Homeಮುಖಪುಟದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್‌, ಖಾಲಿದ್ ಸೈಫಿ ಆರೋಪ ಮುಕ್ತ

ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್‌, ಖಾಲಿದ್ ಸೈಫಿ ಆರೋಪ ಮುಕ್ತ

- Advertisement -
- Advertisement -

2020ರ ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್ ಮತ್ತು ಯುನೈಟೆಡ್ ಎಗೇನ್‌ಸ್ಟ್‌ ಹೇಟ್ ಸದಸ್ಯ ಖಾಲಿದ್ ಸೈಫಿ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ ಆರೋಪ ಮುಕ್ತ ಮಾಡಿದೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಪುಲಸ್ತ್ಯ ಪ್ರಮಾಚಲ ಅವರು ಖಜೂರಿ ಖಾಸ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ (101/2020) ಸಂಬಂಧಿಸಿದಂತೆ ಇಂದು ಆದೇಶವನ್ನು ಪ್ರಕಟಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಖಾಲಿದ್ ಮತ್ತು ಸೈಫಿ ಇಬ್ಬರಿಗೂ ಜಾಮೀನು ದೊರೆತಿತ್ತು. ಆದಾಗ್ಯೂ, ಗಲಭೆಯ ಹಿಂದೆ ದೊಡ್ಡ ಪಿತೂರಿ ಇದೆ ಎಂದು ಆರೋಪಿಸಿ ಯುಎಪಿಎ ಪ್ರಕರಣ ದಾಖಲಿಸಿರುವುದರಿಂದ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಎಫ್‌ಐಆರ್ ಅನ್ನು ಸೆಕ್ಷನ್ 109, 114, 147, 148, 149, 153-ಎ, 186, 212, 353, 395, 427, 435, 436, 452, 454, 505, 34 ಮತ್ತು 120 ಸೆಕ್ಷನ್‌ಗಳ ಅಡಿಯಲ್ಲಿ ದಾಖಲಿಸಲಾಗಿದೆ. ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯಿದೆಯ 3 ಮತ್ತು 4, ಶಸ್ತ್ರಾಸ್ತ್ರ ಕಾಯಿದೆಯ ವಿಭಾಗ 25 ಮತ್ತು 27ನೇ ಸೆಕ್ಷನ್‌ಗಳನ್ನೂ ಇಲ್ಲಿ ಸೇರಿಸಲಾಗಿದೆ.

ಫೆಬ್ರವರಿ 24, 2020ರಂದು ಚಾಂದ್ ಬಾಗ್ ಪುಲಿಯಾ ಬಳಿ ದೊಡ್ಡ ಜನಸಮೂಹ ಜಮಾಯಿಸಿ ಕಲ್ಲು ತೂರಾಟ ನಡೆಸಲು ಪ್ರಾರಂಭಿಸಿತು ಎಂದು ಕಾನ್‌ಸ್ಟೆಬಲ್ ಹೇಳಿದ್ದನ್ನು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸ್ ಅಧಿಕಾರಿ ತನ್ನನ್ನು ರಕ್ಷಿಸಿಕೊಳ್ಳಲು ಹತ್ತಿರದ ಪಾರ್ಕಿಂಗ್ ಸ್ಥಳಕ್ಕೆ ಹೋದಾಗ, ಜನರ ಗುಂಪು ಪಾರ್ಕಿಂಗ್ ಲಾಟ್‌ನ ಶಟರ್ ಒಡೆದು ಒಳಗಿದ್ದವರಿಗೆ ಥಳಿಸಿತು. ವಾಹನಗಳಿಗೆ ಬೆಂಕಿ ಹಚ್ಚಿತು ಎಂದು ಆರೋಪಿಸಲಾಗಿದೆ. ನಂತರ ಪ್ರಕರಣವನ್ನು ಫೆಬ್ರವರಿ 28, 2020 ರಂದು ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಯಿತು.

ಪ್ರಾಸಿಕ್ಯೂಷನ್ ಪ್ರಕಾರ, “ಆಮ್ ಆದ್ಮಿ ಪಕ್ಷದ ಮಾಜಿ ಕೌನ್ಸಿಲರ್ ತಾಹೀರ್ ಹುಸೇನ್ ಅವರ ಕಟ್ಟಡವನ್ನು ಗಲಭೆಕೋರರು ‘ಇಟ್ಟಿಗೆ, ಕಲ್ಲು ತೂರಾಟ, ಪೆಟ್ರೋಲ್ ಬಾಂಬ್ ಮತ್ತು ಆಸಿಡ್ ಬಾಂಬ್ ದಾಳಿ ನಡೆಸಲು ಬಳಸಿದ್ದಾರೆ.”

ಇದನ್ನೂ ಓದಿರಿ: ಬಿಜೆಪಿ, ಆರ್‌ಎಸ್‌ಎಸ್‌ನವರು ಶ್ರೀರಾಮನಂತೆ ಜೀವನ ನಡೆಸಲ್ಲ: ರಾಹುಲ್‌

ಕಟ್ಟಡದ ಮೂರನೇ ಮಹಡಿ ಮತ್ತು ಮೇಲ್ಛಾವಣಿಯಲ್ಲಿ ಈ ವಸ್ತು ಬಿದ್ದಿರುವುದು ಕಂಡುಬಂದಿದೆ ಎಂದು ಆರೋಪಿಸಲಾಗಿದೆ. ಉಮರ್ ಖಾಲಿದ್ ಅವರು ಜನಸಮೂಹದ ಭಾಗವಾಗಿಲ್ಲದಿದ್ದರೂ, ಉಮರ್‌ ಮತ್ತು ಖಾಲಿದ್ ಸೈಫೀ ಅವರನ್ನು ಪ್ರಕರಣದಲ್ಲಿ ಸೇರಿಸಿ ಕ್ರಿಮಿನಲ್ ಪಿತೂರಿಯ ಆರೋಪ ಹೊರಿಸಲಾಗಿದೆ.

ಉಮರ್ ಖಾಲಿದ್‌ಗೆ ಜಾಮೀನು ನೀಡುವಾಗ, “ಉಮರ್‌‌ ವಿರುದ್ಧದ ನಿಖರವಲ್ಲದ ಆಧಾರದ ಮೇಲೆ ಅವರನ್ನು ಜೈಲಿನಲ್ಲಿ ಉಳಿಯಲು ಅನುಮತಿಸಲಾಗುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು ದೋಷಾರೋಪ ಪಟ್ಟಿಯನ್ನು ಸಹ ಸಲ್ಲಿಸಲಾಗಿದೆ ಎಂದು ನ್ಯಾಯಾಲಯ ಗಮನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...