Homeಮುಖಪುಟಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಆರೋಪಿಸಿದ್ದಾರೆ.

- Advertisement -
- Advertisement -

ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಆರೋಪಿಸಿದ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ ಹಾಕಿದ್ದಾರೆ.

ಸಚಿನ್ ಪೈಲಟ್ ನಡೆಗೂ, ನನ್ನ ಅಥವಾ ನನ್ನ ತಂದೆ ಬಂಧನದಿಂದ ಬಿಡುಗಡೆಯಾಗಿರುವುದು ಒಂದಕ್ಕೊಂದು ಸಂಬಂಧ ಹೊಂದಿದೆ ಎಂಬ ದುರುದ್ದೇಶಪೂರಿತ ಸುಳ್ಳು ಆರೋಪದಿಂದ ನಾನು ಬೇಸರಗೊಂಡಿದ್ದೇನೆ. ಸಾಕು ಸಾಕು. ನನ್ನ ವಕೀಲರು ಭೂಪೇಶ್ ಬಾಗೆಲ್ ವಿರುದ್ದ ವಿಚಾರಣೆಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಬಂಧನದ ಏಳು ತಿಂಗಳ ನಂತರ ಉಮರ್ ಅಬ್ದುಲ್ಲಾರ ತಂದೆ ಮಾಜಿ ಕೇಂದ್ರ ಸಚಿವರಾದ ಫಾರೂಕ್ ಅಬ್ದುಲ್ಲಾರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಇದಾಗಿ ಕೆಲ ದಿನಗಳ ನಂತರ ಮಾರ್ಚ್ 24 ರಂದು ಶ್ರೀನಗರದಲ್ಲಿ ಒಮರ್ ಅಬ್ದುಲ್ಲಾ ಅವರನ್ನು ಕೂಡಾ ಬಿಡುಗಡೆ ಮಾಡಲಾಗಿತ್ತು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಬೃಹತ್ ಭದ್ರತಾ ನಿರ್ಬಂಧಗಳ ಭಾಗವಾಗಿ ಕಳೆದ ಆಗಸ್ಟ್ ನಲ್ಲಿ ಹಲವಾರು ಜನರನ್ನು ಬಂಧಿಸಲಾಗಿತ್ತು.

ಇಂದು ಪ್ರಕಟವಾದ ದಿ ಹಿಂದೂ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಸಚಿನ್ ಪೈಲಟ್ ಅವರ ಬಂಡಾಯಕ್ಕೂ, ತಂದೆ ಮಗನ ಬಿಡುಗಡೆಗೂ ಸಂಬಂಧ ಕಲ್ಪಿಸಲು ಪ್ರಯತ್ನಿಸಿದ್ದರು.

“ಸಚಿನ್ ಪೈಲಟ್‌ಗೆ ಸಂಬಂಧಿಸಿದಂತೆ, ನಾನು ರಾಜಸ್ಥಾನದ ಘಟನೆಗಳನ್ನು ಅಷ್ಟು ನಿಕಟವಾಗಿ ಗಮನಿಸುತ್ತಿದ್ದೇನೆ, ಒಮರ್ ಅಬ್ದುಲ್ಲಾ ಅವರನ್ನು ಏಕೆ ಬಿಡುಗಡೆ ಮಾಡಲಾಯಿತು ಎಂಬ ಕುತೂಹಲ ಮೂಡಿಸುತ್ತದೆ. ಅವರು ಮತ್ತು ಮೆಹಬೂಬಾ ಮುಫ್ತಿಯನ್ನು ಒಂದೇ ಕಾನೂನಿನ ಅಡಿಯಲ್ಲಿ ಬಂಧಿಸಲಾಗಿತ್ತು, ಆದರೆ ಮೆಹಬೂಬ ಇನ್ನೂ ಬಂಧನದಲ್ಲಿದ್ದಾರೆ, ಇವರು ಹೊರಗಿದ್ದಾರೆ. ಅಬ್ದುಲ್ಲಾ ಅವರು ಸಚಿನ್ ಪೈಲಟ್ ಅವರ ಹೆಂಡತಿಯ ಸಹೋಧರನಾಗಿದ್ದಾರೆ” ಎಂದು ಬಾಗೆಲ್ ಹೇಳಿದ್ದಾರೆ.

ಸಚಿನ್ ಪೈಲಟ್ ಅವರ ಪತ್ನಿ ಸಾರಾ ಪೈಲಟ್ ಒಮರ್ ಅಬ್ದುಲ್ಲಾರ ಸಹೋದರಿಯಾಗಿದ್ದಾರೆ.

ಅನುಕೂಲಕರ ರಾಜಕೀಯ ಪಟ್ಟುಗಳಿಗೆ ಬಳಸಲಾಗುವ ಇಂತಹ ದುರುದ್ದೇಶಪೂರಿತ ಸುಳ್ಳು ಮತ್ತು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನಿಸ್ಸಂದಿಗ್ಧವಾಗಿ ತಿರಸ್ಕರಿಸುತ್ತದೆ. ಈ ಹೇಳಿಕೆಯ ವಿರುದ್ದ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಭಾಗೆಲ್ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ಪ್ರತಿಕ್ರಿಯಿಸಿದೆ.

ಬಾಗೆಲ್ ಅವರ ಅಭಿಪ್ರಾಯವು ಕೀಳುಮಟ್ಟದ ಸುಳ್ಳಾಗಿದ್ದು, ಒಮರ್ ಅಬ್ದುಲ್ಲಾ ಅವರ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂದು ನ್ಯಾಷನಲ್ ಕಾನ್ಫೆರೆನ್ಸ್ ಹೇಳಿದೆ.

ತಮ್ಮ ಇಬ್ಬರು ನಾಯಕರ ಬಿಡುಗಡೆಯು ಕಾನೂನು ಸವಾಲನ್ನು ಎದುರಿಸಿ ಆಗಿರುವುದು ಎಂದು ಸಾಮಾನ್ಯರಿಗೂ ತಿಳಿದಿದೆ. ಸರ್ಕಾರವು ತನ್ನ ಅಕ್ರಮ ಬಂಧನ ಆದೇಶವನ್ನು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಯ ಸಮಯದಲ್ಲಿ ರದ್ದುಪಡಿಸಿತು ಎಂದು ಪಕ್ಷ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ಓದಿ: ಮಂದಿರ ಕಟ್ಟಿದರೆ ಕೊರೊನಾ ನಿಯಂತ್ರಣ ಸಾಧ್ಯವೆಂದು ಕೆಲವರು ಭಾವಿಸಿದ್ದಾರೆ: ಶರದ್ ಪವಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...