Homeಚಳವಳಿಉಳ್ಳೇರಹಳ್ಳಿ ಚಲೋ ಹೋರಾಟ ಯಶಸ್ವಿ: ಅದೇ ಗುಜ್ಜಕೋಲು ಕಟ್ಟಿ ಪ್ರತಿಭಟನೆ

ಉಳ್ಳೇರಹಳ್ಳಿ ಚಲೋ ಹೋರಾಟ ಯಶಸ್ವಿ: ಅದೇ ಗುಜ್ಜಕೋಲು ಕಟ್ಟಿ ಪ್ರತಿಭಟನೆ

ದೇವಾಲಯ ಪ್ರವೇಶಕ್ಕಾಗಿ ಅಲ್ಲ, ಬದಲಿಗೆ ಘನತೆ ಮತ್ತು ಸ್ವಾಭಿಮಾನಕ್ಕಾಗಿ ನಮ್ಮ ನಡಿಗೆ ಎಂಬ ಘೋಷಣೆಯೊಂದಿಗೆ ನಡೆದ ಹೋರಾಟದಲ್ಲಿ ಜೈಭೀಮ್ ಘೋಷಣೆಗಳು ಮುಗಿಲು ಮುಟ್ಟಿದ್ದವು. 

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿನ ಅಸ್ಪೃಶ್ಯತೆ ಆಚರಣೆ ಖಂಡಿಸಿ ನಡೆದ ಬೃಹತ್ ‘ಉಳ್ಳೇರಹಳ್ಳಿ ಚಲೋ’ ಹೋರಾಟ ಯಶಸ್ವಿಯಾಯಿತು. ಯಾವ ಗುಜ್ಜಕೋಲು ಮುಟ್ಟಿದ್ದಕ್ಕಾಗಿ ದಂಡ ವಿಧಿಸಲಾಗಿತ್ತೊ ಅದೇ ಗುಜ್ಜಕೋಲನ್ನು ತಂದು ದೇವಾಲಯದ ಧ್ವಜಕ್ಕೆ ಕಟ್ಟುವ ಮೂಲಕ ಪ್ರತಿರೋಧ ದಾಖಲಿಸಲಾಗಿದೆ.

ದೇವಾಲಯ ಪ್ರವೇಶಕ್ಕಾಗಿ ಅಲ್ಲ, ಬದಲಿಗೆ ಘನತೆ ಮತ್ತು ಸ್ವಾಭಿಮಾನಕ್ಕಾಗಿ ನಮ್ಮ ನಡಿಗೆ ಎಂಬ ಘೋಷಣೆಯೊಂದಿಗೆ ನಡೆದ ಹೋರಾಟದಲ್ಲಿ ಜೈಭೀಮ್ ಘೋಷಣೆಗಳು ಮುಗಿಲು ಮುಟ್ಟಿದ್ದವು.

ಜಿಲ್ಲೆಯ 5 ಸಾವಿರಕ್ಕೂ ಹೆಚ್ಚು ದಲಿತ ಹೋರಾಟಗಾರರು ಸೇರಿ ಟೇಕಲ್ ರೈಲು ನಿಲ್ದಾಣದಿಂದ ಮೆರವಣಿಗೆ ಆರಂಭಿಸಿ ಉಳ್ಳೇರಹಳ್ಳಿಯ ಸಂತ್ರಸ್ತ ದಲಿತ ಕುಟುಂಬವನ್ನು ಭೇಟಿ ಮಾಡಲಾಯಿತು. ದಾರಿಯುದ್ದಕ್ಕೂ ಜೈ ಭೀಮ್ ಘೋಷಣೆ ಮೊಳಗಿಸಿದ ಕಾರ್ಯಕರ್ತರು ಜಾತಿಪದ್ದತಿ, ಆಸ್ಪೃಶ್ಯತೆ ವಿರುದ್ಧ ಕಿಡಿಕಾರಿದರು. ಆನಂತರ ಭೂತಮ್ಮನ ದೇವಾಲಯ ಎದುರು ಜಮಾವಣೆಗೊಂಡ ಹೋರಾಟಗಾರರು ಘೋಷಣೆ ಮೊಳಗಿಸಿ ಮುತ್ತಿಗೆ ಹಾಕಿದರು.

ಆನಂತರ ದೇವಾಲಯ ಪ್ರವೇಶಿಸಿದ ದಲಿತ ಮುಖಂಡರು ಗುಜ್ಜಕೋಲು ತಂದು ದೇವಾಲಯದ ಧ್ವಜಕ್ಕೆ ಕಟ್ಟಲಾಯಿತು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು.

ಇಂದಿಗೂ ಜಾರಿಯಲ್ಲಿರುವ ಅಸ್ಫೃಶ್ಯತೆ ಮತ್ತು ಜಾತಿಪದ್ದತಿಯನ್ನು ತೊಡೆದುಹಾಕಲು ದೀರ್ಘ ಹೋರಾಟ ಮಾಡಬೇಕಿದೆ. ಅದರೊಟ್ಟಿಗೆ ದಲಿತರೊಳಗೆ ಇರುವ ಜಾತಿಪದ್ದತಿಯನ್ನು ಸಹ ತೊಡೆದುಹಾಕಬೇಕು. ಎಲ್ಲಿಯೇ ಜಾತಿ ದೌರ್ಜನ್ಯ ಅನ್ಯಾಯ ನಡೆದರೂ ಸಹ ದಲಿತರು ಒಗ್ಗಟ್ಟಾಗಿ ಹೋರಾಡಬೇಕು ಎಂದು ಹೋರಾಟಗಾರರು ಕರೆ ನೀಡಿದರು.

ಎಲ್ಲಾ ದೇವಾಲಯಗಳಲ್ಲಿ ಎಲ್ಲಾ ಸಮುದಾಯದ ಜನರಿಗೂ ಪ್ರವೇಶವಿದೆ ಎಂಬು ಬೋರ್ಡ್ ಹಾಕುವುದನ್ನು ಕಡ್ಡಾಯ ಮಾಡಬೇಕು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಸ್ಪೃಶ್ಯತೆಯ ವಿರುದ್ಧ ಅರಿವು ನೀಡುವ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಪ್ರಜಾಪರಿವರ್ತನ ವೇದಿಕೆ, ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸೇವಾ ಸಮಿತಿ, ದಲಿತ ಹಕ್ಕುಗಳ ಸಮಿತಿ ಸೇರಿದಂತೆ ಹತ್ತಾರು ಸಂಘಟನೆಗಳು ಜೊತೆಗೂಡಿದ್ದವು. ಪಿಚ್ಚಳ್ಳಿ ಶ್ರೀನಿವಾಸ್, ವಿಜಯ್ ಕುಮಾರ್, ಬಿ.ಗೋಪಾಲ್, ಸಂದೇಶ್, ನಾರಾಯಣಸ್ವಾಮಿ, ಡಾ.ಅರಿವು ಶಿವಪ್ಪ, ಆಂಜಿನಪ್ಪ, ಎ.ಕೆ ವೆಂಕಟೇಶ್, ಹೆಬ್ಬಾಲೆ ವೆಂಕಟೇಶ್, ಮುನಿಕೃಷ್ಣಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ; ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಭಾವಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...