Homeಮುಖಪುಟದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್‌, ಖಾಲಿದ್ ಸೈಫಿ ಆರೋಪ ಮುಕ್ತ

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್‌, ಖಾಲಿದ್ ಸೈಫಿ ಆರೋಪ ಮುಕ್ತ

- Advertisement -
- Advertisement -

2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್ ಮತ್ತು ಯುನೈಟೆಡ್ ಎಗೇನ್‌ಸ್ಟ್‌ ಹೇಟ್ ಸದಸ್ಯ ಖಾಲಿದ್ ಸೈಫಿ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ ಆರೋಪ ಮುಕ್ತ ಮಾಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಖಜೂರಿ ಖಾಸ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ (101/2020) ಸಂಬಂಧಿಸಿದಂತೆ ಇಂದು ಆದೇಶವನ್ನು ಪ್ರಕಟಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಖಾಲಿದ್ ಮತ್ತು ಸೈಫಿ ಇಬ್ಬರಿಗೂ ಜಾಮೀನು ದೊರೆತಿತ್ತು. ಆದಾಗ್ಯೂ, ಗಲಭೆಯ ಹಿಂದೆ ದೊಡ್ಡ ಪಿತೂರಿ ಇದೆ ಎಂದು ಆರೋಪಿಸಿ ಯುಎಪಿಎ ಪ್ರಕರಣ ದಾಖಲಿಸಿರುವುದರಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಎಫ್‌ಐಆರ್ ಅನ್ನು ಸೆಕ್ಷನ್ 109, 114, 147, 148, 149, 153-ಎ, 186, 212, 353, 395, 427, 435, 436, 452, 454, 505, 34 ಮತ್ತು 120 ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯಿದೆಯ 3 ಮತ್ತು 4, ಶಸ್ತ್ರಾಸ್ತ್ರ ಕಾಯಿದೆಯ ವಿಭಾಗ 25 ಮತ್ತು 27ನೇ ಸೆಕ್ಷನ್‌ಗಳನ್ನೂ ಇಲ್ಲಿ ಸೇರಿಸಲಾಗಿದೆ.

ಫೆಬ್ರವರಿ 24, 2020ರಂದು ಚಾಂದ್ ಬಾಗ್ ಪುಲಿಯಾ ಬಳಿ ದೊಡ್ಡ ಜನಸಮೂಹ ಜಮಾಯಿಸಿ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು ಎಂದು ಕಾನ್‌ಸ್ಟೆಬಲ್ ಹೇಳಿದ್ದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಅಧಿಕಾರಿ ತನ್ನನ್ನು ರಕ್ಷಿಸಿಕೊಳ್ಳಲು ಹತ್ತಿರದ ಪಾರ್ಕಿಂಗ್ ಸ್ಥಳಕ್ಕೆ ಹೋದಾಗ, ಜನರ ಗುಂಪು ಪಾರ್ಕಿಂಗ್ ಲಾಟ್‌ನ ಶಟರ್ ಒಡೆದು ಒಳಗಿದ್ದವರಿಗೆ ಥಳಿಸಿತು. ವಾಹನಗಳಿಗೆ ಬೆಂಕಿ ಹಚ್ಚಿತು ಎಂದು ಆರೋಪಿಸಲಾಗಿದೆ. ನಂತರ ಪ್ರಕರಣವನ್ನು ಫೆಬ್ರವರಿ 28, 2020 ರಂದು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಯಿತು.

ಪ್ರಾಸಿಕ್ಯೂಷನ್ ಪ್ರಕಾರ, “ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಅವರ ಕಟ್ಟಡವನ್ನು ಗಲಭೆಕೋರರು ‘ಇಟ್ಟಿಗೆ, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಮತ್ತು ಆಸಿಡ್ ಬಾಂಬ್ ದಾಳಿ ನಡೆಸಲು ಬಳಸಿದ್ದಾರೆ.”

ಇದನ್ನೂ ಓದಿರಿ: ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಕಟ್ಟಡದ ಮೂರನೇ ಮಹಡಿ ಮತ್ತು ಮೇಲ್ಛಾವಣಿಯಲ್ಲಿ ಈ ವಸ್ತು ಬಿದ್ದಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಉಮರ್ ಖಾಲಿದ್ ಅವರು ಜನಸಮೂಹದ ಭಾಗವಾಗಿಲ್ಲದಿದ್ದರೂ, ಉಮರ್‌ ಮತ್ತು ಖಾಲಿದ್ ಸೈಫೀ ಅವರನ್ನು ಪ್ರಕರಣದಲ್ಲಿ ಸೇರಿಸಿ ಕ್ರಿಮಿನಲ್ ಪಿತೂರಿಯ ಆರೋಪ ಹೊರಿಸಲಾಗಿದೆ.

ಉಮರ್ ಖಾಲಿದ್‌ಗೆ ಜಾಮೀನು ನೀಡುವಾಗ, “ಉಮರ್‌‌ ವಿರುದ್ಧದ ನಿಖರವಲ್ಲದ ಆಧಾರದ ಮೇಲೆ ಅವರನ್ನು ಜೈಲಿನಲ್ಲಿ ಉಳಿಯಲು ಅನುಮತಿಸಲಾಗುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು ದೋಷಾರೋಪ ಪಟ್ಟಿಯನ್ನು ಸಹ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಗಮನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...