Homeಮುಖಪುಟಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಆರೋಪಿಸಿದ್ದಾರೆ.

- Advertisement -
- Advertisement -

ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಆರೋಪಿಸಿದ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ ಹಾಕಿದ್ದಾರೆ.

ಸಚಿನ್ ಪೈಲಟ್ ನಡೆಗೂ, ನನ್ನ ಅಥವಾ ನನ್ನ ತಂದೆ ಬಂಧನದಿಂದ ಬಿಡುಗಡೆಯಾಗಿರುವುದು ಒಂದಕ್ಕೊಂದು ಸಂಬಂಧ ಹೊಂದಿದೆ ಎಂಬ ದುರುದ್ದೇಶಪೂರಿತ ಸುಳ್ಳು ಆರೋಪದಿಂದ ನಾನು ಬೇಸರಗೊಂಡಿದ್ದೇನೆ. ಸಾಕು ಸಾಕು. ನನ್ನ ವಕೀಲರು ಭೂಪೇಶ್ ಬಾಗೆಲ್ ವಿರುದ್ದ ವಿಚಾರಣೆಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಬಂಧನದ ಏಳು ತಿಂಗಳ ನಂತರ ಉಮರ್ ಅಬ್ದುಲ್ಲಾರ ತಂದೆ ಮಾಜಿ ಕೇಂದ್ರ ಸಚಿವರಾದ ಫಾರೂಕ್ ಅಬ್ದುಲ್ಲಾರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಇದಾಗಿ ಕೆಲ ದಿನಗಳ ನಂತರ ಮಾರ್ಚ್ 24 ರಂದು ಶ್ರೀನಗರದಲ್ಲಿ ಒಮರ್ ಅಬ್ದುಲ್ಲಾ ಅವರನ್ನು ಕೂಡಾ ಬಿಡುಗಡೆ ಮಾಡಲಾಗಿತ್ತು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಬೃಹತ್ ಭದ್ರತಾ ನಿರ್ಬಂಧಗಳ ಭಾಗವಾಗಿ ಕಳೆದ ಆಗಸ್ಟ್ ನಲ್ಲಿ ಹಲವಾರು ಜನರನ್ನು ಬಂಧಿಸಲಾಗಿತ್ತು.

ಇಂದು ಪ್ರಕಟವಾದ ದಿ ಹಿಂದೂ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಸಚಿನ್ ಪೈಲಟ್ ಅವರ ಬಂಡಾಯಕ್ಕೂ, ತಂದೆ ಮಗನ ಬಿಡುಗಡೆಗೂ ಸಂಬಂಧ ಕಲ್ಪಿಸಲು ಪ್ರಯತ್ನಿಸಿದ್ದರು.

“ಸಚಿನ್ ಪೈಲಟ್‌ಗೆ ಸಂಬಂಧಿಸಿದಂತೆ, ನಾನು ರಾಜಸ್ಥಾನದ ಘಟನೆಗಳನ್ನು ಅಷ್ಟು ನಿಕಟವಾಗಿ ಗಮನಿಸುತ್ತಿದ್ದೇನೆ, ಒಮರ್ ಅಬ್ದುಲ್ಲಾ ಅವರನ್ನು ಏಕೆ ಬಿಡುಗಡೆ ಮಾಡಲಾಯಿತು ಎಂಬ ಕುತೂಹಲ ಮೂಡಿಸುತ್ತದೆ. ಅವರು ಮತ್ತು ಮೆಹಬೂಬಾ ಮುಫ್ತಿಯನ್ನು ಒಂದೇ ಕಾನೂನಿನ ಅಡಿಯಲ್ಲಿ ಬಂಧಿಸಲಾಗಿತ್ತು, ಆದರೆ ಮೆಹಬೂಬ ಇನ್ನೂ ಬಂಧನದಲ್ಲಿದ್ದಾರೆ, ಇವರು ಹೊರಗಿದ್ದಾರೆ. ಅಬ್ದುಲ್ಲಾ ಅವರು ಸಚಿನ್ ಪೈಲಟ್ ಅವರ ಹೆಂಡತಿಯ ಸಹೋಧರನಾಗಿದ್ದಾರೆ” ಎಂದು ಬಾಗೆಲ್ ಹೇಳಿದ್ದಾರೆ.

ಸಚಿನ್ ಪೈಲಟ್ ಅವರ ಪತ್ನಿ ಸಾರಾ ಪೈಲಟ್ ಒಮರ್ ಅಬ್ದುಲ್ಲಾರ ಸಹೋದರಿಯಾಗಿದ್ದಾರೆ.

ಅನುಕೂಲಕರ ರಾಜಕೀಯ ಪಟ್ಟುಗಳಿಗೆ ಬಳಸಲಾಗುವ ಇಂತಹ ದುರುದ್ದೇಶಪೂರಿತ ಸುಳ್ಳು ಮತ್ತು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನಿಸ್ಸಂದಿಗ್ಧವಾಗಿ ತಿರಸ್ಕರಿಸುತ್ತದೆ. ಈ ಹೇಳಿಕೆಯ ವಿರುದ್ದ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಭಾಗೆಲ್ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ಪ್ರತಿಕ್ರಿಯಿಸಿದೆ.

ಬಾಗೆಲ್ ಅವರ ಅಭಿಪ್ರಾಯವು ಕೀಳುಮಟ್ಟದ ಸುಳ್ಳಾಗಿದ್ದು, ಒಮರ್ ಅಬ್ದುಲ್ಲಾ ಅವರ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂದು ನ್ಯಾಷನಲ್ ಕಾನ್ಫೆರೆನ್ಸ್ ಹೇಳಿದೆ.

ತಮ್ಮ ಇಬ್ಬರು ನಾಯಕರ ಬಿಡುಗಡೆಯು ಕಾನೂನು ಸವಾಲನ್ನು ಎದುರಿಸಿ ಆಗಿರುವುದು ಎಂದು ಸಾಮಾನ್ಯರಿಗೂ ತಿಳಿದಿದೆ. ಸರ್ಕಾರವು ತನ್ನ ಅಕ್ರಮ ಬಂಧನ ಆದೇಶವನ್ನು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಯ ಸಮಯದಲ್ಲಿ ರದ್ದುಪಡಿಸಿತು ಎಂದು ಪಕ್ಷ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ಓದಿ: ಮಂದಿರ ಕಟ್ಟಿದರೆ ಕೊರೊನಾ ನಿಯಂತ್ರಣ ಸಾಧ್ಯವೆಂದು ಕೆಲವರು ಭಾವಿಸಿದ್ದಾರೆ: ಶರದ್ ಪವಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...