Homeಮುಖಪುಟಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಅಸ್ಸಾಂನ ಉಲ್ಫಾ ಸಂಘಟನೆ

ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಅಸ್ಸಾಂನ ಉಲ್ಫಾ ಸಂಘಟನೆ

- Advertisement -
- Advertisement -

ಕೇಂದ್ರ, ಅಸ್ಸಾಂ ಸರ್ಕಾರ ಮತ್ತು ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಂ (ಉಲ್ಫಾ) ನಡುವಿನ ತ್ರಿಪಕ್ಷೀಯ ಶಾಂತಿ ಒಪ್ಪಂದಕ್ಕೆ ಇಂದು (ಶುಕ್ರವಾರ) ದೆಹಲಿಯಲ್ಲಿ ಸಹಿ ಹಾಕಲಾಗಿದೆ. ಈ ಮೂಲಕ ದಶಕಗಳ ಸಂಘರ್ಷ ಕೊನೆಗೊಳಿಸುವಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ.

ಶಾಂತಿ ಒಪ್ಪಂದದ ಮೂಲಕ ಹಿಂಸೆಯಿಂದ ದೂರ ಸರಿಯಲು ಅರಬಿಂದಾ ರಾಜ್‌ಖೋವಾ ನೇತೃತ್ವದ ಉಲ್ಫಾ ಒಪ್ಪಿಕೊಂಡಿದೆ. ಆದರೆ, ಇದೇ ಸಂಘಟನೆಯ ಪರೇಶ್ ಬರುವಾ ನೇತೃತ್ವದ ಕಟ್ಟರ್ ಬಣ ಶಾಂತಿ ಒಪ್ಪಂದಕ್ಕೆ ಒಪ್ಪಿಲ್ಲ ಎಂದು ತಿಳಿದು ಬಂದಿದೆ.

ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಂ ಅನ್ನು 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಅಡಿಯಲ್ಲಿ 1990ರಲ್ಲಿ ಭಾರತದಲ್ಲಿ ನಿಷೇಧಿಸಲಾಗಿತ್ತು. ಈ ಸಂಘಟನೆ 1979 ರಿಂದ ಸಶಸ್ತ್ರ ಹೋರಾಟದ ಮೂಲಕ ಸ್ಥಳೀಯ ಅಸ್ಸಾಮಿ ಜನರಿಗೆ ಅಸ್ಸಾಂ ಸಾರ್ವಭೌಮ ರಾಷ್ಟ್ರವನ್ನು ರಚಿಸಲು ಒತ್ತಾಯಿಸುತ್ತಿತ್ತು.

ಶಾಂತಿ ಒಪ್ಪಂದವು ಅಕ್ರಮ ವಲಸೆ, ಸ್ಥಳೀಯ ಸಮುದಾಯಗಳಿಗೆ ಭೂಮಿಯ ಹಕ್ಕುಗಳು ಮತ್ತು ಅಸ್ಸಾಂನ ಅಭಿವೃದ್ಧಿಗೆ ಹಣಕಾಸಿನ ಪ್ಯಾಕೇಜ್‌ನಂತಹ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಒಪ್ಪಂದಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಶಾಂತಿ ಸಂಧಾನದ ಪರವಾಗಿದ್ದ ಉಲ್ಫಾ ಸಂಘಟನೆಯ ಹಲವಾರು ನಾಯಕರು ಉಪಸ್ಥಿತರಿದ್ದರು.

ಶಾಂತಿ ಒಪ್ಪಂದಕ್ಕೆ ಸಹಿ ಹಾಕುವ ಸಂಬಂಧ 2011ರಿಂದ ಕೇಂದ್ರ ಮತ್ತು ಅಸ್ಸಾಂ ಸರ್ಕಾರಗಳು ಉಲ್ಫಾ ನಾಯಕರ ಜೊತೆ ಮಾತುಕತೆ ನಡೆಸುತ್ತಿತ್ತು. ಈ ಮಾತುಕತೆಯ ಫಲವಾಗಿ ಇಂದು ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಸರ್ಕಾರ ಉಲ್ಫಾಗೆ ನೀಡಿರುವ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ” ಎಂದು ತಿಳಿಸಿದ್ದಾರೆ.

ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ಮಾತನಾಡಿ, ಉಲ್ಫಾದ ಶಾಂತಿ ಚರ್ಚೆ ವಿರೋಧಿ ಬಣವನ್ನು ಮುನ್ನಡೆಸುತ್ತಿರುವ ಒಬ್ಬ ವ್ಯಕ್ತಿಯನ್ನು ಹೊರತುಪಡಿಸಿ, ಸಂಘಟನೆಯ ಉಳಿದ ಎಲ್ಲಾ ಸಂಸ್ಥಾಪಕ ಸದಸ್ಯರು ಇಂದು ಶಾಂತಿ ಒಪ್ಪಂದದ ವೇಳೆ ಹಾಜರಿದ್ದರು. 1993ರಲ್ಲಿ ಆಗಿನ ಪ್ರಧಾನಿ ಪಿವಿ ನರಸಿಂಹರಾವ್ ಶಾಂತಿ ಒಪ್ಪಂದದ ಚರ್ಚೆಗೆ ಮುನ್ನುಡಿ ಬರೆದಿದ್ದರು. ಇಂದು ಬಂದಿದ್ದ ಜನರು ಅಂದೂ ಕೂಡ ದೆಹಲಿಗೆ ಬಂದಿದ್ದರು. ಅಂದು ಆರಂಭಿಕ ಚರ್ಚೆ ನಡೆದಿತ್ತು. ಆದರೆ, ತಾರ್ಕಿಕ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಕೊನೆಗೂ ಇಂದು ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಉಲ್ಫಾವನ್ನು ವಿಸರ್ಜಿಸಲಾಗುವುದು ಎಂದು ಅದರ ನಾಯಕರು ನಮಗೆ ಭರವಸೆ ನೀಡಿದ್ದಾರೆ. ಅವರು ಈಗ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಆ ಶಿಬಿರಗಳನ್ನು ತೊರೆದು, ತಮ್ಮ ಶಸ್ತ್ರಾಸ್ತ್ರಗಳನ್ನು ಸರ್ಕಾರಕ್ಕೆ ಒಪ್ಪಿಸಲಿದ್ದಾರೆ. ಒಟ್ಟು 726 ಉಲ್ಫಾ ಕಾರ್ಯಕರ್ತರು ಮುಖ್ಯವಾಹಿನಿಗೆ ಬರಲಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಗುಜ್ಜರ್-ಬಕರ್ವಾಲ್- ಸೇನೆ ಸಂಬಂಧವೇನು? ಪೂಂಛ್‌ ಘಟನೆಗೆ ಸರಕಾರ ತ್ವರಿತವಾಗಿ ಸ್ಪಂದಿಸಿದ್ದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...