Homeಮುಖಪುಟಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಛತ್ತೀಸ್‌ಗಡ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ

ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಆರೋಪಿಸಿದ್ದಾರೆ.

- Advertisement -
- Advertisement -

ನ್ಯಾಷನಲ್ ಕಾನ್ಫರೆನ್ಸ್ ನಾಯಕರಾದ ಉಮರ್ ಅಬ್ದುಲ್ಲಾ ಹಾಗೂ ಫಾರುಕ್ ಅಬ್ದುಲ್ಲಾ ಬಂಧನದಿಂದ ಬಿಡುಗಡೆಗೊಂಡದ್ದು ಮತ್ತು ಸಚಿನ್ ಪೈಲಟ್ ರಾಜಸ್ಥಾನದಲ್ಲಿ ಬಂಡಾಯವೆದ್ದ ಘಟನೆಗೂ ಸಂಬಂಧವಿದೆ ಎಂದು ಆರೋಪಿಸಿದ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಉಮರ್ ಅಬ್ದುಲ್ಲಾ ಬೆದರಿಕೆ ಹಾಕಿದ್ದಾರೆ.

ಸಚಿನ್ ಪೈಲಟ್ ನಡೆಗೂ, ನನ್ನ ಅಥವಾ ನನ್ನ ತಂದೆ ಬಂಧನದಿಂದ ಬಿಡುಗಡೆಯಾಗಿರುವುದು ಒಂದಕ್ಕೊಂದು ಸಂಬಂಧ ಹೊಂದಿದೆ ಎಂಬ ದುರುದ್ದೇಶಪೂರಿತ ಸುಳ್ಳು ಆರೋಪದಿಂದ ನಾನು ಬೇಸರಗೊಂಡಿದ್ದೇನೆ. ಸಾಕು ಸಾಕು. ನನ್ನ ವಕೀಲರು ಭೂಪೇಶ್ ಬಾಗೆಲ್ ವಿರುದ್ದ ವಿಚಾರಣೆಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ಒಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ.

ಬಂಧನದ ಏಳು ತಿಂಗಳ ನಂತರ ಉಮರ್ ಅಬ್ದುಲ್ಲಾರ ತಂದೆ ಮಾಜಿ ಕೇಂದ್ರ ಸಚಿವರಾದ ಫಾರೂಕ್ ಅಬ್ದುಲ್ಲಾರನ್ನು ಗೃಹಬಂಧನದಿಂದ ಬಿಡುಗಡೆ ಮಾಡಲಾಗಿತ್ತು. ಇದಾಗಿ ಕೆಲ ದಿನಗಳ ನಂತರ ಮಾರ್ಚ್ 24 ರಂದು ಶ್ರೀನಗರದಲ್ಲಿ ಒಮರ್ ಅಬ್ದುಲ್ಲಾ ಅವರನ್ನು ಕೂಡಾ ಬಿಡುಗಡೆ ಮಾಡಲಾಗಿತ್ತು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಬೃಹತ್ ಭದ್ರತಾ ನಿರ್ಬಂಧಗಳ ಭಾಗವಾಗಿ ಕಳೆದ ಆಗಸ್ಟ್ ನಲ್ಲಿ ಹಲವಾರು ಜನರನ್ನು ಬಂಧಿಸಲಾಗಿತ್ತು.

ಇಂದು ಪ್ರಕಟವಾದ ದಿ ಹಿಂದೂ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೇಲ್ ಸಚಿನ್ ಪೈಲಟ್ ಅವರ ಬಂಡಾಯಕ್ಕೂ, ತಂದೆ ಮಗನ ಬಿಡುಗಡೆಗೂ ಸಂಬಂಧ ಕಲ್ಪಿಸಲು ಪ್ರಯತ್ನಿಸಿದ್ದರು.

“ಸಚಿನ್ ಪೈಲಟ್‌ಗೆ ಸಂಬಂಧಿಸಿದಂತೆ, ನಾನು ರಾಜಸ್ಥಾನದ ಘಟನೆಗಳನ್ನು ಅಷ್ಟು ನಿಕಟವಾಗಿ ಗಮನಿಸುತ್ತಿದ್ದೇನೆ, ಒಮರ್ ಅಬ್ದುಲ್ಲಾ ಅವರನ್ನು ಏಕೆ ಬಿಡುಗಡೆ ಮಾಡಲಾಯಿತು ಎಂಬ ಕುತೂಹಲ ಮೂಡಿಸುತ್ತದೆ. ಅವರು ಮತ್ತು ಮೆಹಬೂಬಾ ಮುಫ್ತಿಯನ್ನು ಒಂದೇ ಕಾನೂನಿನ ಅಡಿಯಲ್ಲಿ ಬಂಧಿಸಲಾಗಿತ್ತು, ಆದರೆ ಮೆಹಬೂಬ ಇನ್ನೂ ಬಂಧನದಲ್ಲಿದ್ದಾರೆ, ಇವರು ಹೊರಗಿದ್ದಾರೆ. ಅಬ್ದುಲ್ಲಾ ಅವರು ಸಚಿನ್ ಪೈಲಟ್ ಅವರ ಹೆಂಡತಿಯ ಸಹೋಧರನಾಗಿದ್ದಾರೆ” ಎಂದು ಬಾಗೆಲ್ ಹೇಳಿದ್ದಾರೆ.

ಸಚಿನ್ ಪೈಲಟ್ ಅವರ ಪತ್ನಿ ಸಾರಾ ಪೈಲಟ್ ಒಮರ್ ಅಬ್ದುಲ್ಲಾರ ಸಹೋದರಿಯಾಗಿದ್ದಾರೆ.

ಅನುಕೂಲಕರ ರಾಜಕೀಯ ಪಟ್ಟುಗಳಿಗೆ ಬಳಸಲಾಗುವ ಇಂತಹ ದುರುದ್ದೇಶಪೂರಿತ ಸುಳ್ಳು ಮತ್ತು ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನಿಸ್ಸಂದಿಗ್ಧವಾಗಿ ತಿರಸ್ಕರಿಸುತ್ತದೆ. ಈ ಹೇಳಿಕೆಯ ವಿರುದ್ದ ಕಾನೂನು ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಭಾಗೆಲ್ ಹೇಳಿಕೆಗೆ ನ್ಯಾಷನಲ್ ಕಾನ್ಫರೆನ್ಸ್ ಪ್ರತಿಕ್ರಿಯಿಸಿದೆ.

ಬಾಗೆಲ್ ಅವರ ಅಭಿಪ್ರಾಯವು ಕೀಳುಮಟ್ಟದ ಸುಳ್ಳಾಗಿದ್ದು, ಒಮರ್ ಅಬ್ದುಲ್ಲಾ ಅವರ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂದು ನ್ಯಾಷನಲ್ ಕಾನ್ಫೆರೆನ್ಸ್ ಹೇಳಿದೆ.

ತಮ್ಮ ಇಬ್ಬರು ನಾಯಕರ ಬಿಡುಗಡೆಯು ಕಾನೂನು ಸವಾಲನ್ನು ಎದುರಿಸಿ ಆಗಿರುವುದು ಎಂದು ಸಾಮಾನ್ಯರಿಗೂ ತಿಳಿದಿದೆ. ಸರ್ಕಾರವು ತನ್ನ ಅಕ್ರಮ ಬಂಧನ ಆದೇಶವನ್ನು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಯ ಸಮಯದಲ್ಲಿ ರದ್ದುಪಡಿಸಿತು ಎಂದು ಪಕ್ಷ ತನ್ನ ಹೇಳಿಕೆಯಲ್ಲಿ ತಿಳಿಸಿದೆ.


ಓದಿ: ಮಂದಿರ ಕಟ್ಟಿದರೆ ಕೊರೊನಾ ನಿಯಂತ್ರಣ ಸಾಧ್ಯವೆಂದು ಕೆಲವರು ಭಾವಿಸಿದ್ದಾರೆ: ಶರದ್ ಪವಾರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...