Homeಕರ್ನಾಟಕಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

ಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

- Advertisement -
- Advertisement -

ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅವಿವೇಕತನಕ್ಕೆ ಯುವಕನೊಬ್ಬ ತನ್ನ ಎಡಗಾಲು ಕಳೆದುಕೊಂಡಿದ್ದಾರೆ ಎಂಬ ಆರೋಪ ಉಳ್ಳಾಲದಲ್ಲಿ ಕೇಳಿಬಂದಿದೆ. ಆಸ್ಪತ್ರೆಯ ಆಡಳಿತ ಮಂಡಳಿಯು ಪರಿಹಾರವನ್ನೂ ನೀಡದೆ ಯುವಕನ ಬದುಕಿನಲ್ಲಿ ಆಟವಾಡುತ್ತಿದೆ ಎಂದು ಡಿವೈಎಫ್‌ಐ ಆರೋಪಿಸಿದೆ.

ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ನೌಷಾದ್ ಎನ್ನುವ ಯುವಕ ದುಬೈನಲ್ಲಿ ಉದ್ಯೋಗದಲ್ಲಿದ್ದರು. 2021ರ‌ ನವೆಂಬರ್ ತಿಂಗಳಲ್ಲಿ ರಜೆಯಲ್ಲಿ ಊರಿಗೆ ಬಂದಿದ್ದ ನೌಶಾದ್‌ಗೆ ಸಣ್ಣದೊಂದು ಬೈಕ್ ಆಕ್ಸಿಡೆಂಟ್ ಆಗಿ ಕಾಲಿಗೆ ಪೆಟ್ಟಾಗಿತ್ತು.‌ ಈ ವೇಳೆ ಅವರು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್.ಹೆಗಡೆ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಿಂದಾಗಿ ಅವರ ಕಾಲಿನಲ್ಲಿ ಯಾವುದೇ ಗಾಯ, ಮೂಳೆ ಮುರಿತಗಳಿಲ್ಲದೆ ತೀವ್ರ ನೋವು ಮಾತ್ರ ಇದ್ದುದರಿಂದ ಸ್ಕ್ಯಾನಿಂಗ್ ಸಹಿತ ಎಲ್ಲಾ ವಿಧದ ಪರೀಕ್ಷೆಗಳಿಗೆ ಅವರನ್ನು ಒಳಪಡಿಸಲಾಗಿತ್ತು. ಆ ‌ವೇಳೆ ವರದಿಗಳ ಆಧಾರದ ಮೇಲೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಕೆಎಸ್ ಹೆಗಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಜೊತೆಗೆ ಸಾಮಾನ್ಯ ಚಿಕಿತ್ಸೆ, ವಿಶ್ರಾಂತಿಗಾಗಿ ಒಂದು ದಿನ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಸೂಚಿಸಿದ್ದರು. ಆದರೆ ಮರು ದಿನ ಕಾಲು ವಿಪರೀತ ನೋವು ಇರುವುದಾಗಿ ನೌಶಾದ್ ತಿಳಿಸಿದಾಗ ಮತ್ತೊಂದು ದಿನ ಆಸ್ಪತ್ರೆಯಲ್ಲೇ ಇದ್ದು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗೆ ನೌಶಾದ್ ಅವರನ್ನು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಸಿಕೊಂಡು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು ನೀಡಿದ ತಪ್ಪಾದ ಚಿಕಿತ್ಸೆಯಿಂದಾಗಿ ನೌಷದ್‌ನ ಕಾಲು ನಿರ್ಜೀವಗೊಂಡಿತು. ಇಷ್ಟಾದ ಮೇಲೆ ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು 38 ಸಾವಿರ ರೂ. ಬಿಲ್ ಪಡೆದು, ಹೆಚ್ಚಿನ ಚಿಕಿತ್ಸೆ ಎಂದು ಹೇಳಿ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಅಲ್ಲಿ ನುರಿತ ವೈದ್ಯರು ಪರಿಶೀಲ‌‌ನೆ ನಡೆಸಿದ್ದು, ಕಾಲಿನ ಮೊಣಕಾಲಿನ ಬಳಿ ರಕ್ತನಾಳ ತುಂಡರಿಸಲ್ಪಟ್ಟಿರುವುದರಿಂದ ರಕ್ತ ಸಂಚಾರವಿಲ್ಲದೆ ಮೊಣಕಾಲಿನ ಕೆಳಗಡೆ ಕಾಲು ಗಂಭೀರವಾಗಿ ಘಾಸಿಗೊಂಡಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಅಪಘಾತ ನಡೆದ 24 ಗಂಟೆಯೊಳಗೆ ಸೂಕ್ತ ಚಿಕಿತ್ಸೆ ನೀಡಿದ್ದರೆ ಕಾಲುನೋವು ವಾಸಿಮಾಡಬಹುದಿತ್ತು. ಆದರೆ, ಮೂರು ದಿನ ಕಳೆದಿರುವುದರಿಂದ ಕಾಲು ಕತ್ತರಿಸಬೇಕಾದ ಅನಿವಾರ್ಯತೆಯ ಕುರಿತು ಫಾದರ್ ಮುಲ್ಲರ್ ‌ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಕಾಲು ಉಳಿಸುವ ಎಲ್ಲಾ ಪ್ರಯತ್ನಗಳು ವಿಫಲಗೊಂಡು ಕೊನೆಗೂ ನೌಶಾದ್‌ನ ಎಡಗಾಲನ್ನು ಕತ್ತರಿಸಿ ತೆಗೆಯಲಾಗಿದೆ. ಈ ಆಸ್ಪತ್ರೆಯಲ್ಲಿ 4 ಲಕ್ಷದ 50 ಸಾವಿರ ರೂ. ಬಿಲ್ ಮಾಡಲಾಯಿತು. ಈ ಎಲ್ಲ ಬಿಲ್‌ನ್ನು ನೌಷಾದ್ ಕುಟುಂಬವೇ ಭರಿಸಿದೆ.

ಇದನ್ನೂ ಓದಿ: ”ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!”: ಮೂಲಗಳ ಮಾಹಿತಿ

ಈ ನೌಷದ್ ಕುಟುಂಬದವರು ಸ್ಥಿತಿವಂತರೇನಲ್ಲ, ಅವರ ತಂದೆ ಆಟೋ ಚಾಲಕ, ಈಗ ಅವರ ದುಡಿಮೆಯಿಂದಲೇ ಕುಟುಂಬ ನಡೆಯಬೇಕು. ನೌಷದ್ ಕಾಲು ಕಳೆದುಕೊಂಡು ಮೂಲೆ ಸೇರಿದ್ದಾರೆ. ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅಪರಾಧದಿಂದ ಕಾಲು ಕಳೆದುಕೊಂಡ ನೌಷದ್ ಪರ ಧ್ವನಿ ಎತ್ತಲು ಯಾವುದೇ ರಾಜಕಾರಣಿಗಳು, ರಾಜಕೀಯ ಪಕ್ಷ, ಜನಪ್ರತಿನಿಧಿಗಳು ಮುಂದೆ ಬರದಿರುವುದು ಖೇದಕರ ಸಂಗತಿಯಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ನೌಷಾದ್ ಈಗ ಒಂದಿಷ್ಟು ಸಹಜವಾಗಿ ಓಡಾಡಬೇಕಾದರೆ ಅವರಿಗೆ ಒಳ್ಳೆಯ ಗುಣಮಟ್ಟದ ಕೃತಕ ಕಾಲು ಜೋಡಿಸಬೇಕು. ಅದಕ್ಕೆ ಕನಿಷ್ಟ 10 ಲಕ್ಷ ರೂಪಾಯಿ ಖರ್ಚಾಗುತ್ತದೆ. ಮನೆಯ ಸ್ಥಿತಿಗತಿಯೂ ಸರಿ ಇರದ ಕಾರಣ ನೌಷಾದ್ ಹಾಗೂ ಕುಟುಂಬದವರು ಜಿಲ್ಲೆಯ ದೊಡ್ಡ ಆಸ್ಪತ್ರೆಯ ವಿರುದ್ದ ಹೋರಾಟಕ್ಕಿಳಿಯಲೂ ಸಾಧ್ಯವಿಲ್ಲ ಎಂದು ಅವರು ಪರಿಹಾರಕ್ಕಾಗಿ ಅಂಗಲಾಚಿದರು. ಆ ಕ್ಷಣಕ್ಕೆ ಆಸ್ಪತ್ರೆಯವರು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಆದರೆ ಒಂದು ವರ್ಷ ಕಳೆದರೂ ಯಾವುದೇ ಪರಿಹಾರ ನೀಡದ ಹೆಗ್ಡೆ ಮೆಡಿಕಲ್ ಕಾಲೇಜು ಧಣಿಗಳು, ಅಲೆದಾಡಿಸಿ ಇದೀಗ ನಡು ಬೀದಿಯಲ್ಲಿ ಕೈ ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯು ನೌಷಾದ್ ಪರವಾಗಿ ನಿಂತಿದ್ದು, ”ಜನ ನಾಯಕರು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಬೆಂಬಲಕ್ಕೆ ಬರದಿದ್ದರೇನು.. ತುಳುನಾಡಿನ ಜನ ನೌಷಾದ್ ಪರ ಹೋರಾಟದಲ್ಲಿ ಜೊತೆ ನಿಲ್ಲುತ್ತಾರೆ. ಇದು ಕೇವಲ ನೌಷದ್ ಕುಟುಂಬದ ಹೋರಾಟವಲ್ಲ ಜಿಲ್ಲೆಯ ಜನರ ಹೋರಾಟವಾಗಿದೆ. ಸದ್ಯದಲ್ಲೇ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು” ಎಂದು ಹೇಳಿದೆ.

ಇದನ್ನೂ ಓದಿ: ‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...