Homeಮುಖಪುಟದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್‌, ಖಾಲಿದ್ ಸೈಫಿ ಆರೋಪ ಮುಕ್ತ

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್‌, ಖಾಲಿದ್ ಸೈಫಿ ಆರೋಪ ಮುಕ್ತ

- Advertisement -
- Advertisement -

2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್ ಮತ್ತು ಯುನೈಟೆಡ್ ಎಗೇನ್‌ಸ್ಟ್‌ ಹೇಟ್ ಸದಸ್ಯ ಖಾಲಿದ್ ಸೈಫಿ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ ಆರೋಪ ಮುಕ್ತ ಮಾಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಖಜೂರಿ ಖಾಸ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ (101/2020) ಸಂಬಂಧಿಸಿದಂತೆ ಇಂದು ಆದೇಶವನ್ನು ಪ್ರಕಟಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಖಾಲಿದ್ ಮತ್ತು ಸೈಫಿ ಇಬ್ಬರಿಗೂ ಜಾಮೀನು ದೊರೆತಿತ್ತು. ಆದಾಗ್ಯೂ, ಗಲಭೆಯ ಹಿಂದೆ ದೊಡ್ಡ ಪಿತೂರಿ ಇದೆ ಎಂದು ಆರೋಪಿಸಿ ಯುಎಪಿಎ ಪ್ರಕರಣ ದಾಖಲಿಸಿರುವುದರಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಎಫ್‌ಐಆರ್ ಅನ್ನು ಸೆಕ್ಷನ್ 109, 114, 147, 148, 149, 153-ಎ, 186, 212, 353, 395, 427, 435, 436, 452, 454, 505, 34 ಮತ್ತು 120 ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯಿದೆಯ 3 ಮತ್ತು 4, ಶಸ್ತ್ರಾಸ್ತ್ರ ಕಾಯಿದೆಯ ವಿಭಾಗ 25 ಮತ್ತು 27ನೇ ಸೆಕ್ಷನ್‌ಗಳನ್ನೂ ಇಲ್ಲಿ ಸೇರಿಸಲಾಗಿದೆ.

ಫೆಬ್ರವರಿ 24, 2020ರಂದು ಚಾಂದ್ ಬಾಗ್ ಪುಲಿಯಾ ಬಳಿ ದೊಡ್ಡ ಜನಸಮೂಹ ಜಮಾಯಿಸಿ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು ಎಂದು ಕಾನ್‌ಸ್ಟೆಬಲ್ ಹೇಳಿದ್ದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಅಧಿಕಾರಿ ತನ್ನನ್ನು ರಕ್ಷಿಸಿಕೊಳ್ಳಲು ಹತ್ತಿರದ ಪಾರ್ಕಿಂಗ್ ಸ್ಥಳಕ್ಕೆ ಹೋದಾಗ, ಜನರ ಗುಂಪು ಪಾರ್ಕಿಂಗ್ ಲಾಟ್‌ನ ಶಟರ್ ಒಡೆದು ಒಳಗಿದ್ದವರಿಗೆ ಥಳಿಸಿತು. ವಾಹನಗಳಿಗೆ ಬೆಂಕಿ ಹಚ್ಚಿತು ಎಂದು ಆರೋಪಿಸಲಾಗಿದೆ. ನಂತರ ಪ್ರಕರಣವನ್ನು ಫೆಬ್ರವರಿ 28, 2020 ರಂದು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಯಿತು.

ಪ್ರಾಸಿಕ್ಯೂಷನ್ ಪ್ರಕಾರ, “ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಅವರ ಕಟ್ಟಡವನ್ನು ಗಲಭೆಕೋರರು ‘ಇಟ್ಟಿಗೆ, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಮತ್ತು ಆಸಿಡ್ ಬಾಂಬ್ ದಾಳಿ ನಡೆಸಲು ಬಳಸಿದ್ದಾರೆ.”

ಇದನ್ನೂ ಓದಿರಿ: ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಕಟ್ಟಡದ ಮೂರನೇ ಮಹಡಿ ಮತ್ತು ಮೇಲ್ಛಾವಣಿಯಲ್ಲಿ ಈ ವಸ್ತು ಬಿದ್ದಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಉಮರ್ ಖಾಲಿದ್ ಅವರು ಜನಸಮೂಹದ ಭಾಗವಾಗಿಲ್ಲದಿದ್ದರೂ, ಉಮರ್‌ ಮತ್ತು ಖಾಲಿದ್ ಸೈಫೀ ಅವರನ್ನು ಪ್ರಕರಣದಲ್ಲಿ ಸೇರಿಸಿ ಕ್ರಿಮಿನಲ್ ಪಿತೂರಿಯ ಆರೋಪ ಹೊರಿಸಲಾಗಿದೆ.

ಉಮರ್ ಖಾಲಿದ್‌ಗೆ ಜಾಮೀನು ನೀಡುವಾಗ, “ಉಮರ್‌‌ ವಿರುದ್ಧದ ನಿಖರವಲ್ಲದ ಆಧಾರದ ಮೇಲೆ ಅವರನ್ನು ಜೈಲಿನಲ್ಲಿ ಉಳಿಯಲು ಅನುಮತಿಸಲಾಗುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು ದೋಷಾರೋಪ ಪಟ್ಟಿಯನ್ನು ಸಹ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಗಮನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಯೋತ್ಪಾದಕರ ಸಂಪರ್ಕ ಶಂಕೆ: ಮಹಾರಾಷ್ಟ್ರದ 21 ಸ್ಥಳಗಳಲ್ಲಿ ದಾಳಿ ನಡೆಸಿದ ಎಟಿಎಸ್

ಮುಂಬೈ: ಉಗ್ರಗಾಮಿ ಚಟುವಟಿಕೆಗಳ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ನಂತರ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಭಾನುವಾರ ಬೆಳಿಗ್ಗೆ ಸುಮಾರು 21 ಸ್ಥಳಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಯಾವತ್ಮಲ್ ಮತ್ತು ಅಹಲ್ಯಾನಗರ...

ಮೋದಿ ನೀತಿಗಳನ್ನು ಟೀಕಿಸಿದ್ದ ನನ್ನ ಭಾಷಣದ ಭಾಗಗಳನ್ನು ರಾಜ್ಯಸಭೆ ಕಡತದಿಂದ ತೆಗೆಯಲಾಗಿದೆ : ಮಲ್ಲಿಕಾರ್ಜುನ ಖರ್ಗೆ

ಫೆಬ್ರವರಿ 4ರಂದು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯ ಸಂದರ್ಭದಲ್ಲಿ ತಾನು ಮಾಡಿದ್ದ ಭಾಷಣದ ಬಹುಪಾಲು ಅಂಶಗಳನ್ನು ಯಾವುದೇ ಸಮರ್ಪಕ ಕಾರಣ ನೀಡದೆ ರಾಜ್ಯಸಭೆಯ ಅಧಿಕೃತ ದಾಖಲೆಗಳಿಂದ ತೆಗೆದುಹಾಕಲಾಗಿದೆ ಎಂದು ವಿರೋಧ...

ಬೌದ್ಧಿಕ ದಾರಿದ್ರ್ಯ ಮತ್ತು ಸಾಂಸ್ಥಿಕ ಹತ್ಯೆಗಳು: ಡಾ.ಪಿ. ನಂದಕುಮಾರ 

                                                      ಸಂವಿಧಾನ ವಿರೋಧಿ ಹಾಗೂ ದಲಿತ, ಹಿಂದುಳಿದ, ಮಹಿಳೆಯರ ಹಕ್ಕುಗಳ ಅಂದಿನ ಮನುವಾದಿ  ಆರ್ಯಪಳೆಯುಳಿಕೆಗಳೆ ಇಂದೂ ಯುಜಿಸಿ- 2026ರ ಕರಡು ವಿರುದ್ಧ ಷಂಡ್ಯಂತ್ರ ರೂಪಿಸುತ್ತಿರುವುದು. ಕೇವಲ 3% ಜನಾಭಿಪ್ರಾಯವೇ ಭಾರತೀಯ ಒಟ್ಟು ಬಹುಸಮುದಾಯಗಳ ಅಭಿಪ್ರಾಯವೆಂಬಂತೆ...

ಬಾಗಲಕೋಟೆ : ಇಳಕಲ್ ಬಳಿಯ ಇಟ್ಟಿಗೆ ಭಟ್ಟಿಯಿಂದ 34 ಜೀತದಾಳುಗಳ ರಕ್ಷಣೆ

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಸಂಕ್ಲಾಪೂರ ಗ್ರಾಮದ ಇಟ್ಟಿಗೆ ಗೂಡುಗಳಲ್ಲಿ ಜೀತಕ್ಕಿದ್ದ ಐವರು ಮಕ್ಕಳು ಸೇರಿದಂತೆ 34 ಮಂದಿ ಒಡಿಶಾ ಮೂಲದ ಕಾರ್ಮಿಕರನ್ನು ಮಂಗಳವಾರ (ಫೆ.10,2026) ರಕ್ಷಿಸಲಾಗಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ...

ಅಮೆರಿಕದ ಕ್ಯಾಲಿಫೋರ್ನಿಯದಲ್ಲಿ ಕಾಣೆಯಾಗಿದ್ದ ಕರ್ನಾಟಕ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆ

ನವದೆಹಲಿ: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಮೃತದೇಹ ಪತ್ತೆಯಾಗಿದೆ ಎಂದು ಭಾರತದ ಕಾನ್ಸುಲೇಟ್ ಅಧಿಕಾರಿಗಳು ತಿಳಿಸಿದ್ದಾರೆ.   ಈ ಕುರಿತು ಭಾರತದ ಕಾನ್ಸುಲೇಟ್ ಜನರಲ್ ಪ್ರಕಟಣೆ ಹೊರಡಿಸಿದ್ದು, ಸ್ಥಳೀಯ ಪೊಲೀಸರು...

ಬೆಂಗಳೂರು | ಡಿವೈಡರ್ ಹಾರಿ ಬಸ್‌ಗೆ ಡಿಕ್ಕಿ ಹೊಡೆದ ಕಾರು : ಐವರು ಸಾವು

ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಎದುರಿನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಯುವಕರು ಸಾವಿಗೀಡಾದ ಘಟನೆ ಬೆಂಗಳೂರಿನ ನೆಲಮಂಗಲದ ಜಿಂದಾಲ್‌ ಸಂಸ್ಥೆಯ ಬಳಿ...

ಉತ್ತರಾಖಂಡ| ದಲಿತ ಪತ್ರಕರ್ತನಿಗೆ ಕಸ್ಟಡಿ ಚಿತ್ರಹಿಂಸೆ; ಅಕ್ರಮವಾಗಿ ಕಟ್ಟಡ ಧ್ವಂಸ ಆರೋಪ

ಸ್ಥಳೀಯ ಪೊಲೀಸರು ಕಸ್ಟಡಿಯಲ್ಲಿ ನನಗೆ ಚಿತ್ರಹಿಂಸೆ ನೀಡಿ ಜಾತಿ ಆಧಾರಿತ ದೌರ್ಜನ್ಯ ನಡೆಸಿದ್ದಾರೆ. ನನ್ನ ಕಟ್ಟಡವನ್ನು ಅಕ್ರಮವಾಗಿ ಕೆಡವಿದ್ದಾರೆ ಎಂದು ಉತ್ತರಾಖಂಡ ರಾಜ್ಯದ ಉಧಮ್ ಸಿಂಗ್ ನಗರ ಜಿಲ್ಲೆಯ ಬಾಜ್‌ಪುರದ ದಲಿತ ಪತ್ರಕರ್ತರೊಬ್ಬರು...

ಲೈಂಗಿಕ ಅಪರಾಧಿ ‘ಎಪ್ಸ್ಟೀನ್’ನದ್ದು ಆತ್ಮಹತ್ಯೆಯಲ್ಲ, ಕತ್ತು ಹಿಸುಕಿದ ಪರಿಣಾಮ ಸಾವನ್ನಪ್ಪಿದ್ದಾನೆ: ವೈದ್ಯ ಮೈಕೆಲ್ ಬಾಡೆನ್ ಹೇಳಿಕೆ

ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಜೈಲಿನಲ್ಲಿದ್ದಾಗ 2019ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನೆಂದು ಘೋಷಿಸಲಾಗಿತ್ತು. ಆದರೆ, ಆತನ ಸಾವಿನ ಕುರಿತಾದ ಚರ್ಚೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಆತನ ಜೈಲಿನ ಕೋಣೆಯಲ್ಲಿ ನೇಣು ಬಿಗಿದುಕೊಂಡು...

ದೆಹಲಿ ಗಾಳಿಯನ್ನು ‘ಗ್ಯಾಸ್ ಚೇಂಬರ್’ಗೆ ಹೋಲಿಸಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್

ದೆಹಲಿಯ ವಾಯು ಮಾಲಿನ್ಯವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ "ಗ್ಯಾಸ್ ಚೇಂಬರ್" ಗೆ ಹೋಲಿಸಿದ್ದಾರೆ. ರಾಜ್ಯಾದ್ಯಂತ ಅಭಿವೃದ್ಧಿ ಕಾರ್ಯಗಳು ಮುಂದುವರಿದಿದ್ದು ಉತ್ತರ ಪ್ರದೇಶದ ಜನರು ಸ್ವಚ್ಛ ವಾತಾವರಣದಲ್ಲಿ ವಾಸಿಸುವ ಅದೃಷ್ಟಶಾಲಿಗಳಾಗಿದ್ದಾರೆ...

‘ಫುಡ್ ಜಿಹಾದ್’ ಆರೋಪಿಸಿ ತೆಲುಗು ಯೂಟ್ಯೂಬ್ ಚಾನೆಲ್‌ನಿಂದ ಮುಸ್ಲಿಂ ವ್ಯಾಪಾರಿಗಳಿಗೆ ಕಿರುಕುಳ

ಬಡ ಬನ್ ವ್ಯಾಪಾರಿಯೊಬ್ಬರಿಗೆ ಯೂಟ್ಯೂಬ್ ಚಾನೆಲ್ ತಂಡದ ಹೆಸರಿನಲ್ಲಿ ಗುಂಪೊಂದು ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತೆಲಂಗಾಣದ ಮುಲುಗು ಜಿಲ್ಲೆಯ ಪ್ರಮುಖ ಬುಡಕಟ್ಟು ಹಬ್ಬವಾದ ಸಮಕ್ಕ ಸಾರಲಮ್ಮ ಜಾತ್ರೆಯಲ್ಲಿ ಕೋವಾ...