Homeಕರ್ನಾಟಕಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

ಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

- Advertisement -
- Advertisement -

ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅವಿವೇಕತನಕ್ಕೆ ಯುವಕನೊಬ್ಬ ತನ್ನ ಎಡಗಾಲು ಕಳೆದುಕೊಂಡಿದ್ದಾರೆ ಎಂಬ ಆರೋಪ ಉಳ್ಳಾಲದಲ್ಲಿ ಕೇಳಿಬಂದಿದೆ. ಆಸ್ಪತ್ರೆಯ ಆಡಳಿತ ಮಂಡಳಿಯು ಪರಿಹಾರವನ್ನೂ ನೀಡದೆ ಯುವಕನ ಬದುಕಿನಲ್ಲಿ ಆಟವಾಡುತ್ತಿದೆ ಎಂದು ಡಿವೈಎಫ್‌ಐ ಆರೋಪಿಸಿದೆ.

ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ನೌಷಾದ್ ಎನ್ನುವ ಯುವಕ ದುಬೈನಲ್ಲಿ ಉದ್ಯೋಗದಲ್ಲಿದ್ದರು. 2021ರ‌ ನವೆಂಬರ್ ತಿಂಗಳಲ್ಲಿ ರಜೆಯಲ್ಲಿ ಊರಿಗೆ ಬಂದಿದ್ದ ನೌಶಾದ್‌ಗೆ ಸಣ್ಣದೊಂದು ಬೈಕ್ ಆಕ್ಸಿಡೆಂಟ್ ಆಗಿ ಕಾಲಿಗೆ ಪೆಟ್ಟಾಗಿತ್ತು.‌ ಈ ವೇಳೆ ಅವರು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್.ಹೆಗಡೆ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಿಂದಾಗಿ ಅವರ ಕಾಲಿನಲ್ಲಿ ಯಾವುದೇ ಗಾಯ, ಮೂಳೆ ಮುರಿತಗಳಿಲ್ಲದೆ ತೀವ್ರ ನೋವು ಮಾತ್ರ ಇದ್ದುದರಿಂದ ಸ್ಕ್ಯಾನಿಂಗ್ ಸಹಿತ ಎಲ್ಲಾ ವಿಧದ ಪರೀಕ್ಷೆಗಳಿಗೆ ಅವರನ್ನು ಒಳಪಡಿಸಲಾಗಿತ್ತು. ಆ ‌ವೇಳೆ ವರದಿಗಳ ಆಧಾರದ ಮೇಲೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಕೆಎಸ್ ಹೆಗಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಜೊತೆಗೆ ಸಾಮಾನ್ಯ ಚಿಕಿತ್ಸೆ, ವಿಶ್ರಾಂತಿಗಾಗಿ ಒಂದು ದಿನ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಸೂಚಿಸಿದ್ದರು. ಆದರೆ ಮರು ದಿನ ಕಾಲು ವಿಪರೀತ ನೋವು ಇರುವುದಾಗಿ ನೌಶಾದ್ ತಿಳಿಸಿದಾಗ ಮತ್ತೊಂದು ದಿನ ಆಸ್ಪತ್ರೆಯಲ್ಲೇ ಇದ್ದು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗೆ ನೌಶಾದ್ ಅವರನ್ನು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಸಿಕೊಂಡು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು ನೀಡಿದ ತಪ್ಪಾದ ಚಿಕಿತ್ಸೆಯಿಂದಾಗಿ ನೌಷದ್‌ನ ಕಾಲು ನಿರ್ಜೀವಗೊಂಡಿತು. ಇಷ್ಟಾದ ಮೇಲೆ ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು 38 ಸಾವಿರ ರೂ. ಬಿಲ್ ಪಡೆದು, ಹೆಚ್ಚಿನ ಚಿಕಿತ್ಸೆ ಎಂದು ಹೇಳಿ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಅಲ್ಲಿ ನುರಿತ ವೈದ್ಯರು ಪರಿಶೀಲ‌‌ನೆ ನಡೆಸಿದ್ದು, ಕಾಲಿನ ಮೊಣಕಾಲಿನ ಬಳಿ ರಕ್ತನಾಳ ತುಂಡರಿಸಲ್ಪಟ್ಟಿರುವುದರಿಂದ ರಕ್ತ ಸಂಚಾರವಿಲ್ಲದೆ ಮೊಣಕಾಲಿನ ಕೆಳಗಡೆ ಕಾಲು ಗಂಭೀರವಾಗಿ ಘಾಸಿಗೊಂಡಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಅಪಘಾತ ನಡೆದ 24 ಗಂಟೆಯೊಳಗೆ ಸೂಕ್ತ ಚಿಕಿತ್ಸೆ ನೀಡಿದ್ದರೆ ಕಾಲುನೋವು ವಾಸಿಮಾಡಬಹುದಿತ್ತು. ಆದರೆ, ಮೂರು ದಿನ ಕಳೆದಿರುವುದರಿಂದ ಕಾಲು ಕತ್ತರಿಸಬೇಕಾದ ಅನಿವಾರ್ಯತೆಯ ಕುರಿತು ಫಾದರ್ ಮುಲ್ಲರ್ ‌ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಕಾಲು ಉಳಿಸುವ ಎಲ್ಲಾ ಪ್ರಯತ್ನಗಳು ವಿಫಲಗೊಂಡು ಕೊನೆಗೂ ನೌಶಾದ್‌ನ ಎಡಗಾಲನ್ನು ಕತ್ತರಿಸಿ ತೆಗೆಯಲಾಗಿದೆ. ಈ ಆಸ್ಪತ್ರೆಯಲ್ಲಿ 4 ಲಕ್ಷದ 50 ಸಾವಿರ ರೂ. ಬಿಲ್ ಮಾಡಲಾಯಿತು. ಈ ಎಲ್ಲ ಬಿಲ್‌ನ್ನು ನೌಷಾದ್ ಕುಟುಂಬವೇ ಭರಿಸಿದೆ.

ಇದನ್ನೂ ಓದಿ: ”ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!”: ಮೂಲಗಳ ಮಾಹಿತಿ

ಈ ನೌಷದ್ ಕುಟುಂಬದವರು ಸ್ಥಿತಿವಂತರೇನಲ್ಲ, ಅವರ ತಂದೆ ಆಟೋ ಚಾಲಕ, ಈಗ ಅವರ ದುಡಿಮೆಯಿಂದಲೇ ಕುಟುಂಬ ನಡೆಯಬೇಕು. ನೌಷದ್ ಕಾಲು ಕಳೆದುಕೊಂಡು ಮೂಲೆ ಸೇರಿದ್ದಾರೆ. ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅಪರಾಧದಿಂದ ಕಾಲು ಕಳೆದುಕೊಂಡ ನೌಷದ್ ಪರ ಧ್ವನಿ ಎತ್ತಲು ಯಾವುದೇ ರಾಜಕಾರಣಿಗಳು, ರಾಜಕೀಯ ಪಕ್ಷ, ಜನಪ್ರತಿನಿಧಿಗಳು ಮುಂದೆ ಬರದಿರುವುದು ಖೇದಕರ ಸಂಗತಿಯಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ನೌಷಾದ್ ಈಗ ಒಂದಿಷ್ಟು ಸಹಜವಾಗಿ ಓಡಾಡಬೇಕಾದರೆ ಅವರಿಗೆ ಒಳ್ಳೆಯ ಗುಣಮಟ್ಟದ ಕೃತಕ ಕಾಲು ಜೋಡಿಸಬೇಕು. ಅದಕ್ಕೆ ಕನಿಷ್ಟ 10 ಲಕ್ಷ ರೂಪಾಯಿ ಖರ್ಚಾಗುತ್ತದೆ. ಮನೆಯ ಸ್ಥಿತಿಗತಿಯೂ ಸರಿ ಇರದ ಕಾರಣ ನೌಷಾದ್ ಹಾಗೂ ಕುಟುಂಬದವರು ಜಿಲ್ಲೆಯ ದೊಡ್ಡ ಆಸ್ಪತ್ರೆಯ ವಿರುದ್ದ ಹೋರಾಟಕ್ಕಿಳಿಯಲೂ ಸಾಧ್ಯವಿಲ್ಲ ಎಂದು ಅವರು ಪರಿಹಾರಕ್ಕಾಗಿ ಅಂಗಲಾಚಿದರು. ಆ ಕ್ಷಣಕ್ಕೆ ಆಸ್ಪತ್ರೆಯವರು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಆದರೆ ಒಂದು ವರ್ಷ ಕಳೆದರೂ ಯಾವುದೇ ಪರಿಹಾರ ನೀಡದ ಹೆಗ್ಡೆ ಮೆಡಿಕಲ್ ಕಾಲೇಜು ಧಣಿಗಳು, ಅಲೆದಾಡಿಸಿ ಇದೀಗ ನಡು ಬೀದಿಯಲ್ಲಿ ಕೈ ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯು ನೌಷಾದ್ ಪರವಾಗಿ ನಿಂತಿದ್ದು, ”ಜನ ನಾಯಕರು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಬೆಂಬಲಕ್ಕೆ ಬರದಿದ್ದರೇನು.. ತುಳುನಾಡಿನ ಜನ ನೌಷಾದ್ ಪರ ಹೋರಾಟದಲ್ಲಿ ಜೊತೆ ನಿಲ್ಲುತ್ತಾರೆ. ಇದು ಕೇವಲ ನೌಷದ್ ಕುಟುಂಬದ ಹೋರಾಟವಲ್ಲ ಜಿಲ್ಲೆಯ ಜನರ ಹೋರಾಟವಾಗಿದೆ. ಸದ್ಯದಲ್ಲೇ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು” ಎಂದು ಹೇಳಿದೆ.

ಇದನ್ನೂ ಓದಿ: ‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...