ್ಮ ಒಗ್ಗಟ್ಟಿನ ಕೊರತೆಯಿಂದಾಗಿ ಸಾಯುತ್ತಾರೆ” ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿಅವರು ಉಕ್ರೇನಿಯನ್ ಜನತೆಯ ಪ್ರತಿರೋಧದ ಶೌರ್ಯವನ್ನು ಶ್ಲಾಘಿಸಿದ್ದಾರೆ.

ಶುಕ್ರವಾರದ ದೂರದರ್ಶನದ ಭಾಷಣದಲ್ಲಿ ಮಾತನಾಡಿದ ಝೆಲೆನ್ಸ್ಕಿ “ಇಂದು ನ್ಯಾಟೋ ಶೃಂಗಸಭೆ ನಡೆಯುತ್ತಿದೆ. ಅದು ದುರ್ಬಲ ಮತ್ತು ಗೊಂದಲಮಯ ಶೃಂಗಸಭೆಯಾಗಿದೆ. ಯುರೋಪಿನ ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ನಂಬರ್ ಒನ್ ಗುರಿ ಎಂದು ಶೃಂಗಸಭೆಯ ಎಲ್ಲರೂ ಪರಿಗಣಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಏನಿದು ನೋ-ಫ್ಲೈ ಝೋನ್?

ನಿರ್ದಿಷ್ಟ ವಾಯು ಪ್ರದೇಶದಲ್ಲಿ ನೋ-ಫ್ಲೈ ಝೋನ್ ಹೇರಿದಾಗ ಅದು ಹಾರಾಟ ನಿಷೇಧ ವಲಯವಾಗಿದ್ದು, ಅಲ್ಲಿ ಕೆಲವು ವಿಮಾನಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
ಘರ್ಷಣೆಗಳು ಮತ್ತು ಯುದ್ಧಗಳ ಸಂದರ್ಭದಲ್ಲಿ ಸೈನಿಕ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲು ಮತ್ತು ಕಣ್ಗಾವಲು ನಡೆಸಲು ನಿಷೇಧಿತ ವಿಮಾನಗಳನ್ನು ವಾಯುಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಸಾಮಾನ್ಯವಾಗಿ ನೋ-ಫ್ಲೈ ಝೋನ್ ಹೇರಲಾಗುತ್ತದೆ.
ನೋ-ಫ್ಲೈ ಝೋನ್‌ಗಳನ್ನು ಮಿಲಿಟರಿ ಬಲ ಬಳಸಿಯೇ ಜಾರಿಗೊಳಿಸಬೇಕು. ಆ ಸಂದರ್ಭದಲ್ಲಿ ನಿಷೇಧಿತ ವಿಮಾನಗಳು ಪ್ರವೇಶಿಸಿದ್ದಲ್ಲಿ ಹೊಡೆದುರುಳಿಸಬಹುದು. ಇದರರ್ಥ ನಾಟೊ ತನ್ನ ಫೈಟರ್ ಜೆಟ್‌ಗಳನ್ನು ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ ಕಳಿಸಿಕೊಡಬೇಕು ಎಂಬುದೇ ಆಗಿದೆ.

ಉಕ್ರೇನ್ ಬಯಕೆಯೇನು?

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ದೇಶದ “ಮಹತ್ವದ ಭಾಗಗಳ” ಮೇಲೆ ನೋ-ಫ್ಲೈ ಝೋನ್ ಹೇರಬೇಕೆಂದು NATO, ಅಮೆರಿಕ ಮತ್ತು ಹಲವು ಯೂರೋಪ್ ದೇಶಗಳಲ್ಲಿ ಮನವಿ ಮಾಡಿದ್ದರು. ಇದರಿಂದ ರಷ್ಯಾ ದಾಳಿ ಮಾಡಲು ಆಗುವುದಿಲ್ಲ ಮತ್ತು ರಷ್ಯಾ ದಾಳಿಯನ್ನು ಹಿಮ್ಮೆಟ್ಟಿಸಬಹುದು ಎಂದು ಅವರು ನಂಬಿದ್ದರು. ಅದಕ್ಕಾಗಿ ಅಮೆರಿಕ ಮತ್ತು NATO ಬಳಿ ಹಲವಾರು ಬಾರಿ ಮನವಿ ಮಾಡಿದ್ದ ಅವರು ಯುದ್ಧವಿಮಾನಗಳನ್ನು ಒದಗಿಸಬೇಕು, ಆದ್ದರಿಂದ ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದು” ಎಂದು ವಾದಿಸಿದ್ದರು.

ನೋ-ಫ್ಲೈ ಝೋನ್ ಹೇರದಿರಲು ಕಾರಣವೇನು?

NATO, ಅಮೆರಿಕ ಅಥವಾ ಯೂರೋಪ್‌ನ ಯಾವುದೇ ದೇಶ ನೋ-ಫ್ಲೈ ಝೋನ್ ಹೇರಿದರೆ, ಅದನ್ನು ಜಾರಿಗೊಳಿಸಲು ಅವರೇ ಜವಾಬ್ದಾರರಾಗಿರುತ್ತಾರೆ. ಅಂದರೆ ನಿಷೇಧಿತ ರಷ್ಯಾದ ಮಿಲಿಟರಿ ವಿಮಾನಗಳ ವಿರುದ್ಧ ಹೋರಾಡಬೇಕಿರುತ್ತದೆ. “ನ್ಯಾಟೋ ಅದನ್ನು ಹೇರಿದರೆ ಮತ್ತು ನಾವು ರಷ್ಯಾದ ಒಂದು ವಿಮಾನವನ್ನು ಹೊಡೆದುರುಳಿಸಿದರೆ, ನಾವು ರಷ್ಯಾದೊಂದಿಗೆ ಯುದ್ಧದಲ್ಲಿದ್ದೇವೆ ಎಂದರ್ಥ. ಹಾಗಾಗಿ NATO ಅದನ್ನು ಬಯಸುವುದಿಲ್ಲ” ಎಂದು ನ್ಯೂ ಹೆವನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಹೊವಾರ್ಡ್ ಸ್ಟಾಫರ್ ಹೇಳುತ್ತಾರೆ.

NFZ ಗಳನ್ನು ಜಾರಿಗೊಳಿಸಿದ ಹಿಂದಿನ ಸಂಘರ್ಷಗಳಿಗಿಂತ ಭಿನ್ನವಾಗಿ ಈ ಬಾರಿ ರಷ್ಯಾವು ದೃಢವಾದ ಮತ್ತು ಹೆಚ್ಚು ಅತ್ಯಾಧುನಿಕ ಮಿಲಿಟರಿಯನ್ನು ಹೊಂದಿದೆ ಮತ್ತು ಪರಮಾಣು ಶಕ್ತಿಯಾಗಿದೆ, ಹಾಗಾಗಿ ಅದರ ವಿರುದ್ಧ ನಾಟೋ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಾಟೋ ವಾದವೇನು?

“ನಾವು ಉಕ್ರೇನ್‌ನ ಹತಾಶೆಯನ್ನು ಅರ್ಥಮಾಡಿಕೊಂಡಿದ್ದೇವೆ. ನ್ಯಾಟೋ ಫೈಟರ್ ವಿಮಾನಗಳನ್ನು ಉಕ್ರೇನ್‌ನ ವಾಯುಪ್ರದೇಶಕ್ಕೆ ಕಳುಹಿಸುವುದು ಮತ್ತು ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ಮಾತ್ರವೇ ನೋ ಫ್ಲೈ ಝೋನ್ ಅನ್ನು ಕಾರ್ಯಗತಗೊಳಿಸಲು ಸಾಧ್ಯ. ನಾವು ಅದನ್ನು ಮಾಡಿದರೆ, ಯುರೋಪ್‌ ಪೂರ್ಣ ಪ್ರಮಾಣದ ಯುದ್ಧದಲ್ಲಿ ಕೊನೆಗೊಳ್ಳುತ್ತದೆ. ಅಲ್ಲದೆ ಯುದ್ದವೂ ಇನ್ನೂ ಅನೇಕ ದೇಶಗಳನ್ನು ಒಳಗೊಂಡಿರುತ್ತದೆ ಮತ್ತು ಹೆಚ್ಚು ಜೀವಹಾನಿಯನ್ನು ಉಂಟುಮಾಡುತ್ತದೆ. ನಾವು ಈ ಸಂಘರ್ಷದ ಭಾಗವಾಗಿಲ್ಲ, ಮತ್ತು ಅದು ಉಲ್ಬಣಗೊಳ್ಳದಂತೆ ಮತ್ತು ಉಕ್ರೇನ್‌ನ ಆಚೆಗೆ ಹರಡದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ” ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಅಮೆರಿಕ ಏನು ಹೇಳುತ್ತದೆ?

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಶ್ವೇತಭವನವು NFZ ಅನ್ನು ಜಾರಿಗೊಳಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ರಷ್ಯಾದ ವಿರುದ್ಧ ಹೋರಾಡಲು ತಮ್ಮ ಪಡೆಗಳನ್ನು ಕಳುಹಿಸುವುದಿಲ್ಲ ಎಂದು ಪದೇ ಪದೇ ಹೇಳಿದ್ದಾರೆ. “ಇದು ಮೂಲಭೂತವಾಗಿ ಯುಎಸ್ ಮಿಲಿಟರಿ ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮತ್ತು ರಷ್ಯಾದೊಂದಿಗೆ ಸಂಭಾವ್ಯ ನೇರ ಯುದ್ಧವನ್ನು ಉಂಟುಮಾಡುವುದನ್ನು ನಾವು ತಪ್ಪಿಸಲು ಬಯಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಗುರುವಾರ ಹೇಳಿದ್ದರು.

ಇದುವರೆಗೂ NFZ ಗಳನ್ನು ಎಲ್ಲಿ ಹೇರಲಾಗಿದೆ

ಲಿಬಿಯಾ: ದೇಶದಲ್ಲಿ ದಾಳಿಯ ಬೆದರಿಕೆಯಲ್ಲಿರುವ ನಾಗರಿಕರನ್ನು ರಕ್ಷಿಸುವ ಕಾರಣ ನೀಡಿ ಯುಎನ್ ಸೆಕ್ಯುರಿಟಿ ಕೌನ್ಸಿಲ್ 2011 ರಲ್ಲಿ ಲಿಬಿಯಾದ ಮೇಲೆ ನ್ಯಾಟೋ ಮೂಲಕ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಬೋಸ್ನಿಯಾ: NATO ಏಪ್ರಿಲ್ 1993 ರಿಂದ ಡಿಸೆಂಬರ್ 1995 ರವರೆಗೆ ಬೋಸ್ನಿಯಾದ ಮೇಲೆ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಇರಾಕ್: 1991ರ ಕೊಲ್ಲಿ ಯುದ್ಧದ ನಂತರ U.S. ಮತ್ತು ಸಮ್ಮಿಶ್ರ ರಾಷ್ಟ್ರಗಳು ಇರಾಕ್‌ನಲ್ಲಿ ಎರಡು ನೋ-ಫ್ಲೈ ಝೋನ್ ಅನ್ನು ಹೇರಿದ್ದವು.

ಅಮೆರಿಕ ದೇಶವು ಹಲವೆಡೆ ನೋ-ಫ್ಲೈ ಝೋನ್ ಅನ್ನು ಹೇರಿದೆ.


ಇದನ್ನೂ ಓದಿ: ಬಹುಜನ ಭಾರತ; ಸೋತು ಗೆಲ್ಲುವುದೇ ಯುಕ್ರೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...