Homeಮುಖಪುಟನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್...

ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನೋ-ಫ್ಲೈ ಝೋನ್ ಎಂದರೇನು? NATO ನಿರಾಕರಿಸಿದ್ದೇಕೆ? ಈ ಹಿಂದೆ ಎಲ್ಲೆಲ್ಲಿ ಬಳಸಲಾಗಿದ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಉಕ್ರೇನ್‌ ಹಲವು ಪ್ರದೇಶಗಳಲ್ಲಿ ನೋ-ಫ್ಲೈ ಝೋನ್ (no-fly zone) ಹೇರಬೇಕೆಂಬ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಮನವಿಯನ್ನು NATO ನಿರಾಕರಿಸಿದೆ. ಇದರಿಂದ ಕ್ರೋಧಗೊಂಡಿರುವ ಝೆಲೆನ್ಸ್ಕಿ “ನಿಮ್ಮ ಈ ನಿರ್ಧಾರವು ಉಕ್ರೇನಿಯನ್ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್ ದಾಳಿಗೆ ಹಸಿರು ನಿಶಾನೆ ನೀಡುತ್ತದೆ” ಎಂದು ಕಿಡಿಕಾರಿದ್ದಾರೆ.

“ಈ ದಿನದಿಂದ ಸಾಯುವ ಎಲ್ಲಾ ಜನರು ನಿಮ್ಮ (NATO) ಕಾರಣದಿಂದಾಗಿ ಸಾಯುತ್ತಾರೆ, ನಿಮ್ಮ ದೌರ್ಬಲ್ಯದಿಂದಾಗಿ, ನಿಮ್ಮ ಒಗ್ಗಟ್ಟಿನ ಕೊರತೆಯಿಂದಾಗಿ ಸಾಯುತ್ತಾರೆ” ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿಅವರು ಉಕ್ರೇನಿಯನ್ ಜನತೆಯ ಪ್ರತಿರೋಧದ ಶೌರ್ಯವನ್ನು ಶ್ಲಾಘಿಸಿದ್ದಾರೆ.

ಶುಕ್ರವಾರದ ದೂರದರ್ಶನದ ಭಾಷಣದಲ್ಲಿ ಮಾತನಾಡಿದ ಝೆಲೆನ್ಸ್ಕಿ “ಇಂದು ನ್ಯಾಟೋ ಶೃಂಗಸಭೆ ನಡೆಯುತ್ತಿದೆ. ಅದು ದುರ್ಬಲ ಮತ್ತು ಗೊಂದಲಮಯ ಶೃಂಗಸಭೆಯಾಗಿದೆ. ಯುರೋಪಿನ ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ನಂಬರ್ ಒನ್ ಗುರಿ ಎಂದು ಶೃಂಗಸಭೆಯ ಎಲ್ಲರೂ ಪರಿಗಣಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಏನಿದು ನೋ-ಫ್ಲೈ ಝೋನ್?

ನಿರ್ದಿಷ್ಟ ವಾಯು ಪ್ರದೇಶದಲ್ಲಿ ನೋ-ಫ್ಲೈ ಝೋನ್ ಹೇರಿದಾಗ ಅದು ಹಾರಾಟ ನಿಷೇಧ ವಲಯವಾಗಿದ್ದು, ಅಲ್ಲಿ ಕೆಲವು ವಿಮಾನಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
ಘರ್ಷಣೆಗಳು ಮತ್ತು ಯುದ್ಧಗಳ ಸಂದರ್ಭದಲ್ಲಿ ಸೈನಿಕ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲು ಮತ್ತು ಕಣ್ಗಾವಲು ನಡೆಸಲು ನಿಷೇಧಿತ ವಿಮಾನಗಳನ್ನು ವಾಯುಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಸಾಮಾನ್ಯವಾಗಿ ನೋ-ಫ್ಲೈ ಝೋನ್ ಹೇರಲಾಗುತ್ತದೆ.
ನೋ-ಫ್ಲೈ ಝೋನ್‌ಗಳನ್ನು ಮಿಲಿಟರಿ ಬಲ ಬಳಸಿಯೇ ಜಾರಿಗೊಳಿಸಬೇಕು. ಆ ಸಂದರ್ಭದಲ್ಲಿ ನಿಷೇಧಿತ ವಿಮಾನಗಳು ಪ್ರವೇಶಿಸಿದ್ದಲ್ಲಿ ಹೊಡೆದುರುಳಿಸಬಹುದು. ಇದರರ್ಥ ನಾಟೊ ತನ್ನ ಫೈಟರ್ ಜೆಟ್‌ಗಳನ್ನು ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ ಕಳಿಸಿಕೊಡಬೇಕು ಎಂಬುದೇ ಆಗಿದೆ.

ಉಕ್ರೇನ್ ಬಯಕೆಯೇನು?

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ದೇಶದ “ಮಹತ್ವದ ಭಾಗಗಳ” ಮೇಲೆ ನೋ-ಫ್ಲೈ ಝೋನ್ ಹೇರಬೇಕೆಂದು NATO, ಅಮೆರಿಕ ಮತ್ತು ಹಲವು ಯೂರೋಪ್ ದೇಶಗಳಲ್ಲಿ ಮನವಿ ಮಾಡಿದ್ದರು. ಇದರಿಂದ ರಷ್ಯಾ ದಾಳಿ ಮಾಡಲು ಆಗುವುದಿಲ್ಲ ಮತ್ತು ರಷ್ಯಾ ದಾಳಿಯನ್ನು ಹಿಮ್ಮೆಟ್ಟಿಸಬಹುದು ಎಂದು ಅವರು ನಂಬಿದ್ದರು. ಅದಕ್ಕಾಗಿ ಅಮೆರಿಕ ಮತ್ತು NATO ಬಳಿ ಹಲವಾರು ಬಾರಿ ಮನವಿ ಮಾಡಿದ್ದ ಅವರು ಯುದ್ಧವಿಮಾನಗಳನ್ನು ಒದಗಿಸಬೇಕು, ಆದ್ದರಿಂದ ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದು” ಎಂದು ವಾದಿಸಿದ್ದರು.

ನೋ-ಫ್ಲೈ ಝೋನ್ ಹೇರದಿರಲು ಕಾರಣವೇನು?

NATO, ಅಮೆರಿಕ ಅಥವಾ ಯೂರೋಪ್‌ನ ಯಾವುದೇ ದೇಶ ನೋ-ಫ್ಲೈ ಝೋನ್ ಹೇರಿದರೆ, ಅದನ್ನು ಜಾರಿಗೊಳಿಸಲು ಅವರೇ ಜವಾಬ್ದಾರರಾಗಿರುತ್ತಾರೆ. ಅಂದರೆ ನಿಷೇಧಿತ ರಷ್ಯಾದ ಮಿಲಿಟರಿ ವಿಮಾನಗಳ ವಿರುದ್ಧ ಹೋರಾಡಬೇಕಿರುತ್ತದೆ. “ನ್ಯಾಟೋ ಅದನ್ನು ಹೇರಿದರೆ ಮತ್ತು ನಾವು ರಷ್ಯಾದ ಒಂದು ವಿಮಾನವನ್ನು ಹೊಡೆದುರುಳಿಸಿದರೆ, ನಾವು ರಷ್ಯಾದೊಂದಿಗೆ ಯುದ್ಧದಲ್ಲಿದ್ದೇವೆ ಎಂದರ್ಥ. ಹಾಗಾಗಿ NATO ಅದನ್ನು ಬಯಸುವುದಿಲ್ಲ” ಎಂದು ನ್ಯೂ ಹೆವನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಹೊವಾರ್ಡ್ ಸ್ಟಾಫರ್ ಹೇಳುತ್ತಾರೆ.

NFZ ಗಳನ್ನು ಜಾರಿಗೊಳಿಸಿದ ಹಿಂದಿನ ಸಂಘರ್ಷಗಳಿಗಿಂತ ಭಿನ್ನವಾಗಿ ಈ ಬಾರಿ ರಷ್ಯಾವು ದೃಢವಾದ ಮತ್ತು ಹೆಚ್ಚು ಅತ್ಯಾಧುನಿಕ ಮಿಲಿಟರಿಯನ್ನು ಹೊಂದಿದೆ ಮತ್ತು ಪರಮಾಣು ಶಕ್ತಿಯಾಗಿದೆ, ಹಾಗಾಗಿ ಅದರ ವಿರುದ್ಧ ನಾಟೋ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಾಟೋ ವಾದವೇನು?

“ನಾವು ಉಕ್ರೇನ್‌ನ ಹತಾಶೆಯನ್ನು ಅರ್ಥಮಾಡಿಕೊಂಡಿದ್ದೇವೆ. ನ್ಯಾಟೋ ಫೈಟರ್ ವಿಮಾನಗಳನ್ನು ಉಕ್ರೇನ್‌ನ ವಾಯುಪ್ರದೇಶಕ್ಕೆ ಕಳುಹಿಸುವುದು ಮತ್ತು ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ಮಾತ್ರವೇ ನೋ ಫ್ಲೈ ಝೋನ್ ಅನ್ನು ಕಾರ್ಯಗತಗೊಳಿಸಲು ಸಾಧ್ಯ. ನಾವು ಅದನ್ನು ಮಾಡಿದರೆ, ಯುರೋಪ್‌ ಪೂರ್ಣ ಪ್ರಮಾಣದ ಯುದ್ಧದಲ್ಲಿ ಕೊನೆಗೊಳ್ಳುತ್ತದೆ. ಅಲ್ಲದೆ ಯುದ್ದವೂ ಇನ್ನೂ ಅನೇಕ ದೇಶಗಳನ್ನು ಒಳಗೊಂಡಿರುತ್ತದೆ ಮತ್ತು ಹೆಚ್ಚು ಜೀವಹಾನಿಯನ್ನು ಉಂಟುಮಾಡುತ್ತದೆ. ನಾವು ಈ ಸಂಘರ್ಷದ ಭಾಗವಾಗಿಲ್ಲ, ಮತ್ತು ಅದು ಉಲ್ಬಣಗೊಳ್ಳದಂತೆ ಮತ್ತು ಉಕ್ರೇನ್‌ನ ಆಚೆಗೆ ಹರಡದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ” ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಅಮೆರಿಕ ಏನು ಹೇಳುತ್ತದೆ?

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಶ್ವೇತಭವನವು NFZ ಅನ್ನು ಜಾರಿಗೊಳಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ರಷ್ಯಾದ ವಿರುದ್ಧ ಹೋರಾಡಲು ತಮ್ಮ ಪಡೆಗಳನ್ನು ಕಳುಹಿಸುವುದಿಲ್ಲ ಎಂದು ಪದೇ ಪದೇ ಹೇಳಿದ್ದಾರೆ. “ಇದು ಮೂಲಭೂತವಾಗಿ ಯುಎಸ್ ಮಿಲಿಟರಿ ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮತ್ತು ರಷ್ಯಾದೊಂದಿಗೆ ಸಂಭಾವ್ಯ ನೇರ ಯುದ್ಧವನ್ನು ಉಂಟುಮಾಡುವುದನ್ನು ನಾವು ತಪ್ಪಿಸಲು ಬಯಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಗುರುವಾರ ಹೇಳಿದ್ದರು.

ಇದುವರೆಗೂ NFZ ಗಳನ್ನು ಎಲ್ಲಿ ಹೇರಲಾಗಿದೆ

ಲಿಬಿಯಾ: ದೇಶದಲ್ಲಿ ದಾಳಿಯ ಬೆದರಿಕೆಯಲ್ಲಿರುವ ನಾಗರಿಕರನ್ನು ರಕ್ಷಿಸುವ ಕಾರಣ ನೀಡಿ ಯುಎನ್ ಸೆಕ್ಯುರಿಟಿ ಕೌನ್ಸಿಲ್ 2011 ರಲ್ಲಿ ಲಿಬಿಯಾದ ಮೇಲೆ ನ್ಯಾಟೋ ಮೂಲಕ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಬೋಸ್ನಿಯಾ: NATO ಏಪ್ರಿಲ್ 1993 ರಿಂದ ಡಿಸೆಂಬರ್ 1995 ರವರೆಗೆ ಬೋಸ್ನಿಯಾದ ಮೇಲೆ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಇರಾಕ್: 1991ರ ಕೊಲ್ಲಿ ಯುದ್ಧದ ನಂತರ U.S. ಮತ್ತು ಸಮ್ಮಿಶ್ರ ರಾಷ್ಟ್ರಗಳು ಇರಾಕ್‌ನಲ್ಲಿ ಎರಡು ನೋ-ಫ್ಲೈ ಝೋನ್ ಅನ್ನು ಹೇರಿದ್ದವು.

ಅಮೆರಿಕ ದೇಶವು ಹಲವೆಡೆ ನೋ-ಫ್ಲೈ ಝೋನ್ ಅನ್ನು ಹೇರಿದೆ.


ಇದನ್ನೂ ಓದಿ: ಬಹುಜನ ಭಾರತ; ಸೋತು ಗೆಲ್ಲುವುದೇ ಯುಕ್ರೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...