Homeಮುಖಪುಟನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್...

ನಿಮ್ಮ ದೌರ್ಬಲ್ಯದಿಂದಾಗಿ ನಮ್ಮ ಜನ ಸಾಯುತ್ತಿದ್ದಾರೆ: ನೋ-ಫ್ಲೈ ಝೋನ್ ಹೇರದ NATO ವಿರುದ್ಧ ಕಿಡಿಕಾರಿದ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ

ನೋ-ಫ್ಲೈ ಝೋನ್ ಎಂದರೇನು? NATO ನಿರಾಕರಿಸಿದ್ದೇಕೆ? ಈ ಹಿಂದೆ ಎಲ್ಲೆಲ್ಲಿ ಬಳಸಲಾಗಿದ ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ.

- Advertisement -
- Advertisement -

ಉಕ್ರೇನ್‌ ಹಲವು ಪ್ರದೇಶಗಳಲ್ಲಿ ನೋ-ಫ್ಲೈ ಝೋನ್ (no-fly zone) ಹೇರಬೇಕೆಂಬ ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಮನವಿಯನ್ನು NATO ನಿರಾಕರಿಸಿದೆ. ಇದರಿಂದ ಕ್ರೋಧಗೊಂಡಿರುವ ಝೆಲೆನ್ಸ್ಕಿ “ನಿಮ್ಮ ಈ ನಿರ್ಧಾರವು ಉಕ್ರೇನಿಯನ್ ನಗರಗಳು ಮತ್ತು ಹಳ್ಳಿಗಳ ಮೇಲೆ ಮತ್ತಷ್ಟು ಬಾಂಬ್ ದಾಳಿಗೆ ಹಸಿರು ನಿಶಾನೆ ನೀಡುತ್ತದೆ” ಎಂದು ಕಿಡಿಕಾರಿದ್ದಾರೆ.

“ಈ ದಿನದಿಂದ ಸಾಯುವ ಎಲ್ಲಾ ಜನರು ನಿಮ್ಮ (NATO) ಕಾರಣದಿಂದಾಗಿ ಸಾಯುತ್ತಾರೆ, ನಿಮ್ಮ ದೌರ್ಬಲ್ಯದಿಂದಾಗಿ, ನಿಮ್ಮ ಒಗ್ಗಟ್ಟಿನ ಕೊರತೆಯಿಂದಾಗಿ ಸಾಯುತ್ತಾರೆ” ಅವರು ಹೇಳಿದ್ದಾರೆ. ಇದೇ ಸಂದರ್ಭದಲ್ಲಿಅವರು ಉಕ್ರೇನಿಯನ್ ಜನತೆಯ ಪ್ರತಿರೋಧದ ಶೌರ್ಯವನ್ನು ಶ್ಲಾಘಿಸಿದ್ದಾರೆ.

ಶುಕ್ರವಾರದ ದೂರದರ್ಶನದ ಭಾಷಣದಲ್ಲಿ ಮಾತನಾಡಿದ ಝೆಲೆನ್ಸ್ಕಿ “ಇಂದು ನ್ಯಾಟೋ ಶೃಂಗಸಭೆ ನಡೆಯುತ್ತಿದೆ. ಅದು ದುರ್ಬಲ ಮತ್ತು ಗೊಂದಲಮಯ ಶೃಂಗಸಭೆಯಾಗಿದೆ. ಯುರೋಪಿನ ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ನಂಬರ್ ಒನ್ ಗುರಿ ಎಂದು ಶೃಂಗಸಭೆಯ ಎಲ್ಲರೂ ಪರಿಗಣಿಸುವುದಿಲ್ಲ ಎಂಬುದು ಸ್ಪಷ್ಟವಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಏನಿದು ನೋ-ಫ್ಲೈ ಝೋನ್?

ನಿರ್ದಿಷ್ಟ ವಾಯು ಪ್ರದೇಶದಲ್ಲಿ ನೋ-ಫ್ಲೈ ಝೋನ್ ಹೇರಿದಾಗ ಅದು ಹಾರಾಟ ನಿಷೇಧ ವಲಯವಾಗಿದ್ದು, ಅಲ್ಲಿ ಕೆಲವು ವಿಮಾನಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ.
ಘರ್ಷಣೆಗಳು ಮತ್ತು ಯುದ್ಧಗಳ ಸಂದರ್ಭದಲ್ಲಿ ಸೈನಿಕ ಪಡೆಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸಾಗಿಸಲು ಮತ್ತು ಕಣ್ಗಾವಲು ನಡೆಸಲು ನಿಷೇಧಿತ ವಿಮಾನಗಳನ್ನು ವಾಯುಪ್ರದೇಶಕ್ಕೆ ಪ್ರವೇಶಿಸುವುದನ್ನು ತಡೆಯಲು ಸಾಮಾನ್ಯವಾಗಿ ನೋ-ಫ್ಲೈ ಝೋನ್ ಹೇರಲಾಗುತ್ತದೆ.
ನೋ-ಫ್ಲೈ ಝೋನ್‌ಗಳನ್ನು ಮಿಲಿಟರಿ ಬಲ ಬಳಸಿಯೇ ಜಾರಿಗೊಳಿಸಬೇಕು. ಆ ಸಂದರ್ಭದಲ್ಲಿ ನಿಷೇಧಿತ ವಿಮಾನಗಳು ಪ್ರವೇಶಿಸಿದ್ದಲ್ಲಿ ಹೊಡೆದುರುಳಿಸಬಹುದು. ಇದರರ್ಥ ನಾಟೊ ತನ್ನ ಫೈಟರ್ ಜೆಟ್‌ಗಳನ್ನು ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ ಕಳಿಸಿಕೊಡಬೇಕು ಎಂಬುದೇ ಆಗಿದೆ.

ಉಕ್ರೇನ್ ಬಯಕೆಯೇನು?

ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ದೇಶದ “ಮಹತ್ವದ ಭಾಗಗಳ” ಮೇಲೆ ನೋ-ಫ್ಲೈ ಝೋನ್ ಹೇರಬೇಕೆಂದು NATO, ಅಮೆರಿಕ ಮತ್ತು ಹಲವು ಯೂರೋಪ್ ದೇಶಗಳಲ್ಲಿ ಮನವಿ ಮಾಡಿದ್ದರು. ಇದರಿಂದ ರಷ್ಯಾ ದಾಳಿ ಮಾಡಲು ಆಗುವುದಿಲ್ಲ ಮತ್ತು ರಷ್ಯಾ ದಾಳಿಯನ್ನು ಹಿಮ್ಮೆಟ್ಟಿಸಬಹುದು ಎಂದು ಅವರು ನಂಬಿದ್ದರು. ಅದಕ್ಕಾಗಿ ಅಮೆರಿಕ ಮತ್ತು NATO ಬಳಿ ಹಲವಾರು ಬಾರಿ ಮನವಿ ಮಾಡಿದ್ದ ಅವರು ಯುದ್ಧವಿಮಾನಗಳನ್ನು ಒದಗಿಸಬೇಕು, ಆದ್ದರಿಂದ ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಳ್ಳಬಹುದು” ಎಂದು ವಾದಿಸಿದ್ದರು.

ನೋ-ಫ್ಲೈ ಝೋನ್ ಹೇರದಿರಲು ಕಾರಣವೇನು?

NATO, ಅಮೆರಿಕ ಅಥವಾ ಯೂರೋಪ್‌ನ ಯಾವುದೇ ದೇಶ ನೋ-ಫ್ಲೈ ಝೋನ್ ಹೇರಿದರೆ, ಅದನ್ನು ಜಾರಿಗೊಳಿಸಲು ಅವರೇ ಜವಾಬ್ದಾರರಾಗಿರುತ್ತಾರೆ. ಅಂದರೆ ನಿಷೇಧಿತ ರಷ್ಯಾದ ಮಿಲಿಟರಿ ವಿಮಾನಗಳ ವಿರುದ್ಧ ಹೋರಾಡಬೇಕಿರುತ್ತದೆ. “ನ್ಯಾಟೋ ಅದನ್ನು ಹೇರಿದರೆ ಮತ್ತು ನಾವು ರಷ್ಯಾದ ಒಂದು ವಿಮಾನವನ್ನು ಹೊಡೆದುರುಳಿಸಿದರೆ, ನಾವು ರಷ್ಯಾದೊಂದಿಗೆ ಯುದ್ಧದಲ್ಲಿದ್ದೇವೆ ಎಂದರ್ಥ. ಹಾಗಾಗಿ NATO ಅದನ್ನು ಬಯಸುವುದಿಲ್ಲ” ಎಂದು ನ್ಯೂ ಹೆವನ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಹೊವಾರ್ಡ್ ಸ್ಟಾಫರ್ ಹೇಳುತ್ತಾರೆ.

NFZ ಗಳನ್ನು ಜಾರಿಗೊಳಿಸಿದ ಹಿಂದಿನ ಸಂಘರ್ಷಗಳಿಗಿಂತ ಭಿನ್ನವಾಗಿ ಈ ಬಾರಿ ರಷ್ಯಾವು ದೃಢವಾದ ಮತ್ತು ಹೆಚ್ಚು ಅತ್ಯಾಧುನಿಕ ಮಿಲಿಟರಿಯನ್ನು ಹೊಂದಿದೆ ಮತ್ತು ಪರಮಾಣು ಶಕ್ತಿಯಾಗಿದೆ, ಹಾಗಾಗಿ ಅದರ ವಿರುದ್ಧ ನಾಟೋ ಹೋಗುವುದಿಲ್ಲ ಎಂದು ಅವರು ಹೇಳಿದ್ದಾರೆ.

ನಾಟೋ ವಾದವೇನು?

“ನಾವು ಉಕ್ರೇನ್‌ನ ಹತಾಶೆಯನ್ನು ಅರ್ಥಮಾಡಿಕೊಂಡಿದ್ದೇವೆ. ನ್ಯಾಟೋ ಫೈಟರ್ ವಿಮಾನಗಳನ್ನು ಉಕ್ರೇನ್‌ನ ವಾಯುಪ್ರದೇಶಕ್ಕೆ ಕಳುಹಿಸುವುದು ಮತ್ತು ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮೂಲಕ ಮಾತ್ರವೇ ನೋ ಫ್ಲೈ ಝೋನ್ ಅನ್ನು ಕಾರ್ಯಗತಗೊಳಿಸಲು ಸಾಧ್ಯ. ನಾವು ಅದನ್ನು ಮಾಡಿದರೆ, ಯುರೋಪ್‌ ಪೂರ್ಣ ಪ್ರಮಾಣದ ಯುದ್ಧದಲ್ಲಿ ಕೊನೆಗೊಳ್ಳುತ್ತದೆ. ಅಲ್ಲದೆ ಯುದ್ದವೂ ಇನ್ನೂ ಅನೇಕ ದೇಶಗಳನ್ನು ಒಳಗೊಂಡಿರುತ್ತದೆ ಮತ್ತು ಹೆಚ್ಚು ಜೀವಹಾನಿಯನ್ನು ಉಂಟುಮಾಡುತ್ತದೆ. ನಾವು ಈ ಸಂಘರ್ಷದ ಭಾಗವಾಗಿಲ್ಲ, ಮತ್ತು ಅದು ಉಲ್ಬಣಗೊಳ್ಳದಂತೆ ಮತ್ತು ಉಕ್ರೇನ್‌ನ ಆಚೆಗೆ ಹರಡದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ” ಎಂದು ನ್ಯಾಟೋ ಮುಖ್ಯಸ್ಥ ಜೆನ್ಸ್ ಸ್ಟೋಲ್ಟೆನ್‌ಬರ್ಗ್ ಹೇಳಿದ್ದಾರೆ.

ಅಮೆರಿಕ ಏನು ಹೇಳುತ್ತದೆ?

ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಶ್ವೇತಭವನವು NFZ ಅನ್ನು ಜಾರಿಗೊಳಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ರಷ್ಯಾದ ವಿರುದ್ಧ ಹೋರಾಡಲು ತಮ್ಮ ಪಡೆಗಳನ್ನು ಕಳುಹಿಸುವುದಿಲ್ಲ ಎಂದು ಪದೇ ಪದೇ ಹೇಳಿದ್ದಾರೆ. “ಇದು ಮೂಲಭೂತವಾಗಿ ಯುಎಸ್ ಮಿಲಿಟರಿ ರಷ್ಯಾದ ವಿಮಾನಗಳನ್ನು ಹೊಡೆದುರುಳಿಸುವ ಮತ್ತು ರಷ್ಯಾದೊಂದಿಗೆ ಸಂಭಾವ್ಯ ನೇರ ಯುದ್ಧವನ್ನು ಉಂಟುಮಾಡುವುದನ್ನು ನಾವು ತಪ್ಪಿಸಲು ಬಯಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಗುರುವಾರ ಹೇಳಿದ್ದರು.

ಇದುವರೆಗೂ NFZ ಗಳನ್ನು ಎಲ್ಲಿ ಹೇರಲಾಗಿದೆ

ಲಿಬಿಯಾ: ದೇಶದಲ್ಲಿ ದಾಳಿಯ ಬೆದರಿಕೆಯಲ್ಲಿರುವ ನಾಗರಿಕರನ್ನು ರಕ್ಷಿಸುವ ಕಾರಣ ನೀಡಿ ಯುಎನ್ ಸೆಕ್ಯುರಿಟಿ ಕೌನ್ಸಿಲ್ 2011 ರಲ್ಲಿ ಲಿಬಿಯಾದ ಮೇಲೆ ನ್ಯಾಟೋ ಮೂಲಕ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಬೋಸ್ನಿಯಾ: NATO ಏಪ್ರಿಲ್ 1993 ರಿಂದ ಡಿಸೆಂಬರ್ 1995 ರವರೆಗೆ ಬೋಸ್ನಿಯಾದ ಮೇಲೆ ನೋ-ಫ್ಲೈ ಝೋನ್ ಅನ್ನು ಹೇರಿತ್ತು.

ಇರಾಕ್: 1991ರ ಕೊಲ್ಲಿ ಯುದ್ಧದ ನಂತರ U.S. ಮತ್ತು ಸಮ್ಮಿಶ್ರ ರಾಷ್ಟ್ರಗಳು ಇರಾಕ್‌ನಲ್ಲಿ ಎರಡು ನೋ-ಫ್ಲೈ ಝೋನ್ ಅನ್ನು ಹೇರಿದ್ದವು.

ಅಮೆರಿಕ ದೇಶವು ಹಲವೆಡೆ ನೋ-ಫ್ಲೈ ಝೋನ್ ಅನ್ನು ಹೇರಿದೆ.


ಇದನ್ನೂ ಓದಿ: ಬಹುಜನ ಭಾರತ; ಸೋತು ಗೆಲ್ಲುವುದೇ ಯುಕ್ರೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...