Homeಮುಖಪುಟಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲ

ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲ

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದ ಸಮರ್ಥನೆಯನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ, ಒಂದು ವರ್ಷದ ನಂತರ ಆ ಸಮರ್ಥನೆಗಳೆಲ್ಲ ಸುಳ್ಳಾಗಿವೆ ಎಂದಿದ್ದಾರೆ.

- Advertisement -
- Advertisement -

ಲಡಾಖ್ ಹಾಗೂ ಜಮ್ಮುಕಾಶ್ಮೀರ ಎಲ್ಲಿಯವರೆಗೆ ಕೇಂದ್ರಾಡಳಿತವಾಗಿರುತ್ತದೋ ಅಲ್ಲಿಯವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲ ಘೋಷಿಸಿದ್ದಾರೆ.

2019 ರ ಆಗಸ್ಟ್ 5 ರಂದು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿರುವ ಅವರ ಪಕ್ಷ, ಕೇಂದ್ರ ನಡೆಯನ್ನು ಮುಂದಕ್ಕೂ ವಿರೋಧಿಸುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಬರೆದ ಲೇಖನದಲ್ಲಿ ತಿಳಿಸಿದ್ದಾರೆ.

ಆಗಸ್ಟ್‌‌ 5 ಕ್ಕಿಂತಲೂ ಮೊದಲು ಆಗಿನ ಜಮ್ಮುಕಾಶ್ಮಿರದ ರಾಜ್ಯಪಾಲ ಸತ್ಪಾಲ್ ಮಲಿಕ್ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದೆ. ಆದರೆ ಆಗ ಕಾಶ್ಮೀರದ 370 ವಿಧಿಯ ಬಗ್ಗೆ ಚರ್ಚಿಸಿರಲಿಲ್ಲ. ನಂತರ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಏಕಾಏಕಿಯಾಗಿ ವಿಶೇಷ ಸ್ಥಾನಮಾನ ರದ್ದತಿ ಮಾಡಲಾಯ್ತು. ಈಗ ಮುಂಬರುವ ವಿಧಾನಸಭಾ ಚುನಾವಣೆಗೆ ಹೆಚ್ಚುವರಿ ಸೈನಿಕರನ್ನು ಶ್ರೀನಗರಕ್ಕೆ ಕಳುಹಿಸಲಾಗುತ್ತಿದೆ ಎಂದು ಒಮರ್‌ ಅಬ್ದುಲ್ಲ ಆರೋಪಿಸಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದ ಸಮರ್ಥನೆಯನ್ನು ಲೇಖನದಲ್ಲಿ ಖಂಡಿಸಿರುವ ಮಾಜಿ ಮುಖ್ಯಮಂತ್ರಿ, ಒಂದು ವರ್ಷದ ನಂತರ ಆ ಸಮರ್ಥನೆಗಳೆಲ್ಲ ಸುಳ್ಳಾಗಿವೆ ಎಂದು ಹೇಳುವ ಮೂಲಕ ಗಮನಸೆಳೆದಿದ್ದಾರೆ. ಅವರು ಹೆಸರಿಸಿರುವ ಕೆಲ ಉದಾಹರಣೆಗಳು ಕೆಳಗಿನಂತಿವೆ.

1. ಆರ್ಟಿಕಲ್ 370 ಉಗ್ರಗಾಮಿತ್ವಕ್ಕೆ ಉತ್ತೇಜನ ನೀಡಿತ್ತು ಎಂದು ಹೇಳಲಾಗುತ್ತಿತ್ತು. ಆದರೆ ಅದು ರದ್ದಾದ ಒಂದು ವರ್ಷದ ನಂತರ ಜಮ್ಮುಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆಯಲ್ಲ?

2. ಆರ್ಟಿಕಲ್ 370, ಜನರನ್ನು ಬಡತನದಲ್ಲಿರಿಸಿತ್ತು ಎಂದು ಆರೋಪಿಸಲಾಗಿತ್ತು. ಆದರೆ ಒಂದು ವರ್ಷದ ನಂತರವೂ ಇಲ್ಲಿನ ಜನರಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

3. 370 ನೇ ವಿಧಿ ರದ್ದತಿಯಿಂದ ರಾಜ್ಯದಲ್ಲಿ ಹೂಡಿಕೆ ಹೆಚ್ಚಾಗಲಿದೆ ಎನ್ನಲಾಗಿತ್ತು. ಆದರೆ ಭದ್ರತೆ ಮತ್ತು ಮಿಲಿಟರೀಕರಣದಿಂದಾಗಿ ಕಳೆದ ಒಂದು ವರ್ಷದಲ್ಲಿ ಯಾವುದೇ ಹೂಡಿಕೆಯಾಗಿಲ್ಲ.

4. 370 ನೇ ವಿಧಿಯಿಂದಾಗಿ ಜಮ್ಮುಕಾಶ್ಮೀರ ಹಿಂದುಳಿದಿದೆ ಎಂದು ಹೇಳಲಾಗುತ್ತಿತ್ತು. ಆದರೆ ಹಲವಾರು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ರಾಜ್ಯವು ‘ಅಭಿವೃದ್ಧಿ ಹೊಂದಿದ’ ಗುಜರಾತ್ ರಾಜ್ಯಕ್ಕಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದೆ.

ಒಮರ್‌ ಅಬ್ದುಲ್ಲಾ ಕೇಂದ್ರಾಡಳಿತ ಪ್ರದೇಶಗಳ ರಚನೆಯನ್ನು ಪ್ರಶ್ನಿಸಿದ್ದಾರೆ. ಒಂದು ರಾಜ್ಯವನ್ನು ಕೇಂದ್ರಾಡಳಿತವನ್ನಾಗಿ ಮಾಡಿದ್ದು ಇದುವೆ ಮೊದಲು ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗದ ಮೇಲೆ ತಮ್ಮ ಪಕ್ಷಕ್ಕೆ ನಂಬಿಕೆಯಿದೆ ಎಂದು ಪುನರುಚ್ಚರಿಸಿದ ಅವರು ಸುಪ್ರೀಂ ಕೋರ್ಟ್‌ನಲ್ಲಿ 370 ನೇ ವಿಧಿಯನ್ನು ಹಿಂಪಡೆಯುವುದು ಹಾಗೂ ಅಕ್ರಮವಾಗಿ ಬಂಧನದಲ್ಲಿರುವ ಜಮ್ಮುಕಾಶ್ಮೀರದಲ್ಲಿನ ರಾಜಕೀಯ ನಾಯಕರನ್ನು ಬಿಡುಗಡೆ ಮಾಡಲು ಅಹಿಂಸಾತ್ಮಕ ಮಾರ್ಗದ ಹೋರಾಟಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

“ಕೇಂದ್ರ ಸರ್ಕಾರವು ಜಮ್ಮಕಾಶ್ಮೀರಕ್ಕೆ ಮಾಡಿದ ಅನ್ಯಾಯಗಳನ್ನು ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷವು ಒಪ್ಪುವುದಿಲ್ಲ” ಎಂದು ಅವರು ತಮ್ಮ ಲೇಖನದಲ್ಲಿ ದೃಡಪಡಿಸಿದಿದ್ದಾರೆ.


ಇದನ್ನೂ ಓದಿ: ಒಮರ್ ಅಬ್ದುಲ್ಲಾ ಬಂಧನದ ವಿರುದ್ದ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಶಾಂತನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...