Homeಮುಖಪುಟನವದೆಹಲಿಯಿಂದ ಜನಸಂಕಲ್ಪ ಸಮಾವೇಶಕ್ಕೆ ಬಂದ ಯುವದನಿ ಉಮರ್ ಖಾಲಿದ್ ಭಾಷಣ ಕನ್ನಡ ಅನುವಾದ

ನವದೆಹಲಿಯಿಂದ ಜನಸಂಕಲ್ಪ ಸಮಾವೇಶಕ್ಕೆ ಬಂದ ಯುವದನಿ ಉಮರ್ ಖಾಲಿದ್ ಭಾಷಣ ಕನ್ನಡ ಅನುವಾದ

- Advertisement -
- Advertisement -

ನಾನು ಹಿಂದಿಯಲ್ಲಿ ಮಾತನಾಡಲು ಅನುಮತಿ ಕೇಳುತ್ತಿದ್ದೇನೆ.

ನಾವೆಲ್ಲರೂ 2019ರ ಚುನಾವಣೆಯ ಮಿಷನ್ ಬಗ್ಗೆ ಬಹಳ ಮಾತಾಡುತ್ತಿದ್ದೇವೆ. ಆದರೆ, 2019ರ ಚುನಾವಣೆಯಲ್ಲಿ ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವಷ್ಟಕ್ಕೆ ನಮ್ಮ ಮಿಷನ್ ಕೊನೆಯಾಗುವುದಿಲ್ಲ. ಇಂದು ಬಿಡುಗಡೆಯಾದ ರಿಕ್ಲೈಮಿಂಗ್ ರಿಪಬ್ಲಿಕ್ ಅನ್ನು ಜಾರಿಗೊಳಿಸುವುದು ಬಹಳ ಮುಖ್ಯ. ಯಾರೇ ಅಧಿಕಾರಕ್ಕೆ ಬಂದರೂ. ಇವೇ ಇಂದಿನ ಚುನಾವಣೆಯಲ್ಲಿ ಪ್ರಮುಖ ಚರ್ಚೆಯಾಗಬೇಕಿತ್ತು. ಆದರೆ ಚರ್ಚೆ ಯಾವುದು ನಡೆಯುತ್ತಿದೆ?

ಮೋದಿ ಎದುರು ಯಾರು ಎಂಬುದು ಇಲ್ಲಿನ ಮುಖ್ಯ ಚರ್ಚೆಯಾಗಿಬಿಟ್ಟಿದೆ. ಹೇಗೋ ಮಾಡಿ ಈ ಚುನಾವಣೆಯನ್ನು ಮೋದಿ ವರ್ಸಸ್ ರಾಹುಲ್ ಗಾಂಧೀ ಮಾಡುತ್ತಿದ್ದಾರೆ. ಇದು ಇಬ್ಬರ ನಡುವಿನ ಪರ್ಸನಾಲಿಟಿ ಕಂಟೆಸ್ಟ್ ಮಾಡುವಂತಹ ಫ್ಯಾಶನ್ ಶೋ ಅಲ್ಲ. ಇದು ಭಗತ್ ಸಿಂಗ್ ಮತ್ತು ಸಾವರ್ಕರ್ ನಡುವಿನ, ಅಂಬೇಡ್ಕರ್ ಮತ್ತು ಗೋಲ್ವಾಳ್ಕರ್ ನಡುವಿನ ಸಂಘರ್ಷ.

ಮೋದಿಯಿದ್ದರೆ ಸಾಧ್ಯ ಎಂಬ ಒಂದು ಘೋಷಣೆಯಡಿ ಪ್ರಚಾರ ನಡೆಯುತ್ತಿದೆ. ಹೌದು, ಈ 5 ವರ್ಷಗಳಲ್ಲಿ ನಮ್ಮ ದೇಶದಲ್ಲಿ ಏನೇನಾಗಿದೆಯೋ ಅದು ಎಂದೂ ಹಿಂದೆ ಆಗಿರಲಿಲ್ಲ. ಬಾಬಾಸಾಹೇಬರು ನಮಗೆ ಕೊಟ್ಟ ಸಂವಿಧಾನವನ್ನು ಸಮಾನ ಗಣತಂತ್ರವಾಗಿ ಈ ದೇಶ ಇರಬೇಕೆಂದು ಹೇಳುವ ಸಂವಿಧಾನವನ್ನು ಸಂಸತ್ತಿನಿಂಧ ಕೇವಲ 2 ಕಿಮೀ ದೂರದ ಜಾಗದಲ್ಲಿ 9 ಆಗಸ್ಟ್ 2018ರಂದು ಸುಟ್ಟು ಹಾಕಲಾಯಿತು. ಅವರುಗಳ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗಲಿಲ್ಲ, ಅವರ ಬಗ್ಗೆ ಯಾವುದೇ ಟಿವಿ ಚರ್ಚೆ ಮಾಡಲಿಲ್ಲ. ಏಕೆ? ಏಕೆಂದರೆ ದೇಶವನ್ನು ಆಳುವವರಿಗೆ ಬೇಕಾಗಿದ್ದನ್ನೇ ಅವರು ಮಾಡಿದ್ದರು.

ಆಸಿಫಾ ಎಂಬ 9 ವರ್ಷದ ಬಾಲಕಿಯ ಮೇಲೆ ಭೀಕರ ಅತ್ಯಾಚಾರ-ಕೊಲೆ ನಡೆದಾಗ ಆ ಪ್ರಕರಣದ ಆರೋಪಿಗಳ ಪರವಾಗಿ ತ್ರಿವರ್ಣ ಧ್ವಜ ಹಿಡಿದು ಮೆರವಣಿಗೆ ಮಾಡಲಾಯಿತು. ಮುಸ್ಲಿಮರನ್ನು ಬೀದಿಗಳಲ್ಲಿ ಸಿಗಿದು ಕೊಂದ ಆರೋಪಿಗಳು ಜೈಲಿನಿಂದ ಬಿಡುಗಡೆಯಾದ ನಂತರ ಹಾರ ಹಾಕಿ ಅಭಿನಂದಿಸಲು ಒಬ್ಬ ಯೂನಿಯನ್ ಮಿನಿಸ್ಟರ್ ಹೋಗಿದ್ದರು.

ಇದೆಲ್ಲ ಈ ಹಿಂದೆ ಎಂದೂ ನಡೆದಿರಲಿಲ್ಲ. ಮಧ್ಯರಾತ್ರಿ ನೋಟು ರದ್ಧತಿ ಘೋಷಣೆಯಾಗಿ, ಜನರ ಬದುಕನ್ನು ಹಿಂಡಿ ಹಿಪ್ಪೆ ಮಾಡಿದ್ದು. ಹೌದು ನಾವೂ ಹೇಳುತ್ತೇವೆ ಇದು ಮೋದಿ ಇಲ್ಲದಿದ್ದರೆ ನಡೆಯುತ್ತಿರಲಿಲ್ಲ.

ನೀರವ್ ಮೋದಿ, ಮಲ್ಯ ಮೊದಲಾದ ಎಲ್ಲರೂ ಕದ್ದ ದುಡ್ಡು ಹೊತ್ತು ದೇಶ ಬಿಟ್ಟು ಓಡಿಹೋಗಲು ಅವಕಾಶವಾಗುವಂತಹ ಪರಿಸ್ಥಿತಿ ಸೃಷ್ಟಿಸಲಾಯಿತು. ನೀರವ್ ಮೋದಿ ಕೊನೆಯ ಸಲ ಬಹಿರಂಗವಾಗಿ ಕಾಣಿಸಿಕೊಂಡಿದ್ದು ನರೇಂದ್ರ ಮೋದಿಯವರ ಜೊತೆ ದಾವೂಸ್‍ನಲ್ಲಿ. ಮೋದಿಯವರು ಚೌಕಿದಾರರಲ್ಲ, ಅಂಬಾನಿಯ ನಂಬಿಕಸ್ಥ ಮತ್ತು ದೇಶವನ್ನು ಮಾರುವ ಗುತ್ತಿಗೆದಾರ.

ಈ ದೇಶದಲ್ಲಿ 12000 ರೈತರು ಪ್ರತಿವರ್ಷ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಪ್ರಧಾನಮಂತ್ರಿ, ಮೀಡಿಯಾ ಯಾರೂ ಮಾತಾಡದಿದ್ದಾಗ ನಾವು ಅದರ ಬಗ್ಗೆ ಮಾತಾಡಬೇಕು. ಆಹಾರದ ಹಕ್ಕಿನ ಬಗ್ಗೆ ಮಾತಾಡುವುದೂ ಬಹಳ ಮುಖ್ಯ. ಅದನ್ನು ಮಾಡುತ್ತಿದ್ದ ದೊಡ್ಡ ಅರ್ಥಶಾಸ್ತ್ರಜ್ಞ ಜಾನ್ ಡ್ರೀಜ್óರನ್ನು ಜಾರ್ಖಂಡ್‍ನಲ್ಲಿ ಮೊನ್ನೆ ಬಂಧಿಸಲಾಯಿತು, ಪ್ರತಿವರ್ಷ 3000 ಮಕ್ಕಳು ಹಸಿವಿನಿಂದ ಸಾಯುವ ಈ ದೇಶದಲ್ಲಿ ಅದು ಚುನಾವಣೆಯ ಇಶ್ಯೂ ಅಲ್ಲದಿದ್ದರೆ ಇನ್ನು ಯವುದು?

ಪ್ರತಿ ವರ್ಷ ಮ್ಯಾನ್‍ಹೋಲ್‍ನಲ್ಲಿ ಸಾಯುವ ದಲಿತರಿಗಾಗಿ ಒಂದೇ ಒಂದು ರೂಪಾಯಿ ಸಮಾಜ ಕಲ್ಯಾಣ ಇಲಾಖೆ ಖರ್ಚು ಮಾಡಿಲ್ಲ. ಇದು ಇಶ್ಯೂ ಅಲ್ಲದಿದ್ದರೆ ಇನ್ಯಾವುದು?

ನೀವು ಚುನಾವಣಾ ಬಾಂಡ್ ಮತ್ತು ನೋಟುರದ್ದತಿ ಜಿಎಸ್‍ಟಿಯನ್ನು ಜೊತೆಗೆ ಸೇರಿಸಿ ನೋಡಿ. ದೊಡ್ಡ ಬಂಡವಾಳಿಗರಾದ ಅಂಬಾನಿಯಂತಹವರ ಲಾಭದಲ್ಲಿ ಭಾರಿ ಹೆಚ್ಚಳವಾಗಿದೆ. ಅಂದರೆ ಇದು ಸಣ್ಣ ಮೀನುಗಳನ್ನು ದೊಡ್ಡ ಮೀನುಗಳು ನುಂಗಲು ಮಾಡಿರುವ ಅವಕಾಶ.

ಸಾವಿರಾರು ಕೋಟಿಯಷ್ಟು ಹಣ ಚುನಾವಣೆಗೆ ಖರ್ಚಾಗುತ್ತದೆಂದರೆ, ಯಾರ ಬಳಿ ತೋಳ್ಬಲ, ಹಣಬಲ ಇಲ್ಲವೋ ಅವರು ಚುನಾವಣೆಯಲ್ಲಿ ಲೆಕ್ಕಕ್ಕಿಲ್ಲ. ಇದರಿಂದ ನಮ್ಮ ಪ್ರಜಾತಂತ್ರ ನಾಶವಾಗುತ್ತದೆ.

ಅಮಿತ್ ಶಾ ನಾಮಪತ್ರ ಹಾಕಿದಾಗ ಅವರ ಆಸ್ತಿಯ ಪ್ರಮಾಣ ಎಷ್ಟು ಹೆಚ್ಚಳವಾಗಿದೆ ಎಂಬುದು ಗೊತ್ತಾಗಿದೆ. ಅವರ ಮಗನ ಆದಾಯ ಸಾವಿರಾರು ಪಟ್ಟು ಹೆಚ್ಚಾಗಿದೆ. ಆದರೆ, ಕಳೆದ 45 ವರ್ಷಗಳಲ್ಲಿ ಎಂದೂ ಇಲ್ಲದಷ್ಟು ನಿರುದ್ಯೋಗ ಸೃಷ್ಟಿಯಾಗಿದೆ. 24 ಲಕ್ಷ ಖಾಲಿ ಹುದ್ದೆಗಳ್ನು ಕೇಂದ್ರ ಸರ್ಕಾರ ತುಂಬದೆ ಖಾಲಿ ಬಿಟ್ಟಿದೆ. 2014ರಲ್ಲಿ ಇಂಡಿಯಾ ಫಸ್ಟ್ ಎಂಬ ಚುನಾವಣಾ ಘೋಷಣೆ ನೀಡಲಾಗಿತ್ತು. ಈಗ ಸ್ವಲ್ಪ ಸತ್ಯ ಹೇಳಿ, ಅಂಬಾನಿ ಮತ್ತು ಅದಾನಿ ಫಸ್ಟ್, ಇಂಡಿಯಾ ಲಾಸ್ಟ್ ಎಂದು.

ಹರಿಯಾಣಾದ ಗುರ್‍ಗಾಂವ್‍ನಲ್ಲಿ ಒಂದು ಕುಟುಂಬದ ಮನೆಗೆ ನುಗ್ಗಿ ಭಯಂಕರವಾಗಿ ಥಳಿಸಿದರು. ಅವರನ್ನು ಭೇಟಿಯಾದಾಗ ನಾನು ನೋಡಿದೆ. ಅವರಿಗೆ ಹಲವೆಡೆ ಮೂಳೆಮುರಿತಗಳಾಗಿವೆ. ಭಯ ಆತಂಕ ಹುಟ್ಟಿದೆ. ಆದರೆ ಅವರ ಮೇಲೆಯೇ ಕೊಲೆಯತ್ನ ಕೇಸ್ ಹಾಕಲಾಗಿದೆ. ಅಖ್ಲಾಕ್, ಪಹ್ಲೂಖಾನ್ ಎಲ್ಲರ ಪೆಕರಣದಲ್ಲೂ ಸತ್ತವರ ಕುಟುಂಬದವರ ಮೇಲೆಯೇ ಪ್ರಕರಣ ದಾಖಲಾಗಿದೆ.

ಇದು ಒಂದಿಡೀ ಸಮುದಾಯದಲ್ಲಿ ಭೀತಿ ಹುಟ್ಟಿಸಿ ಹಿಂದೆ ತಳ್ಳುವ ಆರೆಸ್ಸೆಸ್‍ನ ಹಳೆಯ ಕುತಂತ್ರ. ಸಾಚಾರ್ ಸಮಿತಿ ವರದಿ ಹೇಳುತ್ತದೆ. ಶಿಕ್ಷಣದಲ್ಲಿ, ಉದ್ಯೋಗದಲ್ಲಿ, ರೈಲ್ವೇಸ್‍ಲ್ಲಿ, ಸೈನ್ಯದಲ್ಲಿ ಎಲ್ಲೂ ಮುಸ್ಲಿಮರಿಲ್ಲ. ಒಂದೇ ಸ್ಥಳದಲ್ಲಿ ಅವರು ತಮ್ಮ ಜನಸಂಖ್ಯೆಗಿಂತ ಹೆಚ್ಚು ಸರಾಸರಿಯಲ್ಲಿದ್ದಾರೆ, ಅದು ಭಾರತದ ಜೈಲುಗಳಲ್ಲಿ! ಈ ಸಮುದಾಯವು ಇಂದು ಇವೇನನ್ನೂ ಕೇಳುವ ಹಾಗಿಲ್ಲ. ನಮ್ಮ ವಿರುದ್ಧ ಗಲಭೆ ಮಾಡಬೇಡಿ, ರಕ್ಷಣೆ ಕೊಡಿ ಎಂದು ಕೇಳಿಕೊಳ್ಳಬೇಕಾಗಿದೆ.

ಯಾವ ಸಂಘಟನೆ ಬ್ರಿಟಿಷರ ಜೊತೆ ರಾಜಿ ಮಾಡಿಕೊಂಡು ಅವರಿಗೆ ಕ್ಷಮಾಪಣೆ ಪತ್ರ ಬರೆದು ಕಾಲಕಳೆಯಿತೋ ಅವರ ಇಂದು ದೇಶಪ್ರೇಮದ ಗುತ್ತಿಗೆ ಹಿಡಿದಿದ್ದಾರೆ. ಹೀಗೆ ಹೇಗೆ ಆಯಿತು? ಹೇಗೆಂದರೆ 2014ರಿಗಿಂತ ಹಿಂದೆಯೇ ಪ್ರಜಾತಂತ್ರ ದುರ್ಬಲಗೊಳ್ಳುತ್ತಿತ್ತು. ಇಂದು ಮೋದಿ ವಿರೋಧಿಗಳೆನ್ನುವವರದ್ದೂ ಅದರಲ್ಲಿ ಪಾತ್ರವಿದೆ. 1984ರ ದಂಗೆಯ ಬಗ್ಗೆ ಸರಿಯಾದ ತನಿಖೆ ಆಗಲೇ ಇಲ್ಲ. ಸಾರ್ವಜನಿಕ ಉದ್ದಿಮೆಗಳನು ದುರ್ಬಲಗೊಳಿಸುವುದರಲ್ಲಿ ಅವರ ಪಾತ್ರವಿದೆ. ಶ್ರೀಕೃಷ್ಣ ಆಯೋಗದ ವರದಿಯ ಶಿಫಾರಸ್ಸುಗಳನ್ನು ಜಾರಿ ಮಾಡಿಲ್ಲ. ಜಾಗತೀಕರಣ ನೀತಿಗಳನ್ನು ಜಾರಿಗೆ ತಂದಿದ್ದಾರೆ.

ದೇಶದ ಜನರು ಇವೆಲ್ಲವನ್ನೂ ಅರ್ಥ ಮಾಡಿಕೊಂಡರೆ, 2019ರ ಚುನಾವಣೆಯಲ್ಲಿ ನಾವು ಅವರನ್ನು ಗುಜರಾತ್‍ಗೆ ಘರ್ ವಾಪಸಿ ಮಾಡಿಸುತ್ತೇವೆಂಬ ನಂಬಿಕೆ ನನಗಿದೆ. ಆದರೆ, ಇವರನ್ನು ಚುನಾವಣೆಯಲ್ಲಿ ಸೋಲಿಸುವುದಷ್ಠೆ ನಮ್ಮ ಕೆಲಸವಲ್ಲ. ಆರೆಸ್ಸೆಸ್ಸನ್ನು ಸೈದ್ಧಾಂತಿಕವಾಗಿ ಸೋಲಿಸುವುದು ಮತ್ತು ನಮ್ಮ ಸಂವಿಧಾನದ ಆಶಯವಾದ ಜೀವಪರ ದೇಶವನ್ನು ಕಟ್ಟುವುದು ನಮ್ಮ ಕೆಲಸವಾಗಬೇಕು ಈಗ.

 

ಇಷ್ಟು ಹೇಳಿ ನನ್ನ ಮಾತು ಮುಗಿಸುತ್ತೇನೆ. ಧನ್ಯವಾದಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...