Homeಮುಖಪುಟದೆಹಲಿ ಗಲಭೆ ಕೇಸ್‌ನಲ್ಲಿ ಉಮರ್‌ ಖಾಲಿದ್‌ ಆರೋಪ ಮುಕ್ತ: ಯುಎಪಿಎ ಪ್ರಕರಣದಲ್ಲೂ ಸಮಾನ ಆರೋಪ ಗುರುತಿಸಿದ...

ದೆಹಲಿ ಗಲಭೆ ಕೇಸ್‌ನಲ್ಲಿ ಉಮರ್‌ ಖಾಲಿದ್‌ ಆರೋಪ ಮುಕ್ತ: ಯುಎಪಿಎ ಪ್ರಕರಣದಲ್ಲೂ ಸಮಾನ ಆರೋಪ ಗುರುತಿಸಿದ ಕೋರ್ಟ್

- Advertisement -
- Advertisement -

ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಯುನೈಟೆಡ್ ಎಗೇನ್‌ಸ್ಟ್‌ ಹೇಟ್‌‌ ಸಂಸ್ಥಾಪಕ ಖಾಲಿದ್ ಸೈಫಿ ಅವರನ್ನು ಕೈಬಿಡುವಂತೆ ದೆಹಲಿ ನ್ಯಾಯಾಲಯ ಹೇಳಿದೆ. ಈ ಕುರಿತ ವಿವರವಾದ ಆದೇಶದಲ್ಲಿ, “ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ ಅವರು ಈಗಾಗಲೇ ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿದ್ದಾರೆ” ಎಂಬ ಅಂಶವನ್ನು ದೆಹಲಿ ನ್ಯಾಯಾಲಯ ಗುರುತಿಸಿದೆ.

ಫೆಬ್ರವರಿ 24, 2020ರಂದು ಚಾಂದ್ ಬಾಗ್ ಪುಲಿಯಾ ಬಳಿ ದೊಡ್ಡ ಜನಸಮೂಹ ಜಮಾಯಿಸಿ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು ಎಂದು ಕಾನ್‌ಸ್ಟೆಬಲ್ ಹೇಳಿದ್ದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ಅನ್ನು ಸೆಕ್ಷನ್ 109, 114, 147, 148, 149, 153-ಎ, 186, 212, 353, 395, 427, 435, 436, 452, 454, 505, 34 ಮತ್ತು 120 ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ.

ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯಿದೆಯ 3 ಮತ್ತು 4, ಶಸ್ತ್ರಾಸ್ತ್ರ ಕಾಯಿದೆಯ ವಿಭಾಗ 25 ಮತ್ತು 27ನೇ ಸೆಕ್ಷನ್‌ಗಳನ್ನೂ ಇಲ್ಲಿ ಸೇರಿಸಲಾಗಿದೆ. ಈ ಎಫ್‌ಐಆರ್‌ ಸಂಬಂಧಿಸಿದಂತೆ ಕೋರ್ಟ್ ಆರೋಪ ಮುಕ್ತವನ್ನಾಗಿ ಮಾಡಲಾಗಿದೆ. ಆದರೆ ಯುಎಪಿಎ ಪ್ರಕರಣದಲ್ಲಿ ಇನ್ನೂ ಜಾಮೀನು ಸಿಗದ ಕಾರಣ ಇಬ್ಬರೂ ನ್ಯಾಯಾಂಗ ಬಂಧನದಲ್ಲಿಯೇ ಇದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, “ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಅವರ ಕಟ್ಟಡವನ್ನು ಗಲಭೆಕೋರರು ‘ಇಟ್ಟಿಗೆ, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಮತ್ತು ಆಸಿಡ್ ಬಾಂಬ್ ದಾಳಿ ನಡೆಸಲು ಬಳಸಿದ್ದಾರೆ.”

ಇದನ್ನೂ ಓದಿರಿ: ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಕಟ್ಟಡದ ಮೂರನೇ ಮಹಡಿ ಮತ್ತು ಮೇಲ್ಛಾವಣಿಯಲ್ಲಿ ಈ ವಸ್ತು ಬಿದ್ದಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಉಮರ್ ಖಾಲಿದ್ ಅವರು ಜನಸಮೂಹದ ಭಾಗವಾಗಿಲ್ಲದಿದ್ದರೂ, ಉಮರ್‌ ಮತ್ತು ಖಾಲಿದ್ ಸೈಫೀ ಅವರನ್ನು ಪ್ರಕರಣದಲ್ಲಿ ಸೇರಿಸಿ ಕ್ರಿಮಿನಲ್ ಪಿತೂರಿಯ ಆರೋಪ ಹೊರಿಸಲಾಗಿದೆ.

ಉಮರ್ ಖಾಲಿದ್‌ಗೆ ಜಾಮೀನು ನೀಡುವಾಗ, “ಉಮರ್‌‌ ವಿರುದ್ಧದ ನಿಖರವಲ್ಲದ ಆಧಾರದ ಮೇಲೆ ಅವರನ್ನು ಜೈಲಿನಲ್ಲಿ ಉಳಿಯಲು ಅನುಮತಿಸಲಾಗುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು ದೋಷಾರೋಪ ಪಟ್ಟಿಯನ್ನು ಸಹ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಗಮನಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಪುಲಸ್ತ್ಯ ಪ್ರಮಚಲ ಅವರು, ಉಮರ್ ಮತ್ತು ಸೈಫಿ ವಿರುದ್ಧ ಮಾಡಲಾದ ಆರೋಪಗಳು ಈ ಪ್ರಕರಣದಲ್ಲಿ ತನಿಖೆ ನಡೆಸಿದ ಘಟನೆಗಿಂತ ಹೆಚ್ಚಾಗಿ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿವೆ ಎಂದು ಗಮನಿಸಿದ್ದಾರೆ.

“ದೆಹಲಿಯಲ್ಲಿ ಗಲಭೆಗಳನ್ನು ಪ್ರಚೋದಿಸುವ ದೊಡ್ಡ ಪಿತೂರಿಯು ಈಗಾಗಲೇ ಪರಿಗಣನೆಯ ವಿಷಯವಾಗಿದೆ. ಆದ್ದರಿಂದ ಈ ಇಬ್ಬರು ಆರೋಪಿಗಳು ಪ್ರಸ್ತುತ ಪ್ರಕರಣದಲ್ಲಿ ಬಿಡುಗಡೆಗೆ ಅರ್ಹರಾಗಿದ್ದಾರೆ” ಎಂದು ನ್ಯಾಯಾಲಯ ಹೇಳಿದೆ.

ಸಹ ಆರೋಪಿಗಳಾದ ತಾರಿಕ್ ಮೊಯಿನ್ ರಿಜ್ವಿ, ಜಾಗರ್ ಖಾನ್ ಮತ್ತು ಮೊಹಮ್ಮದ್ ಇಲಿಯಾಸ್ ಅವರನ್ನೂ ನ್ಯಾಯಾಲಯ ಪ್ರಕರಣದಿಂದ ಬಿಡುಗಡೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...