Homeಕರ್ನಾಟಕಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

ಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

- Advertisement -
- Advertisement -

ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅವಿವೇಕತನಕ್ಕೆ ಯುವಕನೊಬ್ಬ ತನ್ನ ಎಡಗಾಲು ಕಳೆದುಕೊಂಡಿದ್ದಾರೆ ಎಂಬ ಆರೋಪ ಉಳ್ಳಾಲದಲ್ಲಿ ಕೇಳಿಬಂದಿದೆ. ಆಸ್ಪತ್ರೆಯ ಆಡಳಿತ ಮಂಡಳಿಯು ಪರಿಹಾರವನ್ನೂ ನೀಡದೆ ಯುವಕನ ಬದುಕಿನಲ್ಲಿ ಆಟವಾಡುತ್ತಿದೆ ಎಂದು ಡಿವೈಎಫ್‌ಐ ಆರೋಪಿಸಿದೆ.

ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ನೌಷಾದ್ ಎನ್ನುವ ಯುವಕ ದುಬೈನಲ್ಲಿ ಉದ್ಯೋಗದಲ್ಲಿದ್ದರು. 2021ರ‌ ನವೆಂಬರ್ ತಿಂಗಳಲ್ಲಿ ರಜೆಯಲ್ಲಿ ಊರಿಗೆ ಬಂದಿದ್ದ ನೌಶಾದ್‌ಗೆ ಸಣ್ಣದೊಂದು ಬೈಕ್ ಆಕ್ಸಿಡೆಂಟ್ ಆಗಿ ಕಾಲಿಗೆ ಪೆಟ್ಟಾಗಿತ್ತು.‌ ಈ ವೇಳೆ ಅವರು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್.ಹೆಗಡೆ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಿಂದಾಗಿ ಅವರ ಕಾಲಿನಲ್ಲಿ ಯಾವುದೇ ಗಾಯ, ಮೂಳೆ ಮುರಿತಗಳಿಲ್ಲದೆ ತೀವ್ರ ನೋವು ಮಾತ್ರ ಇದ್ದುದರಿಂದ ಸ್ಕ್ಯಾನಿಂಗ್ ಸಹಿತ ಎಲ್ಲಾ ವಿಧದ ಪರೀಕ್ಷೆಗಳಿಗೆ ಅವರನ್ನು ಒಳಪಡಿಸಲಾಗಿತ್ತು. ಆ ‌ವೇಳೆ ವರದಿಗಳ ಆಧಾರದ ಮೇಲೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಕೆಎಸ್ ಹೆಗಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಜೊತೆಗೆ ಸಾಮಾನ್ಯ ಚಿಕಿತ್ಸೆ, ವಿಶ್ರಾಂತಿಗಾಗಿ ಒಂದು ದಿನ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಸೂಚಿಸಿದ್ದರು. ಆದರೆ ಮರು ದಿನ ಕಾಲು ವಿಪರೀತ ನೋವು ಇರುವುದಾಗಿ ನೌಶಾದ್ ತಿಳಿಸಿದಾಗ ಮತ್ತೊಂದು ದಿನ ಆಸ್ಪತ್ರೆಯಲ್ಲೇ ಇದ್ದು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗೆ ನೌಶಾದ್ ಅವರನ್ನು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಸಿಕೊಂಡು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು ನೀಡಿದ ತಪ್ಪಾದ ಚಿಕಿತ್ಸೆಯಿಂದಾಗಿ ನೌಷದ್‌ನ ಕಾಲು ನಿರ್ಜೀವಗೊಂಡಿತು. ಇಷ್ಟಾದ ಮೇಲೆ ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು 38 ಸಾವಿರ ರೂ. ಬಿಲ್ ಪಡೆದು, ಹೆಚ್ಚಿನ ಚಿಕಿತ್ಸೆ ಎಂದು ಹೇಳಿ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಅಲ್ಲಿ ನುರಿತ ವೈದ್ಯರು ಪರಿಶೀಲ‌‌ನೆ ನಡೆಸಿದ್ದು, ಕಾಲಿನ ಮೊಣಕಾಲಿನ ಬಳಿ ರಕ್ತನಾಳ ತುಂಡರಿಸಲ್ಪಟ್ಟಿರುವುದರಿಂದ ರಕ್ತ ಸಂಚಾರವಿಲ್ಲದೆ ಮೊಣಕಾಲಿನ ಕೆಳಗಡೆ ಕಾಲು ಗಂಭೀರವಾಗಿ ಘಾಸಿಗೊಂಡಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಅಪಘಾತ ನಡೆದ 24 ಗಂಟೆಯೊಳಗೆ ಸೂಕ್ತ ಚಿಕಿತ್ಸೆ ನೀಡಿದ್ದರೆ ಕಾಲುನೋವು ವಾಸಿಮಾಡಬಹುದಿತ್ತು. ಆದರೆ, ಮೂರು ದಿನ ಕಳೆದಿರುವುದರಿಂದ ಕಾಲು ಕತ್ತರಿಸಬೇಕಾದ ಅನಿವಾರ್ಯತೆಯ ಕುರಿತು ಫಾದರ್ ಮುಲ್ಲರ್ ‌ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಕಾಲು ಉಳಿಸುವ ಎಲ್ಲಾ ಪ್ರಯತ್ನಗಳು ವಿಫಲಗೊಂಡು ಕೊನೆಗೂ ನೌಶಾದ್‌ನ ಎಡಗಾಲನ್ನು ಕತ್ತರಿಸಿ ತೆಗೆಯಲಾಗಿದೆ. ಈ ಆಸ್ಪತ್ರೆಯಲ್ಲಿ 4 ಲಕ್ಷದ 50 ಸಾವಿರ ರೂ. ಬಿಲ್ ಮಾಡಲಾಯಿತು. ಈ ಎಲ್ಲ ಬಿಲ್‌ನ್ನು ನೌಷಾದ್ ಕುಟುಂಬವೇ ಭರಿಸಿದೆ.

ಇದನ್ನೂ ಓದಿ: ”ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!”: ಮೂಲಗಳ ಮಾಹಿತಿ

ಈ ನೌಷದ್ ಕುಟುಂಬದವರು ಸ್ಥಿತಿವಂತರೇನಲ್ಲ, ಅವರ ತಂದೆ ಆಟೋ ಚಾಲಕ, ಈಗ ಅವರ ದುಡಿಮೆಯಿಂದಲೇ ಕುಟುಂಬ ನಡೆಯಬೇಕು. ನೌಷದ್ ಕಾಲು ಕಳೆದುಕೊಂಡು ಮೂಲೆ ಸೇರಿದ್ದಾರೆ. ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅಪರಾಧದಿಂದ ಕಾಲು ಕಳೆದುಕೊಂಡ ನೌಷದ್ ಪರ ಧ್ವನಿ ಎತ್ತಲು ಯಾವುದೇ ರಾಜಕಾರಣಿಗಳು, ರಾಜಕೀಯ ಪಕ್ಷ, ಜನಪ್ರತಿನಿಧಿಗಳು ಮುಂದೆ ಬರದಿರುವುದು ಖೇದಕರ ಸಂಗತಿಯಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ನೌಷಾದ್ ಈಗ ಒಂದಿಷ್ಟು ಸಹಜವಾಗಿ ಓಡಾಡಬೇಕಾದರೆ ಅವರಿಗೆ ಒಳ್ಳೆಯ ಗುಣಮಟ್ಟದ ಕೃತಕ ಕಾಲು ಜೋಡಿಸಬೇಕು. ಅದಕ್ಕೆ ಕನಿಷ್ಟ 10 ಲಕ್ಷ ರೂಪಾಯಿ ಖರ್ಚಾಗುತ್ತದೆ. ಮನೆಯ ಸ್ಥಿತಿಗತಿಯೂ ಸರಿ ಇರದ ಕಾರಣ ನೌಷಾದ್ ಹಾಗೂ ಕುಟುಂಬದವರು ಜಿಲ್ಲೆಯ ದೊಡ್ಡ ಆಸ್ಪತ್ರೆಯ ವಿರುದ್ದ ಹೋರಾಟಕ್ಕಿಳಿಯಲೂ ಸಾಧ್ಯವಿಲ್ಲ ಎಂದು ಅವರು ಪರಿಹಾರಕ್ಕಾಗಿ ಅಂಗಲಾಚಿದರು. ಆ ಕ್ಷಣಕ್ಕೆ ಆಸ್ಪತ್ರೆಯವರು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಆದರೆ ಒಂದು ವರ್ಷ ಕಳೆದರೂ ಯಾವುದೇ ಪರಿಹಾರ ನೀಡದ ಹೆಗ್ಡೆ ಮೆಡಿಕಲ್ ಕಾಲೇಜು ಧಣಿಗಳು, ಅಲೆದಾಡಿಸಿ ಇದೀಗ ನಡು ಬೀದಿಯಲ್ಲಿ ಕೈ ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯು ನೌಷಾದ್ ಪರವಾಗಿ ನಿಂತಿದ್ದು, ”ಜನ ನಾಯಕರು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಬೆಂಬಲಕ್ಕೆ ಬರದಿದ್ದರೇನು.. ತುಳುನಾಡಿನ ಜನ ನೌಷಾದ್ ಪರ ಹೋರಾಟದಲ್ಲಿ ಜೊತೆ ನಿಲ್ಲುತ್ತಾರೆ. ಇದು ಕೇವಲ ನೌಷದ್ ಕುಟುಂಬದ ಹೋರಾಟವಲ್ಲ ಜಿಲ್ಲೆಯ ಜನರ ಹೋರಾಟವಾಗಿದೆ. ಸದ್ಯದಲ್ಲೇ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು” ಎಂದು ಹೇಳಿದೆ.

ಇದನ್ನೂ ಓದಿ: ‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...