Homeಅಂಕಣಗಳುಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

ಟ್ರಾನ್ಸ್‌ಜೆಂಡರ್ ಸಮುದಾಯದ ಅರಿವಿನ ಲೋಕ ವಿಸ್ತರಿಸುತ್ತಿರುವ ಉಮಾ

- Advertisement -
- Advertisement -

ಎಲೆಮರೆ – 16

ಇದೀಗ ಟ್ರಾನ್ಸ್‌ಜೆಂಡರ್ ಸಮುದಾಯ ಹಲವು ಕ್ಷೇತ್ರಗಳಲ್ಲಿ ತನ್ನ ಹೆಜ್ಜೆ ಗುರುತುಗಳನ್ನು ಮೂಡಿಸುತ್ತಿದೆ. ಈ ಸಮುದಾಯಕ್ಕೆ ಶಾಪವಾಗಿದ್ದ ಕಾಯ್ದೆ ಕಾನೂನುಗಳ ವಿರುದ್ಧ ಹೋರಾಟಕ್ಕೆ ಗೆಲುವು ಸಿಗುತ್ತಿದೆ. ಇಂತಹ ಹೋರಾಟ ಚಳವಳಿಯಲ್ಲಿ ಟ್ರಾನ್ಸ್‌ಜೆಂಡರ್ ಕಮುನಿಟಿಯ ಅನೇಕರು ಶ್ರಮಿಸುತ್ತಿದ್ದಾರೆ. ಆರಂಭದಿಂದಲೂ ಕರ್ನಾಟಕದಲ್ಲಿ ಸಂಗಮ ಸಂಸ್ಥೆಯ ಮನೋಹರ್ ಇಂತಹ ವಾತಾವರಣ ರೂಪಿಸುತ್ತಿದ್ದಾರೆ. ಈ ಸಂಸ್ಥೆಯಲ್ಲಿ ಕೆಲಸ ಮಾಡಿ ಜಾಗೃತರಾದ ಟ್ರಾನ್ಸ್‍ಜೆಂಡರ್ ಸಮುದಾಯದ ಸದಸ್ಯರು ಇದೀಗ ಸ್ವತಂತ್ರವಾದ ಸಂಘಟನೆಗಳೊಂದಿಗೆ ಸಮುದಾಯಕ್ಕಾಗಿ ದುಡಿಯುತ್ತಿದ್ದಾರೆ.

ಇಂಥವರಲ್ಲಿ ಎದ್ದು ಕಾಣುವ ಹೆಸರು ಅಕ್ಕೈ ಪದ್ಮಶಾಲಿ, ಚಾಂದಿನಿ, ಮಲ್ಲಪ್ಪ ಮುಂತಾದವರನ್ನು ಒಳಗೊಂಡಂತೆ ಸಮರ, ಪಯಣ, ಒಂದೆಡೆ, ಕರ್ನಾಟಕ ಸೆಕ್ಷುವಲ್ ಮೈನಾರಿಟೀಸ್ ಫೋರಂ (ಕೆ.ಎಸ್.ಎಮ್.ಎಫ್) ಮುಂತಾದ ಸಂಘಟನೆಗಳನ್ನು ಹೆಸರಿಸಬಹುದು. ಈ ಸಂಘಟನೆಗಳ ಜತೆ ಜತೆ ಎಲೆಮರೆಯಂತೆ ಕೆಲಸ ಮಾಡುವ ಉಮಾ ಜನರಿಗೆ ಅಷ್ಟಾಗಿ ಗೊತ್ತಿಲ್ಲ. ಟ್ರಾನ್ಸ್ ಜೆಂಡರ್ ಕಮುನಿಟಿಯ ಹಕ್ಕೊತ್ತಾಯ ಮತ್ತು ಅವರ ಅಭಿವೃದ್ಧಿಯ ಬಗ್ಗೆ ದೂರದೃಷ್ಠಿಯ ವಿಷನ್ ಹೊಂದಿದ ಉಮಾ ಸಮುದಾಯದ ಜೊತೆಗಿದ್ದೂ, ತನ್ನದೇ ಆದ ಗುರುತು ಕಾಯ್ದುಕೊಂಡಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ಸಮೀಪದ ದೇವಿಪಾಳ್ಯ ಎಂಬ ಚಿಕ್ಕ ಹಳ್ಳಿ. ಈ ಹಳ್ಳಿಯಲ್ಲಿ ಇದ್ದ ಸ್ವಲ್ಪ ಜಮೀನಿನಲ್ಲಿ ವ್ಯವಸಾಯ ಮಾಡುತ್ತಿದ್ದ ಪುಟ್ಟ ಕುಟುಂಬ. ಈ ಕುಟುಂಬದಲ್ಲಿ ಮೂರು ಗಂಡು ಮಕ್ಕಳು. ಉಮೇಶ್ ಮೂರನೆಯವ. ತಾಯಿ ಬಾಲ್ಯದಲ್ಲಿ ಉದ್ದನೆ ಕೂದಲಿದ್ದ ಉಮೇಶನಿಗೆ ಜಡೆ ಹಾಕಿ ಹೂಮುಡಿಸಿ ಶಾಲೆಗೆ ಕಳಿಸುತ್ತಿದ್ದಳು. ಆದು ಮಗನಿಗೂ ಖುಷಿ ತಾಯಿಗೂ ಖುಷಿ. ಶಾಲೆಯಲ್ಲಿ ಉಮೇಶ್ ಹುಡುಗಿಯರೊಂದಿಗೆ ಇರತೊಡಗಿ ಗಂಡು ಹುಡುಗರು ಕಂಡರೆ ತುಸು ನಾಚುವ ಸ್ವಭಾನ ನಿಧಾನಕ್ಕೆ ಗರಿಗಟ್ಟಿತು. ಹೀಗೆ ಬಾಲಕನೊಳಗಿನ ಹೆಣ್ಣಿನ ಮೊಳಕೆ ಅಮ್ಮನನ್ನು ಹೊರತುಪಡಿಸಿ ಎಲ್ಲರಿಂದಲೂ ತಿರಸ್ಕಾರ, ಅವಮಾನಕ್ಕೆ ಕಾರಣವಾಯಿತು. `ನಾನೇಕೆ ಹೀಗೆ’ ಎನ್ನುವ ಪ್ರಶ್ನೆ ತೀವ್ರವಾಗಿ ಕಾಡಿ ಆತ್ಮಹತ್ಯೆಯ ತನಕ ಕರೆದೊಯ್ಯಿತು. ಈ ರೂಪಾಂತರವೊಂದು ನೋವಿನ ಕಥನ.

ಅಮ್ಮನ ಜತೆ ಬೆಂಗಳೂರಿನ ಸಂಬಂಧಿಕರ ಮನೆಗೆ ಬಂದಾಗ, ಬಸ್‍ಸ್ಟಾಂಡ್‍ನಲ್ಲಿ ತನ್ನಂಥಹದೇ ಭಾವನೆಗಳಿರುವವರನ್ನು ನೋಡಿ ಉಮೇಶ್ ಖುಷಿಯಾಗುತ್ತಾನೆ. ಅರೆ ನಾನು ಅವರ ಹಾಗೆ ಇರಬಹುದಲ್ಲವೇ? ಎನ್ನುವ ಯೋಚನೆ ಬದುಕುವ ಬರವಸೆ ಮೂಡಿಸುತ್ತದೆ. ಉಮೇಶ್ ಕೆಲವರನ್ನು ಮಾತಾಡಿಸಿ ಮನಸ್ಸನ್ನು ಹಗುರ ಮಾಡಿಕೊಳ್ಳುತ್ತಾನೆ. ಇದರಿಂದಾಗಿ ಅಮ್ಮನ ಜತೆ ಊರಿಗೆ ಹೋದರೂ, ಮರಳಿ ಬೆಂಗಳೂರಿಗೆ ಬರುತ್ತಾನೆ. ತನ್ನ ಸಂಬಂಧಿಕರ ಮನೆಯಲ್ಲಿದ್ದುಕೊಂಡೆ ತನ್ನ ಸಮುದಾಯದ ಪರಿಚಯ ಸಂಪಾದಿಸುತ್ತಾನೆ. ನಿಧಾನಕ್ಕೆ ಉಮೇಶ್ ಉಮಾಳಾಗಿ ಬದಲಾಗುತ್ತಾನೆ. ತನ್ನವರಂತೆ ಭಿಕ್ಷೆ ಉಮಾಗೆ ಹಿಂಸೆ ಅನ್ನಿಸಿ, ಸೆಕ್ಸ್ ವರ್ಕ್‍ನಲ್ಲಿ ಉಮಾ ಎರಡು ವರ್ಷ ಕಳೆಯುತ್ತಾಳೆ.

2004 ರಲ್ಲಿ ಸಂಗಮ ಸಂಸ್ಥೆಯಲ್ಲಿ ಸೇರಿಕೊಳ್ಳುತ್ತಾರೆ. ವಾಲಂಟರಿಯಾಗಿ ಒಂದು ವರ್ಷ ಆ ಸಂಸ್ಥೆಯಲ್ಲಿ ಕೆಲಸ ಮಾಡಿ ನಂತರ ಕಮ್ಯುನಿಟಿ ಮೊಬಿಲೈಜರ್ ಆಗಿ ದುಡಿಯುತ್ತಾರೆ. ಈ ಸಂಸ್ಥೆಯಲ್ಲಿ ನಡೆಯುವ ಸಭೆ, ಮೀಟಿಂಗ್, ಓದು ಭಾಷಣಗಳಿಂದ ತನ್ನ ಅರಿವನ್ನು ವಿಸ್ತರಿಸಿಕೊಳ್ಳುತ್ತಾರೆ. ಸಂಗಮದಲ್ಲಿದ್ದೇ ಇತರರ ಜೊತೆಗೆ 2005 ದಲ್ಲಿ ಸಮರ ಎನ್ನುವ ಸಂಸ್ಥೆ ರೂಪಿಸುತ್ತಾರೆ. ಈ ಸಂಘಟನೆ ಸರಕಾರದ ಹೆಚ್.ಐ.ವಿ ಜಾಗೃತಿ ಕಾರ್ಯಕ್ರಮವನ್ನು ಪಡೆದು ಕೆಲಸ ಮಾಡುವುದಕ್ಕೆ ಶುರುಮಾಡುತ್ತದೆ.

ಎನ್.ಜಿ.ಓಗಳು ಒಂದು ಇಶ್ಶು ಬಿಟ್ಟು ದಿಡೀರ್ ಮತ್ತೊಂದು ಇಶ್ಶು ಎತ್ತಿಕೊಳ್ಳುತ್ತವೆ. ಹಾಗಾಗಿ ಎನ್.ಜಿ.ಓಗಳಿಗಿಂತ ಸಮುದಾಯದ ಒಳಗೇ ಒಂದು ಸಂಘಟನೆ, ಸಮುದಾಯಿಕ ಚಟುವಟಿಕೆಗಳು ಪ್ರಾರಂಭವಾಗಬೇಕು. ಹಾಗಾದಲ್ಲಿ ಸಮುದಾಯದ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಅರ್ಥಮಾಡಿಕೊಳ್ಳಬಹುದು ಎಂದರಿತು, 2007 ರಲ್ಲಿ ಕರ್ನಾಟಕ ಸೆಕ್ಷುವಲ್ ಮೈನಾರಿಟೀಸ್ ಫೋರಂ (ಕೆ.ಎಸ್.ಎಮ್.ಎಫ್) ಕಟ್ಟುತ್ತಾರೆ. ಹೀಗೆ ಬೇರೆ ಬೇರೆ ಸಂಘಟನೆಗಳ ಕೆಲಸದ ಕಾರಣ 2009 ರಲ್ಲಿ ಭಿನ್ನಾಭಿಪ್ರಾಯ ಬಂದು ಚಾಂದಿನಿ ಮತ್ತು ಉಮಾ `ಸಂಗಮ’ ತೊರೆಯುತ್ತಾರೆ. ಆಗ ಪಯಣ ಎನ್ನುವ ಸಂಸ್ಥೆ ಸ್ಥಾಪಿಸಿ ಅದರ ಮೂಲಕವೂ ಕೆಲಸ ಮಾಡುತ್ತಾರೆ.

ಪ್ರೀವೀಲ್ಸ್ ಇಂಡಿಯಾ ಪ್ರವೇಟ್ ಲಿಮಿಟೆಡ್ ಎನ್ನುವ ಕಂಪನಿಯಲ್ಲಿ ಟ್ರಾನ್ಸ್ ಜೆಂಡರ್ ಐಡೆಂಟಿಟಿ ಗೊತ್ತಿದ್ದೂ ಕೆಲಸ ಮಾಡಲು ಅವಕಾಶ ಕೊಡುತ್ತಾರೆ. ಇದರಲ್ಲಿ ಉಮಾ ಚಾಂದಿನಿ ಕೆಲಸಕ್ಕೆ ಸೇರುತ್ತಾರೆ. ಮುಖ್ಯವಾಗಿ ಆಟೋ ಡ್ರೈವರುಗಳ ಬಗ್ಗೆ ಅಧ್ಯಯನ ಮಾಡುತ್ತಾರೆ. ಹೀಗೆ 2 ವರ್ಷ ಕೆಲಸ ಮಾಡಿದ ಮೇಲೆ, ಸಮುದಾಯದ ಸಂಘಟನೆ ಹಿನ್ನೆಡೆಯಾಗುತ್ತದೆ. ಹೀಗಾಗಿ ಉಮಾ ಮತ್ತು ಚಾಂದಿನಿ ಈ ಕೆಲಸದಿಂದಲೂ ಹೊರಬರುತ್ತಾರೆ.

ಈಗಾಗಲೆ ಇರುವ ಸಂಘಟನೆಗಳು ಅವುಗಳದ್ದೇ ಚೌಕಟ್ಟುಗಳಲ್ಲಿ ಕೆಲಸ ಮಾಡುತ್ತಿವೆ. ಇವುಗಳು ಮಾಡದ ಕ್ಷೇತ್ರವನ್ನು ಆಯ್ದುಕೊಂಡು ಕೆಲಸ ಮಾಡಬೇಕೆಂದು ಉಮಾ ಟ್ರಾನ್ಸ್ ಸಮುದಾಯದ ಮಾನಸಿಕ ಸಮಸ್ಯೆಗಳನ್ನು ಆಧರಿಸಿ ಒಂದು ಪ್ರತ್ಯೇಕ ಫೋರಂ ರಚಿಸುತ್ತಾರೆ. ಅದುವೆ `ಜೀವ’ ಎನ್ನುವ ಸಂಸ್ಥೆ, ಅದು 2012ರಲ್ಲಿ ರೂಪು ತಳೆಯುತ್ತದೆ.

`ಜೀವ’ ಉಮಾ ಅವರ ಕನಸಿನ ಕೂಸು. ಜೀವನವೇ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಪ್ರಯತ್ನಿಸುವುದು, ಅಲ್ಕೋಹಾಲ್ ಒಳಗೊಂಡಂತೆ ಚಟಗಳಿಗೆ ಅಡಿಕ್ಟ್ ಆಗೋರ ಮನ ಪರಿವರ್ತನೆ ಮಾಡೋದು, ಪರ್ಯಾಯ ಬದುಕು ಕಟ್ಟಿಕೊಳ್ಳಲು ನೆರವಾಗೋದು ಈ ಸಂಸ್ಥೆಯ ಮುಖ್ಯ ಗುರಿ. ಹಾಗಾಗಿ ಈ ಸಂಸ್ಥೆಯ ಭಾಗವಾಗಿ `ಅನನ್ಯ’ ಎನ್ನುವ ಟ್ರಾನ್ಸ್ ಕಮುನಿಟಿಗೇ ಪ್ರತ್ಯೇಕವಾದ ಪತ್ರಿಕೆ ಆರಂಭಿಸಿದ್ದಾರೆ. ಈ ಪತ್ರಿಕೆ ಟ್ರಾನ್ಸ್‍ಜೆಂಡರುಗಳ ಹೋರಾಟ, ಚಟುವಟಿಕೆ, ಆತ್ಮಕಥನದ ಭಾಗಗಳನ್ನು ಪ್ರಕಟಿಸುತ್ತಿದೆ. ಇಷ್ಟೇ ಅಲ್ಲದೆ, 2011 ರಿಂದ ಕರ್ನಾಟಕದ ಸರಕಾರ ಜಾರಿಗೊಳಿಸಿದ್ದ ಟ್ರಾನ್ಸ್ ಕಮುನಿಟಿಯನ್ನು ಕಂಟ್ರೋಲ್ ಮಾಡುವ ಕರ್ನಾಟಕ 36 ಕಾಯ್ದೆಯನ್ನು ರದ್ದುಗೊಳಿಸುವಲ್ಲಿಯೂ, 1861 ರಿಂದ ಜಾರಿಯಾಗಿದ್ದ 377 ಆಕ್ಟ್ ವಿರುದ್ಧದ ಹೋರಾಟದಲ್ಲಿ ಉಮಾ, ಅಕ್ಕೈ, ಮತ್ತು ಸ್ವಾತಿ ಕರ್ನಾಟಕದಿಂದ ಪಿಟಿಷನ್ ಪೈಲ್ ಮಾಡಿದ್ದರು. 2018 ನಲ್ಲಿ ಸುಪ್ರೀಂಕೋರ್ಟ್ 377 ಸೆಕ್ಷನ್ ಅಸಂವಿಧಾನಿಕ ಎಂದು ಕಾಯ್ದೆಯನ್ನು ರದ್ದುಗೊಳಿದ್ದರಲ್ಲಿ ಉಮಾ ಅವರ ಪಾಲೂ ಇದೆ.

ಈಚೆಗೆ ನಾಲ್ಕು ತಿಂಗಳ ಹಿಂದಷ್ಟೇ ತನ್ನ 17 ವರ್ಷ ಜೊತೆ ಬಾಳಿದ ಸಂಗಾತಿ ಲಿವರ್ ತೊಂದರೆಯಿಂದ ಉಮಾ ಅವರನ್ನು ಅಗಲಿದ್ದಾರೆ. ಈ ದುಃಖವಿನ್ನೂ ಉಮಾ ಅವರಿಂದ ದೂರವಾಗಿಲ್ಲ. ಸಮಾಜದಲ್ಲಿ ಗಂಡು ಹೆಣ್ಣಾಗಿ ಮಾತ್ರವೇ ಬದುಕಬೇಕೇ? ಎರಡೂ ಭಾವದಲ್ಲಿಯೂ ನಮಗೆ ತೋಚಿದಂತೆ ಬದುಕಲು ಸಾಧ್ಯವಿಲ್ಲವೇ ಎನ್ನುವ ಜಿಜ್ಞಾಸೆ ಉಮಾ ಅವರನ್ನು ಕಾಡಿದೆ. ಹಾಗಾಗಿ ನಿರ್ವಾಣಹೊಂದಿ ಪೂರ್ಣ ಹೆಣ್ಣಾಗಿಯೂ ಜೀವಿಸದೆಯೆ, ಗಂಡಿನಂತೆಯೂ ತೋರಿಸಿಕೊಳ್ಳದೆ ತನ್ನ ಭಾವನೆಗೆ ಪೂರವಾದ ನಡೆನುಡಿಯನ್ನು ರೂಢಿಸಿಕೊಂಡಿದ್ದಾರೆ. ನನಗೆ ನನ್ನದೇ ಬಗೆಯ ವ್ಯಕ್ತಿತ್ವವಿದೆ. ಸಮಾಜ ನನ್ನನ್ನು ಹೇಗಾದರೂ ನೋಡಲಿ ಎನ್ನುವ ಖಚಿತತೆಯಲ್ಲಿ ಬದುಕುತ್ತಾರೆ. ಉಮಾ ಅವರ ಹೋರಾಟ, ಕಾಳಜಿ, ಬದ್ಧತೆಗಳಿಗೆ ಜಯ ಸಿಗಲಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...