Homeಮುಖಪುಟಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಆರೋಪಿಸಿದ್ದಾರೆ.

- Advertisement -
- Advertisement -

ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಆರೋಪಿಸಿದ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ ಹಾಕಿದ್ದಾರೆ.

ಸಚಿನ್ ಪೈಲಟ್ ನಡೆಗೂ, ನನ್ನ ಅಥವಾ ನನ್ನ ತಂದೆ ಬಂಧನದಿಂದ ಬಿಡುಗಡೆಯಾಗಿರುವುದು ಒಂದಕ್ಕೊಂದು ಸಂಬಂಧ ಹೊಂದಿದೆ ಎಂಬ ದುರುದ್ದೇಶಪೂರಿತ ಸುಳ್ಳು ಆರೋಪದಿಂದ ನಾನು ಬೇಸರಗೊಂಡಿದ್ದೇನೆ. ಸಾಕು ಸಾಕು. ನನ್ನ ವಕೀಲರು ಭೂಪೇಶ್ ಬಾಗೆಲ್ ವಿರುದ್ದ ವಿಚಾರಣೆಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಬಂಧನದ ಏಳು ತಿಂಗಳ ನಂತರ ಉಮರ್ ಅಬ್ದುಲ್ಲಾರ ತಂದೆ ಮಾಜಿ ಕೇಂದ್ರ ಸಚಿವರಾದ ಫಾರೂಕ್ ಅಬ್ದುಲ್ಲಾರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಇದಾಗಿ ಕೆಲ ದಿನಗಳ ನಂತರ ಮಾರ್ಚ್ 24 ರಂದು ಶ್ರೀನಗರದಲ್ಲಿ ಒಮರ್ ಅಬ್ದುಲ್ಲಾ ಅವರನ್ನು ಕೂಡಾ ಬಿಡುಗಡೆ ಮಾಡಲಾಗಿತ್ತು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಬೃಹತ್ ಭದ್ರತಾ ನಿರ್ಬಂಧಗಳ ಭಾಗವಾಗಿ ಕಳೆದ ಆಗಸ್ಟ್ ನಲ್ಲಿ ಹಲವಾರು ಜನರನ್ನು ಬಂಧಿಸಲಾಗಿತ್ತು.

ಇಂದು ಪ್ರಕಟವಾದ ದಿ ಹಿಂದೂ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಸಚಿನ್ ಪೈಲಟ್ ಅವರ ಬಂಡಾಯಕ್ಕೂ, ತಂದೆ ಮಗನ ಬಿಡುಗಡೆಗೂ ಸಂಬಂಧ ಕಲ್ಪಿಸಲು ಪ್ರಯತ್ನಿಸಿದ್ದರು.

“ಸಚಿನ್ ಪೈಲಟ್‌ಗೆ ಸಂಬಂಧಿಸಿದಂತೆ, ನಾನು ರಾಜಸ್ಥಾನದ ಘಟನೆಗಳನ್ನು ಅಷ್ಟು ನಿಕಟವಾಗಿ ಗಮನಿಸುತ್ತಿದ್ದೇನೆ, ಒಮರ್ ಅಬ್ದುಲ್ಲಾ ಅವರನ್ನು ಏಕೆ ಬಿಡುಗಡೆ ಮಾಡಲಾಯಿತು ಎಂಬ ಕುತೂಹಲ ಮೂಡಿಸುತ್ತದೆ. ಅವರು ಮತ್ತು ಮೆಹಬೂಬಾ ಮುಫ್ತಿಯನ್ನು ಒಂದೇ ಕಾನೂನಿನ ಅಡಿಯಲ್ಲಿ ಬಂಧಿಸಲಾಗಿತ್ತು, ಆದರೆ ಮೆಹಬೂಬ ಇನ್ನೂ ಬಂಧನದಲ್ಲಿದ್ದಾರೆ, ಇವರು ಹೊರಗಿದ್ದಾರೆ. ಅಬ್ದುಲ್ಲಾ ಅವರು ಸಚಿನ್ ಪೈಲಟ್ ಅವರ ಹೆಂಡತಿಯ ಸಹೋಧರನಾಗಿದ್ದಾರೆ” ಎಂದು ಬಾಗೆಲ್ ಹೇಳಿದ್ದಾರೆ.

ಸಚಿನ್ ಪೈಲಟ್ ಅವರ ಪತ್ನಿ ಸಾರಾ ಪೈಲಟ್ ಒಮರ್ ಅಬ್ದುಲ್ಲಾರ ಸಹೋದರಿಯಾಗಿದ್ದಾರೆ.

ಅನುಕೂಲಕರ ರಾಜಕೀಯ ಪಟ್ಟುಗಳಿಗೆ ಬಳಸಲಾಗುವ ಇಂತಹ ದುರುದ್ದೇಶಪೂರಿತ ಸುಳ್ಳು ಮತ್ತು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನಿಸ್ಸಂದಿಗ್ಧವಾಗಿ ತಿರಸ್ಕರಿಸುತ್ತದೆ. ಈ ಹೇಳಿಕೆಯ ವಿರುದ್ದ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಭಾಗೆಲ್ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ಪ್ರತಿಕ್ರಿಯಿಸಿದೆ.

ಬಾಗೆಲ್ ಅವರ ಅಭಿಪ್ರಾಯವು ಕೀಳುಮಟ್ಟದ ಸುಳ್ಳಾಗಿದ್ದು, ಒಮರ್ ಅಬ್ದುಲ್ಲಾ ಅವರ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂದು ನ್ಯಾಷನಲ್ ಕಾನ್ಫೆರೆನ್ಸ್ ಹೇಳಿದೆ.

ತಮ್ಮ ಇಬ್ಬರು ನಾಯಕರ ಬಿಡುಗಡೆಯು ಕಾನೂನು ಸವಾಲನ್ನು ಎದುರಿಸಿ ಆಗಿರುವುದು ಎಂದು ಸಾಮಾನ್ಯರಿಗೂ ತಿಳಿದಿದೆ. ಸರ್ಕಾರವು ತನ್ನ ಅಕ್ರಮ ಬಂಧನ ಆದೇಶವನ್ನು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಯ ಸಮಯದಲ್ಲಿ ರದ್ದುಪಡಿಸಿತು ಎಂದು ಪಕ್ಷ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ಓದಿ: ಮಂದಿರ ಕಟ್ಟಿದರೆ ಕೊರೊನಾ ನಿಯಂತ್ರಣ ಸಾಧ್ಯವೆಂದು ಕೆಲವರು ಭಾವಿಸಿದ್ದಾರೆ: ಶರದ್ ಪವಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...