Homeಕರ್ನಾಟಕಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

ಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

- Advertisement -
- Advertisement -

ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅವಿವೇಕತನಕ್ಕೆ ಯುವಕನೊಬ್ಬ ತನ್ನ ಎಡಗಾಲು ಕಳೆದುಕೊಂಡಿದ್ದಾರೆ ಎಂಬ ಆರೋಪ ಉಳ್ಳಾಲದಲ್ಲಿ ಕೇಳಿಬಂದಿದೆ. ಆಸ್ಪತ್ರೆಯ ಆಡಳಿತ ಮಂಡಳಿಯು ಪರಿಹಾರವನ್ನೂ ನೀಡದೆ ಯುವಕನ ಬದುಕಿನಲ್ಲಿ ಆಟವಾಡುತ್ತಿದೆ ಎಂದು ಡಿವೈಎಫ್‌ಐ ಆರೋಪಿಸಿದೆ.

ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ನೌಷಾದ್ ಎನ್ನುವ ಯುವಕ ದುಬೈನಲ್ಲಿ ಉದ್ಯೋಗದಲ್ಲಿದ್ದರು. 2021ರ‌ ನವೆಂಬರ್ ತಿಂಗಳಲ್ಲಿ ರಜೆಯಲ್ಲಿ ಊರಿಗೆ ಬಂದಿದ್ದ ನೌಶಾದ್‌ಗೆ ಸಣ್ಣದೊಂದು ಬೈಕ್ ಆಕ್ಸಿಡೆಂಟ್ ಆಗಿ ಕಾಲಿಗೆ ಪೆಟ್ಟಾಗಿತ್ತು.‌ ಈ ವೇಳೆ ಅವರು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್.ಹೆಗಡೆ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಿಂದಾಗಿ ಅವರ ಕಾಲಿನಲ್ಲಿ ಯಾವುದೇ ಗಾಯ, ಮೂಳೆ ಮುರಿತಗಳಿಲ್ಲದೆ ತೀವ್ರ ನೋವು ಮಾತ್ರ ಇದ್ದುದರಿಂದ ಸ್ಕ್ಯಾನಿಂಗ್ ಸಹಿತ ಎಲ್ಲಾ ವಿಧದ ಪರೀಕ್ಷೆಗಳಿಗೆ ಅವರನ್ನು ಒಳಪಡಿಸಲಾಗಿತ್ತು. ಆ ‌ವೇಳೆ ವರದಿಗಳ ಆಧಾರದ ಮೇಲೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಕೆಎಸ್ ಹೆಗಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಜೊತೆಗೆ ಸಾಮಾನ್ಯ ಚಿಕಿತ್ಸೆ, ವಿಶ್ರಾಂತಿಗಾಗಿ ಒಂದು ದಿನ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಸೂಚಿಸಿದ್ದರು. ಆದರೆ ಮರು ದಿನ ಕಾಲು ವಿಪರೀತ ನೋವು ಇರುವುದಾಗಿ ನೌಶಾದ್ ತಿಳಿಸಿದಾಗ ಮತ್ತೊಂದು ದಿನ ಆಸ್ಪತ್ರೆಯಲ್ಲೇ ಇದ್ದು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗೆ ನೌಶಾದ್ ಅವರನ್ನು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಸಿಕೊಂಡು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು ನೀಡಿದ ತಪ್ಪಾದ ಚಿಕಿತ್ಸೆಯಿಂದಾಗಿ ನೌಷದ್‌ನ ಕಾಲು ನಿರ್ಜೀವಗೊಂಡಿತು. ಇಷ್ಟಾದ ಮೇಲೆ ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು 38 ಸಾವಿರ ರೂ. ಬಿಲ್ ಪಡೆದು, ಹೆಚ್ಚಿನ ಚಿಕಿತ್ಸೆ ಎಂದು ಹೇಳಿ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಅಲ್ಲಿ ನುರಿತ ವೈದ್ಯರು ಪರಿಶೀಲ‌‌ನೆ ನಡೆಸಿದ್ದು, ಕಾಲಿನ ಮೊಣಕಾಲಿನ ಬಳಿ ರಕ್ತನಾಳ ತುಂಡರಿಸಲ್ಪಟ್ಟಿರುವುದರಿಂದ ರಕ್ತ ಸಂಚಾರವಿಲ್ಲದೆ ಮೊಣಕಾಲಿನ ಕೆಳಗಡೆ ಕಾಲು ಗಂಭೀರವಾಗಿ ಘಾಸಿಗೊಂಡಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಅಪಘಾತ ನಡೆದ 24 ಗಂಟೆಯೊಳಗೆ ಸೂಕ್ತ ಚಿಕಿತ್ಸೆ ನೀಡಿದ್ದರೆ ಕಾಲುನೋವು ವಾಸಿಮಾಡಬಹುದಿತ್ತು. ಆದರೆ, ಮೂರು ದಿನ ಕಳೆದಿರುವುದರಿಂದ ಕಾಲು ಕತ್ತರಿಸಬೇಕಾದ ಅನಿವಾರ್ಯತೆಯ ಕುರಿತು ಫಾದರ್ ಮುಲ್ಲರ್ ‌ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಕಾಲು ಉಳಿಸುವ ಎಲ್ಲಾ ಪ್ರಯತ್ನಗಳು ವಿಫಲಗೊಂಡು ಕೊನೆಗೂ ನೌಶಾದ್‌ನ ಎಡಗಾಲನ್ನು ಕತ್ತರಿಸಿ ತೆಗೆಯಲಾಗಿದೆ. ಈ ಆಸ್ಪತ್ರೆಯಲ್ಲಿ 4 ಲಕ್ಷದ 50 ಸಾವಿರ ರೂ. ಬಿಲ್ ಮಾಡಲಾಯಿತು. ಈ ಎಲ್ಲ ಬಿಲ್‌ನ್ನು ನೌಷಾದ್ ಕುಟುಂಬವೇ ಭರಿಸಿದೆ.

ಇದನ್ನೂ ಓದಿ: ”ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!”: ಮೂಲಗಳ ಮಾಹಿತಿ

ಈ ನೌಷದ್ ಕುಟುಂಬದವರು ಸ್ಥಿತಿವಂತರೇನಲ್ಲ, ಅವರ ತಂದೆ ಆಟೋ ಚಾಲಕ, ಈಗ ಅವರ ದುಡಿಮೆಯಿಂದಲೇ ಕುಟುಂಬ ನಡೆಯಬೇಕು. ನೌಷದ್ ಕಾಲು ಕಳೆದುಕೊಂಡು ಮೂಲೆ ಸೇರಿದ್ದಾರೆ. ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅಪರಾಧದಿಂದ ಕಾಲು ಕಳೆದುಕೊಂಡ ನೌಷದ್ ಪರ ಧ್ವನಿ ಎತ್ತಲು ಯಾವುದೇ ರಾಜಕಾರಣಿಗಳು, ರಾಜಕೀಯ ಪಕ್ಷ, ಜನಪ್ರತಿನಿಧಿಗಳು ಮುಂದೆ ಬರದಿರುವುದು ಖೇದಕರ ಸಂಗತಿಯಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ನೌಷಾದ್ ಈಗ ಒಂದಿಷ್ಟು ಸಹಜವಾಗಿ ಓಡಾಡಬೇಕಾದರೆ ಅವರಿಗೆ ಒಳ್ಳೆಯ ಗುಣಮಟ್ಟದ ಕೃತಕ ಕಾಲು ಜೋಡಿಸಬೇಕು. ಅದಕ್ಕೆ ಕನಿಷ್ಟ 10 ಲಕ್ಷ ರೂಪಾಯಿ ಖರ್ಚಾಗುತ್ತದೆ. ಮನೆಯ ಸ್ಥಿತಿಗತಿಯೂ ಸರಿ ಇರದ ಕಾರಣ ನೌಷಾದ್ ಹಾಗೂ ಕುಟುಂಬದವರು ಜಿಲ್ಲೆಯ ದೊಡ್ಡ ಆಸ್ಪತ್ರೆಯ ವಿರುದ್ದ ಹೋರಾಟಕ್ಕಿಳಿಯಲೂ ಸಾಧ್ಯವಿಲ್ಲ ಎಂದು ಅವರು ಪರಿಹಾರಕ್ಕಾಗಿ ಅಂಗಲಾಚಿದರು. ಆ ಕ್ಷಣಕ್ಕೆ ಆಸ್ಪತ್ರೆಯವರು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಆದರೆ ಒಂದು ವರ್ಷ ಕಳೆದರೂ ಯಾವುದೇ ಪರಿಹಾರ ನೀಡದ ಹೆಗ್ಡೆ ಮೆಡಿಕಲ್ ಕಾಲೇಜು ಧಣಿಗಳು, ಅಲೆದಾಡಿಸಿ ಇದೀಗ ನಡು ಬೀದಿಯಲ್ಲಿ ಕೈ ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯು ನೌಷಾದ್ ಪರವಾಗಿ ನಿಂತಿದ್ದು, ”ಜನ ನಾಯಕರು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಬೆಂಬಲಕ್ಕೆ ಬರದಿದ್ದರೇನು.. ತುಳುನಾಡಿನ ಜನ ನೌಷಾದ್ ಪರ ಹೋರಾಟದಲ್ಲಿ ಜೊತೆ ನಿಲ್ಲುತ್ತಾರೆ. ಇದು ಕೇವಲ ನೌಷದ್ ಕುಟುಂಬದ ಹೋರಾಟವಲ್ಲ ಜಿಲ್ಲೆಯ ಜನರ ಹೋರಾಟವಾಗಿದೆ. ಸದ್ಯದಲ್ಲೇ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು” ಎಂದು ಹೇಳಿದೆ.

ಇದನ್ನೂ ಓದಿ: ‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...