Homeಮುಖಪುಟಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್

ಕೈಕೋಳದಲ್ಲಿ ಉಮರ್‌ ಖಾಲಿದ್‌ರನ್ನು ನ್ಯಾಯಾಲಯಕ್ಕೆ ಕರೆತಂದ ಪೊಲೀಸರು: ನೋಟಿಸ್‌ ನೀಡಿದ ಕೋರ್ಟ್

- Advertisement -
- Advertisement -

2020 ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್‌ ಖಾಲಿದ್ ಅವರನ್ನು ಗುರುವಾರ ಕೈಕೋಳದಲ್ಲಿ ದೆಹಲಿ ನ್ಯಾಯಾಲಯಕ್ಕೆ ಕರೆತರಲಾಗಿದೆ. ಈ ರೀತಿ ಮಾಡದಂತೆ ನ್ಯಾಯಾಲಯ ಆದೇಶ ನೀಡಿದ್ದರೂ, ಆದೇಶ ಧಿಕ್ಕರಿಸಿ ಪೊಲೀಸರು ಇಂತಹ ಕೃತ್ಯವೆಸಗಿದ್ದಾರೆ.

ಇದರಿಂದ ನ್ಯಾಯಾಲಯವು ಮಹಾನಿರ್ದೇಶಕರಿಗೆ (ಜೈಲುಗಳು) ನೋಟಿಸ್ ಜಾರಿ ಮಾಡಿದ್ದು, ಜೈಲು ಅಧಿಕಾರಿಗಳು ಕೈಕೋಳ ಹಾಕುವಂತೆ ಆದೇಶ ಹೊರಡಿಸಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.

ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ಎಎಸ್ಜೆ) ಅಮಿತಾಭ್ ರಾವತ್ “ದೆಹಲಿಯ ಪೊಲೀಸ್ ಆಯುಕ್ತರ ಗಮನಕ್ಕೆ ಈ ವಿಷಯ ತರಲು ಸೂಕ್ತವೆಂದು ಭಾವಿಸುತ್ತೇನೆ. ಆರೋಪಿ ಉಮರ್ ಖಾಲಿದ್‌ ಅವರನ್ನು ಇಂದು ಕೈಕೋಳದಲ್ಲಿ ಕರೆತರಲಾಗಿದೆ. ಇದು ಯಾವ ಆಧಾರದ ಮೇಲೆ, ಆದೇಶದ ಮೇಲೆ ಎಂಬುದನ್ನು ಜವಾಬ್ದಾರಿಯುತ ಹಿರಿಯ ಅಧಿಕಾರಿಯ ಮೂಲಕ ತನಿಖೆಯ ನಂತರ ವರದಿಯನ್ನು ಸಲ್ಲಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ದೆಹಲಿ ಕಾರಾಗೃಹ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು,“ಅವರು ನಿಜವಾಗಿಯೂ ಕೈಕೋಳ ಹಾಕಿದ್ದರೆ ನಾವು ಅದನ್ನು ಪರಿಶೀಲಿಸುತ್ತಿದ್ದೇವೆ. ಕಾರಣ ತಿಳಿಯಲು ಸತ್ಯಶೋಧನೆ ನಡೆಸಲಾಗುವುದು. ಹಿರಿಯ ಅಧಿಕಾರಿಯೊಬ್ಬರು ಕೈಕೋಳಕ್ಕೆ ಆದೇಶ ನೀಡಿದ್ದಾರೆಯೇ ಅಥವಾ ಹಿಂದಿನ ನ್ಯಾಯಾಲಯದ ಆದೇಶದ ಷರತ್ತುಗಳನ್ನು ಪರಿಶೀಲಿಸುತ್ತೇವೆ” ಎಂದಿದ್ದಾರೆ.

“ಅವರನ್ನು ಏಕೆ ಕೈಕೋಳದಲ್ಲಿ ಕರೆತರಲಾಗಿದೆ ಎಂಬುದನ್ನು ನಾವು ಪರಿಶೀಲಿಸುತ್ತಿದ್ದೇವೆ” ಎಂದು ವಿಶೇಷ ಘಟಕದ ಅಧಿಕಾರಿಯೊಬ್ಬರು ಹೇಳಿದ್ದಾರೆ. ಖಾಲಿದ್ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ಘಟಕ ಮತ್ತು ದೆಹಲಿ ಪೊಲೀಸ್ ಪ್ರಧಾನ ಕಚೇರಿಯ ಹಿರಿಯ ಅಧಿಕಾರಿಗಳು ನೋಟಿಸ್ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

’ನ್ಯಾಯಾಲಯದಿಂದ ಯಾವುದೇ ಆದೇಶವಿಲ್ಲದಿದ್ದರೂ ಮತ್ತು ಎರಡು ಪ್ರತ್ಯೇಕ ನ್ಯಾಯಾಲಯಗಳು ನೀಡಿದ ಎರಡು ವ್ಯತಿರಿಕ್ತ ಆದೇಶಗಳ ಹೊರತಾಗಿಯೂ ಪೊಲೀಸರು ಅವರನ್ನು ಕೈಕೋಳದಲ್ಲಿ ಹಾಜರುಪಡಿಸಿದ್ದಾರೆ’ ಎಂದು ಉಮರ್ ಪರ ಹಿರಿಯ ವಕೀಲ ತ್ರಿದೀಪ್ ಪೈಸ್  ತಿಳಿಸಿದ ನಂತರ ಎಎಸ್‌ಜೆ ರಾವತ್ ಸಂಜೆ ನೋಟಿಸ್‌ ಜಾರಿಗೊಳಿಸಿದ್ದಾರೆ.

ಇದು ಆರೋಪಿಯ ಹಕ್ಕುಗಳ ಉಲ್ಲಂಘನೆಯಾಗಿದೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ತಪ್ಪುಗಳನ್ನು ಕಂಡುಹಿಡಿಯಲು ತನಿಖೆ ನಡೆಸಬೇಕು ಎಂದು ಹಿರಿಯ ವಕೀಲ ತ್ರಿದೀಪ್ ಪೈಸ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ, ಉಮರ್ ಖಾಲಿದ್ ಮತ್ತು ಇತರ ಹಲವರ ವಿರುದ್ಧ ಕಠಿಣವಾದ ಭಯೋತ್ಪಾದನಾ ವಿರೋಧಿ ಕಾನೂನಾದ ‘ಯುಎಪಿಎ’ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಜೊತೆಗೆ ಅವರನ್ನು ದೆಹಲಿ ಗಲಭೆಯ ‘ಮಾಸ್ಟರ್‌ಮೈಂಡ್‌ಗಳು’ ಎಂದು ಆರೋಪಿಸಲಾಗಿದೆ. ಈ ಗಲಭೆಯಲ್ಲಿ 53 ಜನರು ಮೃತಪಟ್ಟಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.


ಇದನ್ನೂ ಓದಿ: ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ: ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್‌ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸರ್ ಲಾಯರ್ ಜಗದೀಶ್ ರ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ನಿಮ್ಮ ಅನಿಸಿಕೆಗಳು ಅವರ ಹೋರಾಟದ ಬಗ್ಗೆ ತಿಳಿಸಿ ಕಾರ್ಯಂಗ ನ್ಯಾಯಾಂಗ ಕೆಲಸಮಾಡುತ್ತಿಲ್ಲ ಅನಿಸುತ್ತಿದೆ ಸರ್ಕಾರ ಇದ್ದು ಇಲ್ಲದಂತಿದೆ ನಿಮ್ಮ ಹೋರಾಟ ಹೋರಾಟ ಗಾರರು ಜೊತೆಯಲಿ

  2. ಸರ್ವೋಚ್ಚ ನ್ಯಾಯಾಲಯದ ಆದೇಶವನ್ನೂ ದಿಕ್ಕರಿಸಿ ಉಮರ್ ಕಾಲೀದ್ ಅವರಿಗೆ ಕೈಕೋಳ ತೊಡಿಸಿರುವುದು ಕಂಡನಾರ್ಹ.

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...