Homeಮುಖಪುಟಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಆರೋಪಿಸಿದ್ದಾರೆ.

- Advertisement -
- Advertisement -

ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಆರೋಪಿಸಿದ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ ಹಾಕಿದ್ದಾರೆ.

ಸಚಿನ್ ಪೈಲಟ್ ನಡೆಗೂ, ನನ್ನ ಅಥವಾ ನನ್ನ ತಂದೆ ಬಂಧನದಿಂದ ಬಿಡುಗಡೆಯಾಗಿರುವುದು ಒಂದಕ್ಕೊಂದು ಸಂಬಂಧ ಹೊಂದಿದೆ ಎಂಬ ದುರುದ್ದೇಶಪೂರಿತ ಸುಳ್ಳು ಆರೋಪದಿಂದ ನಾನು ಬೇಸರಗೊಂಡಿದ್ದೇನೆ. ಸಾಕು ಸಾಕು. ನನ್ನ ವಕೀಲರು ಭೂಪೇಶ್ ಬಾಗೆಲ್ ವಿರುದ್ದ ವಿಚಾರಣೆಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಬಂಧನದ ಏಳು ತಿಂಗಳ ನಂತರ ಉಮರ್ ಅಬ್ದುಲ್ಲಾರ ತಂದೆ ಮಾಜಿ ಕೇಂದ್ರ ಸಚಿವರಾದ ಫಾರೂಕ್ ಅಬ್ದುಲ್ಲಾರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಇದಾಗಿ ಕೆಲ ದಿನಗಳ ನಂತರ ಮಾರ್ಚ್ 24 ರಂದು ಶ್ರೀನಗರದಲ್ಲಿ ಒಮರ್ ಅಬ್ದುಲ್ಲಾ ಅವರನ್ನು ಕೂಡಾ ಬಿಡುಗಡೆ ಮಾಡಲಾಗಿತ್ತು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಬೃಹತ್ ಭದ್ರತಾ ನಿರ್ಬಂಧಗಳ ಭಾಗವಾಗಿ ಕಳೆದ ಆಗಸ್ಟ್ ನಲ್ಲಿ ಹಲವಾರು ಜನರನ್ನು ಬಂಧಿಸಲಾಗಿತ್ತು.

ಇಂದು ಪ್ರಕಟವಾದ ದಿ ಹಿಂದೂ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಸಚಿನ್ ಪೈಲಟ್ ಅವರ ಬಂಡಾಯಕ್ಕೂ, ತಂದೆ ಮಗನ ಬಿಡುಗಡೆಗೂ ಸಂಬಂಧ ಕಲ್ಪಿಸಲು ಪ್ರಯತ್ನಿಸಿದ್ದರು.

“ಸಚಿನ್ ಪೈಲಟ್‌ಗೆ ಸಂಬಂಧಿಸಿದಂತೆ, ನಾನು ರಾಜಸ್ಥಾನದ ಘಟನೆಗಳನ್ನು ಅಷ್ಟು ನಿಕಟವಾಗಿ ಗಮನಿಸುತ್ತಿದ್ದೇನೆ, ಒಮರ್ ಅಬ್ದುಲ್ಲಾ ಅವರನ್ನು ಏಕೆ ಬಿಡುಗಡೆ ಮಾಡಲಾಯಿತು ಎಂಬ ಕುತೂಹಲ ಮೂಡಿಸುತ್ತದೆ. ಅವರು ಮತ್ತು ಮೆಹಬೂಬಾ ಮುಫ್ತಿಯನ್ನು ಒಂದೇ ಕಾನೂನಿನ ಅಡಿಯಲ್ಲಿ ಬಂಧಿಸಲಾಗಿತ್ತು, ಆದರೆ ಮೆಹಬೂಬ ಇನ್ನೂ ಬಂಧನದಲ್ಲಿದ್ದಾರೆ, ಇವರು ಹೊರಗಿದ್ದಾರೆ. ಅಬ್ದುಲ್ಲಾ ಅವರು ಸಚಿನ್ ಪೈಲಟ್ ಅವರ ಹೆಂಡತಿಯ ಸಹೋಧರನಾಗಿದ್ದಾರೆ” ಎಂದು ಬಾಗೆಲ್ ಹೇಳಿದ್ದಾರೆ.

ಸಚಿನ್ ಪೈಲಟ್ ಅವರ ಪತ್ನಿ ಸಾರಾ ಪೈಲಟ್ ಒಮರ್ ಅಬ್ದುಲ್ಲಾರ ಸಹೋದರಿಯಾಗಿದ್ದಾರೆ.

ಅನುಕೂಲಕರ ರಾಜಕೀಯ ಪಟ್ಟುಗಳಿಗೆ ಬಳಸಲಾಗುವ ಇಂತಹ ದುರುದ್ದೇಶಪೂರಿತ ಸುಳ್ಳು ಮತ್ತು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನಿಸ್ಸಂದಿಗ್ಧವಾಗಿ ತಿರಸ್ಕರಿಸುತ್ತದೆ. ಈ ಹೇಳಿಕೆಯ ವಿರುದ್ದ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಭಾಗೆಲ್ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ಪ್ರತಿಕ್ರಿಯಿಸಿದೆ.

ಬಾಗೆಲ್ ಅವರ ಅಭಿಪ್ರಾಯವು ಕೀಳುಮಟ್ಟದ ಸುಳ್ಳಾಗಿದ್ದು, ಒಮರ್ ಅಬ್ದುಲ್ಲಾ ಅವರ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂದು ನ್ಯಾಷನಲ್ ಕಾನ್ಫೆರೆನ್ಸ್ ಹೇಳಿದೆ.

ತಮ್ಮ ಇಬ್ಬರು ನಾಯಕರ ಬಿಡುಗಡೆಯು ಕಾನೂನು ಸವಾಲನ್ನು ಎದುರಿಸಿ ಆಗಿರುವುದು ಎಂದು ಸಾಮಾನ್ಯರಿಗೂ ತಿಳಿದಿದೆ. ಸರ್ಕಾರವು ತನ್ನ ಅಕ್ರಮ ಬಂಧನ ಆದೇಶವನ್ನು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಯ ಸಮಯದಲ್ಲಿ ರದ್ದುಪಡಿಸಿತು ಎಂದು ಪಕ್ಷ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ಓದಿ: ಮಂದಿರ ಕಟ್ಟಿದರೆ ಕೊರೊನಾ ನಿಯಂತ್ರಣ ಸಾಧ್ಯವೆಂದು ಕೆಲವರು ಭಾವಿಸಿದ್ದಾರೆ: ಶರದ್ ಪವಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...