Homeಮುಖಪುಟಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲ

ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ಜಮ್ಮು ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲ

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದ ಸಮರ್ಥನೆಯನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ, ಒಂದು ವರ್ಷದ ನಂತರ ಆ ಸಮರ್ಥನೆಗಳೆಲ್ಲ ಸುಳ್ಳಾಗಿವೆ ಎಂದಿದ್ದಾರೆ.

- Advertisement -
- Advertisement -

ಲಡಾಖ್ ಹಾಗೂ ಜಮ್ಮುಕಾಶ್ಮೀರ ಎಲ್ಲಿಯವರೆಗೆ ಕೇಂದ್ರಾಡಳಿತವಾಗಿರುತ್ತದೋ ಅಲ್ಲಿಯವರೆಗೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್‌ ಅಬ್ದುಲ್ಲ ಘೋಷಿಸಿದ್ದಾರೆ.

2019 ರ ಆಗಸ್ಟ್ 5 ರಂದು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿರುವ ಅವರ ಪಕ್ಷ, ಕೇಂದ್ರ ನಡೆಯನ್ನು ಮುಂದಕ್ಕೂ ವಿರೋಧಿಸುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಬರೆದ ಲೇಖನದಲ್ಲಿ ತಿಳಿಸಿದ್ದಾರೆ.

ಆಗಸ್ಟ್‌‌ 5 ಕ್ಕಿಂತಲೂ ಮೊದಲು ಆಗಿನ ಜಮ್ಮುಕಾಶ್ಮಿರದ ರಾಜ್ಯಪಾಲ ಸತ್ಪಾಲ್ ಮಲಿಕ್ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದೆ. ಆದರೆ ಆಗ ಕಾಶ್ಮೀರದ 370 ವಿಧಿಯ ಬಗ್ಗೆ ಚರ್ಚಿಸಿರಲಿಲ್ಲ. ನಂತರ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಏಕಾಏಕಿಯಾಗಿ ವಿಶೇಷ ಸ್ಥಾನಮಾನ ರದ್ದತಿ ಮಾಡಲಾಯ್ತು. ಈಗ ಮುಂಬರುವ ವಿಧಾನಸಭಾ ಚುನಾವಣೆಗೆ ಹೆಚ್ಚುವರಿ ಸೈನಿಕರನ್ನು ಶ್ರೀನಗರಕ್ಕೆ ಕಳುಹಿಸಲಾಗುತ್ತಿದೆ ಎಂದು ಒಮರ್‌ ಅಬ್ದುಲ್ಲ ಆರೋಪಿಸಿದ್ದಾರೆ.

ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ನೀಡಿದ ಸಮರ್ಥನೆಯನ್ನು ಲೇಖನದಲ್ಲಿ ಖಂಡಿಸಿರುವ ಮಾಜಿ ಮುಖ್ಯಮಂತ್ರಿ, ಒಂದು ವರ್ಷದ ನಂತರ ಆ ಸಮರ್ಥನೆಗಳೆಲ್ಲ ಸುಳ್ಳಾಗಿವೆ ಎಂದು ಹೇಳುವ ಮೂಲಕ ಗಮನಸೆಳೆದಿದ್ದಾರೆ. ಅವರು ಹೆಸರಿಸಿರುವ ಕೆಲ ಉದಾಹರಣೆಗಳು ಕೆಳಗಿನಂತಿವೆ.

1. ಆರ್ಟಿಕಲ್ 370 ಉಗ್ರಗಾಮಿತ್ವಕ್ಕೆ ಉತ್ತೇಜನ ನೀಡಿತ್ತು ಎಂದು ಹೇಳಲಾಗುತ್ತಿತ್ತು. ಆದರೆ ಅದು ರದ್ದಾದ ಒಂದು ವರ್ಷದ ನಂತರ ಜಮ್ಮುಕಾಶ್ಮೀರದಲ್ಲಿ ಹಿಂಸಾಚಾರ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆಯಲ್ಲ?

2. ಆರ್ಟಿಕಲ್ 370, ಜನರನ್ನು ಬಡತನದಲ್ಲಿರಿಸಿತ್ತು ಎಂದು ಆರೋಪಿಸಲಾಗಿತ್ತು. ಆದರೆ ಒಂದು ವರ್ಷದ ನಂತರವೂ ಇಲ್ಲಿನ ಜನರಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

3. 370 ನೇ ವಿಧಿ ರದ್ದತಿಯಿಂದ ರಾಜ್ಯದಲ್ಲಿ ಹೂಡಿಕೆ ಹೆಚ್ಚಾಗಲಿದೆ ಎನ್ನಲಾಗಿತ್ತು. ಆದರೆ ಭದ್ರತೆ ಮತ್ತು ಮಿಲಿಟರೀಕರಣದಿಂದಾಗಿ ಕಳೆದ ಒಂದು ವರ್ಷದಲ್ಲಿ ಯಾವುದೇ ಹೂಡಿಕೆಯಾಗಿಲ್ಲ.

4. 370 ನೇ ವಿಧಿಯಿಂದಾಗಿ ಜಮ್ಮುಕಾಶ್ಮೀರ ಹಿಂದುಳಿದಿದೆ ಎಂದು ಹೇಳಲಾಗುತ್ತಿತ್ತು. ಆದರೆ ಹಲವಾರು ಮಾನವ ಅಭಿವೃದ್ಧಿ ಸೂಚ್ಯಂಕಗಳಲ್ಲಿ ರಾಜ್ಯವು ‘ಅಭಿವೃದ್ಧಿ ಹೊಂದಿದ’ ಗುಜರಾತ್ ರಾಜ್ಯಕ್ಕಿಂತ ಉತ್ತಮವಾಗಿ ಕಾರ್ಯನಿರ್ವಹಿಸಿದೆ.

ಒಮರ್‌ ಅಬ್ದುಲ್ಲಾ ಕೇಂದ್ರಾಡಳಿತ ಪ್ರದೇಶಗಳ ರಚನೆಯನ್ನು ಪ್ರಶ್ನಿಸಿದ್ದಾರೆ. ಒಂದು ರಾಜ್ಯವನ್ನು ಕೇಂದ್ರಾಡಳಿತವನ್ನಾಗಿ ಮಾಡಿದ್ದು ಇದುವೆ ಮೊದಲು ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗದ ಮೇಲೆ ತಮ್ಮ ಪಕ್ಷಕ್ಕೆ ನಂಬಿಕೆಯಿದೆ ಎಂದು ಪುನರುಚ್ಚರಿಸಿದ ಅವರು ಸುಪ್ರೀಂ ಕೋರ್ಟ್‌ನಲ್ಲಿ 370 ನೇ ವಿಧಿಯನ್ನು ಹಿಂಪಡೆಯುವುದು ಹಾಗೂ ಅಕ್ರಮವಾಗಿ ಬಂಧನದಲ್ಲಿರುವ ಜಮ್ಮುಕಾಶ್ಮೀರದಲ್ಲಿನ ರಾಜಕೀಯ ನಾಯಕರನ್ನು ಬಿಡುಗಡೆ ಮಾಡಲು ಅಹಿಂಸಾತ್ಮಕ ಮಾರ್ಗದ ಹೋರಾಟಗಳನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

“ಕೇಂದ್ರ ಸರ್ಕಾರವು ಜಮ್ಮಕಾಶ್ಮೀರಕ್ಕೆ ಮಾಡಿದ ಅನ್ಯಾಯಗಳನ್ನು ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷವು ಒಪ್ಪುವುದಿಲ್ಲ” ಎಂದು ಅವರು ತಮ್ಮ ಲೇಖನದಲ್ಲಿ ದೃಡಪಡಿಸಿದಿದ್ದಾರೆ.


ಇದನ್ನೂ ಓದಿ: ಒಮರ್ ಅಬ್ದುಲ್ಲಾ ಬಂಧನದ ವಿರುದ್ದ ಅರ್ಜಿ : ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಶಾಂತನಗೌಡರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...