Homeಕರ್ನಾಟಕಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

ಮಂಗಳೂರು: ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಕಾಲು ಕಳೆದುಕೊಂಡ ಯುವಕ -ಡಿವೈಎಫ್‌ಐ ಆರೋಪ

- Advertisement -
- Advertisement -

ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅವಿವೇಕತನಕ್ಕೆ ಯುವಕನೊಬ್ಬ ತನ್ನ ಎಡಗಾಲು ಕಳೆದುಕೊಂಡಿದ್ದಾರೆ ಎಂಬ ಆರೋಪ ಉಳ್ಳಾಲದಲ್ಲಿ ಕೇಳಿಬಂದಿದೆ. ಆಸ್ಪತ್ರೆಯ ಆಡಳಿತ ಮಂಡಳಿಯು ಪರಿಹಾರವನ್ನೂ ನೀಡದೆ ಯುವಕನ ಬದುಕಿನಲ್ಲಿ ಆಟವಾಡುತ್ತಿದೆ ಎಂದು ಡಿವೈಎಫ್‌ಐ ಆರೋಪಿಸಿದೆ.

ಉಳ್ಳಾಲ ತಾಲೂಕು ಕುರ್ನಾಡು ಗ್ರಾಮದ ನೌಷಾದ್ ಎನ್ನುವ ಯುವಕ ದುಬೈನಲ್ಲಿ ಉದ್ಯೋಗದಲ್ಲಿದ್ದರು. 2021ರ‌ ನವೆಂಬರ್ ತಿಂಗಳಲ್ಲಿ ರಜೆಯಲ್ಲಿ ಊರಿಗೆ ಬಂದಿದ್ದ ನೌಶಾದ್‌ಗೆ ಸಣ್ಣದೊಂದು ಬೈಕ್ ಆಕ್ಸಿಡೆಂಟ್ ಆಗಿ ಕಾಲಿಗೆ ಪೆಟ್ಟಾಗಿತ್ತು.‌ ಈ ವೇಳೆ ಅವರು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಕೆ.ಎಸ್.ಹೆಗಡೆ ಆಸ್ಪತ್ರೆಗೆ ದಾಖಲಾಗಿದ್ದರು. ಅಪಘಾತದಿಂದಾಗಿ ಅವರ ಕಾಲಿನಲ್ಲಿ ಯಾವುದೇ ಗಾಯ, ಮೂಳೆ ಮುರಿತಗಳಿಲ್ಲದೆ ತೀವ್ರ ನೋವು ಮಾತ್ರ ಇದ್ದುದರಿಂದ ಸ್ಕ್ಯಾನಿಂಗ್ ಸಹಿತ ಎಲ್ಲಾ ವಿಧದ ಪರೀಕ್ಷೆಗಳಿಗೆ ಅವರನ್ನು ಒಳಪಡಿಸಲಾಗಿತ್ತು. ಆ ‌ವೇಳೆ ವರದಿಗಳ ಆಧಾರದ ಮೇಲೆ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಕೆಎಸ್ ಹೆಗಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು. ಜೊತೆಗೆ ಸಾಮಾನ್ಯ ಚಿಕಿತ್ಸೆ, ವಿಶ್ರಾಂತಿಗಾಗಿ ಒಂದು ದಿನ ಆಸ್ಪತ್ರೆಯಲ್ಲಿ ದಾಖಲಾಗುವಂತೆ ಸೂಚಿಸಿದ್ದರು. ಆದರೆ ಮರು ದಿನ ಕಾಲು ವಿಪರೀತ ನೋವು ಇರುವುದಾಗಿ ನೌಶಾದ್ ತಿಳಿಸಿದಾಗ ಮತ್ತೊಂದು ದಿನ ಆಸ್ಪತ್ರೆಯಲ್ಲೇ ಇದ್ದು ವಿಶ್ರಾಂತಿ ಪಡೆಯಲು ವೈದ್ಯರು ಸೂಚಿಸಿದ್ದಾರೆ. ಹೀಗೆ ನೌಶಾದ್ ಅವರನ್ನು ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಉಳಿಸಿಕೊಂಡು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು ನೀಡಿದ ತಪ್ಪಾದ ಚಿಕಿತ್ಸೆಯಿಂದಾಗಿ ನೌಷದ್‌ನ ಕಾಲು ನಿರ್ಜೀವಗೊಂಡಿತು. ಇಷ್ಟಾದ ಮೇಲೆ ಕೆಎಸ್ ಹೆಗ್ಡೆ ಆಸ್ಪತ್ರೆ ವೈದ್ಯರು 38 ಸಾವಿರ ರೂ. ಬಿಲ್ ಪಡೆದು, ಹೆಚ್ಚಿನ ಚಿಕಿತ್ಸೆ ಎಂದು ಹೇಳಿ ಮಂಗಳೂರಿನ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಅಲ್ಲಿ ನುರಿತ ವೈದ್ಯರು ಪರಿಶೀಲ‌‌ನೆ ನಡೆಸಿದ್ದು, ಕಾಲಿನ ಮೊಣಕಾಲಿನ ಬಳಿ ರಕ್ತನಾಳ ತುಂಡರಿಸಲ್ಪಟ್ಟಿರುವುದರಿಂದ ರಕ್ತ ಸಂಚಾರವಿಲ್ಲದೆ ಮೊಣಕಾಲಿನ ಕೆಳಗಡೆ ಕಾಲು ಗಂಭೀರವಾಗಿ ಘಾಸಿಗೊಂಡಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ.

ಅಪಘಾತ ನಡೆದ 24 ಗಂಟೆಯೊಳಗೆ ಸೂಕ್ತ ಚಿಕಿತ್ಸೆ ನೀಡಿದ್ದರೆ ಕಾಲುನೋವು ವಾಸಿಮಾಡಬಹುದಿತ್ತು. ಆದರೆ, ಮೂರು ದಿನ ಕಳೆದಿರುವುದರಿಂದ ಕಾಲು ಕತ್ತರಿಸಬೇಕಾದ ಅನಿವಾರ್ಯತೆಯ ಕುರಿತು ಫಾದರ್ ಮುಲ್ಲರ್ ‌ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಕಾಲು ಉಳಿಸುವ ಎಲ್ಲಾ ಪ್ರಯತ್ನಗಳು ವಿಫಲಗೊಂಡು ಕೊನೆಗೂ ನೌಶಾದ್‌ನ ಎಡಗಾಲನ್ನು ಕತ್ತರಿಸಿ ತೆಗೆಯಲಾಗಿದೆ. ಈ ಆಸ್ಪತ್ರೆಯಲ್ಲಿ 4 ಲಕ್ಷದ 50 ಸಾವಿರ ರೂ. ಬಿಲ್ ಮಾಡಲಾಯಿತು. ಈ ಎಲ್ಲ ಬಿಲ್‌ನ್ನು ನೌಷಾದ್ ಕುಟುಂಬವೇ ಭರಿಸಿದೆ.

ಇದನ್ನೂ ಓದಿ: ”ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!”: ಮೂಲಗಳ ಮಾಹಿತಿ

ಈ ನೌಷದ್ ಕುಟುಂಬದವರು ಸ್ಥಿತಿವಂತರೇನಲ್ಲ, ಅವರ ತಂದೆ ಆಟೋ ಚಾಲಕ, ಈಗ ಅವರ ದುಡಿಮೆಯಿಂದಲೇ ಕುಟುಂಬ ನಡೆಯಬೇಕು. ನೌಷದ್ ಕಾಲು ಕಳೆದುಕೊಂಡು ಮೂಲೆ ಸೇರಿದ್ದಾರೆ. ಕೆಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರ ಅಪರಾಧದಿಂದ ಕಾಲು ಕಳೆದುಕೊಂಡ ನೌಷದ್ ಪರ ಧ್ವನಿ ಎತ್ತಲು ಯಾವುದೇ ರಾಜಕಾರಣಿಗಳು, ರಾಜಕೀಯ ಪಕ್ಷ, ಜನಪ್ರತಿನಿಧಿಗಳು ಮುಂದೆ ಬರದಿರುವುದು ಖೇದಕರ ಸಂಗತಿಯಾಗಿದೆ ಎಂದು ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ನೌಷಾದ್ ಈಗ ಒಂದಿಷ್ಟು ಸಹಜವಾಗಿ ಓಡಾಡಬೇಕಾದರೆ ಅವರಿಗೆ ಒಳ್ಳೆಯ ಗುಣಮಟ್ಟದ ಕೃತಕ ಕಾಲು ಜೋಡಿಸಬೇಕು. ಅದಕ್ಕೆ ಕನಿಷ್ಟ 10 ಲಕ್ಷ ರೂಪಾಯಿ ಖರ್ಚಾಗುತ್ತದೆ. ಮನೆಯ ಸ್ಥಿತಿಗತಿಯೂ ಸರಿ ಇರದ ಕಾರಣ ನೌಷಾದ್ ಹಾಗೂ ಕುಟುಂಬದವರು ಜಿಲ್ಲೆಯ ದೊಡ್ಡ ಆಸ್ಪತ್ರೆಯ ವಿರುದ್ದ ಹೋರಾಟಕ್ಕಿಳಿಯಲೂ ಸಾಧ್ಯವಿಲ್ಲ ಎಂದು ಅವರು ಪರಿಹಾರಕ್ಕಾಗಿ ಅಂಗಲಾಚಿದರು. ಆ ಕ್ಷಣಕ್ಕೆ ಆಸ್ಪತ್ರೆಯವರು ಪರಿಹಾರ ನೀಡುವುದಾಗಿ ಭರವಸೆ ನೀಡಿದರು. ಆದರೆ ಒಂದು ವರ್ಷ ಕಳೆದರೂ ಯಾವುದೇ ಪರಿಹಾರ ನೀಡದ ಹೆಗ್ಡೆ ಮೆಡಿಕಲ್ ಕಾಲೇಜು ಧಣಿಗಳು, ಅಲೆದಾಡಿಸಿ ಇದೀಗ ನಡು ಬೀದಿಯಲ್ಲಿ ಕೈ ಬಿಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೀಗ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯು ನೌಷಾದ್ ಪರವಾಗಿ ನಿಂತಿದ್ದು, ”ಜನ ನಾಯಕರು, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಬೆಂಬಲಕ್ಕೆ ಬರದಿದ್ದರೇನು.. ತುಳುನಾಡಿನ ಜನ ನೌಷಾದ್ ಪರ ಹೋರಾಟದಲ್ಲಿ ಜೊತೆ ನಿಲ್ಲುತ್ತಾರೆ. ಇದು ಕೇವಲ ನೌಷದ್ ಕುಟುಂಬದ ಹೋರಾಟವಲ್ಲ ಜಿಲ್ಲೆಯ ಜನರ ಹೋರಾಟವಾಗಿದೆ. ಸದ್ಯದಲ್ಲೇ ಹೋರಾಟದ ರೂಪುರೇಷೆ ಪ್ರಕಟಿಸಲಾಗುವುದು” ಎಂದು ಹೇಳಿದೆ.

ಇದನ್ನೂ ಓದಿ: ‘ಅನರ್ಹಗೊಳ್ಳಬೇಕಿದ್ದ ವಿವಾದಾತ್ಮಕ ಅಂಬೇಡ್ಕರ್ ಸ್ಕಿಟ್ ಮೊದಲ ಸ್ಥಾನ ಪಡೆದಿದೆ!’: ಮೂಲಗಳ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....