Homeಮುಖಪುಟಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್

ಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್

- Advertisement -
- Advertisement -

2020 ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್‌ ಖಾಲಿದ್ ಅವರನ್ನು ಗುರುವಾರ ಕೈಕೋಳದಲ್ಲಿ ದೆಹಲಿ ನ್ಯಾಯಾಲಯಕ್ಕೆ ಕರೆತರಲಾಗಿದೆ. ಈ ರೀತಿ ಮಾಡದಂತೆ ನ್ಯಾಯಾಲಯ ಆದೇಶ ನೀಡಿದ್ದರೂ, ಆದೇಶ ಧಿಕ್ಕರಿಸಿ ಪೊಲೀಸರು ಇಂತಹ ಕೃತ್ಯವೆಸಗಿದ್ದಾರೆ.

ಇದರಿಂದ ನ್ಯಾಯಾಲಯವು ಮಹಾನಿರ್ದೇಶಕರಿಗೆ (ಜೈಲುಗಳು) ನೋಟಿಸ್ ಜಾರಿ ಮಾಡಿದ್ದು, ಜೈಲು ಅಧಿಕಾರಿಗಳು ಕೈಕೋಳ ಹಾಕುವಂತೆ ಆದೇಶ ಹೊರಡಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್ಜೆ) ಅಮಿತಾಭ್ ರಾವತ್ “ದೆಹಲಿಯ ಪೊಲೀಸ್ ಆಯುಕ್ತರ ಗಮನಕ್ಕೆ ಈ ವಿಷಯ ತರಲು ಸೂಕ್ತವೆಂದು ಭಾವಿಸುತ್ತೇನೆ. ಆರೋಪಿ ಉಮರ್ ಖಾಲಿದ್‌ ಅವರನ್ನು ಇಂದು ಕೈಕೋಳದಲ್ಲಿ ಕರೆತರಲಾಗಿದೆ. ಇದು ಯಾವ ಆಧಾರದ ಮೇಲೆ, ಆದೇಶದ ಮೇಲೆ ಎಂಬುದನ್ನು ಜವಾಬ್ದಾರಿಯುತ ಹಿರಿಯ ಅಧಿಕಾರಿಯ ಮೂಲಕ ತನಿಖೆಯ ನಂತರ ವರದಿಯನ್ನು ಸಲ್ಲಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ದೆಹಲಿ ಕಾರಾಗೃಹ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು,“ಅವರು ನಿಜವಾಗಿಯೂ ಕೈಕೋಳ ಹಾಕಿದ್ದರೆ ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ಕಾರಣ ತಿಳಿಯಲು ಸತ್ಯಶೋಧನೆ ನಡೆಸಲಾಗುವುದು. ಹಿರಿಯ ಅಧಿಕಾರಿಯೊಬ್ಬರು ಕೈಕೋಳಕ್ಕೆ ಆದೇಶ ನೀಡಿದ್ದಾರೆಯೇ ಅಥವಾ ಹಿಂದಿನ ನ್ಯಾಯಾಲಯದ ಆದೇಶದ ಷರತ್ತುಗಳನ್ನು ಪರಿಶೀಲಿಸುತ್ತೇವೆ” ಎಂದಿದ್ದಾರೆ.

“ಅವರನ್ನು ಏಕೆ ಕೈಕೋಳದಲ್ಲಿ ಕರೆತರಲಾಗಿದೆ ಎಂಬುದನ್ನು ನಾವು ಪರಿಶೀಲಿಸುತ್ತಿದ್ದೇವೆ” ಎಂದು ವಿಶೇಷ ಘಟಕದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಖಾಲಿದ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಘಟಕ ಮತ್ತು ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಹಿರಿಯ ಅಧಿಕಾರಿಗಳು ನೋಟಿಸ್ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

’ನ್ಯಾಯಾಲಯದಿಂದ ಯಾವುದೇ ಆದೇಶವಿಲ್ಲದಿದ್ದರೂ ಮತ್ತು ಎರಡು ಪ್ರತ್ಯೇಕ ನ್ಯಾಯಾಲಯಗಳು ನೀಡಿದ ಎರಡು ವ್ಯತಿರಿಕ್ತ ಆದೇಶಗಳ ಹೊರತಾಗಿಯೂ ಪೊಲೀಸರು ಅವರನ್ನು ಕೈಕೋಳದಲ್ಲಿ ಹಾಜರುಪಡಿಸಿದ್ದಾರೆ’ ಎಂದು ಉಮರ್ ಪರ ಹಿರಿಯ ವಕೀಲ ತ್ರಿದೀಪ್ ಪೈಸ್  ತಿಳಿಸಿದ ನಂತರ ಎಎಸ್‌ಜೆ ರಾವತ್ ಸಂಜೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಇದು ಆರೋಪಿಯ ಹಕ್ಕುಗಳ ಉಲ್ಲಂಘನೆಯಾಗಿದೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ತಪ್ಪುಗಳನ್ನು ಕಂಡುಹಿಡಿಯಲು ತನಿಖೆ ನಡೆಸಬೇಕು ಎಂದು ಹಿರಿಯ ವಕೀಲ ತ್ರಿದೀಪ್ ಪೈಸ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ, ಉಮರ್ ಖಾಲಿದ್ ಮತ್ತು ಇತರ ಹಲವರ ವಿರುದ್ಧ ಕಠಿಣವಾದ ಭಯೋತ್ಪಾದನಾ ವಿರೋಧಿ ಕಾನೂನಾದ ‘ಯುಎಪಿಎ’ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಅವರನ್ನು ದೆಹಲಿ ಗಲಭೆಯ ‘ಮಾಸ್ಟರ್‌ಮೈಂಡ್‌ಗಳು’ ಎಂದು ಆರೋಪಿಸಲಾಗಿದೆ. ಈ ಗಲಭೆಯಲ್ಲಿ 53 ಜನರು ಮೃತಪಟ್ಟಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.


ಇದನ್ನೂ ಓದಿ: ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ: ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರ್ ಲಾಯರ್ ಜಗದೀಶ್ ರ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ನಿಮ್ಮ ಅನಿಸಿಕೆಗಳು ಅವರ ಹೋರಾಟದ ಬಗ್ಗೆ ತಿಳಿಸಿ ಕಾರ್ಯಂಗ ನ್ಯಾಯಾಂಗ ಕೆಲಸಮಾಡುತ್ತಿಲ್ಲ ಅನಿಸುತ್ತಿದೆ ಸರ್ಕಾರ ಇದ್ದು ಇಲ್ಲದಂತಿದೆ ನಿಮ್ಮ ಹೋರಾಟ ಹೋರಾಟ ಗಾರರು ಜೊತೆಯಲಿ

  2. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನೂ ದಿಕ್ಕರಿಸಿ ಉಮರ್ ಕಾಲೀದ್ ಅವರಿಗೆ ಕೈಕೋಳ ತೊಡಿಸಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...