Homeಕರ್ನಾಟಕಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

ಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

- Advertisement -
- Advertisement -

ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅವಿವೇಕತನಕ್ಕೆ ಯುವಕನೊಬ್ಬ ತನ್ನ ಎಡಗಾಲು ಕಳೆದುಕೊಂಡಿದ್ದಾರೆ ಎಂಬ ಆರೋಪ ಉಳ್ಳಾಲದಲ್ಲಿ ಕೇಳಿಬಂದಿದೆ. ಆಸ್ಪತ್ರೆಯ ಆಡಳಿತ ಮಂಡಳಿಯು ಪರಿಹಾರವನ್ನೂ ನೀಡದೆ ಯುವಕನ ಬದುಕಿನಲ್ಲಿ ಆಟವಾಡುತ್ತಿದೆ ಎಂದು ಡಿವೈಎಫ್‌ಐ ಆರೋಪಿಸಿದೆ.

ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ನೌಷಾದ್ ಎನ್ನುವ ಯುವಕ ದುಬೈನಲ್ಲಿ ಉದ್ಯೋಗದಲ್ಲಿದ್ದರು. 2021ರ‌ ನವೆಂಬರ್ ತಿಂಗಳಲ್ಲಿ ರಜೆಯಲ್ಲಿ ಊರಿಗೆ ಬಂದಿದ್ದ ನೌಶಾದ್‌ಗೆ ಸಣ್ಣದೊಂದು ಬೈಕ್ ಆಕ್ಸಿಡೆಂಟ್ ಆಗಿ ಕಾಲಿಗೆ ಪೆಟ್ಟಾಗಿತ್ತು.‌ ಈ ವೇಳೆ ಅವರು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್.ಹೆಗಡೆ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಿಂದಾಗಿ ಅವರ ಕಾಲಿನಲ್ಲಿ ಯಾವುದೇ ಗಾಯ, ಮೂಳೆ ಮುರಿತಗಳಿಲ್ಲದೆ ತೀವ್ರ ನೋವು ಮಾತ್ರ ಇದ್ದುದರಿಂದ ಸ್ಕ್ಯಾನಿಂಗ್ ಸಹಿತ ಎಲ್ಲಾ ವಿಧದ ಪರೀಕ್ಷೆಗಳಿಗೆ ಅವರನ್ನು ಒಳಪಡಿಸಲಾಗಿತ್ತು. ಆ ‌ವೇಳೆ ವರದಿಗಳ ಆಧಾರದ ಮೇಲೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಕೆಎಸ್ ಹೆಗಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಜೊತೆಗೆ ಸಾಮಾನ್ಯ ಚಿಕಿತ್ಸೆ, ವಿಶ್ರಾಂತಿಗಾಗಿ ಒಂದು ದಿನ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಸೂಚಿಸಿದ್ದರು. ಆದರೆ ಮರು ದಿನ ಕಾಲು ವಿಪರೀತ ನೋವು ಇರುವುದಾಗಿ ನೌಶಾದ್ ತಿಳಿಸಿದಾಗ ಮತ್ತೊಂದು ದಿನ ಆಸ್ಪತ್ರೆಯಲ್ಲೇ ಇದ್ದು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗೆ ನೌಶಾದ್ ಅವರನ್ನು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಸಿಕೊಂಡು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು ನೀಡಿದ ತಪ್ಪಾದ ಚಿಕಿತ್ಸೆಯಿಂದಾಗಿ ನೌಷದ್‌ನ ಕಾಲು ನಿರ್ಜೀವಗೊಂಡಿತು. ಇಷ್ಟಾದ ಮೇಲೆ ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು 38 ಸಾವಿರ ರೂ. ಬಿಲ್ ಪಡೆದು, ಹೆಚ್ಚಿನ ಚಿಕಿತ್ಸೆ ಎಂದು ಹೇಳಿ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಅಲ್ಲಿ ನುರಿತ ವೈದ್ಯರು ಪರಿಶೀಲ‌‌ನೆ ನಡೆಸಿದ್ದು, ಕಾಲಿನ ಮೊಣಕಾಲಿನ ಬಳಿ ರಕ್ತನಾಳ ತುಂಡರಿಸಲ್ಪಟ್ಟಿರುವುದರಿಂದ ರಕ್ತ ಸಂಚಾರವಿಲ್ಲದೆ ಮೊಣಕಾಲಿನ ಕೆಳಗಡೆ ಕಾಲು ಗಂಭೀರವಾಗಿ ಘಾಸಿಗೊಂಡಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಅಪಘಾತ ನಡೆದ 24 ಗಂಟೆಯೊಳಗೆ ಸೂಕ್ತ ಚಿಕಿತ್ಸೆ ನೀಡಿದ್ದರೆ ಕಾಲುನೋವು ವಾಸಿಮಾಡಬಹುದಿತ್ತು. ಆದರೆ, ಮೂರು ದಿನ ಕಳೆದಿರುವುದರಿಂದ ಕಾಲು ಕತ್ತರಿಸಬೇಕಾದ ಅನಿವಾರ್ಯತೆಯ ಕುರಿತು ಫಾದರ್ ಮುಲ್ಲರ್ ‌ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಕಾಲು ಉಳಿಸುವ ಎಲ್ಲಾ ಪ್ರಯತ್ನಗಳು ವಿಫಲಗೊಂಡು ಕೊನೆಗೂ ನೌಶಾದ್‌ನ ಎಡಗಾಲನ್ನು ಕತ್ತರಿಸಿ ತೆಗೆಯಲಾಗಿದೆ. ಈ ಆಸ್ಪತ್ರೆಯಲ್ಲಿ 4 ಲಕ್ಷದ 50 ಸಾವಿರ ರೂ. ಬಿಲ್ ಮಾಡಲಾಯಿತು. ಈ ಎಲ್ಲ ಬಿಲ್‌ನ್ನು ನೌಷಾದ್ ಕುಟುಂಬವೇ ಭರಿಸಿದೆ.

ಇದನ್ನೂ ಓದಿ: ”ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!”: ಮೂಲಗಳ ಮಾಹಿತಿ

ಈ ನೌಷದ್ ಕುಟುಂಬದವರು ಸ್ಥಿತಿವಂತರೇನಲ್ಲ, ಅವರ ತಂದೆ ಆಟೋ ಚಾಲಕ, ಈಗ ಅವರ ದುಡಿಮೆಯಿಂದಲೇ ಕುಟುಂಬ ನಡೆಯಬೇಕು. ನೌಷದ್ ಕಾಲು ಕಳೆದುಕೊಂಡು ಮೂಲೆ ಸೇರಿದ್ದಾರೆ. ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅಪರಾಧದಿಂದ ಕಾಲು ಕಳೆದುಕೊಂಡ ನೌಷದ್ ಪರ ಧ್ವನಿ ಎತ್ತಲು ಯಾವುದೇ ರಾಜಕಾರಣಿಗಳು, ರಾಜಕೀಯ ಪಕ್ಷ, ಜನಪ್ರತಿನಿಧಿಗಳು ಮುಂದೆ ಬರದಿರುವುದು ಖೇದಕರ ಸಂಗತಿಯಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ನೌಷಾದ್ ಈಗ ಒಂದಿಷ್ಟು ಸಹಜವಾಗಿ ಓಡಾಡಬೇಕಾದರೆ ಅವರಿಗೆ ಒಳ್ಳೆಯ ಗುಣಮಟ್ಟದ ಕೃತಕ ಕಾಲು ಜೋಡಿಸಬೇಕು. ಅದಕ್ಕೆ ಕನಿಷ್ಟ 10 ಲಕ್ಷ ರೂಪಾಯಿ ಖರ್ಚಾಗುತ್ತದೆ. ಮನೆಯ ಸ್ಥಿತಿಗತಿಯೂ ಸರಿ ಇರದ ಕಾರಣ ನೌಷಾದ್ ಹಾಗೂ ಕುಟುಂಬದವರು ಜಿಲ್ಲೆಯ ದೊಡ್ಡ ಆಸ್ಪತ್ರೆಯ ವಿರುದ್ದ ಹೋರಾಟಕ್ಕಿಳಿಯಲೂ ಸಾಧ್ಯವಿಲ್ಲ ಎಂದು ಅವರು ಪರಿಹಾರಕ್ಕಾಗಿ ಅಂಗಲಾಚಿದರು. ಆ ಕ್ಷಣಕ್ಕೆ ಆಸ್ಪತ್ರೆಯವರು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಆದರೆ ಒಂದು ವರ್ಷ ಕಳೆದರೂ ಯಾವುದೇ ಪರಿಹಾರ ನೀಡದ ಹೆಗ್ಡೆ ಮೆಡಿಕಲ್ ಕಾಲೇಜು ಧಣಿಗಳು, ಅಲೆದಾಡಿಸಿ ಇದೀಗ ನಡು ಬೀದಿಯಲ್ಲಿ ಕೈ ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯು ನೌಷಾದ್ ಪರವಾಗಿ ನಿಂತಿದ್ದು, ”ಜನ ನಾಯಕರು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಬೆಂಬಲಕ್ಕೆ ಬರದಿದ್ದರೇನು.. ತುಳುನಾಡಿನ ಜನ ನೌಷಾದ್ ಪರ ಹೋರಾಟದಲ್ಲಿ ಜೊತೆ ನಿಲ್ಲುತ್ತಾರೆ. ಇದು ಕೇವಲ ನೌಷದ್ ಕುಟುಂಬದ ಹೋರಾಟವಲ್ಲ ಜಿಲ್ಲೆಯ ಜನರ ಹೋರಾಟವಾಗಿದೆ. ಸದ್ಯದಲ್ಲೇ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು” ಎಂದು ಹೇಳಿದೆ.

ಇದನ್ನೂ ಓದಿ: ‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...