Homeಚಳವಳಿಉಳ್ಳೇರಹಳ್ಳಿ ಚಲೋ ಹೋರಾಟ ಯಶಸ್ವಿ: ಅದೇ ಗುಜ್ಜಕೋಲು ಕಟ್ಟಿ ಪ್ರತಿಭಟನೆ

ಉಳ್ಳೇರಹಳ್ಳಿ ಚಲೋ ಹೋರಾಟ ಯಶಸ್ವಿ: ಅದೇ ಗುಜ್ಜಕೋಲು ಕಟ್ಟಿ ಪ್ರತಿಭಟನೆ

ದೇವಾಲಯ ಪ್ರವೇಶಕ್ಕಾಗಿ ಅಲ್ಲ, ಬದಲಿಗೆ ಘನತೆ ಮತ್ತು ಸ್ವಾಭಿಮಾನಕ್ಕಾಗಿ ನಮ್ಮ ನಡಿಗೆ ಎಂಬ ಘೋಷಣೆಯೊಂದಿಗೆ ನಡೆದ ಹೋರಾಟದಲ್ಲಿ ಜೈಭೀಮ್ ಘೋಷಣೆಗಳು ಮುಗಿಲು ಮುಟ್ಟಿದ್ದವು. 

- Advertisement -
- Advertisement -

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಉಳ್ಳೇರಹಳ್ಳಿಯಲ್ಲಿನ ಅಸ್ಪೃಶ್ಯತೆ ಆಚರಣೆ ಖಂಡಿಸಿ ನಡೆದ ಬೃಹತ್ ‘ಉಳ್ಳೇರಹಳ್ಳಿ ಚಲೋ’ ಹೋರಾಟ ಯಶಸ್ವಿಯಾಯಿತು. ಯಾವ ಗುಜ್ಜಕೋಲು ಮುಟ್ಟಿದ್ದಕ್ಕಾಗಿ ದಂಡ ವಿಧಿಸಲಾಗಿತ್ತೊ ಅದೇ ಗುಜ್ಜಕೋಲನ್ನು ತಂದು ದೇವಾಲಯದ ಧ್ವಜಕ್ಕೆ ಕಟ್ಟುವ ಮೂಲಕ ಪ್ರತಿರೋಧ ದಾಖಲಿಸಲಾಗಿದೆ.

ದೇವಾಲಯ ಪ್ರವೇಶಕ್ಕಾಗಿ ಅಲ್ಲ, ಬದಲಿಗೆ ಘನತೆ ಮತ್ತು ಸ್ವಾಭಿಮಾನಕ್ಕಾಗಿ ನಮ್ಮ ನಡಿಗೆ ಎಂಬ ಘೋಷಣೆಯೊಂದಿಗೆ ನಡೆದ ಹೋರಾಟದಲ್ಲಿ ಜೈಭೀಮ್ ಘೋಷಣೆಗಳು ಮುಗಿಲು ಮುಟ್ಟಿದ್ದವು.

ಜಿಲ್ಲೆಯ 5 ಸಾವಿರಕ್ಕೂ ಹೆಚ್ಚು ದಲಿತ ಹೋರಾಟಗಾರರು ಸೇರಿ ಟೇಕಲ್ ರೈಲು ನಿಲ್ದಾಣದಿಂದ ಮೆರವಣಿಗೆ ಆರಂಭಿಸಿ ಉಳ್ಳೇರಹಳ್ಳಿಯ ಸಂತ್ರಸ್ತ ದಲಿತ ಕುಟುಂಬವನ್ನು ಭೇಟಿ ಮಾಡಲಾಯಿತು. ದಾರಿಯುದ್ದಕ್ಕೂ ಜೈ ಭೀಮ್ ಘೋಷಣೆ ಮೊಳಗಿಸಿದ ಕಾರ್ಯಕರ್ತರು ಜಾತಿಪದ್ದತಿ, ಆಸ್ಪೃಶ್ಯತೆ ವಿರುದ್ಧ ಕಿಡಿಕಾರಿದರು. ಆನಂತರ ಭೂತಮ್ಮನ ದೇವಾಲಯ ಎದುರು ಜಮಾವಣೆಗೊಂಡ ಹೋರಾಟಗಾರರು ಘೋಷಣೆ ಮೊಳಗಿಸಿ ಮುತ್ತಿಗೆ ಹಾಕಿದರು.

ಆನಂತರ ದೇವಾಲಯ ಪ್ರವೇಶಿಸಿದ ದಲಿತ ಮುಖಂಡರು ಗುಜ್ಜಕೋಲು ತಂದು ದೇವಾಲಯದ ಧ್ವಜಕ್ಕೆ ಕಟ್ಟಲಾಯಿತು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದು ಬಿಗುವಿನ ವಾತವಾರಣ ನಿರ್ಮಾಣವಾಗಿತ್ತು.

ಇಂದಿಗೂ ಜಾರಿಯಲ್ಲಿರುವ ಅಸ್ಫೃಶ್ಯತೆ ಮತ್ತು ಜಾತಿಪದ್ದತಿಯನ್ನು ತೊಡೆದುಹಾಕಲು ದೀರ್ಘ ಹೋರಾಟ ಮಾಡಬೇಕಿದೆ. ಅದರೊಟ್ಟಿಗೆ ದಲಿತರೊಳಗೆ ಇರುವ ಜಾತಿಪದ್ದತಿಯನ್ನು ಸಹ ತೊಡೆದುಹಾಕಬೇಕು. ಎಲ್ಲಿಯೇ ಜಾತಿ ದೌರ್ಜನ್ಯ ಅನ್ಯಾಯ ನಡೆದರೂ ಸಹ ದಲಿತರು ಒಗ್ಗಟ್ಟಾಗಿ ಹೋರಾಡಬೇಕು ಎಂದು ಹೋರಾಟಗಾರರು ಕರೆ ನೀಡಿದರು.

ಎಲ್ಲಾ ದೇವಾಲಯಗಳಲ್ಲಿ ಎಲ್ಲಾ ಸಮುದಾಯದ ಜನರಿಗೂ ಪ್ರವೇಶವಿದೆ ಎಂಬು ಬೋರ್ಡ್ ಹಾಕುವುದನ್ನು ಕಡ್ಡಾಯ ಮಾಡಬೇಕು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅಸ್ಪೃಶ್ಯತೆಯ ವಿರುದ್ಧ ಅರಿವು ನೀಡುವ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಪ್ರಜಾಪರಿವರ್ತನ ವೇದಿಕೆ, ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ಸೇವಾ ಸಮಿತಿ, ದಲಿತ ಹಕ್ಕುಗಳ ಸಮಿತಿ ಸೇರಿದಂತೆ ಹತ್ತಾರು ಸಂಘಟನೆಗಳು ಜೊತೆಗೂಡಿದ್ದವು. ಪಿಚ್ಚಳ್ಳಿ ಶ್ರೀನಿವಾಸ್, ವಿಜಯ್ ಕುಮಾರ್, ಬಿ.ಗೋಪಾಲ್, ಸಂದೇಶ್, ನಾರಾಯಣಸ್ವಾಮಿ, ಡಾ.ಅರಿವು ಶಿವಪ್ಪ, ಆಂಜಿನಪ್ಪ, ಎ.ಕೆ ವೆಂಕಟೇಶ್, ಹೆಬ್ಬಾಲೆ ವೆಂಕಟೇಶ್, ಮುನಿಕೃಷ್ಣಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನೂ ಓದಿ; ದಲಿತ ಬಾಲಕ ದೇವರು ಮುಟ್ಟಿದ ಪ್ರಕರಣ: ಮನೆಯಲ್ಲಿ ದೇವರ ಫೋಟೋ ಇದ್ದ ಜಾಗದಲ್ಲಿ ಈಗ ಅಂಬೇಡ್ಕರ್‌ ಭಾವಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....