Homeಮುಖಪುಟಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲ

ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲ

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದ ಸಮರ್ಥನೆಯನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ, ಒಂದು ವರ್ಷದ ನಂತರ ಆ ಸಮರ್ಥನೆಗಳೆಲ್ಲ ಸುಳ್ಳಾಗಿವೆ ಎಂದಿದ್ದಾರೆ.

- Advertisement -
- Advertisement -

ಲಡಾಖ್ ಹಾಗೂ ಜಮ್ಮುಕಾಶ್ಮೀರ ಎಲ್ಲಿಯವರೆಗೆ ಕೇಂದ್ರಾಡಳಿತವಾಗಿರುತ್ತದೋ ಅಲ್ಲಿಯವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲ ಘೋಷಿಸಿದ್ದಾರೆ.

2019 ರ ಆಗಸ್ಟ್ 5 ರಂದು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿರುವ ಅವರ ಪಕ್ಷ, ಕೇಂದ್ರ ನಡೆಯನ್ನು ಮುಂದಕ್ಕೂ ವಿರೋಧಿಸುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಬರೆದ ಲೇಖನದಲ್ಲಿ ತಿಳಿಸಿದ್ದಾರೆ.

ಆಗಸ್ಟ್‌‌ 5 ಕ್ಕಿಂತಲೂ ಮೊದಲು ಆಗಿನ ಜಮ್ಮುಕಾಶ್ಮಿರದ ರಾಜ್ಯಪಾಲ ಸತ್ಪಾಲ್ ಮಲಿಕ್ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದೆ. ಆದರೆ ಆಗ ಕಾಶ್ಮೀರದ 370 ವಿಧಿಯ ಬಗ್ಗೆ ಚರ್ಚಿಸಿರಲಿಲ್ಲ. ನಂತರ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಏಕಾಏಕಿಯಾಗಿ ವಿಶೇಷ ಸ್ಥಾನಮಾನ ರದ್ದತಿ ಮಾಡಲಾಯ್ತು. ಈಗ ಮುಂಬರುವ ವಿಧಾನಸಭಾ ಚುನಾವಣೆಗೆ ಹೆಚ್ಚುವರಿ ಸೈನಿಕರನ್ನು ಶ್ರೀನಗರಕ್ಕೆ ಕಳುಹಿಸಲಾಗುತ್ತಿದೆ ಎಂದು ಒಮರ್‌ ಅಬ್ದುಲ್ಲ ಆರೋಪಿಸಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದ ಸಮರ್ಥನೆಯನ್ನು ಲೇಖನದಲ್ಲಿ ಖಂಡಿಸಿರುವ ಮಾಜಿ ಮುಖ್ಯಮಂತ್ರಿ, ಒಂದು ವರ್ಷದ ನಂತರ ಆ ಸಮರ್ಥನೆಗಳೆಲ್ಲ ಸುಳ್ಳಾಗಿವೆ ಎಂದು ಹೇಳುವ ಮೂಲಕ ಗಮನಸೆಳೆದಿದ್ದಾರೆ. ಅವರು ಹೆಸರಿಸಿರುವ ಕೆಲ ಉದಾಹರಣೆಗಳು ಕೆಳಗಿನಂತಿವೆ.

1. ಆರ್ಟಿಕಲ್ 370 ಉಗ್ರಗಾಮಿತ್ವಕ್ಕೆ ಉತ್ತೇಜನ ನೀಡಿತ್ತು ಎಂದು ಹೇಳಲಾಗುತ್ತಿತ್ತು. ಆದರೆ ಅದು ರದ್ದಾದ ಒಂದು ವರ್ಷದ ನಂತರ ಜಮ್ಮುಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆಯಲ್ಲ?

2. ಆರ್ಟಿಕಲ್ 370, ಜನರನ್ನು ಬಡತನದಲ್ಲಿರಿಸಿತ್ತು ಎಂದು ಆರೋಪಿಸಲಾಗಿತ್ತು. ಆದರೆ ಒಂದು ವರ್ಷದ ನಂತರವೂ ಇಲ್ಲಿನ ಜನರಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

3. 370 ನೇ ವಿಧಿ ರದ್ದತಿಯಿಂದ ರಾಜ್ಯದಲ್ಲಿ ಹೂಡಿಕೆ ಹೆಚ್ಚಾಗಲಿದೆ ಎನ್ನಲಾಗಿತ್ತು. ಆದರೆ ಭದ್ರತೆ ಮತ್ತು ಮಿಲಿಟರೀಕರಣದಿಂದಾಗಿ ಕಳೆದ ಒಂದು ವರ್ಷದಲ್ಲಿ ಯಾವುದೇ ಹೂಡಿಕೆಯಾಗಿಲ್ಲ.

4. 370 ನೇ ವಿಧಿಯಿಂದಾಗಿ ಜಮ್ಮುಕಾಶ್ಮೀರ ಹಿಂದುಳಿದಿದೆ ಎಂದು ಹೇಳಲಾಗುತ್ತಿತ್ತು. ಆದರೆ ಹಲವಾರು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ರಾಜ್ಯವು ‘ಅಭಿವೃದ್ಧಿ ಹೊಂದಿದ’ ಗುಜರಾತ್ ರಾಜ್ಯಕ್ಕಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದೆ.

ಒಮರ್‌ ಅಬ್ದುಲ್ಲಾ ಕೇಂದ್ರಾಡಳಿತ ಪ್ರದೇಶಗಳ ರಚನೆಯನ್ನು ಪ್ರಶ್ನಿಸಿದ್ದಾರೆ. ಒಂದು ರಾಜ್ಯವನ್ನು ಕೇಂದ್ರಾಡಳಿತವನ್ನಾಗಿ ಮಾಡಿದ್ದು ಇದುವೆ ಮೊದಲು ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗದ ಮೇಲೆ ತಮ್ಮ ಪಕ್ಷಕ್ಕೆ ನಂಬಿಕೆಯಿದೆ ಎಂದು ಪುನರುಚ್ಚರಿಸಿದ ಅವರು ಸುಪ್ರೀಂ ಕೋರ್ಟ್‌ನಲ್ಲಿ 370 ನೇ ವಿಧಿಯನ್ನು ಹಿಂಪಡೆಯುವುದು ಹಾಗೂ ಅಕ್ರಮವಾಗಿ ಬಂಧನದಲ್ಲಿರುವ ಜಮ್ಮುಕಾಶ್ಮೀರದಲ್ಲಿನ ರಾಜಕೀಯ ನಾಯಕರನ್ನು ಬಿಡುಗಡೆ ಮಾಡಲು ಅಹಿಂಸಾತ್ಮಕ ಮಾರ್ಗದ ಹೋರಾಟಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

“ಕೇಂದ್ರ ಸರ್ಕಾರವು ಜಮ್ಮಕಾಶ್ಮೀರಕ್ಕೆ ಮಾಡಿದ ಅನ್ಯಾಯಗಳನ್ನು ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷವು ಒಪ್ಪುವುದಿಲ್ಲ” ಎಂದು ಅವರು ತಮ್ಮ ಲೇಖನದಲ್ಲಿ ದೃಡಪಡಿಸಿದಿದ್ದಾರೆ.


ಇದನ್ನೂ ಓದಿ: ಒಮರ್ ಅಬ್ದುಲ್ಲಾ ಬಂಧನದ ವಿರುದ್ದ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಶಾಂತನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...