Homeಮುಖಪುಟಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್

ಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್

- Advertisement -
- Advertisement -

2020 ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್‌ ಖಾಲಿದ್ ಅವರನ್ನು ಗುರುವಾರ ಕೈಕೋಳದಲ್ಲಿ ದೆಹಲಿ ನ್ಯಾಯಾಲಯಕ್ಕೆ ಕರೆತರಲಾಗಿದೆ. ಈ ರೀತಿ ಮಾಡದಂತೆ ನ್ಯಾಯಾಲಯ ಆದೇಶ ನೀಡಿದ್ದರೂ, ಆದೇಶ ಧಿಕ್ಕರಿಸಿ ಪೊಲೀಸರು ಇಂತಹ ಕೃತ್ಯವೆಸಗಿದ್ದಾರೆ.

ಇದರಿಂದ ನ್ಯಾಯಾಲಯವು ಮಹಾನಿರ್ದೇಶಕರಿಗೆ (ಜೈಲುಗಳು) ನೋಟಿಸ್ ಜಾರಿ ಮಾಡಿದ್ದು, ಜೈಲು ಅಧಿಕಾರಿಗಳು ಕೈಕೋಳ ಹಾಕುವಂತೆ ಆದೇಶ ಹೊರಡಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್ಜೆ) ಅಮಿತಾಭ್ ರಾವತ್ “ದೆಹಲಿಯ ಪೊಲೀಸ್ ಆಯುಕ್ತರ ಗಮನಕ್ಕೆ ಈ ವಿಷಯ ತರಲು ಸೂಕ್ತವೆಂದು ಭಾವಿಸುತ್ತೇನೆ. ಆರೋಪಿ ಉಮರ್ ಖಾಲಿದ್‌ ಅವರನ್ನು ಇಂದು ಕೈಕೋಳದಲ್ಲಿ ಕರೆತರಲಾಗಿದೆ. ಇದು ಯಾವ ಆಧಾರದ ಮೇಲೆ, ಆದೇಶದ ಮೇಲೆ ಎಂಬುದನ್ನು ಜವಾಬ್ದಾರಿಯುತ ಹಿರಿಯ ಅಧಿಕಾರಿಯ ಮೂಲಕ ತನಿಖೆಯ ನಂತರ ವರದಿಯನ್ನು ಸಲ್ಲಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ದೆಹಲಿ ಕಾರಾಗೃಹ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು,“ಅವರು ನಿಜವಾಗಿಯೂ ಕೈಕೋಳ ಹಾಕಿದ್ದರೆ ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ಕಾರಣ ತಿಳಿಯಲು ಸತ್ಯಶೋಧನೆ ನಡೆಸಲಾಗುವುದು. ಹಿರಿಯ ಅಧಿಕಾರಿಯೊಬ್ಬರು ಕೈಕೋಳಕ್ಕೆ ಆದೇಶ ನೀಡಿದ್ದಾರೆಯೇ ಅಥವಾ ಹಿಂದಿನ ನ್ಯಾಯಾಲಯದ ಆದೇಶದ ಷರತ್ತುಗಳನ್ನು ಪರಿಶೀಲಿಸುತ್ತೇವೆ” ಎಂದಿದ್ದಾರೆ.

“ಅವರನ್ನು ಏಕೆ ಕೈಕೋಳದಲ್ಲಿ ಕರೆತರಲಾಗಿದೆ ಎಂಬುದನ್ನು ನಾವು ಪರಿಶೀಲಿಸುತ್ತಿದ್ದೇವೆ” ಎಂದು ವಿಶೇಷ ಘಟಕದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಖಾಲಿದ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಘಟಕ ಮತ್ತು ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಹಿರಿಯ ಅಧಿಕಾರಿಗಳು ನೋಟಿಸ್ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

’ನ್ಯಾಯಾಲಯದಿಂದ ಯಾವುದೇ ಆದೇಶವಿಲ್ಲದಿದ್ದರೂ ಮತ್ತು ಎರಡು ಪ್ರತ್ಯೇಕ ನ್ಯಾಯಾಲಯಗಳು ನೀಡಿದ ಎರಡು ವ್ಯತಿರಿಕ್ತ ಆದೇಶಗಳ ಹೊರತಾಗಿಯೂ ಪೊಲೀಸರು ಅವರನ್ನು ಕೈಕೋಳದಲ್ಲಿ ಹಾಜರುಪಡಿಸಿದ್ದಾರೆ’ ಎಂದು ಉಮರ್ ಪರ ಹಿರಿಯ ವಕೀಲ ತ್ರಿದೀಪ್ ಪೈಸ್  ತಿಳಿಸಿದ ನಂತರ ಎಎಸ್‌ಜೆ ರಾವತ್ ಸಂಜೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಇದು ಆರೋಪಿಯ ಹಕ್ಕುಗಳ ಉಲ್ಲಂಘನೆಯಾಗಿದೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ತಪ್ಪುಗಳನ್ನು ಕಂಡುಹಿಡಿಯಲು ತನಿಖೆ ನಡೆಸಬೇಕು ಎಂದು ಹಿರಿಯ ವಕೀಲ ತ್ರಿದೀಪ್ ಪೈಸ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ, ಉಮರ್ ಖಾಲಿದ್ ಮತ್ತು ಇತರ ಹಲವರ ವಿರುದ್ಧ ಕಠಿಣವಾದ ಭಯೋತ್ಪಾದನಾ ವಿರೋಧಿ ಕಾನೂನಾದ ‘ಯುಎಪಿಎ’ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಅವರನ್ನು ದೆಹಲಿ ಗಲಭೆಯ ‘ಮಾಸ್ಟರ್‌ಮೈಂಡ್‌ಗಳು’ ಎಂದು ಆರೋಪಿಸಲಾಗಿದೆ. ಈ ಗಲಭೆಯಲ್ಲಿ 53 ಜನರು ಮೃತಪಟ್ಟಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.


ಇದನ್ನೂ ಓದಿ: ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ: ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರ್ ಲಾಯರ್ ಜಗದೀಶ್ ರ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ನಿಮ್ಮ ಅನಿಸಿಕೆಗಳು ಅವರ ಹೋರಾಟದ ಬಗ್ಗೆ ತಿಳಿಸಿ ಕಾರ್ಯಂಗ ನ್ಯಾಯಾಂಗ ಕೆಲಸಮಾಡುತ್ತಿಲ್ಲ ಅನಿಸುತ್ತಿದೆ ಸರ್ಕಾರ ಇದ್ದು ಇಲ್ಲದಂತಿದೆ ನಿಮ್ಮ ಹೋರಾಟ ಹೋರಾಟ ಗಾರರು ಜೊತೆಯಲಿ

  2. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನೂ ದಿಕ್ಕರಿಸಿ ಉಮರ್ ಕಾಲೀದ್ ಅವರಿಗೆ ಕೈಕೋಳ ತೊಡಿಸಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...