Homeಮುಖಪುಟದೆಹಲಿ ಗಲಭೆ ಕೇಸ್‌ನಲ್ಲಿ ಉಮರ್‌ ಖಾಲಿದ್‌ ಆರೋಪ ಮುಕ್ತ: ಯುಎಪಿಎ ಪ್ರಕರಣದಲ್ಲೂ ಸಮಾನ ಆರೋಪ ಗುರುತಿಸಿದ...

ದೆಹಲಿ ಗಲಭೆ ಕೇಸ್‌ನಲ್ಲಿ ಉಮರ್‌ ಖಾಲಿದ್‌ ಆರೋಪ ಮುಕ್ತ: ಯುಎಪಿಎ ಪ್ರಕರಣದಲ್ಲೂ ಸಮಾನ ಆರೋಪ ಗುರುತಿಸಿದ ಕೋರ್ಟ್

- Advertisement -
- Advertisement -

ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ಯುನೈಟೆಡ್ ಎಗೇನ್‌ಸ್ಟ್‌ ಹೇಟ್‌‌ ಸಂಸ್ಥಾಪಕ ಖಾಲಿದ್ ಸೈಫಿ ಅವರನ್ನು ಕೈಬಿಡುವಂತೆ ದೆಹಲಿ ನ್ಯಾಯಾಲಯ ಹೇಳಿದೆ. ಈ ಕುರಿತ ವಿವರವಾದ ಆದೇಶದಲ್ಲಿ, “ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣದಲ್ಲಿ ಅವರು ಈಗಾಗಲೇ ಇದೇ ರೀತಿಯ ಆರೋಪಗಳನ್ನು ಎದುರಿಸುತ್ತಿದ್ದಾರೆ” ಎಂಬ ಅಂಶವನ್ನು ದೆಹಲಿ ನ್ಯಾಯಾಲಯ ಗುರುತಿಸಿದೆ.

ಫೆಬ್ರವರಿ 24, 2020ರಂದು ಚಾಂದ್ ಬಾಗ್ ಪುಲಿಯಾ ಬಳಿ ದೊಡ್ಡ ಜನಸಮೂಹ ಜಮಾಯಿಸಿ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು ಎಂದು ಕಾನ್‌ಸ್ಟೆಬಲ್ ಹೇಳಿದ್ದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಎಫ್‌ಐಆರ್ ಅನ್ನು ಸೆಕ್ಷನ್ 109, 114, 147, 148, 149, 153-ಎ, 186, 212, 353, 395, 427, 435, 436, 452, 454, 505, 34 ಮತ್ತು 120 ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ.

ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯಿದೆಯ 3 ಮತ್ತು 4, ಶಸ್ತ್ರಾಸ್ತ್ರ ಕಾಯಿದೆಯ ವಿಭಾಗ 25 ಮತ್ತು 27ನೇ ಸೆಕ್ಷನ್‌ಗಳನ್ನೂ ಇಲ್ಲಿ ಸೇರಿಸಲಾಗಿದೆ. ಈ ಎಫ್‌ಐಆರ್‌ ಸಂಬಂಧಿಸಿದಂತೆ ಕೋರ್ಟ್ ಆರೋಪ ಮುಕ್ತವನ್ನಾಗಿ ಮಾಡಲಾಗಿದೆ. ಆದರೆ ಯುಎಪಿಎ ಪ್ರಕರಣದಲ್ಲಿ ಇನ್ನೂ ಜಾಮೀನು ಸಿಗದ ಕಾರಣ ಇಬ್ಬರೂ ನ್ಯಾಯಾಂಗ ಬಂಧನದಲ್ಲಿಯೇ ಇದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, “ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಅವರ ಕಟ್ಟಡವನ್ನು ಗಲಭೆಕೋರರು ‘ಇಟ್ಟಿಗೆ, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಮತ್ತು ಆಸಿಡ್ ಬಾಂಬ್ ದಾಳಿ ನಡೆಸಲು ಬಳಸಿದ್ದಾರೆ.”

ಇದನ್ನೂ ಓದಿರಿ: ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಕಟ್ಟಡದ ಮೂರನೇ ಮಹಡಿ ಮತ್ತು ಮೇಲ್ಛಾವಣಿಯಲ್ಲಿ ಈ ವಸ್ತು ಬಿದ್ದಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಉಮರ್ ಖಾಲಿದ್ ಅವರು ಜನಸಮೂಹದ ಭಾಗವಾಗಿಲ್ಲದಿದ್ದರೂ, ಉಮರ್‌ ಮತ್ತು ಖಾಲಿದ್ ಸೈಫೀ ಅವರನ್ನು ಪ್ರಕರಣದಲ್ಲಿ ಸೇರಿಸಿ ಕ್ರಿಮಿನಲ್ ಪಿತೂರಿಯ ಆರೋಪ ಹೊರಿಸಲಾಗಿದೆ.

ಉಮರ್ ಖಾಲಿದ್‌ಗೆ ಜಾಮೀನು ನೀಡುವಾಗ, “ಉಮರ್‌‌ ವಿರುದ್ಧದ ನಿಖರವಲ್ಲದ ಆಧಾರದ ಮೇಲೆ ಅವರನ್ನು ಜೈಲಿನಲ್ಲಿ ಉಳಿಯಲು ಅನುಮತಿಸಲಾಗುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು ದೋಷಾರೋಪ ಪಟ್ಟಿಯನ್ನು ಸಹ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಗಮನಿಸಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಪುಲಸ್ತ್ಯ ಪ್ರಮಚಲ ಅವರು, ಉಮರ್ ಮತ್ತು ಸೈಫಿ ವಿರುದ್ಧ ಮಾಡಲಾದ ಆರೋಪಗಳು ಈ ಪ್ರಕರಣದಲ್ಲಿ ತನಿಖೆ ನಡೆಸಿದ ಘಟನೆಗಿಂತ ಹೆಚ್ಚಾಗಿ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿವೆ ಎಂದು ಗಮನಿಸಿದ್ದಾರೆ.

“ದೆಹಲಿಯಲ್ಲಿ ಗಲಭೆಗಳನ್ನು ಪ್ರಚೋದಿಸುವ ದೊಡ್ಡ ಪಿತೂರಿಯು ಈಗಾಗಲೇ ಪರಿಗಣನೆಯ ವಿಷಯವಾಗಿದೆ. ಆದ್ದರಿಂದ ಈ ಇಬ್ಬರು ಆರೋಪಿಗಳು ಪ್ರಸ್ತುತ ಪ್ರಕರಣದಲ್ಲಿ ಬಿಡುಗಡೆಗೆ ಅರ್ಹರಾಗಿದ್ದಾರೆ” ಎಂದು ನ್ಯಾಯಾಲಯ ಹೇಳಿದೆ.

ಸಹ ಆರೋಪಿಗಳಾದ ತಾರಿಕ್ ಮೊಯಿನ್ ರಿಜ್ವಿ, ಜಾಗರ್ ಖಾನ್ ಮತ್ತು ಮೊಹಮ್ಮದ್ ಇಲಿಯಾಸ್ ಅವರನ್ನೂ ನ್ಯಾಯಾಲಯ ಪ್ರಕರಣದಿಂದ ಬಿಡುಗಡೆ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...