Homeಮುಖಪುಟದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್‌, ಖಾಲಿದ್ ಸೈಫಿ ಆರೋಪ ಮುಕ್ತ

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್‌, ಖಾಲಿದ್ ಸೈಫಿ ಆರೋಪ ಮುಕ್ತ

- Advertisement -
- Advertisement -

2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್ ಮತ್ತು ಯುನೈಟೆಡ್ ಎಗೇನ್‌ಸ್ಟ್‌ ಹೇಟ್ ಸದಸ್ಯ ಖಾಲಿದ್ ಸೈಫಿ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ ಆರೋಪ ಮುಕ್ತ ಮಾಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಖಜೂರಿ ಖಾಸ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ (101/2020) ಸಂಬಂಧಿಸಿದಂತೆ ಇಂದು ಆದೇಶವನ್ನು ಪ್ರಕಟಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಖಾಲಿದ್ ಮತ್ತು ಸೈಫಿ ಇಬ್ಬರಿಗೂ ಜಾಮೀನು ದೊರೆತಿತ್ತು. ಆದಾಗ್ಯೂ, ಗಲಭೆಯ ಹಿಂದೆ ದೊಡ್ಡ ಪಿತೂರಿ ಇದೆ ಎಂದು ಆರೋಪಿಸಿ ಯುಎಪಿಎ ಪ್ರಕರಣ ದಾಖಲಿಸಿರುವುದರಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಎಫ್‌ಐಆರ್ ಅನ್ನು ಸೆಕ್ಷನ್ 109, 114, 147, 148, 149, 153-ಎ, 186, 212, 353, 395, 427, 435, 436, 452, 454, 505, 34 ಮತ್ತು 120 ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯಿದೆಯ 3 ಮತ್ತು 4, ಶಸ್ತ್ರಾಸ್ತ್ರ ಕಾಯಿದೆಯ ವಿಭಾಗ 25 ಮತ್ತು 27ನೇ ಸೆಕ್ಷನ್‌ಗಳನ್ನೂ ಇಲ್ಲಿ ಸೇರಿಸಲಾಗಿದೆ.

ಫೆಬ್ರವರಿ 24, 2020ರಂದು ಚಾಂದ್ ಬಾಗ್ ಪುಲಿಯಾ ಬಳಿ ದೊಡ್ಡ ಜನಸಮೂಹ ಜಮಾಯಿಸಿ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು ಎಂದು ಕಾನ್‌ಸ್ಟೆಬಲ್ ಹೇಳಿದ್ದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಅಧಿಕಾರಿ ತನ್ನನ್ನು ರಕ್ಷಿಸಿಕೊಳ್ಳಲು ಹತ್ತಿರದ ಪಾರ್ಕಿಂಗ್ ಸ್ಥಳಕ್ಕೆ ಹೋದಾಗ, ಜನರ ಗುಂಪು ಪಾರ್ಕಿಂಗ್ ಲಾಟ್‌ನ ಶಟರ್ ಒಡೆದು ಒಳಗಿದ್ದವರಿಗೆ ಥಳಿಸಿತು. ವಾಹನಗಳಿಗೆ ಬೆಂಕಿ ಹಚ್ಚಿತು ಎಂದು ಆರೋಪಿಸಲಾಗಿದೆ. ನಂತರ ಪ್ರಕರಣವನ್ನು ಫೆಬ್ರವರಿ 28, 2020 ರಂದು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಯಿತು.

ಪ್ರಾಸಿಕ್ಯೂಷನ್ ಪ್ರಕಾರ, “ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಅವರ ಕಟ್ಟಡವನ್ನು ಗಲಭೆಕೋರರು ‘ಇಟ್ಟಿಗೆ, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಮತ್ತು ಆಸಿಡ್ ಬಾಂಬ್ ದಾಳಿ ನಡೆಸಲು ಬಳಸಿದ್ದಾರೆ.”

ಇದನ್ನೂ ಓದಿರಿ: ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಕಟ್ಟಡದ ಮೂರನೇ ಮಹಡಿ ಮತ್ತು ಮೇಲ್ಛಾವಣಿಯಲ್ಲಿ ಈ ವಸ್ತು ಬಿದ್ದಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಉಮರ್ ಖಾಲಿದ್ ಅವರು ಜನಸಮೂಹದ ಭಾಗವಾಗಿಲ್ಲದಿದ್ದರೂ, ಉಮರ್‌ ಮತ್ತು ಖಾಲಿದ್ ಸೈಫೀ ಅವರನ್ನು ಪ್ರಕರಣದಲ್ಲಿ ಸೇರಿಸಿ ಕ್ರಿಮಿನಲ್ ಪಿತೂರಿಯ ಆರೋಪ ಹೊರಿಸಲಾಗಿದೆ.

ಉಮರ್ ಖಾಲಿದ್‌ಗೆ ಜಾಮೀನು ನೀಡುವಾಗ, “ಉಮರ್‌‌ ವಿರುದ್ಧದ ನಿಖರವಲ್ಲದ ಆಧಾರದ ಮೇಲೆ ಅವರನ್ನು ಜೈಲಿನಲ್ಲಿ ಉಳಿಯಲು ಅನುಮತಿಸಲಾಗುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು ದೋಷಾರೋಪ ಪಟ್ಟಿಯನ್ನು ಸಹ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಗಮನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...