Homeಚಳವಳಿಉಳ್ಳೇರಹಳ್ಳಿ ಚಲೋ ಹೋರಾಟ ಯಶಸ್ವಿ: ಅದೇ ಗುಜ್ಜಕೋಲು ಕಟ್ಟಿ ಪ್ರತಿಭಟನೆ

ಉಳ್ಳೇರಹಳ್ಳಿ ಚಲೋ ಹೋರಾಟ ಯಶಸ್ವಿ: ಅದೇ ಗುಜ್ಜಕೋಲು ಕಟ್ಟಿ ಪ್ರತಿಭಟನೆ

ದೇವಾಲಯ ಪ್ರವೇಶಕ್ಕಾಗಿ ಅಲ್ಲ, ಬದಲಿಗೆ ಘನತೆ ಮತ್ತು ಸ್ವಾಭಿಮಾನಕ್ಕಾಗಿ ನಮ್ಮ ನಡಿಗೆ ಎಂಬ ಘೋಷಣೆಯೊಂದಿಗೆ ನಡೆದ ಹೋರಾಟದಲ್ಲಿ ಜೈಭೀಮ್ ಘೋಷಣೆಗಳು ಮುಗಿಲು ಮುಟ್ಟಿದ್ದವು. 

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿನ ಅಸ್ಪೃಶ್ಯತೆ ಆಚರಣೆ ಖಂಡಿಸಿ ನಡೆದ ಬೃಹತ್ ‘ಉಳ್ಳೇರಹಳ್ಳಿ ಚಲೋ’ ಹೋರಾಟ ಯಶಸ್ವಿಯಾಯಿತು. ಯಾವ ಗುಜ್ಜಕೋಲು ಮುಟ್ಟಿದ್ದಕ್ಕಾಗಿ ದಂಡ ವಿಧಿಸಲಾಗಿತ್ತೊ ಅದೇ ಗುಜ್ಜಕೋಲನ್ನು ತಂದು ದೇವಾಲಯದ ಧ್ವಜಕ್ಕೆ ಕಟ್ಟುವ ಮೂಲಕ ಪ್ರತಿರೋಧ ದಾಖಲಿಸಲಾಗಿದೆ.

ದೇವಾಲಯ ಪ್ರವೇಶಕ್ಕಾಗಿ ಅಲ್ಲ, ಬದಲಿಗೆ ಘನತೆ ಮತ್ತು ಸ್ವಾಭಿಮಾನಕ್ಕಾಗಿ ನಮ್ಮ ನಡಿಗೆ ಎಂಬ ಘೋಷಣೆಯೊಂದಿಗೆ ನಡೆದ ಹೋರಾಟದಲ್ಲಿ ಜೈಭೀಮ್ ಘೋಷಣೆಗಳು ಮುಗಿಲು ಮುಟ್ಟಿದ್ದವು.

ಜಿಲ್ಲೆಯ 5 ಸಾವಿರಕ್ಕೂ ಹೆಚ್ಚು ದಲಿತ ಹೋರಾಟಗಾರರು ಸೇರಿ ಟೇಕಲ್ ರೈಲು ನಿಲ್ದಾಣದಿಂದ ಮೆರವಣಿಗೆ ಆರಂಭಿಸಿ ಉಳ್ಳೇರಹಳ್ಳಿಯ ಸಂತ್ರಸ್ತ ದಲಿತ ಕುಟುಂಬವನ್ನು ಭೇಟಿ ಮಾಡಲಾಯಿತು. ದಾರಿಯುದ್ದಕ್ಕೂ ಜೈ ಭೀಮ್ ಘೋಷಣೆ ಮೊಳಗಿಸಿದ ಕಾರ್ಯಕರ್ತರು ಜಾತಿಪದ್ದತಿ, ಆಸ್ಪೃಶ್ಯತೆ ವಿರುದ್ಧ ಕಿಡಿಕಾರಿದರು. ಆನಂತರ ಭೂತಮ್ಮನ ದೇವಾಲಯ ಎದುರು ಜಮಾವಣೆಗೊಂಡ ಹೋರಾಟಗಾರರು ಘೋಷಣೆ ಮೊಳಗಿಸಿ ಮುತ್ತಿಗೆ ಹಾಕಿದರು.

ಆನಂತರ ದೇವಾಲಯ ಪ್ರವೇಶಿಸಿದ ದಲಿತ ಮುಖಂಡರು ಗುಜ್ಜಕೋಲು ತಂದು ದೇವಾಲಯದ ಧ್ವಜಕ್ಕೆ ಕಟ್ಟಲಾಯಿತು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು.

ಇಂದಿಗೂ ಜಾರಿಯಲ್ಲಿರುವ ಅಸ್ಫೃಶ್ಯತೆ ಮತ್ತು ಜಾತಿಪದ್ದತಿಯನ್ನು ತೊಡೆದುಹಾಕಲು ದೀರ್ಘ ಹೋರಾಟ ಮಾಡಬೇಕಿದೆ. ಅದರೊಟ್ಟಿಗೆ ದಲಿತರೊಳಗೆ ಇರುವ ಜಾತಿಪದ್ದತಿಯನ್ನು ಸಹ ತೊಡೆದುಹಾಕಬೇಕು. ಎಲ್ಲಿಯೇ ಜಾತಿ ದೌರ್ಜನ್ಯ ಅನ್ಯಾಯ ನಡೆದರೂ ಸಹ ದಲಿತರು ಒಗ್ಗಟ್ಟಾಗಿ ಹೋರಾಡಬೇಕು ಎಂದು ಹೋರಾಟಗಾರರು ಕರೆ ನೀಡಿದರು.

ಎಲ್ಲಾ ದೇವಾಲಯಗಳಲ್ಲಿ ಎಲ್ಲಾ ಸಮುದಾಯದ ಜನರಿಗೂ ಪ್ರವೇಶವಿದೆ ಎಂಬು ಬೋರ್ಡ್ ಹಾಕುವುದನ್ನು ಕಡ್ಡಾಯ ಮಾಡಬೇಕು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಸ್ಪೃಶ್ಯತೆಯ ವಿರುದ್ಧ ಅರಿವು ನೀಡುವ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಪ್ರಜಾಪರಿವರ್ತನ ವೇದಿಕೆ, ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸೇವಾ ಸಮಿತಿ, ದಲಿತ ಹಕ್ಕುಗಳ ಸಮಿತಿ ಸೇರಿದಂತೆ ಹತ್ತಾರು ಸಂಘಟನೆಗಳು ಜೊತೆಗೂಡಿದ್ದವು. ಪಿಚ್ಚಳ್ಳಿ ಶ್ರೀನಿವಾಸ್, ವಿಜಯ್ ಕುಮಾರ್, ಬಿ.ಗೋಪಾಲ್, ಸಂದೇಶ್, ನಾರಾಯಣಸ್ವಾಮಿ, ಡಾ.ಅರಿವು ಶಿವಪ್ಪ, ಆಂಜಿನಪ್ಪ, ಎ.ಕೆ ವೆಂಕಟೇಶ್, ಹೆಬ್ಬಾಲೆ ವೆಂಕಟೇಶ್, ಮುನಿಕೃಷ್ಣಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ; ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಭಾವಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...