Homeಮುಖಪುಟಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಆರೋಪಿಸಿದ್ದಾರೆ.

- Advertisement -
- Advertisement -

ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಆರೋಪಿಸಿದ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ ಹಾಕಿದ್ದಾರೆ.

ಸಚಿನ್ ಪೈಲಟ್ ನಡೆಗೂ, ನನ್ನ ಅಥವಾ ನನ್ನ ತಂದೆ ಬಂಧನದಿಂದ ಬಿಡುಗಡೆಯಾಗಿರುವುದು ಒಂದಕ್ಕೊಂದು ಸಂಬಂಧ ಹೊಂದಿದೆ ಎಂಬ ದುರುದ್ದೇಶಪೂರಿತ ಸುಳ್ಳು ಆರೋಪದಿಂದ ನಾನು ಬೇಸರಗೊಂಡಿದ್ದೇನೆ. ಸಾಕು ಸಾಕು. ನನ್ನ ವಕೀಲರು ಭೂಪೇಶ್ ಬಾಗೆಲ್ ವಿರುದ್ದ ವಿಚಾರಣೆಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಬಂಧನದ ಏಳು ತಿಂಗಳ ನಂತರ ಉಮರ್ ಅಬ್ದುಲ್ಲಾರ ತಂದೆ ಮಾಜಿ ಕೇಂದ್ರ ಸಚಿವರಾದ ಫಾರೂಕ್ ಅಬ್ದುಲ್ಲಾರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಇದಾಗಿ ಕೆಲ ದಿನಗಳ ನಂತರ ಮಾರ್ಚ್ 24 ರಂದು ಶ್ರೀನಗರದಲ್ಲಿ ಒಮರ್ ಅಬ್ದುಲ್ಲಾ ಅವರನ್ನು ಕೂಡಾ ಬಿಡುಗಡೆ ಮಾಡಲಾಗಿತ್ತು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಬೃಹತ್ ಭದ್ರತಾ ನಿರ್ಬಂಧಗಳ ಭಾಗವಾಗಿ ಕಳೆದ ಆಗಸ್ಟ್ ನಲ್ಲಿ ಹಲವಾರು ಜನರನ್ನು ಬಂಧಿಸಲಾಗಿತ್ತು.

ಇಂದು ಪ್ರಕಟವಾದ ದಿ ಹಿಂದೂ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಸಚಿನ್ ಪೈಲಟ್ ಅವರ ಬಂಡಾಯಕ್ಕೂ, ತಂದೆ ಮಗನ ಬಿಡುಗಡೆಗೂ ಸಂಬಂಧ ಕಲ್ಪಿಸಲು ಪ್ರಯತ್ನಿಸಿದ್ದರು.

“ಸಚಿನ್ ಪೈಲಟ್‌ಗೆ ಸಂಬಂಧಿಸಿದಂತೆ, ನಾನು ರಾಜಸ್ಥಾನದ ಘಟನೆಗಳನ್ನು ಅಷ್ಟು ನಿಕಟವಾಗಿ ಗಮನಿಸುತ್ತಿದ್ದೇನೆ, ಒಮರ್ ಅಬ್ದುಲ್ಲಾ ಅವರನ್ನು ಏಕೆ ಬಿಡುಗಡೆ ಮಾಡಲಾಯಿತು ಎಂಬ ಕುತೂಹಲ ಮೂಡಿಸುತ್ತದೆ. ಅವರು ಮತ್ತು ಮೆಹಬೂಬಾ ಮುಫ್ತಿಯನ್ನು ಒಂದೇ ಕಾನೂನಿನ ಅಡಿಯಲ್ಲಿ ಬಂಧಿಸಲಾಗಿತ್ತು, ಆದರೆ ಮೆಹಬೂಬ ಇನ್ನೂ ಬಂಧನದಲ್ಲಿದ್ದಾರೆ, ಇವರು ಹೊರಗಿದ್ದಾರೆ. ಅಬ್ದುಲ್ಲಾ ಅವರು ಸಚಿನ್ ಪೈಲಟ್ ಅವರ ಹೆಂಡತಿಯ ಸಹೋಧರನಾಗಿದ್ದಾರೆ” ಎಂದು ಬಾಗೆಲ್ ಹೇಳಿದ್ದಾರೆ.

ಸಚಿನ್ ಪೈಲಟ್ ಅವರ ಪತ್ನಿ ಸಾರಾ ಪೈಲಟ್ ಒಮರ್ ಅಬ್ದುಲ್ಲಾರ ಸಹೋದರಿಯಾಗಿದ್ದಾರೆ.

ಅನುಕೂಲಕರ ರಾಜಕೀಯ ಪಟ್ಟುಗಳಿಗೆ ಬಳಸಲಾಗುವ ಇಂತಹ ದುರುದ್ದೇಶಪೂರಿತ ಸುಳ್ಳು ಮತ್ತು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನಿಸ್ಸಂದಿಗ್ಧವಾಗಿ ತಿರಸ್ಕರಿಸುತ್ತದೆ. ಈ ಹೇಳಿಕೆಯ ವಿರುದ್ದ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಭಾಗೆಲ್ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ಪ್ರತಿಕ್ರಿಯಿಸಿದೆ.

ಬಾಗೆಲ್ ಅವರ ಅಭಿಪ್ರಾಯವು ಕೀಳುಮಟ್ಟದ ಸುಳ್ಳಾಗಿದ್ದು, ಒಮರ್ ಅಬ್ದುಲ್ಲಾ ಅವರ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂದು ನ್ಯಾಷನಲ್ ಕಾನ್ಫೆರೆನ್ಸ್ ಹೇಳಿದೆ.

ತಮ್ಮ ಇಬ್ಬರು ನಾಯಕರ ಬಿಡುಗಡೆಯು ಕಾನೂನು ಸವಾಲನ್ನು ಎದುರಿಸಿ ಆಗಿರುವುದು ಎಂದು ಸಾಮಾನ್ಯರಿಗೂ ತಿಳಿದಿದೆ. ಸರ್ಕಾರವು ತನ್ನ ಅಕ್ರಮ ಬಂಧನ ಆದೇಶವನ್ನು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಯ ಸಮಯದಲ್ಲಿ ರದ್ದುಪಡಿಸಿತು ಎಂದು ಪಕ್ಷ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ಓದಿ: ಮಂದಿರ ಕಟ್ಟಿದರೆ ಕೊರೊನಾ ನಿಯಂತ್ರಣ ಸಾಧ್ಯವೆಂದು ಕೆಲವರು ಭಾವಿಸಿದ್ದಾರೆ: ಶರದ್ ಪವಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...